Connect with us

    ಇನ್ನುಮುಂದೆ ಮೆಸ್ಕಾಂ ಗ್ರಾಹಕರ ಸಮಸ್ಯೆಗೆ ಅಂಗೈಯಲ್ಲಿ ಪರಿಹಾರ..!!

    Published

    on

    ಇನ್ನುಮುಂದೆ ಮೆಸ್ಕಾಂ ಗ್ರಾಹಕರ ಸಮಸ್ಯೆಗೆ ಅಂಗೈಯಲ್ಲಿ ಪರಿಹಾರ..!!

    ಮಂಗಳೂರು: ಮೆಸ್ಕಾಂ ಗ್ರಾಹಕರಿಗೆ ವಿದ್ಯುತ್ ಸಂಬಂಧಿತ ಎಲ್ಲಾ ಮಾಹಿತಿ ಹಾಗೂ ಬಿಲ್ ಪಾವತಿಗೆ ಅವಕಾಶ ಕಲ್ಪಿಸುವ ವಿನೂತನ ಆಪ್ ಅನ್ನು ಮುಂದಿನ 2 ತಿಂಗಳೊಳಗೆ ಕಾರ್ಯಾರಂಭ ಮಾಡಲಾಗುವುದು.

    ಈ ಮೂಲಕ ಗ್ರಾಹಕರಿಗೆ ತಮ್ಮ ಮನೆ, ಕಚೇರಿ, ಉದ್ದಿನೆಯ ವಿದ್ಯುತ್ ಸಂಬಂಧಿತ ಯಾವುದೇ ಪ್ರಶ್ನೆಗಳಿಗೆ ಈ ಮೂಲಕ ಉತ್ತರ ಕಂಡುಕೊಳ್ಳಲು ಸಾಧ್ಯ ಎಂದು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಸ್ನೇಹಲ್.ಆರ್ ತಿಳಿಸಿದ್ದಾರೆ.

    ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಿನ್ನೆ (ಜುಲೈ 2) ನಡೆದ ಪತ್ರಿಕಾ ಸಂವಾದದಲ್ಲಿ ಮಾತನಾಡಿದ ಅವರು, ಬೆಸ್ಕಾಂನಲ್ಲಿ ಈಗಾಗಲೇ ಜಾರಿಯಲ್ಲಿರುವ ಗ್ರಾಹಕರಿಗೆ ಮಾಹಿತಿ ನೀಡುವ ಆಪ್ ಅನ್ನು ಮೆಸ್ಕಾಂ ವ್ಯಾಪ್ತಿಯಲ್ಲಿಯೂ ಜಾರಿಗೊಳಿಸಲಾಗುವುದು.

    ಈ ಮೂಲಕ ಮೊಬೈಲ್ ನಲ್ಲೇ ಅವರು ಮಾಹಿತಿ ಪಡೆದುಕೊಳ್ಳಬಹುದು. ಡಿಜಿಟಲ್ ಮೀಟರ್ ಅಳವಡಿಸುವ ಬಗ್ಗೆಯೂ ಕೇಂದ್ರ ಸರಕಾರ ತಿಳಿಸಿದ್ದು, ಇದು ಮುಂದಿನ ದಿನಗಳಲ್ಲಿ ಜಾರಿಯಾಗಲಿದೆ ಎಂದರು.

    ಈ ಬಾರಿಯ ಮುಂಗಾರು ಪೂರ್ವ ಮತ್ತು ಮಳೆಗಾಲದ ಅವಧಿಗೆ ತುರ್ತು ಕೆಲಸಗಳ ನಿರ್ವಹಣೆಗಾಗಿ 851 ಸಿಬ್ಬಂದಿಯ ವಿಶೇಷ ಪಡೆ ರಚಿಸಲಾಗಿದೆ.

    46 ವಾಹನಗಳನ್ನು ಮಂಜೂರು ಮಾಡಲಾಗಿದೆ. ದ.ಕ. 234, ಉಡುಪಿ 207, ಶಿವಮೊಗ್ಗ 225, ಚಿಕ್ಕಮಗಳೂರು 185 ಸಿಬಂದಿ ವಿಶೇಷ ಪಡೆಯಲಿದ್ದಾರೆ.

    ಮಂಗಳೂರಿನಲ್ಲಿ 24*7 ಕೇಂದ್ರೀಕೃತ ಗ್ರಾಹಕರ ಸೇವಾ ಕೇಂದ್ರವನ್ನು ತೆರೆದಿದ್ದು,

    ಮಂಗಳೂರು, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಗ್ರಾಹಕರು ವಿದ್ಯುತ್ ಸಂಬಂಧಿತ ದೂರು, ಸಹಾಯಕ್ಕಾಗಿ ಉಚಿತ ದೂರವಾಣಿ ಸಂಖ್ಯೆ ೧೯೧೨ ಗೆ ಸಂಪರ್ಕಿಸಬಹುದು ಎಂದವರು ವಿವರಿಸಿದರು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ ಸರಕಾರ

    Published

    on

    ಬೆಂಗಳೂರು/ಮಂಗಳೂರು: ಇನ್ನೇನು ನಾಡಹಬ್ಬ ದಸರಾ ಸಮೀಪಿಸುತ್ತಿದೆ. ಈ ಬಾರಿ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ಸರಕಾರ ಸಿದ್ಧತೆ ನಡೆಸುತ್ತಿದೆ. ಖ್ಯಾತ ಸಾಹಿತಿ ಹಂಪ ನಾಗರಾಜಯ್ಯನವರು ಈ ಬಾರಿಯ ದಸರಾವನ್ನು ಉದ್ಘಾಟಿಸಿಲಿದ್ದಾರೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈಗಾಗಲೇ ಘೋಷಣೆ ಮಾಡಿದ್ದಾರೆ.

     

    ಶಾಲಾ ಮಕ್ಕಳಿಗೆ ರಜೆ ಘೋಷಣೆ:
    ದಸರಾ ಹಬ್ಬಕ್ಕೆ ಶಾಲಾ ಮಕ್ಕಳಿಗೆ ಸರಕಾರ ರಜೆ ಘೋಷಣೆ ಮಾಡಿದೆ. ಅ.3ರಿಂದ ಅ.20ರವರೆಗೆ ದಸರಾ ರಜೆ ಘೋಷಣೆ ಮಾಡಿದ್ದು, ಸರಕಾರಿ ಶಾಲೆಗಳು, ಅನುದಾನಿತ ಶಾಲೆಗಳು ಮತ್ತು ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ. ಹೊರತಾಗಿ ಸಿಬಿಎಸ್‌ಸಿ ಹಾಗೂ ಐಎಸ್‌ಸಿಎಸ್ ಶಾಲೆಗಳಿಗೆ ದಸರಾ ರಜೆ ಅನ್ವಯವಾಗುವುದಿಲ್ಲ. ಯಾಕಂದ್ರೆ ಇವೆರಡು ಕೇಂದ್ರ ಪಠ್ಯಕ್ರಮದಡಿ ಕಾರ್ಯನಿರ್ವಹಿಸುತ್ತಿರುವುದರಿಂದ ಶಾಲಾ ರಜೆ ದಿನಾಂಕ ಹಾಗೂ ರಜಾ ಅವಧಿ ಬೇರೆಯಾಗಿರುತ್ತದೆ.

    Continue Reading

    LATEST NEWS

    ಶಿರೂರು ಗುಡ್ಡ ಕುಸಿತ; ಕೊನೆಗೂ ನಾಪತ್ತೆಯಾಗಿದ್ದ ಟ್ರಕ್‌ ಪತ್ತೆ

    Published

    on

    ಕಾರವಾರ: ಶಿರೂರು ಭೂ ಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ಬಿದ್ದ ಟ್ರಕ್‌ ಕೊನೆಗೂ ಪತ್ತೆಯಾಗಿದೆ.

    ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್‌ ಚಲಾಯಿಸುತ್ತಿದ್ದ ಟ್ರಕ್‌ ಗಂಗಾವಳಿ ನದಿಗೆ ಬಿದ್ದಿತ್ತು. ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಇದ್ದ ಕಾರಣ ಟ್ರಕ್‌ ಪತ್ತೆ ಮಾಡಲು ಕಷ್ಟವಾಗಿತ್ತು. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಟ್ರಕ್‌ ಪತ್ತೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದರು.

    ಈಗ ಟ್ರಕ್‌ ಗುಡ್ಡ ಕುಸಿತಗೊಂಡ ಜಾಗದ ಬಳಿಯೇ ಸಿಕ್ಕಿ ಬಿದ್ದಿದೆ. ಟ್ರಕ್‌ ಮೇಲೆ ಸಾಕಷ್ಟು ಕಲ್ಲು ಮತ್ತು ಮಣ್ಣುಗಳಿವೆ. ಹೀಗಾಗಿ ಮಣ್ಣು ಮತ್ತು ಕಲ್ಲುಗಳನ್ನು ತೆಗೆದು ಟ್ರಕ್‌ ಮೇಲಕ್ಕೆ ಎತ್ತಲು ಸಿದ್ಧತೆ ನಡೆಯುತ್ತಿದೆ.

    ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಅರ್ಜುನ್ ಮರ ತುಂಬಿಸಿಕೊಂಡು ಟ್ರಕ್‌ನಲ್ಲಿ ಕೋಝಿಕ್ಕೋಡ್‌ ಕಡೆಗೆ ಹೋಗುತ್ತಿದ್ದರು.

    Continue Reading

    FILM

    ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!

    Published

    on

    ಹೈದರಾಬಾದ್/ಮಂಗಳೂರು: ಜಾನಿ ಮಾಸ್ಟರ್ ಮೇಲಿರುವ ನೃತ್ಯ ನಿರ್ದೇಶಕಿಯ ಅತ್ಯಾಚಾರ ಆರೋಪಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಜಾನಿ ಮಾಸ್ಟರ್ ಪತ್ನಿ ಆಯಿಷಾ ಮೇಲೂ ಕ್ರಮಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

    ಈಗಾಗಲೇ ಜಾನಿ ಮಾಸ್ಟರ್‌ ನನ್ನು ಡ್ಯಾನ್ಸ್‌ ನಿರ್ದೇಶಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದಡಿಯಲ್ಲಿ ಗೋವಾ ಪೊಲೀಸರು ಬಂಧಿಸಿ ಹೈದರಾಬಾದ್‌ನ ಚಂಚಲ್‌ ಗುಡಾ ಜೈಲಿಗೆ ಕಳುಹಿಸಿದ್ದಾರೆ. ನೃತ್ಯ ಸಂಯೋಜಕಿಯೊಬ್ಬಳು ನನ್ನ ಮೇಲೆ ಜಾನಿ ಮಾಸ್ಟರ್ ಅತ್ಯಾಚಾರವೆಸಗಿದ್ದಾರೆ ಹಾಗೂ ಅವರ ಪತ್ನಿ ಆಯಿಷಾ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನರಸಿಂಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅರೆಸ್ಟ್..!

    ಪ್ರಕರಣದಲ್ಲಿ ಆಯೇಷಾರನ್ನು ಆರೋಪಿಯನ್ನಾಗಿಸಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಮತ್ತೊಂದೆಡೆ ಶನಿವಾರ(ಸೆ.21) ನರಸಿಂಗಿ ಪೊಲೀಸರು, ಜಾನಿ ಮಾಸ್ಟರ್ ನನ್ನು ಕಸ್ಟಡಿಗೆ ನೀಡುವಂತೆ ಉಪ್ಪಾರಪಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ. ಹತ್ತು ದಿನಗಳ ಕಾಲ ಕಸ್ಟಡಿಗೆ ಕೋರುವ ಸಾಧ್ಯತೆ ಇದೆ. ಫೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದರಿಂದ ಆತನನ್ನು ಸಂಪೂರ್ಣವಾಗಿ ಪ್ರಶ್ನಿಸಲು ಪೊಲೀಸರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ. ಅಲ್ಲದೆ, ಆತನ ಪತ್ನಿ ವಿರುದ್ಧವೂ ಆರೋಪ ಕೇಳಿ ಬಂದಿರುವುದರಿಂದ ಬಂಧನವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

    Continue Reading

    LATEST NEWS

    Trending