LATEST NEWS
ರೋಹಿತ್ ಶರ್ಮಾ ಅವರ ಹೆಂಡತಿಗೆ ಕಳುಹಿಸಲಾದ ಸಂದೇಶವನ್ನು ಅಳಿಸಿ ಹಾಕಿದ ಆರ್.ಅಶ್ವಿನ್ !
Published
6 days agoon
By
NEWS DESK3ಮಂಗಳೂರು/ಮುಂಬೈ: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇಹ್ ಅವರ ಖಾತೆಯೊಂದಿಗೆ ಆರ್ ಅಶ್ವಿನ್ ವಿಚಿತ್ರವಾದ ಸಂವಹನ ನಡೆಸಿದ್ದರು.
ಹಿರಿಯ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದರು. ಈ ಬಗ್ಗೆ ಹಿರಿಯ ಕ್ರಿಕೆಟಿಗರು ಅಪಸ್ವರಗಳನ್ನು ತೆಗೆದಿದ್ದರು. ಆದರೆ ಅಶ್ವಿನ್ ಅವರು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇಹ್ ಅವರ ಖಾತೆಯೊಂದಿಗೆ ವಿಚಿತ್ರವಾದ ಸಂವಹನ ನಡೆಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ನಿನ್ನೆ ಮುಕ್ತಾಯಗೊಂಡ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸಿಡ್ನಿ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಈ ಸರಣಿಯನ್ನು 1-3 ರಿಂದ ಸೋತಿದರಿಂದ್ದ, @Nishitha018 ಎಂಬ ಎಕ್ಸ್ ನಲ್ಲಿನ ಬಳಕೆದಾರರು ಮೈಕ್ರೋ ಬ್ಲಾಗಿಂಗ್ ಪ್ಲಾಟ್ ಫಾರ್ಮ್ ಬಳಸಿ ಪ್ರೋಫೈಲ್ ನಲ್ಲಿ ರಿತಿಕಾ ಅವರ ಹೆಸರು ಮತ್ತು ಫೋಟೋ ಎಡಿಟ್ ಮಾಡಿ ಹಾಕಿದ್ದರು. ಇದರಲ್ಲಿ, “ಆಸ್ಟ್ರೇಲಿಯಾದವರು ನಮ್ಮನ್ನು ಸ್ವಚ್ಛಗೊಳಿಸಬಹುದು ಎಂದು ಭಾವಿಸಿದ್ದಾರೆ” ಎಂದು ಕಾಮೆಂಟ್ ಹಾಕಿದ್ದಾರೆ.
ಇದನ್ನೂ ಓದಿ: ಟೀಂ ಇಂಡಿಯಾಗೆ ಮತ್ತೊಂದು ಆಘಾತ; ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್
ಇದು ರಿತಿಕಾ ಅವರ ಅಧಿಕೃತ ಖಾತೆ ಎಂದು ತಿಳಿದು, “ಹಾಯ್ ರಿತಿಕಾ, ಹೇಗಿದ್ದೀರಿ? ನಿಮ್ಮ ಚಿಕ್ಕ ಮಗುವಿಗೆ ಮತ್ತು ಕುಟುಂಬಕ್ಕೆ ನಮಸ್ಕಾರಗಳು”, ಎಂದು ಅಶ್ವಿನ್ ಪ್ರತಿಕ್ರಿಯಿಸಿದ್ದಾರೆ.
ಇದಕ್ಕೆ ರಿತಿಕಾ ಅವರ ಹೆಸರಿನ ಬಳಕೆದಾರ, “ನಾನು ಚೆನ್ನಾಗಿದ್ದೇನೆ ಆಶ್ವಿನ್ ಅಣ್ಣ” ಎಂದು ಬಳಕೆದಾರರು ಉತ್ತರಿಸಿದರು.
ಇದರಿಂದ ಅನುಮಾನಗೊಂಡ ಅಶ್ವಿನ್ ತನ್ನ ಸಂದೇಶವನ್ನು ತಕ್ಷಣ ಅಳಿಸಲು ಪ್ರಯತ್ನಿಸಿದರು. ಆದರೆ ಅದು ಸಾಧ್ಯವಾಗಲಿಲ್ಲ. ಆದರೆ ಅಶ್ವಿನ್ ಅವರು ಮಾಡಿದ ಕಾಮೆಂಟ್ ಈಗ ಸಖತ್ ವೈರಲ್ ಆಗುತ್ತಿದ್ದು, ನೆಟ್ಟಿಗರು ಸಖತ್ ಟಾಂಗ್ ಕೊಡುತ್ತಿದ್ದಾರೆ.
ಇತ್ತೀಚೆಗೆ ರೋಹಿತ್ ಶರ್ಮಾ ದಂಪತಿಗಳು ನವೆಂಬರ್ ನಲ್ಲಿ ‘ಅಹಾನ್’ ಎಂಬ ಗಂಡು ಮಗುವನ್ನು ಬರಮಾಡಿಕೊಂಡರು. ಇದರಿಂದ ಪರ್ತ್ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ದದ ಟೆಸ್ಟ್ ಸರಣಿಯ ಆರಂಭಿಕ ಪಂದ್ಯವನ್ನು ತಪ್ಪಿಸಿಕೊಂಡಿದ್ದರು. ಅವರ ಅಲಭ್ಯತೆಯಿಂದಲೂ ಭಾರತ ತಂಡ ಪರ್ತ್ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿತ್ತು.
ಕೊನೆಯ ನಿರ್ಣಾಯಕ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಅವರು ತಮ್ಮ ಕಳಪೆ ಫಾರ್ಮ್ ನಿಂದಾಗಿ ತಂಡದಿಂದ ಹೊರಗುಳಿಯಲು ನಿರ್ಧರಿಸಿದರು. ಆದಾಗ್ಯೂ ಈ ಪಂದ್ಯದಲ್ಲಿ ಭಾರತ 6 ವಿಕೆಟ್ ಗಳಿಂದ ಸೋತಿದ್ದು, ಸರಣಿಯನ್ನು 1-3 ಅಂತರದಿಂದ ಕಳೆದುಕೊಂಡಿತು.
LATEST NEWS
ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ತಂದೆ, ಮಗ
Published
6 hours agoon
12/01/2025By
NEWS DESK3ಮಂಗಳೂರು/ಮಹಾರಾಷ್ಟ್ರ : ತಂದೆ ಮತ್ತು ಮಗ ಇಬ್ಬರೂ ಒಂದೇ ಮರಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
‘ತಂದೆ ತನಗೆ ಸ್ಮಾರ್ಟ್ ಫೋನ್ ಕೊಡಿಸಲಿಲ್ಲ’ ಎಂದು ಮನನೊಂದು 16 ವರ್ಷದ ಬಾಲಕನೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇನ್ನೊಂದು ವಿಚಿತ್ರವೆಂದರೆ ಮಗನ ಶವ ನೋಡಿ ಆತನ ತಂದೆ ‘ಮಗನಿಗೆ ಸ್ಮಾರ್ಟ್ ಫೋನ್ ಕೊಡಿಸಲು ಆಗಲಿಲ್ಲ’ ಎಂದು ತಾನೂ ಸಹ ಅದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಂದೇಡ್ ಜಿಲ್ಲೆಯ ಬಿಳೋಳಿ ಮಿನಾಕಿ ಎಂಬಲ್ಲಿ ಈ ದುರ್ಘಟನೆ ನಡೆದಿದೆ.
ರಾಜು ಅವರಿಗೆ ಮೂವರು ಮಕ್ಕಳು. ಕೊನೆಯ ಮಗ ಓಂಕಾರ್ ಹಾಸ್ಟೆಲ್ ಒಂದರಲ್ಲಿ ಇದ್ದುಕೊಂಡು 10 ನೇ ತರಗತಿ ಓದುತ್ತಿದ್ದ. ಮಕರ ಸಂಕ್ರಮಣದ ರಜೆ ಇರುವುದರಿಂದ ಮನೆಗೆ ಬಂದಿದ್ದ.
ಇದನ್ನೂ ಓದಿ: ರೀಲ್ಸ್ ಮಾಡಲು ಹೋಗಿ ನೀರುಪಾಲಾದ ಐವರು ಯುವಕರು
‘ಇದೇ ವೇಳೆ ಬಾಲಕ ಓಂಕಾರ್ ತನ್ನ ತಂದೆಗೆ ಸ್ಮಾರ್ಟ್ ಫೋನ್ ಕೊಡಿಸುವಂತೆ ಒತ್ತಾಯಿಸುತ್ತಿದ್ದ. ಆದರೆ ಬಡ ರೈತ ಕುಟುಂಬದ ರಾಜು, ಮಗನಿಗೆ ಸ್ಮಾರ್ಟ್ ಫೋನ್ ಕೊಡಿಸಲು ಆಗಿರಲಿಲ್ಲ. ಇದರಿಂದ ಡೆತ್ ನೋಟ್ ಬರೆದಿಟ್ಟು ಹೊಲದಲ್ಲಿನ ಮರಕ್ಕೆ ಬಾಲಕ ನೇಣು ಹಾಕಿಕೊಂಡಿದ್ದ. ಅದೇ ರಾತ್ರಿ ಮಗನನ್ನು ಹುಡುಕಿಕೊಂಡು ಹೋಗಿದ್ದ ತಂದೆಯೂ ಮಗ ನೇಣೂ ಹಾಕಿಕೊಂಡಿದ್ದನ್ನು ನೋಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ನಾಂದೇಡ್ ಎಸ್ ಪಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ.
ಮೃತ ಬಾಲಕನ ತಾಯಿ ನೀಡಿದ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೃತದೇಹಗಳನ್ನು ಸಿವಿಲ್ ಆಸ್ಪತ್ರೆಗೆ ಸಾಗಿಸಿದ್ದು, ಇಬ್ಬರೂ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.
LATEST NEWS
ಛೇ! ಇದೆಂಥ ಅಮಾನವೀಯ ಕೃ*ತ್ಯ; ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಕಿ*ಡಿಗೇಡಿಗಳು
Published
6 hours agoon
12/01/2025By
NEWS DESK4ಮಂಗಳೂರು/ಬೆಂಗಳೂರು : ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಅಮಾನವೀಯ ಕೃ*ತ್ಯ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ. ತಡರಾತ್ರಿ ದು*ಷ್ಕರ್ಮಿಗಳು ವಿ*ಕೃತಿ ಮೆರೆದಿದ್ದಾರೆ. ರಸ್ತೆಯಲ್ಲಿ ಮಲಗಿದ್ದ ಕೆಚ್ಚಲುಗಳನ್ನು ಕೊಯ್ದು ಕಿ*ಡಿಗೇಡಿಗಳು ಪರಾರಿಯಾಗಿದ್ದಾರೆ.
ರಾತ್ರಿಯಿಡೀ ಹಸುಗಳು ರ*ಕ್ತದ ಮಡುವಿನಲ್ಲಿ ನರಳಾಡಿವೆ. ಇಂದು(ಡಿ.12) ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಹಸುಗಳಿಗೆ ಚಾಮರಾಜಪೇಟೆಯ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಟನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದಿದ್ದಾರೆ.
ಸಂಸದ ಪಿಸಿ ಮೋಹನ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ತಕ್ಷಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಸ್ಥಳಕ್ಕೆ ಭೇಟಿ ನೀಡಿ ಹಸುವಿನ ಮಾಲೀಕರಿಂದ ಮಾಹಿತಿ ಪಡೆದಿದ್ದಾರೆ.
ಮಂಗಳೂರು/ಹೈದರಾಬಾದ್ : ರೀಲ್ಸ್ ಮಾಡಲು ಹೋದ ಐವರು ಯುವಕರು ನೀರುಪಾಲಾದ ಘಟನೆ ತೆಲಂಗಾಣದ ಸಿದ್ದಿ ಪೇಟ್ ಜಿಲ್ಲೆಯ ಕೊಂಡ ಪೋಚಮ್ಮ ಸಾಗರ ಜಲಾಶಯದಲ್ಲಿ ನಡೆದಿದೆ.
ಇಂದು ಏಳು ಮಂದಿ ಯುವಕರ ತಂಡ ಬೆಳಗ್ಗೆ ಒಂಬತ್ತರ ಸುಮಾರಿಗೆ ಜಲಾಶಯದ ಬಳಿ ಬಂದು, ಅಲ್ಲೇ ತಿರುಗಾಡಿ ಕೊನೆಗೆ ನೀರಿಗೆ ಇಳಿದಿದ್ದರು. ನೀರಿಗೆ ಇಳಿದು ನೀರಿನಲ್ಲಿ ಆಟವಾಡುತ್ತಿದ್ದ ದೃಶ್ಯವನ್ನು ಈಜು ಬಾರದ ಇಬ್ಬರು ಬದಿಯಲ್ಲಿ ನಿಂತು ಮೊಬೈಲ್ನಲ್ಲಿ ಚಿತ್ರೀಕರಿಸುತ್ತಿದ್ದರು.
ಇದನ್ನೂ ಓದಿ: ಕಡಬ : ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಬಾಣಂತಿ ಸಾ*ವು
ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಐವರೂ ನೀರಿನಲ್ಲಿ ಮುಳುಗುತ್ತಿರುವುದನ್ನು ಗಮನಿಸಿದ ಇಬ್ಬರು ಅವರ ರಕ್ಷಣೆಗೆ ಮುಂದಾದ್ರೂ ಸಾಧ್ಯವಾಗಿಲ್ಲ. ಮುಶೀರಾಬಾದ್ನ ಸಹೋದರರಾದ ಧನುಷ್ (20), ಲೋಹಿತ್ (17), ಬನ್ಸಿಲಾಲ್ ಪೇಟೆಯ ದಿನೇಶ್ವರ್ (17), ಖೈರತಾಬಾದ್ನ ಚಾಂತಲ್ ಬಸ್ತಿಯ ಜತಿನ್ (17), ಮತ್ತು ಸಾಹಿಲ್ (19) ನೀರು*ಪಾಲಾದ ಯುವಕರು. ಮೃಗಾಂಕ್ (17) ಮತ್ತು ಇಬ್ರಾಹಿಂ (19) ಇಬ್ಬರು ನೀರಿನ ಆಳಕ್ಕೆ ಇಳಿಯದ ಕಾರಣ ಅಪಾಯದಿಂದ ಪಾರಾಗಿದ್ದಾರೆ.
ಜಲಾಶಯದ ಬಳಿ ಜನರ ಓಡಾಟ ಕಡಿಮೆ ಇದ್ದ ಕಾರಣ ಮುಳುಗುತ್ತಿದ್ದ ಐವರ ರಕ್ಷಣೆಗೆ ಯಾರೂ ಸಿಗಲಿಲ್ಲ ಎಂದು, ಬದುಕಿ ಉಳಿದ ಇಬ್ಬರು ಸ್ನೇಹಿತರು ಪೊಲೀಸರ ಬಳಿ ಹೇಳಿದ್ದಾರೆ.
LATEST NEWS
ನರಿಂಗಾನ ಜೋಡುಕರೆ ಕಂಬಳ ಕಣ್ತುಂಬಿಕೊಂಡ ಶಾನ್ವಿ ಶ್ರೀವಾಸ್ತವ್
60 ರೂ. ಗಡಿ ದಾಟಿದ ತೆಂಗಿನಕಾಯಿ ಬೆಲೆ
ಕಾಸರಗೋಡು: ಗಲ್ಫ್ ನಿಂದ ಅಪ್ಪ ತಂದ ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು
ಪಿಲಿಕುಳ ಕಂಬಳ ವಿಚಾರಣೆ ಜನವರಿ 21 ಕ್ಕೆ ಮುಂದೂಡಿಕೆ
ಈ ವಾರ ಬಿಗ್ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿ ಇವರೇ..!
ಮಂಗಳೂರು: ಜ. 31 ರಿಂದ ಫೆ. 2 ರ ತನಕ ತಣ್ಣೀರುಬಾವಿ ಬೀಚ್ ಫೆಸ್ಟಿವಲ್
Trending
- FILM6 days ago
ಸುದೀಪ್ ಮಗಳು ಸಾನ್ವಿ ಬಗ್ಗೆ ಯಾಕಿಷ್ಟು ಟ್ರೋಲ್? ಅವರು ಮಾಡಿದ ತಪ್ಪೇನು?
- BIG BOSS1 day ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- FILM4 days ago
ಗೋವಾದಲ್ಲಿ ಕೇಕ್ ಕತ್ತರಿಸಿ ಯಶ್ ಬರ್ತ್ಡೇ ಸಂಭ್ರಮ
- LATEST NEWS2 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!