Connect with us

    FILM

    ಯುವರಾಣಿಯಂತೆ ರೆಡಿ ಆಗಿ ಬಂದ ರಾಧಿಕಾ ಪಂಡಿತ್; ಫೋಟೋಗೆ ಫ್ಯಾನ್ಸ್ ಫಿದಾ

    Published

    on

    ನಟಿ ರಾಧಿಕಾ ಪಂಡಿತ್ ಅವರು ನಟನೆಯಿಂದ ದೂರವೇ ಉಳಿದುಕೊಂಡಿದ್ದಾರೆ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರೀಗ ಯುವರಾಣಿಯಂತೆ ಕಾಣಿಸಿಕೊಂಡಿದ್ದು, ಫೋಟೋ ವೈರಲ್ ಆಗಿದೆ.

    ರಾಧಿಕಾ ಪಂಡಿತ್ ಅವರ ಹೊಸ ಫೋಟೋಗಳು ಗಮನ ಸೆಳೆದಿವೆ. ಅವರು ಸೀರೆ ಉಟ್ಟು ಗಮನ ಸೆಳೆದಿದ್ದಾರೆ. ನಟಿಯ ಸೌಂದರ್ಯವನ್ನು ಎಲ್ಲರೂ ಹಾಡಿಹೊಗಳಿದ್ದಾರೆ. ಯಾವ ಕಾರಣಕ್ಕೆ ರಾಧಿಕಾ ಈ ರೀತಿಯ ಫೋಟೋ ಹಂಚಿಕೊಂಡಿದ್ದಾರೆ ಎಂಬುದು ರಿವೀಲ್ ಆಗಿಲ್ಲ.

    ರಾಧಿಕಾ ಪಂಡಿತ್ ಎರಡು ಮಕ್ಕಳ ತಾಯಿ. ಅವರಿಗೆ ಆಯ್ರಾ ಹಾಗೂ ಯಥರ್ವ್ ಹೆಸರಿನ ಮಕ್ಕಳು ಇದ್ದಾರೆ. ಈಗಲೂ ರಾಧಿಕಾ ಪಂಡಿತ್ ಅವರು ಸಖತ್ ಯಂಗ್ ಆಗಿ ಕಾಣಿಸುತ್ತಾರೆ. ರಾಧಿಕಾ ಪಂಡಿತ್ ಅವರು 2016ರಲ್ಲಿ ಮದುವೆ ಆದರು. ಆ ಬಳಿಕ ರಾಧಿಕಾ ಅವರು ನಟನೆಯಿಂದ ದೂರವೇ ಉಳಿದುಕೊಂಡಿದ್ದಾರೆ. ಈ ಬಗ್ಗೆ ಫ್ಯಾನ್ಸ್​ಗೆ ಬೇಸರ ಇದೆ.

    ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಲೈಫ್ ಅಪ್​ಡೇಟ್​ನ ಅವರು ನೀಡುತ್ತಾ ಇರುತ್ತಾರೆ. ರಾಧಿಕಾ ಪಂಡಿತ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈಗಲೂ ಅವರು ಚಿತ್ರರಂಗಕ್ಕೆ ಮರಳಬೇಕು ಎಂದು ಅನೇಕರು ಬಯಸುತ್ತಿದ್ದಾರೆ. ಆದರೆ, ಸದ್ಯಕ್ಕಂತೂ ಅದು ಸಾಧ್ಯವಿಲ್ಲ.

    BIG BOSS

    ಬಿಗ್‌ಬಾಸ್‌ನಲ್ಲಿ ಒಂದೇ ಬೆಡ್​ಶೀಟ್ ಹೊದ್ದು ಕುಳಿತ ಐಶ್ವರ್ಯಾ-ಶಿಶಿರ್

    Published

    on

    ಬಿಗ್ ಬಾಸ್ ಮನೆಯಲ್ಲಿ ಐಶ್ವರ್ಯಾ ಅವರು ಮೊದಲ ದಿನದಿಂದಲೂ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಲೇ ಇದ್ದಾರೆ. ಅವರು ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿ ಆಗುತ್ತಿದ್ದಾರೆ. ಈಗ ಅವರ ರೊಮ್ಯಾನ್ಸ್ ವಿಚಾರ ಸಾಕಷ್ಟು ಚರ್ಚೆ ಆಗಿದೆ.

    ಐಶ್ವರ್ಯಾ ಹಾಗೂ ಶಿಶಿರ್ ಒಂದೇ ಬೆಡ್​ಶೀಟ್ ಹೊತ್ತು ಕುಳಿತಿದ್ದಾರೆ. ಐಶ್ವರ್ಯಾ ಅವರ ಕೈಯಲ್ಲಿ ಕಪ್ ಇತ್ತು. ಅದರಲ್ಲಿ ಇದ್ದ ಬಿಸಿ ಕಾಫಿಯನ್ನು ಒಬ್ಬರಾದ ಬಳಿಕ ಒಬ್ಬರು ಹೀರಿದ್ದಾರೆ. ಅಕ್ಟೋಬರ್ 18ರ ಎಪಿಸೋಡ್​ನಲ್ಲಿ ಈ ದೃಶ್ಯಗಳು ಹೈಲೈಟ್ ಆಗಿದೆ.

    ಐಶ್ವರ್ಯಾ ಅವರಿಗೆ ಶಿಶಿರ್ ಅಂತರ ಇಟ್ಟುಕೊಂಡು ಕಿಸ್ ಕೊಟ್ಟಿದ್ದಾರೆ. ಇದರಿಂದ ಇವರು ಕ್ಲೋಸ್ ಆದರೇ ಎನ್ನುವ ಪ್ರಶ್ನೆ ಮೂಡಿದೆ. ಇಬ್ಬರೂ ರಿಯಲ್ ಲೈಫ್​ನಲ್ಲಿ ಸಿಂಗಲ್ ಆಗಿದ್ದಾರೆ. ಹೀಗಾಗಿ, ಬಿಗ್ ಬಾಸ್​ನಲ್ಲಿ ಇವರ ಮಧ್ಯೆ ಪ್ರೀತಿ ಹುಟ್ಟಿಕೊಳ್ಳಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

    ಐಶ್ವರ್ಯಾ ಅವರು ಬಿಗ್ ಬಾಸ್ ಮನೆ ಪ್ರವೇಶಿಸಿದಾಗ ಮೊದಲು ಧರ್ಮ ಜೊತೆ ಕ್ಲೋಸ್ ಆಗೋಕೆ ಬಯಿಸಿದ್ದರು. ಆದರೆ, ಇದಕ್ಕೆ ಅನುಷಾ ರೈ ಅವಕಾಶ ನೀಡಿರಲಿಲ್ಲ. ಹೀಗಿರುವಾಗಲೇ ಶಿಶಿರ್ ಹಾಗೂ ಐಶ್ವರ್ಯಾ ಕ್ಲೋಸ್ ಆಗಿದ್ದಾರೆ.

    ಹೈಲೈಟ್ ಆಗಬೇಕು ಎನ್ನುವ ಕಾರಣಕ್ಕೆ ಕೆಲವೊಮ್ಮೆ ಲವ್ ನಾಟಕ ಆಡೋದು ಇದೆ. ‘ಬಿಗ್ ಬಾಸ್ ಮನೆಯಲ್ಲಿ ಹುಟ್ಟಿಕೊಂಡಿರೋದು ಈಗ ಅಂಥದ್ದೇ ಪ್ರೀತಿಯೇ ಎನ್ನುವ ಪ್ರಶ್ನೆ ವೀಕ್ಷಕರನ್ನು ಕಾಡುತ್ತಿದೆ.

    Continue Reading

    BIG BOSS

    ಮತ್ತೆ ಜೈಲು ಸೇರಿದ ಚೈತ್ರಾ ಕುಂದಾಪುರ

    Published

    on

    ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 11, ನಾಲ್ಕನೇ ವಾರಕ್ಕೆ ಕಾಲಿಡುತ್ತಿದೆ. ಇದೇ ಹೊತ್ತಲ್ಲಿ ಚೈತ್ರಾ ಕುಂದಾಪುರ ಬಿಗ್​ಬಾಸ್​ ಮನೆಯ ಜೈಲು ಪಾಲಾಗಿದ್ದಾರೆ. ಬಿಗ್​ಬಾಸ್​ ಮನೆಗೆ ಕಾಲಿಟ್ಟಿದ್ದ ಚೈತ್ರಾ ಕುಂದಾಪುರ ನೇರವಾಗಿ ನರಕಕ್ಕೆ ಎಂಟ್ರಿ ಕೊಟ್ಟಿದ್ದರು.

    ಬಿಗ್‌ ಬಾಸ್ ಸೀಸನ್ 11ರಲ್ಲಿ ಚೈತ್ರಾ ಕುಂದಾಪುರ ಅವರು ಮೊದಲ ಬಾರಿಗೆ ಜೈಲಿಗೆ ಹೋಗಿದ್ದಾರೆ. ಮೂರನೇ ವಾರದಲ್ಲಿ ಮನೆಯಲ್ಲಿದ್ದ 14 ಸ್ಪರ್ಧಿಗಳಿಗೆ ಬಿಗ್​ಬಾಸ್​ ಟಾಸ್ಕ್​ವೊಂದನ್ನು ನೀಡಿದ್ದರು. ಬಿಗ್​ಬಾಸ್​ ಮನೆಯಲ್ಲಿ ಅಪ್ರಾಮಾ ಣಿಕ ಯಾರು ಹಾಗೂ ಕುತಂತ್ರಿ ಯಾರು ಅಂತ ಹೇಳಿ ಎಂದಿದ್ದರು.

    ಬಿಗ್​ಬಾಸ್​ ಮನೆಯಲ್ಲಿರೋ ಸ್ಪರ್ಧಿಗಳು ಅತಿ ಹೆಚ್ಚಾಗಿ ಹಣೆ ಪಟ್ಟಿಯನ್ನು ಚೈತ್ರಾ ಕುಂದಾಪುರ ಅವರಿಗೆ ಕೊಟ್ಟಿದ್ದಾರೆ. ಹೀಗಾಗಿ ಪ್ರಕ್ರಿಯೆಯ ಅನುಸಾರ ಚೈತ್ರಾ ಕುಂದಾಪುರ ಬಿಗ್​ಬಾಸ್​ ಜೈಲಿಗೆ ಹೋಗಿದ್ದಾರೆ. ಬಿಗ್​ಬಾಸ್​ ಅವರ ಮುಂದಿನ ಆದೇಶದವರೆಗೂ ಚೈತ್ರಾ ಜೈಲಿನಲ್ಲೇ ಇರಬೇಕಾಗುತ್ತದೆ.

    Continue Reading

    BIG BOSS

    BBK11: ವಾರದ ಕತೆ ಕಿಚ್ಚನ ಜೊತೆ; ಕುತೂಹಲ ಮೂಡಿಸಿದ 5 ವಿಚಾರಗಳು..!

    Published

    on

    ಬಿಗ್​​ಬಾಸ್​ ಸೀಸನ್​-11 ಮೂರು ವಾರ ಪೂರೈಸಿದ್ದು, ಇಂದು ಕಿಚ್ಚ ಸುದೀಪ್ ಎಂಟ್ರಿ ಆಗಲಿದ್ದಾರೆ. ಕಳೆದ ಒಂದು ವಾರದಿಂದ ಬಿಗ್​ಬಾಸ್ ಮನೆಯಲ್ಲಿ, ನಡೆದ ಅನೇಕ ವಿಚಾರಗಳು ದೊಡ್ಡ ಮೊಟ್ಟದಲ್ಲಿ ಸದ್ದು ಮಾಡಿವೆ. ಹೀಗಾಗಿ ಇವತ್ತಿನ ಕಿಚ್ಚನ ಎಪಿಸೋಡ್​​ ತುಂಬಾನೇ ಕುತೂಹಲ ಮೂಡಿಸಿದೆ.

    ಭಾರೀ ಹೈಡ್ರಾಮಾ..!

    ದಸರಾ ಹಿನ್ನೆಲೆಯಲ್ಲಿ ಕಳೆದ ವಾರ ಎಲಿಮಿನೇಷನ್​ ಪ್ರಕ್ರಿಯೆ ನಡೆದಿರಲಿಲ್ಲ. ಈ ವಾರ ನಡೆದ ಕೆಲವು ಅಹಿತಕರ ಘಟನೆಗಳಿಂದಾಗಿ ಸ್ಪರ್ಧಿಗಳಾದ ಲಾಯರ್ ಜಗದೀಶ್ ಹಾಗೂ ರಂಜಿತ್ ಅವರನ್ನು ಮನೆಯಿಂದ ಆಚೆ ಹಾಕಲಾಗಿದೆ. ಅಂದರೆ ಇಬ್ಬರು ಸ್ಪರ್ಧಿಗಳು ಬ್ಯಾಗ್ ಹಿಡಿದು ಮನೆಗೆ ವಾಪಸ್ ಆಗಿದ್ದಾರೆ. ಈ ವಿಚಾರಗಳಿಗೆ ಸುದೀಪ್ ಪ್ರತಿಕ್ರಿಯೆ ಹೇಗಿರುತ್ತದೆ ಅನ್ನೋ ಕುತೂಹಲ ವೀಕ್ಷಕರಲ್ಲಿ ಹೆಚ್ಚಾಗಿದೆ.

    ಆಕ್ಷೇಪಾರ್ಹ ಪದ ಬಳಕೆ

    ಕೆಲವು ಸ್ಪರ್ಧಿಗಳು ಮನೆಯಲ್ಲಿ ಆಕ್ಷೇಪಾರ್ಹ ಪದಗಳನ್ನು ಬಳಕೆ ಮಾಡ್ತಿದ್ದಾರೆ. ಇದು ವೀಕ್ಷಕರ ಸಮಾಧಾನಕ್ಕೆ ಕಾರಣವಾಗಿದೆ. ಟಾಸ್ಕ್​ ವೇಳೆ, ವಾದ-ಪ್ರತಿವಾದ ವೇಳೆ ಅತಿರೇಕಕ್ಕೆ ಹೋಗುವ ಸ್ಪರ್ಧಿಗಳು ಮನಸೋ ಇಚ್ಛೆ ನಿಂದನೆ ಮಾಡಿಕೊಳ್ತಿದ್ದಾರೆ. ಇಂಥ ವಿಚಾರಗಳ ಬಗ್ಗೆ ಸ್ಪರ್ಧಿಗಳಿಗೆ ಸುದೀಪ್ ಹೇಗೆ ಕ್ಲಾಸ್ ತೆಗೆದುಕೊಳ್ತಾರೆ ಅನ್ನೋ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ.

    ಎಲಿಮಿನೇಷನ್ ಇರುತ್ತಾ..?

    ಈಗಾಗಲೇ ಬಿಗ್​​ಬಾಸ್​ ಮನೆಯಿಂದ ಜಗದೀಶ್ ಹಾಗೂ ರಂಜಿತ್​ರನ್ನು ಹೊರಹಾಕಲಾಗಿದೆ. ಹೀಗಾಗಿ, ಈ ವಾರ ಎಲಿಮಿನೇಷನ್ ನಡೆಯೋದು ಡೌಟ್. ಆದರೂ ಸುದೀಪ್ ಯಾರನ್ನೆಲ್ಲಾ ಸೇವ್ ಮಾಡುತ್ತಾರೆ? ಮೊದಲು ಸೇವ್ ಆಗೋದು ಯಾರು ಅನ್ನೋದ್ರ ಬಗ್ಗೆ ವೀಕ್ಷಕರಲ್ಲಿ ಎಕ್ಸೈಟ್​ಮೆಂಟ್ ಹೆಚ್ಚಾಗಿದೆ.

    ಕನ್ನಡ ಮಾಯ

    ಸ್ಪರ್ಧಿಗಳು ಕನ್ನಡ ಪದ ಬಳಕೆಯನ್ನು ಕಡಿಮೆ ಮಾಡಿದ್ದಾರೆ ಅನ್ನೋ ಆರೋಪ ಇದೆ. ಪದೇ ಪದೇ ಇಂಗ್ಲಿಷ್​​ನಲ್ಲಿ ಮಾತನಾಡುತ್ತಿರುವ ಸಂಬಂಧ ಈಗಾಗಲೇ ಸ್ಪರ್ಧಿಗಳಿಗೆ ಬಿಗ್​ಬಾಸ್​ ಎಚ್ಚರಿಕೆಯನ್ನೂ ನೀಡಿದ್ದಾರೆ. ಹೀಗಿದ್ದೂ ಸ್ಪರ್ಧಿಗಳು ಇಂಗ್ಲಿಷ್​​ನಲ್ಲಿ ಮಾತನಾಡ್ತಿದ್ದಾರೆ.

    ಬಿಗ್​ಬಾಸ್​ಗೆ ಸುದೀಪ್ ಗುಡ್​ಬೈ

    ಕಳೆದ ಭಾನುವಾರ ಟ್ವೀಟ್ ಮಾಡುವ ಮೂಲಕ ಕಿಚ್ಚ ಸುದೀಪ್, ಬಿಗ್​ಬಾಸ್​ಗೆ ಗುಡ್​ಬೈ ಹೇಳಿದ್ದಾರೆ. ಮುಂದಿನ ವರ್ಷದಿಂದ ಸುದೀಪ್, ಬಿಗ್​​ಬಾಸ್ ಶೋನಲ್ಲಿ ಕಾಣಿಸಿಕೊಳ್ಳಲ್ಲ. ಇದು ಅಭಿಮಾನಿಗಳಿಗೆ ಭಾರೀ ಬೇಸರವುಂಟು ಮಾಡಿದೆ. ಸುದೀಪ್ ಈ ನಿರ್ಧಾರ ಪ್ರಕಟಿಸಿದ ಬಳಿಕ ಮೊದಲ ಬಾರಿಗೆ ಬಿಗ್​ಬಾಸ್​ ವೇದಿಕೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

    Continue Reading

    LATEST NEWS

    Trending