ಹಡಿಲು ಬಿದ್ದ ಭೂಮಿಯಲ್ಲಿ ಭತ್ತ ಕೃಷಿಗೆ ಇಳಿದ ಶಾಸಕ ರಘುಪತಿ ಭಟ್ ಮತ್ತು ಪುತ್ರ..!
ಹಡಿಲು ಬಿದ್ದ ಭೂಮಿಯಲ್ಲಿ ಭತ್ತ ಕೃಷಿಗೆ ಇಳಿದ ಶಾಸಕ ರಘುಪತಿ ಭಟ್ ಮತ್ತು ಪುತ್ರ..!
ಉಡುಪಿ : ಉಡುಪಿಯ ನಿಟ್ಟೂರು ಪ್ರೌಢ ಶಾಲೆ ನೇತೃತ್ವದಲ್ಲಿ ಹಡಿಲು ಬಿದ್ದ ಭೂಮಿಯಲ್ಲಿ ಭತ್ತ ಕೃಷಿ ಮಾಡುವ ವಿನೂತನ ಯೋಜನೆ ಕೆಲವು ದಿನಗಳಿಂದ ಚಾಲ್ತಿಯಲ್ಲಿದೆ.
ಇಂದು ಕರಂಬಳ್ಳಿಯ ಗದ್ದೆಯಲ್ಲಿ ನಾಟಿ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಉಡುಪಿ ಶಾಸಕರ ಮನೆಯ ಸಮೀಪ ಹಡಿಲು ಬಿದ್ದ ಭೂಮಿಯಲ್ಲಿ ನೇಜಿ ನೆಡುವ ಕಾರ್ಯಕ್ರಮದಲ್ಲಿ ಸ್ವತಃ ಶಾಸಕ ರಘುಪತಿ ಭಟ್ ಭಾಗವಹಿಸಿ ಸ್ಥಳೀಯರಲ್ಲಿ ಹುರುಪು ತುಂಬುವ ಕೆಲಸ ಮಾಡಿದರು.
ಮಳೆ ಬರುತ್ತಿದ್ದರೂ ,ಟೀಶರ್ಟ್ ,ಟೋಪಿ ಹಾಕಿ ತಮ್ಮ ಕಿರಿಯ ಮಗನ ಜೊತೆ ನೇಜಿ ನೆಟ್ಟು ಇತರರಿಗೆ ಮಾದರಿಯಾದ್ರು.
ಕರಂಬಳ್ಳಿಯ ಈ ಕೃಷಿ ಭೂಮಿ ಕಳೆದ ಹದಿನೈದು ವರ್ಷಗಳಿಂದ ಹಡಿಲು ಬಿದ್ದಿತ್ತು.ಉಡುಪಿಯಲ್ಲಿ ನೂರಾರು ಎಕರೆ ಭತ್ತದ ಗದ್ದೆಗಳು ಕೃಷಿ ಮಾಡುವವರಿಲ್ಲದೆ ಹಡಿಲು ಬಿದ್ದಿವೆ.
ಇಂಥ ಕೃಷಿಭೂಮಿಯಲ್ಲಿ ಮತ್ತೆ ಭತ್ತದ ಬೆಳೆ ತೆಗೆಯುವ ವಿನೂತನ ಯೋಜನೆ ಇದು.ಐದು ಕಡೆಗಳಲ್ಲಿ ಸುಮಾರು ಐವತ್ತು ಎಕರೆ ಹಡಿಲು ಬಿದ್ದ ಭೂಮಿಯಲ್ಲಿ,ಸ್ಥಳೀಯರು ಮತ್ತು ನಿಟ್ಟೂರು ಶಾಲೆಯ ಹಳೆ ವಿದ್ಯಾರ್ಥಿಗಳು ಕೃಷಿ ಕಾರ್ಯ ಮಾಡಲಿದ್ದಾರೆ.
ಇದರಲ್ಲಿ ಬಂದ ಬೆಳೆಯನ್ನು ಮಾರಿ ಆ ದುಡ್ಡನ್ನು ಭೂಮಿಯ ಮಾಲಕರಿಗೆ ಕೊಡಲಾಗುವುದು.ಈ ಯೋಜನೆ ರಾಜ್ಯಾದ್ಯಂತ ಆಗಬೇಕಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.
DAKSHINA KANNADA
ಕನ್ನಡದಲ್ಲಿ ಔಷಧ ಚೀಟಿ ಬರೆದು ಗಮನ ಸೆಳೆದ ಕಾಸರಗೋಡು ಜಿಲ್ಲೆಯ ದಂತ ವೈದ್ಯ..!
ಮಂಜೇಶ್ವರ/ಮಂಗಳೂರು: ಈ ಹಿಂದೆ ವೈದ್ಯರೊಬ್ಬರು ಕನ್ನಡದಲ್ಲಿ ಔಷಧ ಚೀಟಿಯನ್ನು ಬರೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಬಳಿಕ ಕರ್ನಾಟಕದಲ್ಲಿ ವೈದ್ಯರು ಕನ್ನಡದಲ್ಲೇ ಔಷಧ ಚೀಟಿಯನ್ನು ಬರೆಯುವಂತೆ ಕನ್ನಡ ಪ್ರಾಧಿಕಾರ ಸೂಚನೆ ಕೂಡಾ ನೀಡಿತ್ತು. ಆದರೆ ಕರ್ನಾಟಕದಲ್ಲಿ ಈ ಸೂಚನೆ ಕಟ್ಟುನಿಟ್ಟಾಗಿ ಜಾರಿಯಾಗುವ ಮೊದಲೇ ಕೇರಳದ ಕಾಸರಗೋಡಿನಲ್ಲಿ ವೈದ್ಯರೊಬ್ಬರು ಕನ್ನಡದಲ್ಲಿ ಔಷಧ ಚೀಟಿ ಬರೆದು ಎಲ್ಲರ ಗಮನ ಸೆಳೆದಿದ್ದಾರೆ.
ಹೌದು, ಕಾಸರಗೋಡಿನ ಮಂಜೇಶ್ವರದಲ್ಲಿರುವ ಸುರಕ್ಷಾ ದಂತ ಚಿಕಿತ್ಸಾಲಯದ ಡಾ.ಮುರಳೀ ಮೋಹನ ಚೂಂತೂರು ರವರು ಕನ್ನಡ ಪ್ರೇಮ ಮೆರೆದಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿನೆಲೆ ಅವರು ಇತ್ತೀಚೆಗೆ ಮಂಗಳೂರು ಭೇಟಿ ನೀಡಿದ ವೇಳೆ ವೈದ್ಯರು ಕೂಡಾ ಕನ್ನಡದಲ್ಲಿ ಔಷಧ ಚೀಟಿಯನ್ನು ಜನರಿಗೆ ಅರ್ಥವಾಗುವಂತೆ ಬರೆಯಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದ್ದರು.
ಹಾಗಾಗಿ ರಾಜ್ಯದಲ್ಲಿ ಒಬ್ಬ ವೈದ್ಯರು ಕನ್ನಡದಲ್ಲಿ ಔಷಧ ಚೀಟಿ ಬರೆಯುವ ಮೂಲಕ ಮೊದಲ ಸ್ಪಂದನ ನೀಡಿದ್ದರು. ಇದೀಗ ಕೇರಳ ರಾಜ್ಯದಲ್ಲಿ ವೈದ್ಯರೊಬ್ಬರು ಕನ್ನಡದಲ್ಲಿ ಔಷಧ ಚೀಟಿ ಬರೆಯುವ ಮೂಲಕ ತನ್ನ ಕನ್ನಡ ಪ್ರೇಮವನ್ನು ತೋರಿಸಿದ್ದಾರೆ.
ಸರ್ಕಾರಿ ವೈದ್ಯರು ಕನ್ನಡದಲ್ಲೇ ಔಷಧ ಚೀಟಿ ಬರೆಯಲು ಆದೇಶಿಸುವಂತೆ ಸಚಿವರಿಗೆ ಪ್ರಾಧಿಕಾರ ಪತ್ರ
ಅದಾದ ಬಳಿಕ ಆರೋಗ್ಯ ಸಚಿವರು ಪತ್ರಿಕಾ ಹೇಳಿಕೆ ಹೊರಡಿಸಿ, ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೂ ಚರ್ಚೆ ನಡೆಸಿ ಬಳಿಕ ಸಾಧಕ ಬಾಧಕ ನೋಡಿಕೊಂಡು ಅನುಷ್ಠಾನಕ್ಕೆ ತರವಲಾಗುವುದು ಎಂದಿದ್ದರು. ಈಗ ಗಡಿನಾಡಿನ ಕನ್ನಡಿಗ ವೈದ್ಯರು ಔಷಧ ಚೀಟಿಯನ್ನು ಕನ್ನಡದಲ್ಲಿ ಬರೆಯುವ ಮೂಲಕ ಇತರರಿಗೆ ಮಾರ್ಗದರ್ಶಿಯಾಗಿರುವುದನ್ನು ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
LATEST NEWS
ಲೋ ಬಿಪಿಯಿಂದ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾ*ವು
ಬೆಂಗಳೂರು : ತರಗತಿಯಲ್ಲೇ ಏಕಾಏಕಿ ಲೋ ಬಿಪಿಯಿಂದ ಕುಸಿದು ಬಿದ್ದು ವಿದ್ಯಾರ್ಥಿ ಸಾ*ವನಪ್ಪಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ಗಬ್ಯೂರು ಗ್ರಾಮದಲ್ಲಿ ನಡೆದಿದೆ.
5ನೇ ತರಗತಿ ವಿದ್ಯಾರ್ಥಿ ಶಿವಪ್ರಸಾದ್ ಮೃ*ತ ಬಾಲಕ. ಗಬ್ಯೂರ್ನಲ್ಲಿ ಸೈನಿಕ, ನವೋದಯ ಕೋಚಿಂಗ್ ಪಡೆಯುತ್ತಿದ್ದ. ಇನ್ನು ಕೋಚಿಂಗ್ ಸೆಂಟರ್ನಲ್ಲೇ ಏಕಾಏಕಿ ಲೋ ಬಿಪಿಯಾಗಿ ಬಾಲಕ ಶಿವಪ್ರಸಾದ್ ಸಾವನಪ್ಪಿದ್ದು, ಗಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಇಂದು ದೆಹಲಿ ನೂತನ ಸಿಎಂ ಆಗಿ ಆತಿಶಿ ಪ್ರಮಾಣವಚನ ಸ್ವೀಕಾರ
ನವದೆಹಲಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷ ದ ಆತಿಶಿ ಇಂದು (ಸೆ.21) ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಐದು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಜಭವನದಲ್ಲಿ ಸಂಜೆ 4.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಅತಿಶಿ ಜೊತೆಗೆ ಆಪ್ ನ ಹಿರಿಯರಾದ ಗೋಪಾಲ್ ರೈ, ಕೈಲಾಶ್ ಗಹ್ಲೋಟ್, ಸೌರಭ್ ಭಾರದ್ವಾಜ್, ಮುಖೇಶ್ ಅಹ್ಲಾವತ್ ಮತ್ತು ಇಮ್ರಾನ್ ಹುಸೇನ್ ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದಲಿತ ನಾಯಕ ಮುಖೇಶ್ ಅಹ್ಲಾವತ್ ಅವರು ದಿಲ್ಲಿ ಕ್ಯಾಬಿನೆಟ್ಗೆ ಹೊಸದಾಗಿ ಪ್ರವೇಶಿಸುತ್ತಿದ್ದಾರೆ. ಸುಲ್ತಾನ್ಪುರ ಮಜ್ರಾದಿಂದ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ನಿರ್ಗಮಿತ ಕೇಜ್ರಿವಾಲ್ ಸರ್ಕಾರದಲ್ಲಿ ಅತಿಶಿ ಅವರು ಹಣಕಾಸು, ಕಂದಾ ಯ, ಲೋಕೋಪಯೋಗಿ, ವಿದ್ಯುತ್ ಮತ್ತು ಶಿಕ್ಷಣ ಸೇರಿದಂತೆ 13 ಪ್ರಮುಖ ಖಾತೆಗಳನ್ನು ಹೊಂದಿದ್ದರು.ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅರವಿಂದ ಕೇಜ್ರಿವಾಲ್ ಅವರು ಜಾಮೀನಿನ ಮೇಲೆ ಹೊರಬಂದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು . ಅದಾದ ಬಳಿಕ ಶಾಸಕಾಂಗ ಸಭೆಯಲ್ಲಿ ಅವಿರೋಧವಾಗಿ ಆತಿಶಿ ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು.