FILM
ನಟಿ ರಾಗಿಣಿ ದ್ವಿವೇದಿಗೆ ಯಾಕಿಷ್ಟು ನೆಗೆಟಿವ್ ಕಮೆಂಟ್ಸ್…!
ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿ ಹೊಸ ಫೋಟೋ ಶೂಟ್ ಗೆ ಸೋಷಿಯಲ್ ಮೀಡಿಯಾದಲ್ಲಿ ನೆಗೆಟಿವ್ ಕಮೆಂಟ್ಸ್ ಗಳ ಸುರಿಮಳೆಯೆ ಸುರಿದಿದೆ.
ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿ ಅವರ ಫಿಟ್ ನೆಸ್ ಗೆ ಬೋಲ್ಡ್ ಆಗದವರು ಯಾರಿಲ್ಲ. ಪ್ರತೀ ದಿನ ಫಿಟ್ ಆಗಿರಬೇಕು ಎಂಬ ಕಾರಣಕ್ಕೆ ವ್ಯಾಯಾಮ ಮಾಡುತ್ತಲೆ ಇರುತ್ತಾರೆ.
ರಾಗಿಣಿ ದ್ವಿವೇದಿ ಈಚೆಗಷ್ಟೆ ಜೀರೋ ಫಿಗರ್ ಮಾಡಿಕೊಂಡು ಅದರ ಫೋಟೋಗಳನ್ನು ಶೇರ್ ಮಾಡಿದ್ದರು.ಬಿಕಿನಿ ಡ್ರೆಸ್ನಲ್ಲಿ ಆಗಾಗ್ಗೆ ಫೋಟೋ ಶೂಟ್ ಮಾಡಿಸಿಕೊಳ್ಳುವ ರಾಗಿಣಿ ಅವರ ಇನ್ಸ್ಟಾ ಗ್ರಾಂ ನಲ್ಲಿ ನೆಗೆಟಿವ್ ಕಮೆಂಟ್ಸ್ ತುಂಬಿ ತುಳುಕಿರುತ್ವೆ.
ಸಾಮಾಜಿಕ ಜಾಲತಾಣದಲ್ಲಿಯೂ ರಾಗಿಣಿ ಸಖತ್ ಆ್ಯಕ್ಟೀವ್ ಆಗಿದ್ದು, ಆಗಾಗ್ಗೆ ಬ್ಯೂಟಿ ಟಿಪ್ಸ್ ಕೊಡುತ್ತಿರುತ್ತಾರೆ.ಇದೀಗ ನಟಿ ಕ್ಯೂಟ್ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಇದಕ್ಕೆ ನೂರಾರು ಮಂದಿ ಕ್ಯೂಟ್ ಎಂದು ಕಮೆಂಟ್ ಮಾಡಿದ್ದಾರೆ. ಆದರೆ ಇನ್ನು ಕೆಲವರು ನಿಮಗೆ ಈ ಡ್ರೆಸ್ ಸ್ಯೂಟ್ ಆಗಲ್ಲ, ನೀವು ಬಿಕಿನಿಯಲ್ಲಿಯೇ ಚೆಂದ. ಹಾಕ್ಕೊಂಡಿರೋ ಡ್ರೆಸ್ ತೆಗೆದು ಬಿಡಿ ಅಂತ ನಟಿಯ ಕಾಲೆಳೆದಿದ್ದಾರೆ.
ಇನ್ನು ಕೆಲವರು ಈ ತರ ಬಟ್ಟೆ ನಿಮ್ಗೆ ಆಗಿ ಬರಲ್ಲ. ಬಿಕಿನಿಯಲ್ಲಿಯೇ ಚೆನ್ನಾಗಿ ಕಾಣಿಸ್ತೀರಾ ಅಂತಲೂ ಹೇಳಿದ್ದಾರೆ. ಬಿಕಿನಿ ಡ್ರೆಸ್ ಹಾಕಿಕೊಂಡು ಫೋಟೋಶೂಟ್ ಮಾಡಿಸಿದಾಗಲೂ ಟ್ರೋಲ್ ಮಾಡುವ ನೆಟ್ಟಿಗರು, ಇದೀಗ ಇಂಥ ಡ್ರೆಸ್ಹಾಕಿಕೊಂಡರೂ ಬಿಕಿನಿಯಲ್ಲಿ ನೋಡೋದೇ ಚೆಂದ ಅನ್ನುತ್ತಿದ್ದಾರೆ.ಒಟ್ನಲ್ಲಿ ರಾಗಿಣಿ ಯಾವ ಬಟ್ಟೆ ಹಾಕಿಸಿಕೊಂಡು ಫೋಟೋ ಶೂಟ್ ಮಾಡಿಸಿಕೊಂಡ್ರು ಸೋಷಿಯಲ್ ಮೀಡಿಯಾದಲ್ಲಿ ಸೌಂಡೋ ಸೌಂಡು..
FILM
“ನಿವೇದಿತಾಜೈನ್”ಗೆ ಸಾವಿನ ಸುಳಿವು ಮೊದಲೇ ಇತ್ತಾ.!? ಈಬಗ್ಗೆ ನಿವೇದಿತಾ ತಾಯಿ ಹೇಳಿದ್ದೇನು ಗೊತ್ತಾ?
ಮಂಗಳೂರು: ಕನ್ನಡ ಚಿತ್ರರಂಗದಲ್ಲಿ ಅದೆಷ್ಟೋ ನಾಯಕಿಯರು ದುರಂತ ಎಂಬಂತೆ ಸಾವಿನ ಕದ ತಟ್ಟಿದ್ದಾರೆ. ಒಂದು ಕಾಲದಲ್ಲಿ ಚಿತ್ರರಂಗದಲ್ಲಿ ಮಿಂಚುತ್ತಿದ್ದ ಮೋಹಕ ನಟಿಯರು ದುರಂತವಾಗಿ ಸಾವಿಗೀಡಾಗಿದ್ದಾರೆ. ಅದರಲ್ಲಿ ಒಬ್ಬರು ಮುದ್ದು ಮುಖದ ಚೆಲುವೆ ನೀಳಕಾಯದ ಸುಂದರಿ ನಿವೇದಿತಾ ಜೈನ್. ಹೌದು, ಅಲ್ಪ ಕಾಲ ಬದುಕಿದ್ದರೂ ಇವರು ನಟಿಸಿರುವ ಸಿನೆಮಾಗಳು ಹಿಟ್ ಲಿಸ್ಟ್ನಲ್ಲಿ ಸೇರಿಕೊಂಡಿದೆ. ಆದರೆ ಸಣ್ಣ ವಯಸ್ಸಿಲ್ಲಿಯೇ ಇಹಲೋಕ ಸೇರಿರುವುದು ಮಾತ್ರ ದುರಂತವೇ ಸರಿ.
ಇನ್ನು ಸಣ್ಣ ವಯಸ್ಸಿನಲ್ಲಿಯೇ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಿವೇದಿತಾ ತನ್ನ 14 ನೇ ವರ್ಷಕ್ಕೆ ಮಿಸ್ ಬೆಂಗಳೂರು ಪಟ್ಟ ಮುಡಿಗೇರಿಸಿಕೊಂಡಿದ್ದರು. ಒಂಭತ್ತನೇ ತರಗತಿಯಲ್ಲಿರುವಾಗಲೇ ಮಿಸ್ ಬೆಂಗಳೂರು ಆಗಿದ್ದರು. ಇಲ್ಲಿಂದ ಇವರ ಬದುಕೇ ಬದಲಾಯಿತಂತೆ. ಇನ್ನು ಇವರ ಫೊಟೊಗಳು ಪೇಪರ್ , ಮೆಗಾಝಿನ್ಗಳಲ್ಲಿ ಪ್ರಕಟಗೊಂಡಿತ್ತು. ಈ ಸಮಯದಲ್ಲಿ ರಾಘವೇಂದ್ರ ರಾಜಕುಮಾರ್ ನಟಿಸಲಿದ್ದ “ಶಿವರಂಜಿನಿ” ಚಿತ್ರಕ್ಕೆ ನಾಯಕಿಯಾಗಿ ಅಪ್ರೋಚ್ ಮಾಡಲಾಗಿತ್ತು. ಇದಕ್ಕಿಂತ ಮೊದಲು ನಿವೇದಿತಾಳಿಗೆ ಅನೇಕ ಸಿನೆಮಾ ಆಫರ್ಗಳು ಬಂದರೂ ಕೂಡಾ ಇವರು ಇಂಟ್ರಸ್ಟ್ ತೋರಿಸಿರಲಿಲ್ಲ. ಆದರೆ ಡಾ. ರಾಜ್ಕುಮಾರ್ ಅವರ ಕಡೆಯಿಂದ ರಾಘಣ್ಣನ ಸಿನೆಮಾಗೆ ನಾಯಕಿಯಾಗಿ ನಟಿಸುವಂತೆ ಆಫರ್ ಬಂದಿತ್ತು. ಇನ್ನು ತುಂಬಾನೆ ಚಿಕ್ಕವಳಾಗಿದ್ದ ಇವರಿಗೆ ಸಿನೆಮಾಗಳಲ್ಲಿ ನಟಿಸುವ ಆಸಕ್ತಿ ಇಲ್ಲವಾಗಿತ್ತು. ಆದರೆ ನಿವೇದಿತಾಳಿಗೆ ರಾಜ್ಕುಮಾರ್ರವರ ಜೊತೆ ನಟಿಸಲು ಬಹಳ ಆಸಕ್ತಿ ಇತ್ತಂತೆ. ಹಾಗಾಗಿ ಅವರ ಬ್ಯಾನರ್ನಲ್ಲಿ ಮೂಡಿಬರುವ “ಶಿವರಂಜಿನಿ” ಸಿನೆಮಾಗೆ ನಟನೆ ಮಾಡಲು ಒಪ್ಪಿದ್ದರಂತೆ ನಿವೇದಿತಾ.
ಸಲ್ಮಾನ್ ಖಾನ್ ಜೊತೆ ನಟಿಸಲಿದ್ದಾರೆ ರಶ್ಮಿಕಾ ಮಂದಣ್ಣ; ಯಾವ ಸಿನಿಮಾ? ಇಲ್ಲಿದೆ ಡಿಟೇಲ್ಸ್
ನಟಿಯ ಸಾವಿನ ಸುಳಿವು ಮೊದಲೇ ಇತ್ತಾ..?
ನಿವೇದಿತಾ ಜೈನ್ ಇವರ ಸಾವಿನ ಬಗ್ಗೆ ನೂರಾರು ಮಾತುಗಳು ಕೇಳಿ ಬರುತ್ತಿತ್ತು. ವದಂತಿಗಳು ಹಬ್ಬಿತ್ತು. ಇನ್ನು ನಿವೇದಿತಾ ಬದುಕಿ ಬಾಳಿದ್ದು ಮಾತ್ರ ಕೇವಲ 19 ವರ್ಷ. ಆದರೆ ಅಷ್ಟರಲ್ಲೇ 12ಕ್ಕೂ ಹೆಚ್ಚು ಸಿನೆಮಾಗಳಲ್ಲಿ ಅಭಿನಯಿಸಿದ್ರು. ಬದುಕಿ ಉಳಿದಿದ್ರೆ ಈಗ ಬಾಲಿವುಡ್ ನಲ್ಲೂ ಸ್ಟಾರ್ ಆಗ್ತಿದ್ರು ಈಕೆ. ಮಗಳ ಸಾವಿನ ಬಗ್ಗೆ ಸ್ವತಃ ಅವರ ತಾಯಿ ಪ್ರಿಯಾ ಜೈನ್ ಖಾಸಗಿ ಯೂಟ್ಯೂಬ್ ಚಾನೆಲ್ ಸಂದರ್ಶನವೊಂದರಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ.
ಮತ್ತೆ ಡೀಪ್ ಫೇಕ್ ಗೆ ಬಲಿಯಾದ ಆಲಿಯಾ ಭಟ್; ನಟಿಯ ವೀಡಿಯೋ ನೋಡಿ ಫ್ಯಾನ್ಸ್ ಶಾಕ್!
ಕೇರಳದ ವ್ಯಕ್ತಿಯಿಂದ ಸಿಕ್ಕಿತ್ತು ಸಾವಿನ ಮುನ್ಸೂಚನೆ:
ಕೊಲ್ಲೂರು ದೇವಸ್ಥಾನಕ್ಕೆ ನಿವೇದಿತಾ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದರು. ಈ ವೇಳೆ ಕೇರಳದಿಂದ ಬಂದವರು 45 ದಿನಗಳ ಉಪವಾಸದಲ್ಲಿದ್ದು ಪೂಜೆ ಮಾಡುತ್ತಿದ್ದರು. ಅವರು ಏಕಾಏಕಿ ನಮ್ಮನ್ನು ಅವರ ಬಳಿ ಕರೆಸಿಕೊಂಡರು. ನಮ್ಮ ಮನೆಯ ಎಲ್ಲಾ ವಿಚಾರವನ್ನು ಸ್ಪಷ್ಟವಾಗಿ ವಿವರಿಸಿದರು. ಮನೆಯ ಅಡುಗೆ ಕೋಣೆ ಯಾವ ಭಾಗದಲ್ಲಿದೆ. ಯಾವ ಭಾಗದಲ್ಲಿ ದೇವರ ಕೋಣೆ ಇದೆ ಹೀಗೆ..ಎಲ್ಲಾ ಇರೋದನ್ನು ಕಂಡ ಹಾಗೆ ಹೇಳಿದ್ದರು. ಇನ್ನು ಮಗಳು ನಿವೇದಿತಾಳನ್ನು ನೋಡಿ ಇವಳು ಅಲ್ಪಾಯುಷಿ ಎಂದು ಹೇಳಿದ್ರು. ಇವಳ ಹಣೆಗೆ ಬಲವಾದ ಪೆಟ್ಟು ಬೀಳಲಿದೆ. ನೀವು ಕೂಡಲೇ ಮನೆಯನ್ನು ಬದಲಾಯಿಸಿ ಎಂದು ಹೇಳಿದ್ದರು. ನಾವು ಕೂಡಾ ಬೇರೆ ಮನೆಯನ್ನು ಹುಡುಕಾಡಲು ಆರಂಭಿಸಿದೆವು. ಆದರೆ ದುರಾದೃಷ್ಟವಶಾತ್ ನಮಗೆ ಮನೆ ಸಿಗಲಿಲ್ಲ. ನಮ್ಮ ಮಗಳು ಕೂಡಾ ನಮ್ಮ ಪಾಳಿಗೆ ಉಳಿಲಿಲ್ಲಾ. ಅವರು ಏನು ಹೇಳಿದ್ದರೋ ಹಾಗೆ ನಡೆದು ಹೋಯಿತು ಎಂದು ನಿವೇದಿತಾ ತಾಯಿ ಪ್ರಿಯಾ ಜೈನ್ ಹೇಳಿದ್ರು.
ಇನ್ನು ಈ ಬಗ್ಗೆ ಕೆಲವು ವರದಿಗಳಲ್ಲಿ ನಿವೇದಿತಾ ಈ ವಿಷಯ ತಿಳಿದ ಕೂಡಲೇ ದಿಗ್ಭ್ರಾಂತಳಾಗಿದ್ದಾಳೆ ಎಂದೆಲ್ಲ ಸುದ್ದಿಯಾಗಿತ್ತು. ಆದರೆ ನಿವೇದಿತಾ ಜೈನ್ ‘ನಮ್ಮದೇ ಆದ ಕರ್ಮ ಇರುತ್ತೆ ನಂಗೆ ಅಷ್ಟು ಬೇಗ ಏನೂ ಆಗವುದಿಲ್ಲ’ ಅಂತ ಹೇಳುತ್ತಿದ್ದರು. ಇನ್ನು ಜೀವನದಲ್ಲಿ ತುಂಬಾನೇ ಪಾಸಿಟಿವ್ ಆಗಿದ್ರಂತೆ ನಿವೇದಿತಾ.
FILM
ಸಲ್ಮಾನ್ ಖಾನ್ ಜೊತೆ ನಟಿಸಲಿದ್ದಾರೆ ರಶ್ಮಿಕಾ ಮಂದಣ್ಣ; ಯಾವ ಸಿನಿಮಾ? ಇಲ್ಲಿದೆ ಡಿಟೇಲ್ಸ್
ಮಂಗಳೂರು / ಮುಂಬೈ : ರಶ್ಮಿಕಾ ಮಂದಣ್ಣ ಯಾರಿಗೆ ತಾನೇ ಗೊತ್ತಿಲ್ಲ. ಸ್ಯಾಂಡಲ್ ವುಡ್ ನ ‘ಕಿರಿಕ್ ಪಾರ್ಟಿ’ ಮೂಲಕ ಜನಮನ ಗೆದ್ದು, ಸದ್ಯ ಪರಭಾಷೆ ಅಂಗಳಲ್ಲಿ ಮಿಂಚುತ್ತಿರುವ ನಟಿ. ತಮಿಳು, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ಬಾಲಿವುಡ್ ಸಿನಿಮಾ ‘ಅನಿಮಲ್’ ಇತ್ತೀಚೆಗೆ ತೆರೆಕಂಡು ಭಾರೀ ಯಶಸ್ಸನ್ನು ಬಾಚಿಕೊಂಡಿತ್ತು. ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಜೊತೆ ಅವರು ನಟಿಸಿದ್ದರು. ಇನ್ನು ರಶ್ಮಿಕಾ ಮಂದಣ್ಣ ಬಾಲಿವುಡ್ ಅಂಗಳದಲ್ಲಿ ಭದ್ರವಾಗಿ ನೆಲೆಯೂರಲಿದ್ದಾರೆ ಎಂದೇ ಭಾಸವಾಗಿತ್ತು. ಇದೀಗ ಮತ್ತೊಂದು ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ.
ಭಾಯ್ ಜಾನ್ ಜೊತೆ ರಶ್ಮಿಕಾ :
‘ಅನಿಮಲ್’ ಸಿನಿಮಾ ಭಾರೀ ಯಶಸ್ಸನ್ನು ಬಾಚಿಕೊಂಡಿತ್ತು. ಇದೀಗ ರಶ್ಮಿಕಾ ಮಂದಣ್ಣ ನಟ ಸಲ್ಮಾನ್ ಖಾನ್ ಜೊತೆ ನಟಿಸಲಿದ್ದಾರೆ. ಎ.ಆರ್. ಮುರುಗದಾಸ್ ನಿರ್ದೇಶನದ ಮುಂದಿನ ಬಹುನಿರೀಕ್ಷಿತ ‘ಸಿಕಂದರ್’ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಸಾಜಿದ್ ನಾಡಿಯಾಡ್ವಾಲಾ ನಿರ್ಮಾಣದ ಈ ಚಿತ್ರ ಮುಂದಿನ ಈದ್ ಹಬ್ಬಕ್ಕೆ ಥಿಯೇಟರ್ಗಳಲ್ಲಿ ಬಿಡುಗಡೆಯಾಗಲಿದೆ.
2022 ರಲ್ಲಿ ಅಮಿತಾಬ್ ಬಚ್ಚನ್ ನಟನೆಯ ‘ಗುಡ್ ಬೈ’ ಸಿನಿಮಾ ಮೂಲಕ ರಶ್ಮಿಕಾ ಬಾಲಿವುಡ್ ಅಂಗಳಕ್ಕೆ ಲಗ್ಗೆ ಇಟ್ಟಿದ್ದರು. ಬಳಿಕ ಮಿಷನ್ ಮಜ್ನು ಸಿನಿಮಾದಲ್ಲಿ ನಟಿಸಿದ್ದರು. ಆದಾದ ಬಳಿಕ ಅನಿಮಲ್ ಸಿನಿಮಾ ಭಾರೀ ಯಶಸ್ಸು ತಂದು ಕೊಟ್ಟಿತ್ತು. ಸದ್ಯ ಅವರು ಅಲ್ಲು ಅರ್ಜುನ್ ಜೊತೆ ನಟಿಸಿದ ‘ಪುಷ್ಪ : ದಿ ರೂಲ್’ ಸಿನಿಮಾದಲ್ಲಿ ಬಿಝಿಯಾಗಿದ್ದಾರೆ. ಅಲ್ಲದೇ ತಮಿಳೀನಲ್ಲಿ ಧನುಷ್ ಜೊತೆಗೆ ಕುಬೇರ ಸಿನಿಮಾ ದಲ್ಲಿ ನಟಿಸುತ್ತಿದ್ದಾರೆ. ವಿಕ್ಕಿ ಕೌಶಲ್ ಜೊತೆ ‘ಚಾವ’ ಸಿನಿಮಾದಲ್ಲಿ ಅವರು ಬಿಝಿಯಾಗಿದ್ದಾರೆ.
ರಶ್ಮಿಕಾ ಟ್ವೀಟ್ :
ಸಲ್ಮಾನ್ ಖಾನ್ ಜೊತೆಗೆ ಇದೇ ಮೊದಲ ಬಾರಿಗೆ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಎ.ಆರ್.ಮುರುಗದಾಸ್ ನಿರ್ದೇಶನದ ‘ಸಿಕಂದರ್’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಪಾತ್ರವಾಗುತ್ತಿರುವ ಬಗ್ಗೆ ನಡಿಯಾಲ್ವಾಲ ಗ್ರಾಂಡ್ ಸನ್ ಖಾತೆಯ ಮೂಲಕ ಸ್ಪಷ್ಟಪಡಿಸಲಾಗಿದೆ.
ಇದನ್ನೂ ಓದಿ : ಪ್ರಜ್ವಲ್ ಪ್ರಕರಣದ ನಡುವೆ ಖಾಸಗಿ ವೀಡಿಯೋ ವೈರಲ್; ಜ್ಯೋತಿ ರೈ ಹೇಳಿದ್ದೇನು?
ರಶ್ಮಿಕಾ ಮಂದಣ್ಣ ಕೂಡ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ನನ್ನ ಮುಂದಿನ ಸಿನಿಮಾದ ಬಗ್ಗೆ ಕೇಳುತ್ತಿದ್ದವರಿಗೆ ಇಲ್ಲಿದೆ ಮಾಹಿತಿ. ಸರ್ಪ್ರೈಸ್…ಸಿಕಂದರ್ ಸಿನಿಮಾದ ಭಾಗವಾಗಿರುವುದು ನನಗೆ ಹೆಮ್ಮೆಯ ವಿಚಾರ ಎಂದು ಬರೆದುಕೊಂಡಿದ್ದಾರೆ.
FILM
ಪ್ರಜ್ವಲ್ ಪ್ರಕರಣದ ನಡುವೆ ಖಾಸಗಿ ವೀಡಿಯೋ ವೈರಲ್; ಜ್ಯೋತಿ ರೈ ಹೇಳಿದ್ದೇನು?
ಬೆಂಗಳೂರು : ಅತ್ತ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದೆ. ಈ ನಡುವೆ ಖ್ಯಾತ ನಟಿ ಜ್ಯೋತಿ ರೈ ಅವರದ್ದೆನ್ನಲಾದ ಖಾಸಗಿ ವೀಡಿಯೋವೊಂದು ವೈರಲ್ ಆಗಿದೆ. ಒಂದಷ್ಟು ಅಶ್ಲೀಲ ವೀಡಿಯೋಗಳೂ ಸದ್ದು ಮಾಡುತ್ತಿವೆ.
ಜ್ಯೋತಿ ರೈ ಕನ್ನಡ ಕಿರುತೆರೆಯಲ್ಲಿ ಫೇಮಸ್ ನಟಿ. ಅಲ್ಲದೇ ತೆಲುಗು ಧಾರಾವಾಹಿಗಳಿಗೂ ಲಗ್ಗೆ ಇಟ್ಟಿದ್ದಾರೆ. ಇತ್ತೀಚೆಗೆ ಫೋಟೋಗಳಿಂದ ಭಾರೀ ಸುದ್ದಿಯಾಗುತ್ತಿದ್ದಾರೆ. ಹಾಟ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
ಇದೀಗ ಅವರದ್ದೆನ್ನಲಾದ ಖಾಸಗಿ ವೀಡಿಯೋಗಳು ಭಾರೀ ವೈರಲ್ ಆಗಿದೆ. ಫೇಸ್ ಬುಕ್, ವಾಟ್ಸ್ ಆ್ಯಪ್, ಟ್ವಿಟ್ಟರ್ ಖಾತೆಗಳಲ್ಲಿ ಅಶ್ಳೀಲ ಫೋಟೋ, ವೀಡಿಯೋಗಳು ಹರಿದಾಡುತ್ತಿವೆ. ಈ ಬಗ್ಗೆ ಇದೀಗ ಮೌನ ಮುರಿದಿರುವ ನಟಿ ಸ್ಪಷ್ಟನೆ ನೀಡಿದ್ದಾರೆ.
ಏನಂದ್ರು ಜ್ಯೋತಿ ರೈ?
ತಮ್ಮ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಂಡು ಪಡ್ಡೆಗಳ ನಿದ್ದೆಗೆಡಿಸುತ್ತಿದ್ದ ನಟಿ ಜ್ಯೋತಿ ರೈ ಅವರದ್ದೆನ್ನಲಾದ ಅಶ್ಲೀಲ ವೀಡಿಯೋ ವೈರಲ್ ಆಗಿದೆ. ಈ ವೀಡಿಯೋ ಬಗ್ಗೆ ಸ್ವತಃ ಜ್ಯೋತಿ ರೈ ಸ್ಪಷ್ಟನೆ ನೀಡಿದ್ದಾರೆ. ಆಘಾತಕ್ಕೊಳಗಾಗಿದ್ದೇನೆ ಎಂದಿದ್ದಾರೆ.
ನಾನು ಅಪರಿಚಿತ ವ್ಯಕ್ತಿಗಳಿಂದ ಈ ಸಂದೇಶಗಳನ್ನು ಸ್ವೀಕರಿಸಿ ನಾನು ಆಘಾತಕ್ಕೊಳಗಾಗಿದ್ದೇನೆ. ನನ್ನ ಖ್ಯಾತಿ ಮತ್ತು ನನ್ನ ಕುಟುಂಬದ ಪ್ರತಿಷ್ಠೆಗೆ ಅಪಾಯದಲ್ಲಿರುವುದರಿಂದ ಈ ಬಳಕೆದಾರರು/ವ್ಯಕ್ತಿಗಳ ವಿರುದ್ಧ ಸರಿಯಾದ ಮತ್ತು ತ್ವರಿತ ಕ್ರಮವನ್ನು ತೆಗೆದುಕೊಳ್ಳುವಂತೆ ವಿನಂತಿಸುತ್ತೇನೆ. ಅಲ್ಲದೆ, ಈ ಬಳಕೆದಾರರು/ವ್ಯಕ್ತಿಗಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಸರಿಪಡಿಸಲಾಗದ ಹಾನಿ ಉಂಟಾಗುತ್ತದೆ. ನಿಮ್ಮ ಪರಿಶೀಲನೆ ಮತ್ತು ತನಿಖೆಗಾಗಿ ನಾನು ಎಲ್ಲಾ ಬಳಕೆದಾರರ ಯೂಸರ್ ಐಡಿಗಳನ್ನು ಲಗತ್ತಿಸಿದ್ದೇನೆ.
ಈ ‘ಅಜ್ಞಾತ ಬಳಕೆದಾರರ’ ವಿರುದ್ಧ ಈ ಕೆಳಗಿನ ಅಪರಾಧಗಳನ್ನು ಮಾಡಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 66 (ಇ) ಅಡಿಯಲ್ಲಿ ಖಾಸಗಿತನದ ಉಲ್ಲಂಘನೆಗಾಗಿ ಶಿಕ್ಷೆ. ಮಾಹಿತಿ ತಂತ್ರಜ್ಞಾನ ಕಾಯಿದೆ, 2000, 2000 ರ ಸೆಕ್ಷನ್ 67 ರ ಅಡಿಯಲ್ಲಿ ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಸ್ತುಗಳನ್ನು ಪ್ರಕಟಿಸಲು ಅಥವಾ ರವಾನಿಸಿದ ಕಾರಣ ಶಿಕ್ಷೆ, ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 67 (ಎ) ಅಡಿಯಲ್ಲಿ ಲೈಂಗಿಕ ಕ್ರಿಯೆಯನ್ನು ಒಳಗೊಂಡಿರುವ ವಸ್ತುಗಳನ್ನು ಎಲೆಕ್ಟ್ರಾನಿಕ್ ರೂಪದಲ್ಲಿ ಪ್ರಕಟಿಸಿದ ಕಾರಣ ಶಿಕ್ಷೆ ಮತ್ತು ಭಾರತೀಯ ದಂಡ ಸಂಹಿತೆ, 1860 ರ ಸೆಕ್ಷನ್ 509 ರ ಅಡಿಯಲ್ಲಿ ಮಹಿಳೆಯ ಘನತೆಯನ್ನು ಅವಮಾನಿಸುವ ಉದ್ದೇಶದಿಂದ ಪದಗಳು ಅಥವಾ ಕೆಲಸ ಮಾಡಿರುವ ಕಾರಣ ಶಿಕ್ಷೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ತೆಲುಗು ನಿರ್ದೇಶಕನ ಕೈ ಹಿಡಿದ ಜ್ಯೋತಿ:
ಜ್ಯೋತಿ ರೈ ತೆಲುಗು ನಿರ್ದೇಶಕ ಸುಕುಮಾರ್ ಪೂರ್ವಜ್ ಅವರೊಂದಿಗೆ ಸಹ ಜೀವನ ನಡೆಸುತ್ತಿದ್ದ ಬಗ್ಗೆ ಗಾಸಿಪ್ ಹರಿದಾಡುತ್ತಿತ್ತು. ಆದದ ಬಳಿಕ ವಿವಾಹವಾಗಿರುವ ಬಗ್ಗೆ ಸ್ವತಃ ತಿಳಿಸಿ ತನ್ನ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ನಟಿ ಜ್ಯೋತಿ ರೈ ತನ್ನ 20 ನೇ ವಯಸ್ಸಿನಲ್ಲಿ ಮೊದಲ ಮದುವೆಯಾಗಿದ್ದರು. ನಂತರ ಅವರಿಂದ ವಿಚ್ಛೇದನ ಪಡೆದಿದ್ದಾರೆ. ಆಕೆಗೆ 11 ವರ್ಷದ ಮಗನಿದ್ದಾನೆ.