Connect with us

LATEST NEWS

ರಾಹುಲ್ ಗಾಂಧಿ ಫ್ಲೈಯಿಂಗ್ ಕಿಸ್ ಆರೋಪ: ಸ್ಪೀಕರ್‌ಗೆ ದೂರು ನೀಡಿದ ಸಚಿವೆ ಶೋಭಾ ಕರಂದ್ಲಾಜೆ 

Published

on

ನವದೆಹಲಿ: ಲೋಕಸಭೆಯಲ್ಲಿ ಬಿಜೆಪಿ ಮಹಿಳಾ ಸಂಸದೆಯರಿಗೆ  ರಾಹುಲ್ ಗಾಂಧಿ ಫ್ಲೈಯಿಂಗ್ ಕಿಸ್  ನೀಡಿ ಅವಮಾನಿಸಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ಮತ್ತು ಇತರ ಬಿಜೆಪಿ ಮಹಿಳಾ ಸಂಸದರು ಗುರುವಾರ ಸ್ಪೀಕರ್ ಓಂ ಬಿರ್ಲಾ ಅವರಿಗೆ ದೂರು ನೀಡಿದ್ದಾರೆ.

ಬುಧವಾರ ಮಾತನಾಡಲು ಮೊದಲ ಅವಕಾಶ ಪಡೆದ ರಾಹುಲ್ ಗಾಂಧಿ  ಭಾಷಣ ಮಾಡಿದ ಕೂಡಲೇ ನಿರ್ಗಮಿಸಿದರು. ಆದರೆ, ಹೊರಡುವ ಮುನ್ನ ತಮಗೆ ರಾಹುಲ್ ಗಾಂಧಿ ಫ್ಲೈಯಿಂಗ್‌ ಕಿಸ್‌ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

 

ದೂರಿನಲ್ಲೇನಿದೆ ?

ಕೇರಳದ ವಯನಾಡಿನ ಸಂಸದ ರಾಹುಲ್ ಗಾಂಧಿಯವರು ಸದನದಲ್ಲಿ ನಡೆದುಕೊಂಡ ವರ್ತನೆ ಬಗ್ಗೆ ನಿಮ್ಮ ಗಮನವನ್ನು ಸೆಳೆಯಲು ನಾನು ಬಯಸುತ್ತೇನೆ. ಕೇಂದ್ರ ಸಚಿವೆ ಹಾಗೂ ಈ ಸದನದ ಸದಸ್ಯೆ ಸ್ಮೃತಿ ಜುಬಿನ್ ಇರಾನಿ ಅವರು ಸದನವನ್ನುದ್ದೇಶಿಸಿ ಮಾತನಾಡುತ್ತಿದ್ದಾಗ ಅವರತ್ತ ಅಸಭ್ಯವಾಗಿ ವರ್ತಿಸಿ ಅನುಚಿತ ವರ್ತನೆ ತೋರಿದ್ದಾರೆ. ಸದನದಲ್ಲಿ ಘನತೆವೆತ್ತ ಮಹಿಳಾ ಸದಸ್ಯೆಯರಿಗೆ ಅವಮಾನ ಮಾಡಿದ್ದಲ್ಲದೆ, ಈ ಮಹಾ ಸದನದ ಘನತೆಗೆ ಕುಂದು ತಂದಿರುವ ಇಂತಹ ವರ್ತನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ರಾಹುಲ್ ಗಾಂಧಿಯ ನಡೆ ವಿರುದ್ಧ ಸಚಿವೆ ಶೋಭಾ ಕರಂದ್ಲಾಜೆ ದೂರು ನೀಡಿದ್ದು, ಗಾಂಧಿಯವರ ನಡವಳಿಕೆಯನ್ನು ‘ಅನುಚಿತ’ ಎಂದು ಕರೆದಿದ್ದಾರೆ. ಶೋಭಾ ಕರಂದ್ಲಾಜೆ ಸಲ್ಲಿಸಿರುವ ಈ ಪತ್ರಕ್ಕೆ ಹಲವು ಮಹಿಳಾ ಸಂಸದರು ಸಹಿ ಹಾಕಿದ್ದು ಕ್ರಮಕ್ಕೆ ಆಗ್ರಹಿಸಿದ್ದಾರೆ.

LATEST NEWS

ಮದುವೆಯಾದ ಕೆಲವೇ ಗಂಟೆಗಳಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

Published

on

ಮದುವೆ ದಿನ ಎಂದರೆ ಪ್ರತಿಯೊಬ್ಬರಿಗೂ ತುಂಬಾ ವಿಶೇಷವಾದ ದಿನ. ಎರಡು ಜೀವಗಳು ಬೆಸೆಯುವ ಕ್ಷಣಗಳು. ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸುವ ವಿಶೇಷ ದಿನದಂದು ಉತ್ಸಾಹ, ಖುಷಿ, ಕುತೂಹಲ ಸೇರಿದಂತೆ ಹಲವು ಭಾವನೆಗಳು ಒಟ್ಟೊಟ್ಟಿಗೆ ಸಂಭವಿಸುತ್ತಿರುತ್ತದೆ. ಜೀವವಿರುವವರೆಗೂ ಈ ದಿನ ದಂಪತಿಗಳಿಗೆ ತುಂಬಾ ವಿಶೇಷ ದಿನವಾಗಿರುತ್ತದೆ. ಇಂತಹ ಮದುವೆ ದಿನವೇ ಪ್ಲೊರಿಡಾದ ಮಹಿಳೆಯೊಬ್ಬರಿಗೆ ಡಬಲ್ ಖುಷಿ ಸಿಕ್ಕಿದೆ.

ಫ್ಲೋರಿಡಾದ ಬ್ರಿಯಾನಾ ಲುಕ್ಕಾ-ಸೆರೆಜೊ:

ಫ್ಲೊರಿಡಾದ ಮಹಿಳೆಯೊಬ್ಬರು ತಮ್ಮ ನೆಚ್ಚಿನ ವರನ ಜೊತೆ ಮದುವೆಯನ್ನು ಸಿಟಿ ಹಾಲ್ ನಲ್ಲಿ ತುಂಬಾ ವಿಶೇಷವಾಗಿ ಮಾಡಿಕೊಳ್ಳಲು ಪ್ಲ್ಯಾನ್ ಮಾಡಿದ್ದರು. ಫ್ಲೋರಿಡಾದ ಬ್ರಿಯಾನಾ ಲುಕ್ಕಾ-ಸೆರೆಜೊ ಎಂಟು ತಿಂಗಳ ಗರ್ಭಿಣಿಯಾಗಿದ್ದರು. ಮದುವೆ ದಿನದ ಮುಂಚಿನ ದಿನ ಈಕೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ ವೈದ್ಯರು ಉಸಿರಾಟಕ್ಕೆ ಸಂಬಂಧಿಸಿದ ರೆಸ್ಪಿರೇಟರಿ ಸಿಂಕಿಟಿಯಲ್ ವೈರಸ್ ಸೋಂಕಿನಿಂದ ಅನಾರೋಗ್ಯಕ್ಕೀಡಾಗಿರುವುದಾಗಿ ತಿಳಿಸಿದ್ದಾರೆ. ಗರ್ಭಿಣಿ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದ ಕಾರಣ ವೈದ್ಯರು ಚಿಕಿತ್ಸೆ ನೀಡಲು ಮುಂದಾಗಿದ್ದರು.

ಹೆರಿಗೆ ಟೈಂನಲ್ಲೂ ಬ್ರಿಯನ್ನಾ ಜೊತೆ ನಿಶ್ಚಿತ ವರ ಜೊತೆಯಲ್ಲೇ ಇದ್ದು ಲೇಬರ್ ವಾರ್ಡ್ ಗೆ ಕರೆದುಕೊಂಡು ಹೋಗಿದ್ದಾರೆ. ಈಗ ನರ್ಸ್ ಗಳು ಸಾಮಾನ್ಯವಾಗಿ ಕೇಳುವಂತೆ ಮದುವೆಯಾಗಿದ್ಯಾ ಎಂಬ ಪ್ರಶ್ನೆಗಳು ಕೇಳಿದ್ದಾರೆ. ಆಗ ನಾಳೆಯೇ ಮದುವೆ ದಿನ ಎಂದು ಆಸ್ಪತ್ರೆ ಸಿಬ್ಬಂದಿ ಬಳಿ ಬ್ರಿಯಾನ್ನಾ ಹೇಳಿಕೊಂಡಿದ್ದಾರೆ.

ಆಸ್ಪತ್ರೆಯಲ್ಲಿ ವಿವಾಹವಾದ ವಧು-ವರರು:

ವಿಷಯ ತಿಳಿದ ಕೂಡಲೇ ಆಸ್ಪತ್ರೆ ಸಿಬ್ಬಂದಿಯು ಈ ಜೋಡಿಗೆ ಸಹಾಯ ಮಾಡಿದ್ದಾರೆ. ಈ ಜೋಡಿಗೆ ಮದುವೆ ಮಾಡಿಸಲು ಆಸ್ಪತ್ರೆಯಲ್ಲಿ ತರಾತುರಿಯಾಗಿ ಆಸ್ಪತ್ರೆ ಸಿಬ್ಬಂದಿಯೇ ತಯಾರಿ ಮಾಡಿದ್ದಾರೆ. ಬ್ರಿಯಾನ್ನ ಅವರು ಆರೋಗ್ಯದ ಬಗ್ಗೆ ಗಮನಹರಿಸುವುದರ ಜೊತೆಗೆ ಆಸ್ಪತ್ರೆ ಸಿಬ್ಬಂದಿ ವಿವಾಹ ಸಮಾರಂಭವನ್ನು ಆಯೋಜಿಸುವುದಕ್ಕೆ ನಿರ್ಧರಿಸಿದ್ದಾರೆ.
ನರ್ಸ್ ಒಬ್ಬರು ವಧುವಿಗೆ ಬೇಕಾದಂತ ಮದುವೆ ಗೌನ್ ಅನ್ನು ಬರೀ ಪೇಪರ್ ಗಳನ್ನು ಬಳಸಿ ಕೇವಲ 30 ನಿಮಿಷಗಳಲ್ಲಿ ಅದ್ಭುತವಾಗಿ ವಿನ್ಯಾಸಗೊಳಿಸಿದ್ದಾರೆ. ಅದೃಷ್ಠವಶಾತ್ ಬ್ರಿಯಾನ್ನಾ ತಮ್ಮ ಮದುವೆಗೆ ಬೇಕಾಗಿದ್ದ ಪರವಾನಗಿ ಹಾಗೂ ವೆಡ್ಡಿಂಗ್ ರಿಂಗ್ ಸಹ ಆಸ್ಪತ್ರೆಗೆ ತಂದಿದ್ದ ಬ್ಯಾಗ್ ನಲ್ಲಿ ಇಟ್ಟುಕೊಂಡಿದ್ದರು.

ಬ್ರಿಯಾನ್ನ ಆಸೆಯಂತೆ, ಮೊದಲೇ ನಿಶ್ಚಿಯಿಸಿದ ದಿನಾಂಕದಲ್ಲೇ ಮದುವೆ ನೆರವೇರಿದೆ. ಇಬ್ಬರು ಪ್ರಮಾಣ ಮಾಡಿ, ಒಬ್ಬರಿಗೊಬ್ಬರು ರಿಂಗ್ ಬದಲಿಸಿಕೊಂಡಿದ್ದಾರೆ. ನಂತರ ಮದುವೆ ಸಂಭ್ರಮದಲ್ಲಿ ಕೇಕ್ ಕತ್ತರಿಸಿ ಒಬ್ಬರಿಗೊಬ್ಬರು ತಿನ್ನಿಸಿಕೊಂಡು ಖುಷಿಪಟ್ಟಿದ್ದಾರೆ.

ಗಂಡು ಮಗುವಿಗೆ ಜನನ:

ಸಂಭ್ರಮದ ಕೆಲ ಗಂಟೆಗಳ ನಂತರ ಬ್ರಿಯಾನ್ನ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಒಂದೇ ದಿನ ಡಬಲ್ ಸಂತೋಷ ಎಲ್ಲರಲ್ಲೂ ಮತ್ತಷ್ಟು ಖುಷಿ ತಂದಿತು. ಮಗುವಿಗೆ ಲ್ಯಾಂಡನ್ ಇರ್ವಿನ್ ಎಂದು ನಾಮಕರಣ ಮಾಡಿದ್ದಾರೆ.

Continue Reading

LATEST NEWS

ವಿದ್ಯಾರ್ಥಿನಿ ರುಂಡ ಕತ್ತರಿಸಿ ಕೊಲೆ ಪ್ರಕರಣ: ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

Published

on

ಕೊಡಗು: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

prakash accuse

ಎಸ್​ಎಸ್​ಎಲ್​ಸಿ ಫಲಿತಾಂಶ ಹೊರ ಬಿದ್ದ ಮೇ.09ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು. ಸದ್ಯ ಆರೋಪಿಯನ್ನು ಆತನ ಸ್ವ ಗ್ರಾಮವಾಗಿರುವ ಸೋಮವಾರಪೇಟೆ ತಾಲೂಕಿನ ಹಮ್ಮಿಯಾಳ ಎಂಬ ಗ್ರಾಮದಲ್ಲಿ ಬಂಧಿಸಿದ್ದಾರೆ.

ಮುಂದೆ ಓದಿ..; ಶಾಲೆಗೆ 100% ಫಲಿತಾಂಶ ತಂದುಕೊಟ್ಟ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯ ಭೀಕರ ಹ*ತ್ಯೆ

ತನ್ನ ಗ್ರಾಮದಲ್ಲೇ ಅಡಗಿದ್ದ ಆರೋಪಿ ಪ್ರಕಾಶ್​ನನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಯ ಬಂಧನವಾಗಿದ್ದರೂ ಆರೋಪಿ ಕತ್ತರಿಸಿ ತೆಗೆದುಕೊಂಡು ಹೋಗಿದ್ದ ರುಂಡ ಇನ್ನೂ ಕೂಡಾ ಪತ್ತಯಾಗಿಲ್ಲ. ಆರೋಪಿ ಪ್ರಕಾಶ್ ಕಳೆದ ಆರು ತಿಂಗಳಿನಿಂದ ಹತ್ಯೆಯಾದ ಬಾಲಕಿ ಮೀನಾ ಮನೆಯಲ್ಲಿ ವಾಸವಾಗಿದ್ದ. ತನ್ನ ಸ್ವಂತ ಮನೆಗೆ ಬರುತ್ತಿರಲಿಲ್ಲ ಎಂದು ಸ್ವತಹ ಪ್ರಕಾಶ್ ತಾಯಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಮೀನಾಳನ್ನು ಮದುವೆ ಆಗುವ ವಿಚಾರ ನನಗೆ ಗೊತ್ತಿಲ್ಲ , ಆದ್ರೆ ಆಕೆಯನ್ನ ಶಾಲೆಗೆ ಕರೆದುಕೊಂಡು ಹೋಗುವುದು ಬರುವುದು ಮಾಡುತ್ತಿದ್ದ ಎಂದು ಆತನ ತಾಯಿ ಹೇಳಿದ್ದಾರೆ.

Continue Reading

LATEST NEWS

ವರ್ತೂರು ಸಂತೋಷ್​​ ತೋಟದಲ್ಲಿ ಮತ್ತೆ ಸೇರಿದ ಬಿಗ್​​ಬಾಸ್​ ಸ್ಪರ್ಧಿಗಳು

Published

on

ಬೆಂಗಳೂರು: ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 10ರ ಸ್ಪರ್ಧಿಗಳು ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ದೊಡ್ಮನೆಯಿಂದ ಹೊರ ಬಂದ ಕೂಡಲೇ ಸಖತ್​ ಬ್ಯುಸಿಯಾಗಿದ್ದಾರೆ. ಜೊತೆಗೆ ಆ ಬ್ಯುಸಿಯ ನಡುವೆಯೂ ಆಗಾಗ ಒಬ್ಬರಿಗೊಬ್ಬರು ಭೇಟಿಯಾಗುತ್ತಲೇ ಇರುತ್ತಾರೆ.

ಅಲ್ಲದೇ ಪಾರ್ಟಿ, ಫ್ಯಾಮಿಲಿ ಫಂಕ್ಷನ್‌ ಅಂತ ಅನೇಕ ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಸೇರುತ್ತಾರೆ. ಇದೀಗ ಹಳ್ಳಿಕಾರ್​ ಒಡೆಯ ವರ್ತೂರು ಸಂತೋಷ್, ಸಿರಿ, ಅವಿನಾಶ್ ಶೆಟ್ಟಿ ಹಾಗೂ ತನಿಷಾ ಕುಪ್ಪಂಡ ಬಹುದಿನಗಳ ನಂತರ ಭೇಟಿಯಾಗಿದ್ದಾರೆ. ವರ್ತೂರಿನಲ್ಲಿ ಒನ್ ಡೇ ಔಟಿಂಗ್ ಹೋಗಿದ್ದಾರೆ ಈ ನಾಲ್ಕು ಸ್ಪರ್ಧಿಗಳು. ಸದ್ಯ ಮೀಟ್ ಆಗಿರುವ ಫೋಟೋಗಳನ್ನು ನಟಿ ಸಿರಿ ಅವರು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಇನ್ನು, ಒನ್ ಡೇ ಔಟಿಂಗ್​ನಲ್ಲಿ ವರ್ತೂರು ಸಂತೋಷ್​ ಅವರ ತೋಟಕ್ಕೆ ಭೇಟಿ ನೀಡಿದ ಬಿಗ್​ಬಾಸ್​ ಸ್ಪರ್ಧಿಗಳು ಪ್ರಾಣಿ-ಪಕ್ಷಿಗಳ ಜೊತೆ ಸಮಯ ಕಳೆದಿದ್ದಾರೆ. ತೋಟದಲ್ಲಿದ್ದ ಹಣ್ಣುಗಳನ್ನು ಸವಿದು ಖುಷಿಪಟ್ಟಿದ್ದಾರೆ. ಸದ್ಯ ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿವೆ.

Continue Reading

LATEST NEWS

Trending