Thursday, March 23, 2023

ಮೈಕೊರೆಯುವ ಚಳಿಯಲ್ಲೂ ಬರೀ ಟೀಶರ್ಟ್‌ನಲ್ಲಿ ರಾಹುಲ್ ಪಾದಯಾತ್ರೆ: ಸಂಶೋಧನೆಗೆ ಮುಂದಾದ ಯುಪಿ ಸರ್ಕಾರ..!

ಲಕ್ನೋ: ಉತ್ತರ ಭಾರತದಲ್ಲಿ ಮೈಕೊರೆಯುಯವ ಚಳಿ ಮಧ್ಯೆಯೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಐತಿಹಾಸಿಕ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ದೆಹಲಿ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಹರಿಯಾಣದಲ್ಲಿ ಉಷ್ಣಾಂಶ ನಾಲ್ಕು ಡಿಗ್ರಿಗೆ ಕುಸಿದಿದೆ.

ಮೈ ಕೊರೆಯುವ ಈ ಚಳಿಯಲ್ಲಿ ಜನ ಓಡಾಡುವುದೇ ಕಷ್ಟ. ಆದರೆ ರಾಹುಲ್ ಗಾಂಧಿ ಅವರು ಉತ್ಸಾಹದಿಂದ ಪಾದಯಾತ್ರೆ ನಡೆಸುತ್ತಿದ್ದಾರೆ.

ಅದರಲ್ಲೂ ಟೀ ಶರ್ಟ್ ಧರಿಸಿ ರಾಹುಲ್ ಗಾಂಧಿ ಹೆಜ್ಜೆ ಹಾಕುತ್ತಿರೋದು ಉತ್ತರಪ್ರದೇಶ ಸರ್ಕಾರಕ್ಕೆ ಆಶ್ಚರ್ಯ ತಂದಿದೆ. ಬರೀ ಟೀಶರ್ಟ್ ಧರಿಸಿ ಯಾತ್ರೆಯಲ್ಲಿ ರಾಹುಲ್ ಗಾಂಧಿ ಪಾಲ್ಗೊಂಡಿರುವುದು ಸಾಕಷ್ಟು ಚರ್ಚೆಯಾಗುತ್ತಿದ್ದು ಅವರು ಧರಿಸಿರೋ ಟೀ ಶರ್ಟ್‌ ಮೇಲೆ ಎಲ್ಲರ ಕಣ್ಣು ಬಿದ್ದಿದೆ.

ಈ ಹಿನ್ನೆಲೆಯಲ್ಲಿ ಯುಪಿ ಸರ್ಕಾರ ರಾಹುಲ್ ಗಾಂಧಿ ಟೀ ಶರ್ಟ್ ಮೇಲೆ ಸಂಶೋಧನೆಗೆ ಮುಂದಾಗಿದೆ ಎನ್ನಲಾಗಿದೆ.

ಯುಪಿ ಸರ್ಕಾರದ ಡಿಸಿಎಂ ಹಾಗೂ ಆರೋಗ್ಯ ಸಚಿವರು ಆಗಿರುವ ಬ್ರಿಜೇಶ್ ಪಾಠಕ್, ಈ ಬಗ್ಗೆ ಸಂಶೋಧನೆ ನಡೆಸಿ ವರದಿ ನೀಡಲು ವಿಜ್ಞಾನಿಗಳಿಗೆ ಸೂಚನೆ ನೀಡಿದ್ದಾರೆ ಅಂತೆ..!

LEAVE A REPLY

Please enter your comment!
Please enter your name here

Hot Topics

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...

40 ವರ್ಷಗಳಿಂದ ಅದೇ ಪೊಳ್ಳು ಭರವಸೆ : ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಸುಳ್ಯ ಅರಮನೆಗಾಯದ ಜನತೆ..!

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಈ ಗ್ರಾಮದ ಜನ ಕಳೆದ 40 ವರ್ಷಗಳಿಂದ ಬಿದಿರಿನ ತೂಗು ಸೇತುವೆಯ ಮುಖಾಂತರ ಜೀವ ಭಯದಲ್ಲಿ ಜೀವನ ನಡೆಸುತಿದ್ದಾರೆ.ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...