LATEST NEWS
ಧಾರಾಕಾರವಾಗಿ ಸುರಿದ ಮೀನಿನ ಮಳೆ.. ಫಿಶ್ಗಳನ್ನ ಕ್ಯಾಚ್ ಹಿಡಿದ ಜನ!
ಇರಾನ್ನ ಯಸುಜ್ ನಗರದಲ್ಲಿ ಅಪರೂಪದ ವಿದ್ಯಮಾನವೊಂದು ನಡೆದಿದ್ದು ಮೀನುಗಳ ಮಳೆಯಾಗಿದೆ. ಸದ್ಯ ಎಲ್ಲೆಡೆ ಮಳೆ ಸುರಿಯುತ್ತಿರುವುದು ಸಾಮಾನ್ಯವಗಿದೆ. ಆದರೆ ಯಸುಜ್ ನಗರದಲ್ಲಿ ಮಾತ್ರ ಭರ್ಜರಿ ವರುಣರಾಯ ಬಿರುಗಾಳಿ ಸಮೇತ ಆರ್ಭಟಿಸಿದ್ದಾನೆ. ಈ ವೇಳೆ ಆಗಸದಿಂದ ಮೀನುಗಳು ನಗರದ ಎಲ್ಲೆಂದರಲ್ಲಿ ಬಿದ್ದಿವೆ.
ಅಲ್ಲಿನ ಜನರು ಇವುಗಳನ್ನು ನೋಡಿ ಆಶ್ಚರ್ಯವಾಗಿದ್ದು ಕೆಲವರಂತೂ ಮೇಲಿಂದ ಬೀಳುವ ಮೀನುಗಳನ್ನು ಕ್ಯಾಚ್ ಹಿಡಿದುಕೊಂಡಿದ್ದಾರೆ. ಕೆಲವೊಂದು ಮೇಲಿಂದ ಬಿದ್ದ ರಭಸಕ್ಕೆ ರಸ್ತೆಯಲ್ಲೇ ಉಸಿರು ಚೆಲ್ಲಿವೆ ಎಂದು ಹೇಳಲಾಗಿದೆ.
ಸದ್ಯ ಆಗಸದಿಂದ ಮೀನುಗಳು ಮನೆ, ಕಾರು, ಛಾವಣಿ, ಹೋಟೆಲ್ಗಳ ಮೇಲೆ ಬಿದ್ದಿರುವ ವಿಡಿಯೋಗಳು ಎಲ್ಲೆಡೆ ವೈರಲ್ ಆಗುತ್ತಿವೆ. ಯಾವುದೇ ಜೀವಿಯಾದರೂ ಆಗಸದಿಂದ ಬೀಳುವುದಿಲ್ಲ. ಸಮುದ್ರದಲ್ಲಿ ಸುಳಿಗಾಳಿಯಿಂದ ಮೀನುಗಳು ತೀವ್ರ ಮೇಲಕ್ಕೆ ಹೋಗಿ ಈ ರೀತಿ ಅಲ್ಲಾಲ್ಲಿ ಬೀಳುತ್ತಾವೆ. ಈ ರೀತಿ ಆಗಾಗ ಅಲ್ಲಾಲ್ಲಿ ಮಳೆಗಾಲದಲ್ಲಿ ನಡೆಯುತ್ತಿರುತ್ತಾವೆ ಎಂದು ಹೇಳಲಾಗುತ್ತಿರುತ್ತದೆ.
DAKSHINA KANNADA
ಶಬರಿಮಲೆ ಯಾತ್ರಾರ್ಥಿ ಹೃದಯಾಘಾ*ತದಿಂದ ಸಾ*ವು
ಸುರತ್ಕಲ್: ಕಾಣಿಪಳ್ಳ ಗಣೇಶಪುರ ಬಳಿಯ ನಿವಾಸಿ ಸಂದೀಪ್ ಕಾಟಿಪಳ್ಳ(35) ಶಬರಿಮಲೆ ಯಾತ್ರೆ ಕೈಗೊಂಡಿದ್ದ ಸಂದರ್ಭ ಕೇರಳದಲ್ಲಿ ಹೃದಯಾಘಾತದಿಂದ ಮೃ*ತಪಟ್ಟಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರನ್ನು ಅ*ಗಲಿದ್ದಾರೆ. ಶಬರಿಮಲೆಗೆ ಮಗನ ಹೆಸರಿನಲ್ಲಿ ಹೇಳಿಕೊಂಡಿದ್ದ ಹರಕೆ ಒಪ್ಪಿಸಲು ಶುಕ್ರವಾರ ತೆರಳಿದ್ದರು. ಶನಿವಾರ ಅಯ್ಯಪ್ಪ ಸನ್ನಿಧಿಯಲ್ಲಿ ಹದಿನೆಂಟು ಮೆಟ್ಟಿಲು ಹತ್ತುವ ಹೊತ್ತಿನಲ್ಲಿ ಹೃದಯಾಘಾತಕ್ಕೆ ಒಳಗಾದರು.
ಸಂದೀಪ್ ಅವರು ನಿತ್ಯಾನಂದ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿಯಾಗಿದ್ದು, ಸೇವಾ ಟ್ರಸ್ಟ್, ಕೇಸರಿ ಫ್ರೆಂಡ್ಸ್ ಸಹಿತ ಸಾಮಾಜಿಕ ಜಾಲತಾಣದಲ್ಲಿ ಕ್ರೀಯಾಶೀಲರಾಗಿದ್ದರು. ಎಂಆರ್ಪಿಎಲ್ ನಲ್ಲಿ ಗುತ್ತಿಗೆ ಸೇವೆಯಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸಿದ್ದರು.
DAKSHINA KANNADA
ಮಂಗಳೂರು : ಬಂಟರ ಮಾತೃ ಸಂಘದ 103 ನೇ ವಾರ್ಷಿಕ ಸರ್ವ ಸದಸ್ಯರ ಸಭೆ
ಮಂಗಳೂರು : ಆರ್ಥಿಕವಾಗಿ ಹಿಂದುಳಿದ ಬಂಟ ಸಮಾಜದವರ ಏಳಿಗೆಗೆ ಮತ್ತು ಸಮಗ್ರ ಅಭಿವೃದ್ದಿಗೆ ಬಂಟರ ಯಾನೆ ನಾಡವರ ಮಾತೃಸಂಘ ಸ್ಪಂದಿಸುತ್ತಿದೆ. ಬಂಟರ ಸಾಂಸ್ಕೃತಿಕ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ವೈವಾಹಿಕ, ಆರೋಗ್ಯ, ವಸತಿ ಮತ್ತು ಒಟ್ಟು ಜೀವನದ ವ್ಯವಸ್ಥೆಗೆ ಬಂಟರ ಮಾತೃಸಂಘ ಸ್ಪಂದಿಸಿ ಕೆಲಸ ಮಾಡುತ್ತಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ತಿಳಿಸಿದರು.
ಬಂಟ್ಸ್ ಹಾಸ್ಟೇಲ್ ನಲ್ಲಿರುವ ಗೀತಾ ಎಸ್. ಎಮ್.ಶೆಟ್ಟಿ ಸಭಾಭವನದಲ್ಲಿ ನಡೆದ ಬಂಟರ ಯಾನೆ ನಾಡವರ ಮಾತೃ ಸಂಘದ 2022-23 ನೇ ಸಾಲಿನ 103 ನೇ ವಾರ್ಷಿಕ ಸರ್ವಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಂಟರ ಯಾನೆ ನಾಡವರ ಮಾತೃ ಸಂಘಕ್ಕೆ 115 ವರ್ಷಗಳ ಇತಿಹಾಸ ಇದೆ. ಈ ನಿಟ್ಟಿನಲ್ಲಿ ಮಾತೃಸಂಘದ ಬಹು ಕನಸಿನ ಯೋಜನೆಯಾದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಗೆ ಎಂಆರ್ ಜಿ ಗ್ರೂಪ್ ನ ಚೆಯರ್ ಮೆನ್ ಕೆ ಪ್ರಕಾಶ್ ಶೆಟ್ಟಿಯವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಕಟ್ಟಡ ನಿರ್ಮಾಣಕ್ಕೆ ಪ್ರಕಾಶ್ ಶೆಟ್ಟಿಯವರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಅದೇ ರೀತಿ ವಿಶ್ವ ಬಂಟರ ಮಾಹಿತಿ ಕೋಶ ಸಮಿತಿಗೆ ಹೇರಂಭ ಇಂಡಸ್ಟೀಸ್ ನ ಆಡಳಿತ ನಿರ್ದೇಶಕ ಕನ್ಯಾನ ಕೂಳೂರು ಸದಾಶಿವ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಒಂದು ಯೋಜನೆಗೆ ಒಂದು ಕೋಟಿ ರೂಪಾಯಿಗೂ ಮಿಕ್ಕಿ ಖರ್ಚಾಗಲಿದ್ದು, ಅದರ ಸಂಪೂರ್ಣ ವೆಚ್ಚವನ್ನು ಕನ್ಯಾನ ಸದಾಶಿವ ಶೆಟ್ಟಿಯವರು ಭರಿಸಲಿದ್ದಾರೆಂದು ಅಜಿತ್ ಕುಮಾರ್ ರೈ ತಿಳಿಸಿದರು.
ಶ್ರೀ ರಾಮಕೃಷ್ಣ ಶಾಲಾ ಕಾಲೇಜ್ ನಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ. ಇಲ್ಲಿರುವ ಮಕ್ಕಳಿಗೆ ಹಲವಾರು ಸವಲತ್ತುಗಳು ದೊರಕುತ್ತಿದೆ. ಸಮಾಜದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆಯುವಂತೆ ವಿನಂತಿಸಿದರು.
ಮೀಸಲಾತಿಯಲ್ಲಿ ಬಂಟರಿಗೆ ಅನ್ಯಾಯ :
ಬಂಟ ಸಮಾಜವನ್ನು ಕೇಂದ್ರ ಸರಕಾರವು ಮೀಸಲಾತಿ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಲ್ಲ. ರಾಜ್ಯದ ಮೀಸಲಾತಿ ಪಟ್ಟಿಯಲ್ಲಿ ಸಮಾಜವು ಪ್ರವರ್ಗ 2 ( ಎ) ಯಲ್ಲಿ ಸೇರಲು ಅರ್ಹರಾಗಿದ್ದರೂ ಬಂಟ ಸಮುದಾಯವನ್ನು ಪ್ರವರ್ಗ 3 (ಬಿ) ಯಲ್ಲಿ ಸೇರಿಸಿರುವ ಕಾರಣ ಸಮುದಾಯ ಶಿಕ್ಷಣ, ಉದ್ಯೋಗ, ಸಾಮಾಜಿಕ, ರಾಜಕೀಯ ಮುಂತಾದ ಕ್ಷೇತ್ರಗಳಲ್ಲಿ ಸಿಗುವ ಸೌಲಭ್ಯಗಳಿಂದ ವಂಚಿತರಾಗಿ ಸಮುದಾಯಕ್ಕೆ ತುಂಬಾ ಹಿನ್ನಡೆಯಾಗಿದೆ ಎಂದು ಮಾಲಾಡಿ ಅಜಿತ್ ಕುಮಾರ್ ರೈ ತಿಳಿಸಿದರು.
ಸಮಾಜವನ್ನು ಕೇಂದ್ರ ಸರಕಾರದ ಮೀಸಲಾತಿ ಪಟ್ಟಿಯಲ್ಲಿ ಸೇರಿಸಲು ಹಾಗೂ ರಾಜ್ಯದ ಮೀಸಲಾತಿ ಪಟ್ಟಿಯಲ್ಲಿ ಬಂಟ ಸಮಾಜವನ್ನು ಪ್ರವರ್ಗ 3 (ಬಿ) ಯಿಂದ ಪ್ರವರ್ಗ 2 (ಎ) ಗೆ ಸೇರ್ಪಡೆಗೊಳಿಸಲು ಅಗತ್ಯವಿರುವ ಮಾಹಿತಿಯನ್ನು ಸಂಗ್ರಹಿಸಿ ಮೀಸಲಾತಿಯಲ್ಲಿ ಸೇರಿಸುವ ಉದ್ದೇಶದಿಂದ ಹಾಗೂ ಸಮಾಜದ ನಿಜವಾದ ಸ್ಥಿತಿಗತಿಯನ್ನು ಸರಕಾರದ ಗಮನಕ್ಕೆ ಬರುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಬಾಂಧವ್ಯ ಎಂಬ ನಾಮಾಂಕಿತದೊಂದಿಗೆ ವಿಶ್ವವ್ಯಾಪಿಯಾಗಿ ನೆಲೆಸಿರುವ ಬಂಟರ ಸಾಂಸ್ಕೃತಿಕ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ವೈವಾಹಿಕ, ಆರೋಗ್ಯ, ವಸತಿ, ಧಾರ್ಮಿಕ ಮತ್ತು ಒಟ್ಟು ಜೀವನದ ವ್ಯವಸ್ಥೆ ಹಾಗೂ ಇತರ ಸ್ಥಿತಿಗತಿಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿ ಮಹೋನ್ನತವಾದ ದೂರಗಾಮಿ ಪರಿಣಾಮವನ್ನು ಬೀರುವ “ವಿಶ್ವ ಬಂಟರ ಮಾಹಿತಿ ಕೋಶ”ವನ್ನು ತಯಾರು ಮಾಡುವ ಒಂದು ಅನುಕರಣೀಯ ಶ್ರೇಷ್ಠ ಕೆಲಸವನ್ನು ಮಾಡಲು ಕಾರ್ಯ ಪ್ರವೃತ್ತರಾಗಿದ್ದೇವೆ ಎಂದು ಅಜಿತ್ ಕುಮಾರ್ ರೈ ತಿಳಿಸಿದರು.
ಸಾಮಾಜಿಕ ಜಾಲತಾಣದ ಮೂಲಕ ಪ್ರಪಂಚದ ಯಾವುದೇ ಮೂಲೆಯಲ್ಲಿದ್ದರೂ ವಿಶ್ವ ಬಂಟರ ಮಾಹಿತಿಕೋಶ ಪೂರ್ಣವಾದ ನಂತರ ಬಂಟ ಸಮಾಜ ಬಾಂಧವರ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆಯುವ ಅವಕಾಶ ಒದಗಿ ಬರುತ್ತದೆ. ಇದರಿಂದ ಸಮಾಜ ಬಾಂಧವರು ಹಲವಾರು ವಿಧದ ಪ್ರಯೋಜನಗಳನ್ನು ಪಡೆಯಬಹುದು ಎಂದರು.
2022-23 ನೇ ಸಾಲಿನ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಕೆ ಎಂ ಶೆಟ್ಟಿ ಮಂಡಿಸಿದರು. 2022-23 ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳನ್ನು ಕೋಶಾಧಿಕಾರಿ ಸಿಎ. ರಾಮ್ ಮೋಹನ್ ರೈ ಟಿ ಮಂಡಿಸಿದರು. ಸಭೆಯಲ್ಲಿ ವಿದ್ಯಾರ್ಥಿ ಭವನಗಳ, ಶಾಲಾ ಕಾಲೇಜುಗಳ, ತಾಲೂಕು ಸಮಿತಿಗಳ ವಾರ್ಷಿಕ ವರದಿಯನ್ನು ಮಂಡಿಸಲಾಯಿತು.
ಇದನ್ನೂ ಓದಿ : ಮತ್ತೆ ಕಿರುತೆರೆಗೆ ಲಗ್ಗೆ ಇಟ್ಟ ನಟ ರೂಪೇಶ್ ಶೆಟ್ಟಿ; ‘Huu ಅಂತೀಯಾ…Uhuu ಅಂತೀಯಾ’ ಅಂದ್ರು ರಾಕ್ ಸ್ಟಾರ್!
ಉಮೇಶ್ ರೈ ಪದವುಮೇಗಿನ ಮನೆ, ಶಾಲಿನಿ ಶೆಟ್ಟಿ, ಸಂಜೀವ ರೈ, ಕಾವು ಹೇಮನಾಥ ಶೆಟ್ಟಿ, ವಸಂತ ಶೆಟ್ಟಿ, ಮಿಥುನ್ ಹೆಗ್ಡೆ ಉಡುಪಿ, ವಿಜಯ ಶೆಟ್ಟಿ ಕಾರ್ಕಳ, ಆವರ್ಸೆ ಸುಧಾಕರ ಶೆಟ್ಟಿ, ದಯಾನಂದ ರೈ ಮನವಳಿಕೆ, ಜಯರಾಮ ಭಂಡಾರಿ, ಸುಧೀರ್ ಕುಮಾರ್ ರೈ ವರದಿಗಳನ್ನು ಮಂಡಿಸಿದರು. 2023-24 ನೇ ಸಾಲಿಗೆ ಲೆಕ್ಕಪರಿಶೋಧಕರಾಗಿ ದಯಾಶರಣ್ ಶೆಟ್ಟಿ ಆಯ್ಕೆಯಾದರು.
ಅಜಿತ್ ಕುಮಾರ್ ರೈ ಸ್ವಾಗತಿಸಿದರು. ದೀಪಿಕಾ, ಸಿಂಧೂರ, ಸಹನಾ ಪ್ರಾರ್ಥನೆಗೈದರು. ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ ವಂದಿಸಿದರು. ಶರತ್ ಶೆಟ್ಟಿ ಪಡುಪಳ್ಳಿ ಕಾರ್ಯಕ್ರಮ ನಿರ್ವಹಿಸಿದರು.
FILM
ಮತ್ತೆ ಕಿರುತೆರೆಗೆ ಲಗ್ಗೆ ಇಟ್ಟ ನಟ ರೂಪೇಶ್ ಶೆಟ್ಟಿ; ‘Huu ಅಂತೀಯಾ…Uhuu ಅಂತೀಯಾ’ ಅಂದ್ರು ರಾಕ್ ಸ್ಟಾರ್!
ಮಂಗಳೂರು : ರೂಪೇಶ್ ಶೆಟ್ಟಿ ಕೋಸ್ಟಲ್ ವುಡ್ ನಲ್ಲಿ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಕಲಾವಿದ. ಕನ್ನಡ ಸಿನಿಮಾಗಳಲ್ಲೂ ಮಿಂಚಿದ್ದಾರೆ. ಈಗಾಗಲೇ ಕಿರುತೆರೆಗೆ ಲಗ್ಗೆ ಇಟ್ಟಿರುವ ಅವರು ಬಿಗ್ ಬಾಸ್ ಸೀಸನ್ 9 ರ ವಿಜೇತರಾಗಿ ಹೊರಹೊಮ್ಮಿದ್ದರು. ಇದೀಗ ಮತ್ತೆ ಕಿರುತೆರೆಗೆ ಲಗ್ಗೆ ಇಡುತ್ತಿದ್ದಾರೆ.
ನಿರೂಪಕನಾಗಿ ಎಂಟ್ರಿ:
ಸಾಲು ಸಾಲು ಸಿನಿಮಾಗಳಲ್ಲಿ ಬಿಝಿಯಾಗಿರುವ ರೂಪೇಶ್ ಶೆಟ್ಟಿ ಕಿರುತೆರೆಗೆ ಮತ್ತೆ ಲಗ್ಗೆ ಇಡುತ್ತಿದ್ದಾರೆ. ಅದು ಹೊಸ ರಿಯಾಲಿಟಿ ಶೋನಲ್ಲಿ. ಹಾಗಂತ ಅವರು ಸ್ಪರ್ಧಿಯಾಗಿ ಕಾಣಿಸಿಕೊಳ್ಳುತ್ತಿಲ್ಲ. ಬದಲಿಗೆ ನಿರೂಪಕರಾಗಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಅದುವೇ ‘Huu ಅಂತೀಯಾ…Uhuu ಅಂತೀಯಾ’. ಇದೊಂದು ವಿಭಿನ್ನ ಬಗೆಯ ವಿನೂತನ ಗೇಮ್ ಶೋ ಆಗಿದೆ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ವೀಕೆಂಡ್ ನಲ್ಲಿ ಈ ಶೋ ಪ್ರಸಾರವಾಗಲಿದೆ.
ರೂಪೇಶ್ ಶೆಟ್ಟಿ ಹಾಗೂ ಅರುಣ್ ಇಬ್ಬರು ಜೊತೆಯಾಗಿ ಈ ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ.
ಹೇಗಿರಲಿದೆ ಶೋ:
ಈ ಶೋನಲ್ಲಿ ಒಟ್ಟು ಮೂರು ಸುತ್ತುಗಳು ಇರುತ್ತವೆ. ಈ ಶೋನಲ್ಲಿ ಭಾಗವಹಿಸುವ ಸೆಲೆಬ್ರಿಟಿಗಳಿಗೆ ಬರೋಬ್ಬರಿ 6 ಲಕ್ಷ ರೂಪಾಯಿ ಗೆಲ್ಲುವ ಅವಕಾಶ ಇರುತ್ತದೆ.
ಮೊದಲ ಸುತ್ತಿನಲ್ಲಿ ಸ್ಪರ್ಧಿಗಳು ಒಬ್ಬರ ನಂತರ ಒಬ್ಬರು ಆಟ ಆಡುತ್ತಾರೆ. ನಿರೂಪಕರು ನೀಡಿದ ಸತ್ಯ ಮತ್ತು ಸುಳ್ಳು ಸಂಗತಿಗಳನ್ನು ಸ್ಪರ್ಧಿಗಳು ಸರಿಯಾಗಿ ಆರಿಸಿದರೆ 1 ಲಕ್ಷ ರೂಪಾಯಿ ಗೆಲ್ಲಬಹುದು. ಎರಡನೇ ಸುತ್ತಿನಲ್ಲಿ ಸ್ಪರ್ಧಿಗಳಿಗೆ ಊಟದ ಸವಾಲು ಎದುರಾಗುತ್ತೆ. ಇದರಲ್ಲಿ ಗೆದ್ದವರಿಗೆ 2 ಲಕ್ಷ ರೂಪಾಯಿ ಸಿಗಲಿದೆ. ಹಾಗೇ ಕೊನೆಯ ಸುತ್ತಿನಲ್ಲಿ ಕೇವಲ ಇಬ್ಬರು ಸ್ಪರ್ಧಿಗಳು ಆಟ ಆಡುತ್ತಾರೆ. ಇಲ್ಲಿ ಗೆದ್ದವರಿಗೆ 3 ಲಕ್ಷ ರೂಪಾಯಿ ಸಿಗುತ್ತೆ.
ಇದನ್ನೂ ಓದಿ : ದರ್ಶನ್ ‘ಡೆವಿಲ್’ಗೆ ಹೀರೋಯಿನ್ ಫಿಕ್ಸ್; ಡಿಬಾಸ್ ಗೆ ಜೊತೆಯಾದ್ರು ಕರಾವಳಿ ಬೆಡಗಿ!
ಪ್ರಾರಂಭ ಯಾವಾಗ ?
‘Huu ಅಂತೀಯಾ…Uhuu ಅಂತೀಯಾ’ ಮೇ 19 ರಿಂದ ಪ್ರತಿ ಭಾನುವಾರ ರಾತ್ರಿ 7 ಗಂಟೆಗೆ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗಲಿದೆ. ಮೊದಲ ಸಂಚಿಕೆಯಲ್ಲಿ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಅಮೃತಾ ಅಯ್ಯಂಗಾರ್ ಮೂವರು ಸೆಲೆಬ್ರೆಟಿಗಳು ಭಾಗವಹಿಸುತ್ತಿದ್ದಾರೆ.
- DAKSHINA KANNADA6 days ago
ಮುಲ್ಕಿ: ಚಿಪ್ಪು ಹೆಕ್ಕಲು ಹೋಗಿ ನೀರಲ್ಲಿ ಕಣ್ಮರೆಯಾದ ಯುವಕ.! ಪತ್ತೆಗೆ ಶೋಧ
- FILM5 days ago
ರಾಷ್ಟ್ರಪ್ರಶಸ್ತಿ ವಿಜೇತ, ಖ್ಯಾತ ಸಂಗೀತ ನಿರ್ದೇಶಕನ ದಾಂಪತ್ಯ ಜೀವನದಲ್ಲಿ ಬಿರುಕು!
- FILM6 days ago
ಬಿಗ್ಬಾಸ್ ಸಂಗೀತಾ ಶೃಂಗೇರಿಗೆ ಬಿಗ್ ಸರ್ಪ್ರೈಸ್ ಕೊಟ್ಟ ಕುಟುಂಬಸ್ಥರು; ಫೋಟೋ ವೈರಲ್!
- LATEST NEWS6 days ago
ಈ ನಾಲ್ಕು ತಿಂಗಳ ಮಗುವಿನ ಸಾಧನೆ ಕೇಳಿದ್ರೆ ಶಾಕ್ ಆಗ್ತೀರಾ..!