Connect with us

    PUTTUR

    ಕುಡಿಯುವ ನೀರು ಪಡೆಯುವಲ್ಲಿ ಸ್ವಾವಲಂಬಿಗಳಾಗಲು ಮಳೆ ನೀರು ಕೊಯ್ಲು ಅನಿವಾರ್ಯ: ಮಠಂದೂರು

    Published

    on

    ಮಂಗಳೂರು: ಕುಡಿಯುವ ನೀರು ಯೋಜನೆಗಾಗಿ ಸರ್ಕಾರವು ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ. ಆದರೂ ದಿನದ 24 ಗಂಟೆಗಳ ನೀರು ಪೂರೈಕೆ ಕಷ್ಟಸಾಧ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರು ಪಡೆಯುವಲ್ಲಿ ಸ್ವಾವಲಂಬಿಗಳಾಗಲು ಮಳೆ ನೀರು ಕೊಯ್ಲು ಅನಿವಾರ್ಯವಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

    ಪುತ್ತೂರು ನಗರಸಭೆಯ ವತಿಯಿಂದ ನಡೆಯಲಿರುವ ನೂತನ ಕಚೇರಿ ಕಟ್ಟಡ ಮತ್ತು ಮಳೆ ನೀರು ಕೊಯ್ಲು ಅಳವಡಿಕೆಯ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್ ಮಾತನಾಡಿ ನಗರಸಭೆಯ ವತಿಯಿಂದ ರೂ. 9 ಲಕ್ಷ ವೆಚ್ಚದಲ್ಲಿ ನೂತನ ಮಳೆಕೊಯ್ಲು ಕಾರ್ಯವನ್ನು ಪ್ರಥಮವಾಗಿ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೊಸ ಮನೆ ನಿರ್ಮಾಣ ಮಾಡುವವರು ಕಡ್ಡಾಯವಾಗಿ ಮಳೆ ನೀರು ಕೊಯ್ಲು ವ್ಯವಸ್ಥೆ ಮಾಡಿಕೊಳ್ಳುವಂತೆ ಯೋಜನೆ ರೂಪಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ನಗರಸಭಾ ಪೌರಾಯುಕ್ತ ಮಧು ಎಸ್ ಮನೋಹರ್,ನಗರಸಭಾ ಉಪಾಧ್ಯಕ್ಷೆ ವಿದ್ಯಾಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಸದಸ್ಯರಾದ ಪಿ.ಜಿ. ಜಗನ್ನಿವಾಸ್ ರಾವ್ ಮತ್ತಿತರರು ಉಪಸ್ಥಿತರಿದ್ದರು.

    DAKSHINA KANNADA

    ಟ್ಯಾಂಕ‌ರ್, ತ್ರಿಚಕ್ರ ಸ್ಕೂಟರ್ ನಡುವೆ ಭೀಕರ ಅಪಘಾತ; ವ್ಯಕ್ತಿ ಸಾ*ವು

    Published

    on

    ಪುತ್ತೂರು: ಪುತ್ತೂರಿನ ನೆಹರು ನಗರದ ಮಂಜಲ್ಪಡ್ಪು ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಮಾಜೆಯ ವಿಕಲಚೇತನರೊಬ್ಬರು ಮೃ*ತಪಟ್ಟಿದ್ದಾರೆ. ಮಿತ್ತೂರು ಏಮಾಜೆಯ ವಿಕಲಚೇತನ ವ್ಯಕ್ತಿ ಶಿವರಾಮ ನಾಯ್ಕ (50 ವ) ಮೃತಪಟ್ಟವರು. ನಿನ್ನೆ(ಜು.23) ರಾತ್ರಿ ಮಂಗಳೂರು ಕಡೆ ಹೋಗುತ್ತಿದ್ದ ಟ್ಯಾಂಕರ್ ವೊಂದು ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲಸ್ಟೋರ್ಸ್ ಮುಂಭಾಗ ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿಚಕ್ರ ಸ್ಕೂಟರ್ ಗೆ ಡಿಕ್ಕಿಯಾಗಿದೆ.

    ಕಾಸರಗೋಡು: ಗ್ರೈಂಡರ್ ಗೆ ಶಾಲ್‌ ಸಿಲುಕಿ ಮಹಿಳೆ ಸಾ*ವು

    ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಶಿವರಾಮ ಅವರು ಮೃತಪಟ್ಟಿದ್ದಾರೆ. ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರೂ ಅರ್ಧ ಗಂಟೆ ಕಳೆದು ಪೊಲೀಸರು ಸ್ಥಳಕ್ಕೆ  ಬಂದಿದ್ದು, ಆ ಬಳಿಕವೇ ಮೃತದೇಹ ಬದಿಗೆ ಸರಿಸಲಾಯಿತು. ಅಷ್ಟರವರೆಗೂ ಮೃತದೇಹ ಅಪಘಾತ ನಡೆದ ಸ್ಥಳದಲ್ಲೇ ಇತ್ತು. ಇದರಿಂದ ವಾಹನ ಸಂಚಾರಕ್ಕೆ ತೊಡಕಾಗಿತ್ತು ಎನ್ನಲಾಗಿದೆ. ಪುತ್ತೂರಿನ ಟ್ರಾಫಿಕ್‌ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ.

    Continue Reading

    DAKSHINA KANNADA

    ಲಾರಿಯ ಟಯರ್‌ ಬದಲಿಸುವಾಗ ಹೊರಚಿಮ್ಮಿದ ಡಿಸ್ಕ್; ವ್ಯಕ್ತಿಗೆ ಗಂಭೀ*ರ ಗಾ*ಯ

    Published

    on

    ಪುತ್ತೂರು : ಲಾರಿಯೊಂದರ ಟಯರ್‌ ಬದಲಿಸುವಾಗ ಡಿಸ್ಕ್ ಚಿಮ್ಮಿ ಟಯರ್‌ ಸಮೇತ ಕಾಂಪೌಂಡ್‌ ಗೆ ಎಸೆಯಲ್ಪಟ್ಟು, ವ್ಯಕ್ತಿಯೊಬ್ಬರು ಗಂಭೀ*ರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ(ಜು.22) ರಾತ್ರಿ ನಡೆದಿದೆ.

    ಬೆಳ್ತಂಗಡಿ ತಾಲೂಕಿನ ಕರಾಯದ ಜನತಾ ಕಾಲನಿ ನಿವಾಸಿ ರಶೀದ್ ಗಂಭೀರವಾಗಿ ಗಾಯಗೊಂಡವರು. ತನ್ನ ಬಾವನಿಗೆ ಸೇರಿದ ಕಲ್ಲು ಸಾಗಾಟದ ಲಾರಿಯ ಟಯರ್‌ ಪಂಚರ್ ಆದ ಕಾರಣ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು ಎನ್ನಲಾಗಿದೆ.

    ಪಂಚರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯರ್‌ ತಂದಿದ್ದರು. ಟಯರ್‌ ಬದಲಿಸುವ ವೇಳೆ ಒಮ್ಮೆಲೇ ಟಯರ್‌ನ ರಿಂಗ್ ಹೊರಚಿಮ್ಮಿದೆ. ರಭಸಕ್ಕೆ ಟಯರ್‌ ಸಹಿತ ರಶೀದ್ ಅವರು ತುಸು ದೂರ ಕಾಂಪೌಂಡ್ ಗೆ ಎಸೆಯಲ್ಪಟ್ಟಿದ್ದಾರೆ.

    ಇದನ್ನೂ ಓದಿ :‘ಕೊಹ್ಲಿ’ ಜೊತೆಗಿನ ನಿಮ್ಮ ಸಂಬಂಧ ಹೇಗಿದೆ? ಎಂದು ಪ್ರಶ್ನಿಸಿದಕ್ಕೆ ‘ಗಂಭೀರ್’ ಖಡಕ್ ಉತ್ತರವೇನು ಗೊತ್ತಾ?
    ತೀವ್ರ ಗಾಯಗೊಂಡ ರಶೀದ್‌ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

    Continue Reading

    LATEST NEWS

    ಸ್ನಾನ ಮಾಡುತ್ತಿದ್ದಾಗ ವೀಡಿಯೋ ಮಾಡಿದ ಕಿಡಿಗೇಡಿ..! ಅರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!!

    Published

    on

    ಉಪ್ಪಿನಂಗಡಿ: ಅನ್ಯಕೋಮಿನ ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ  ರಹಿಮಾನ್ ಎಂಬಾತನನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಕೊಟ್ಟಿರುವ ಘಟನೆ ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ನಡೆದಿದೆ.

    ಮಫ್ಲರ್‌ನಿಂದ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ..!

    ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿದ ಅರುಣ್ ಕುಮಾರ್ ಪುತ್ತಿಲ, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಈಗಾಗಲೇ ಉಪ್ಪಿನಂಗಡಿಯಲ್ಲಿ ಹಿಂದೂಗಳನ್ನು ಕೇಂದ್ರೀಕರಿಸಿ ಹಲವು ಘಟನೆಗಳು ನಡೆದಿದ್ದು, 2 ವರ್ಷದ ಹಿಂದೆ ಮೀನು ಅಂಗಡಿಗೆ ಬೆಂಕಿ ಹಾಕಿದ ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ. ಪ್ರಸ್ತುತ ಈ ಘಟನೆಯಲ್ಲಿ ಆರೋಪಿಯನ್ನು ಊರವರೇ ಹಿಡಿದುಕೊಟ್ಟಿದ್ದಾರೆ. ಪೆರಿಯಡ್ಕ ಜಂಕ್ವನ್ ನಲ್ಲಿ ಪೊಲೀಸ್ ಇಲಾಖೆಯ ಸಿಸಿಟಿವಿ ಅಳವಡಿಸುವ  ಅಗತ್ಯ ಇದೆ ಎಂದು ಠಾಣಾಧಿಕಾರಿಯಲ್ಲಿ ಮನವಿ ಮಾಡಿದರು.

    Continue Reading

    LATEST NEWS

    Trending