Connect with us

LATEST NEWS

ಕತ್ರಿನಾ ಕೈಫ್​ ಕೆನ್ನೆಯಷ್ಟು ನೈಸ್‌ ರೋಡ್‌ ಮಾಡುತ್ತೇನೆಂದ ಸಚಿವನ ಹೇಳಿಕೆ ವೈರಲ್‌

Published

on

ಜೈಪುರ: ರಾಜಸ್ಥಾನ ಸಚಿವ ನೀಡಿದ ಹೇಳಿಕೆಯೊಂದು ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.
ಪಂಚಾಯತ್​ ರಾಜ್​ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ರಾಜೇಂದ್ರ ಸಿಂಗ್​ ಗೌಡ,

ಬಾಲಿವುಡ್​ ಬ್ಯೂಟಿ ಕತ್ರಿನಾ ಕೈಫ್​ ಅವರ ಕೆನ್ನೆಯಷ್ಟು ಸೊಗಸಾದ ರಸ್ತೆಗಳನ್ನು ಮಾಡಿಸುತ್ತೇನೆಂದು ಭರವಸೆ ನೀಡಿದ್ದಾರೆ.


ರಾಜಸ್ಥಾನದ ಜಂಜುನು ಜಿಲ್ಲೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುವ ವೇಳೆ ಸಚಿವರು ಈ ಭರವಸೆಯನ್ನು ನೀಡಿದ್ದಾರೆ.

ಗೌಡ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್​ಪಿಯಲ್ಲಿ ಟಿಕೆಟ್​ ಪಡೆದು ಜಯ ಸಾಧಿಸಿ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದಾರೆ.
2015ರಲ್ಲಿ ಆರ್​ಜೆಡಿ ನಾಯಕ ಲಾಲು ಪ್ರಸಾದ್​ ಯಾದವ್​ ಹೇಮಾಮಾಲಿನಿ ಕೆನ್ನೆಯಂತ ನಯವಾದ ರಸ್ತೆಗಳನ್ನು ಮಾಡಿಸುವ ಭರವಸೆ ನೀಡಿದ್ದರು. 2013ರಲ್ಲಿ ಉತ್ತರ ಪ್ರದೇಶದ ಖಾದಿ ಮತ್ತು ಗ್ರಾಮೀಣ ಕೈಗಾರಿಕೆ ಸಚಿವ ರಾಜಾರಾಮ್​ ಪಾಂಡೆ ಮಾತನಾಡಿ,

ಪ್ರತಾಪಗಢ ಜಿಲ್ಲೆಯಲ್ಲಿರುವ ರಸ್ತೆಗಳನ್ನು ಹೇಮಾಮಾಲಿನಿ ಮತ್ತು ಮಾಧುರಿ ದೀಕ್ಷಿತ್​ ಗಲ್ಲದಂತೆ ಸೊಗಸಾಗಿ ಮಾಡಲಾಗುವುದು ಎಂದಿದ್ದರು. ಆದರೆ, ರಾಜಕಾರಣಿಗಳು ನೀಡಿದ ಭರವಸೆ ಮಾತ್ರ ಇಂದಿಗೂ ಭರವಸೆ ಆಗಿಯೇ ಉಳಿದಿವೆ.

FILM

ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!

Published

on

ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ​ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.

‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು  ಮನವಿ ಮಾಡಿದ್ದಾರೆ.

ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Continue Reading

bengaluru

ನಟ ನಾಗಭೂಷಣ್ ಕಾರು ಅಪಘಾತ – ಮಹಿಳೆ ಸಾವು..!

Published

on

ಬೆಂಗಳೂರು: ಕನ್ನಡದ ಹೆಸರಾಂತ ನಟ ನಾಗಭೂಷಣ್ ಅವರು ಚಲಾಯಿಸುತ್ತಿದ್ದ ಕಾರು ದಂಪತಿಗಳಿಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಹಿಳೆಯ ಸಾವಿಗೆ ಕಾರಣರಾದ ನಟ ನಾಗಭೂಷಣ್ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ವಸಂತಪುರದ ನಿವಾಸಿ ಪ್ರೇಮಾ (48) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ನಾಗಭೂಷಣ್ ಶೂಟಿಂಗ್ ಮುಗಿಸಿಕೊಂಡು ಬರುವಾಗ ರಸ್ತೆಯಲ್ಲಿ ಅಡ್ಡಬಂದ ಪಾದಚಾರಿ ದಂಪತಿಗಳಾದ ಪ್ರೇಮಾ ಮತ್ತು ಕೃಷ್ಣ ಅವರಿಗೆ ಕಾರು ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಖುದ್ದಾಗಿ ನಾಗಭೂಷಣ್ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.

ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮಾ ಅವರು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಗಭೂಷಣ್ ಅವರೇ ಸ್ವತಃ ಕಾರನ್ನು ಚಲಾಯಿಸುತ್ತಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮಾಹಿತಿ ಪಡೆಯುತ್ತಿದ್ದಾರೆ.

ಮೃತರ ಪುತ್ರನು ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಫುಟ್ ಪಾತ್ ಮೇಲೆ ತಂದೆ ತಾಯಿ ವಾಕ್ ಮಾಡುವಾಗ ಕಾರು ಹಾಯ್ದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Continue Reading

DAKSHINA KANNADA

ಮೇಯರ್‌ ಫೋನ್‌ ಇನ್‌ : ಮಂಗಳೂರು ನಗರದ 8 ಕಡೆ ಬಸ್ ಬೇ ನಿರ್ಮಾಣ- ಸುಧೀರ್ ಶೆಟ್ಟಿ

Published

on

ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 53 ಪ್ರದೇಶಗಳಲ್ಲಿ ಬಸ್ಸು ತಂಗುದಾಣ ನಿರ್ಮಿಸಲು ಮಂಗಳೂರು ಪೊಲೀಸ್ ಕಮಿಷನರ್‌ ಪ್ರಸ್ತಾವನೆ ಸಲ್ಲಿಸಿದ್ದು, ಪ್ರಸ್ತುತ 8 ಪ್ರದೇಶಗಳಲ್ಲಿ ಬಸ್‌ ಬೇ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ.

ಮೇಯರ್ ಕಚೇರಿಯಲ್ಲಿ ಶನಿವಾರ ನಡೆದ ಮೇಯರ್ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ಮೊದಲ ಹಂತದಲ್ಲಿ ನಾಗರಿಕರಿಂದ ಹೆಚ್ಚು ಬೇಡಿಕೆ ಇರುವ ಬಿಜೈ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣ ಸಮೀಪ, ಲೇಡಿಹಿಲ್‌, ಕಂಕನಾಡಿ ಜಂಕ್ಷನ್‌, ಬಂಟ್ಸ್ ಹಾಸ್ಟೇಲ್ ಸೇರಿದಂತೆ ಒಟ್ಟು 8 ಕಡೆಗಳಲ್ಲಿ ಬಸ್ ಬೇ ನಿರ್ಮಿಸಲಾಗುವುದು.

ಬಳಿಕ ಹಂತ ಹಂತವಾಗಿ ಉಳಿದೆಡೆ ಬಸ್ ಬೇ ನಿರ್ಮಿಸಲಾಗುವುದು ಎಂದರು. ನಗರದಲ್ಲಿ 53 ಬಸ್ಸು ತಂಗುದಾಣಕ್ಕೆ ಪೊಲೀಸರು ಪ್ರಸ್ತಾವನೆ ಸಲ್ಲಿಸಿದ್ದರೂ ಅಧಿಕಾರಿಗಳುಮಾತ್ರ ಕಡತದಲ್ಲೇ ಬಾಕಿ ಇರಿಸಿದ್ದು, ಮನಪಾ ಆಡಳಿತದ ಸಭೆಗೆ ಹಾಜರುಪಡಿಸದಿರುವುದು ಗಮನಕ್ಕೆ ಬಂತು.

ಕೂಡಲೇ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಪ್ರಸ್ತಾವನೆಯನ್ನು ಮುಂದಿನ ಸಭೆಗೆ ಹಾಜರುಪಡಿಸುವಂತೆ ಸೂಚನೆ ನೀಡಿದರು.

ಬೀದಿ ಬದಿ ವ್ಯಾಪಾರಸ್ಥರು ನಗರದ ಅನೇಕ ಕಡೆಗಳಲ್ಲಿ ರಸ್ತೆ ಹಾಗೂ ಫುಟ್ಪಾತ್‌ ಅತಿಕ್ರಮಣ ನಡೆಸಿದ್ದಾರೆ.

ಅಗಲಗೊಂಡರಸ್ತೆಯಲ್ಲಿ ವಾಹನಗಳನ್ನು ಪಾರ್ಕ್‌ ಮಾಡಲಾಗುತ್ತಿದೆ.

ಈ ಬಗ್ಗೆ ಪಾಲಿಕೆ ಕ್ರಮ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.

Continue Reading

LATEST NEWS

Trending