DAKSHINA KANNADA
ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ಮಂಗಳೂರು ಮೂಲದ ರಾಜೇಶ್ ಜಿ.ವಿ ನೇಮಕ
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿಯಲ್ಲಿ ಸಂಘಟನಾತ್ಮಕವಾಗಿ ಕೆಲವು ಬದಲಾವಣೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕದ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಮೂಲತಃ ದ.ಕ ಜಿಲ್ಲೆಯ ಆರ್ಎಸ್ಎಸ್ ಪ್ರಚಾರಕ ರಾಜೇಶ್ ಜಿ.ವಿ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ದಕ್ಷಿಣ ಹಾಗೂ ಕರ್ನಾಟಕ ಉತ್ತರ ಪ್ರಾಂತದ ಪ್ರಚಾರಕರ ವಿಭಾಗದ ಬೈಠಕ್ನಲ್ಲಿ ರಾಜೇಶ್ ಅವರ ನೇಮಕಾತಿಯನ್ನು ಅಂತಿಮಗೊಳಿಸಲಾಗಿದೆ.
ಇವರು 2010ರಿಂದ ಆರ್ಎಸ್ಎಸ್ ನ ಪೂರ್ಣಾವಧಿ ಪ್ರಚಾರಕರಾಗಿ ನಂತರ ಹಾಲಿ ತುಮಕೂರು ವಿಭಾಗದ ಪ್ರಚಾರಕರಾಗಿ ಜವಾಬ್ದಾರಿ ವಹಿಸಿಕೊಂಡಿದ್ದರು.
ಹಾಲಿ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿರುವ ಅರುಣ್ ಕುಮಾರ್ ಅವರನ್ನು ಬಿಜೆಪಿ ಜವಾಬ್ದಾರಿಯಿಂದ ಬಿಡುಗಡೆ ಮಾಡಲಾಗಿದೆ.
DAKSHINA KANNADA
ಬಂಟ್ವಾಳ : ಬಿಹಾರ ಮೂಲದ ಕಾರ್ಮಿಕ ಆತ್ಮಹತ್ಯೆ
ಬಂಟ್ವಾಳ: ವೈಯಕ್ತಿಕ ಕಾರಣದಿಂದ ಮನನೊಂದು ಬಿಹಾರ ಮೂಲದ ವ್ಯಕ್ತಿಯೋರ್ವ ಬಂಟ್ವಾಳದ ಟಯರ್ ಅಂಗಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬಿಹಾರ ರಾಜ್ಯದ ಮೋತಿಹಾರಿ ನಿವಾಸಿ ಸಂದೀಪ್ ಕುಮಾರ್ ( 20 ) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ ಮೂರ ವರ್ಷಗಳಿಂದ ತನ್ನ ಮಾವ ಕೆಲಸ ಮಾಡುತ್ತಿದ್ದ ಟಯರ್ ರಿಸೋಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು.
ಇದನ್ನೂ ಓದಿ: ಪ್ರೀತಿಸಿದ ಯುವಕನ ಜೊತೆಗೆ ಮದುವೆಗೆ ನಿರಾಕರಣೆ.. ಕುಟುಂಬದ 13 ಜನರನ್ನು ವಿಷ ಹಾಕಿ ಕೊಂ*ದ ಯುವತಿ
ಅಂಗಡಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ಕುರಿತು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಗುರುಪುರ ನದಿಗೆ ಹಾರಿದ್ದ ವ್ಯಕ್ತಿ; ಶವವಾಗಿ ಪತ್ತೆ
ಮಂಗಳೂರು: ಬಡಗ ಎಡಪದವು ಚಟ್ಟೆ ಪಾದೆ ನಿವಾಸಿ ರಮೇಶ್ ಕುಲಾಲ್ (48) ಶನಿವಾರ (ಅ.5) ಗುರುಪುರದ ಫಲ್ಗುಣಿ ನದಿಗೆ ಹಾರಿದ್ದು, ನಿನ್ನೆ (ಅ.7) ಶವ ಪತ್ತೆಯಾಗಿದೆ.
ಶನಿವಾರ ಸಂಜೆ ರಮೇಶ್ ಮನೆಯಿಂದ ನಾಪತ್ತೆಯಾಗಿದ್ದು, ಸಹೋದರ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ರವಿವಾರ ಅವರ ಮೊಬೈಲ್ ಹಾಗೂ ಪಾದರಕ್ಷೆ ಗುರುಪುರ ಸೇತುವೆ ಮೇಲೆ ಪತ್ತೆಯಾಗಿದ್ದ ಕಾರಣ ನದಿಗೆ ಹಾರಿ ಆತ್ಮಹತ್ಯೆ ಮಾಡಿರುವುದಾಗಿ ಶಂಕಿಸಲಾಗಿತ್ತು.
ಎಸ್ಡಿಆರ್ಡಫ್ ಮತ್ತು ಬಜಪೆ ಪೊಲೀಸರು ನದಿಯ ನೀರಿನಲ್ಲಿ ಶೋಧ ನಡೆಸುತ್ತಿದ್ದರು. ಮಂಗಳೂರಿನ ಇನ್ಲ್ಯಾಂಡ್ ಕಂಪನಿಯಲ್ಲಿ ಜೆಸಿಬಿ ಆಪರೇಟರ್ ಆಗಿದ್ದ ರಮೇಶ್ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಬಡಮಿಜಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ 169ರ ವಿಸ್ತರಣೆ ಕಾಮಗಾರಿಗಾಗಿ ಭೂ ಸ್ವಾಧೀನ ಪ್ರಕ್ರಿಯೆಯ ಅನ್ವಯ ಲಭಿಸಿದ ಪರಿಹಾರ ಹನದ ವಿಷಯದಲ್ಲಿ ತಾಯಿ ಮತ್ತು ಸಹೋದರರೊಳಗೆ ಉಂಟಾದ ವಿಆದದಿಂದಾಗಿ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
DAKSHINA KANNADA
ಅಕ್ರಮ ಹಾಲುಮಡ್ಡಿ ಸಾಗಾಟ: ನಾಲ್ವರು ಆರೋಪಿಗಳ ಬಂಧನ
ಪುತ್ತೂರು : ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ಸಾಗಿಸುತ್ತಿದ್ದ ಪ್ರಕರಣವನ್ನು ಪುತ್ತೂರು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ 11 ಕೆ.ಜಿ. ಹಾಲುಮಡ್ಡಿ, ಮೇಣ ತೆಗೆಯಲು ಬಳಸಿದ ಸಲಕರಣೆ ಹಾಗೂ ಆಟೋ ರಿಕ್ಷಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಟ್ಲ ಸಮೀಪದ ಕೆದಿಲ ನಿವಾಸಿಗಳಾದ ಅಲಿ ಹೈದರ್, ಉಮ್ಮರ್ ಫಾರೂಕ್, ಮಹಮ್ಮದ್ ಹಸೈನಾರ್ ಮತ್ತು ಉಮ್ಮರ್ ಫಾರೂಕ್ ಬಂಧಿತ ಆರೋಪಿಗಳು.
ಇದನ್ನೂ ಓದಿ : ಶ್ರೀ ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದ ಶ್ರೀಮುರಳಿ
ವಿಟ್ಲ ಬಳಿಯ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಆರೋಪಿಗಳು ಹಾಲು ಮಡ್ಡಿ ಸಂಗ್ರಹಿಸಿ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ಈ ದಾಳಿ ಕಾರ್ಯಾಚರಣೆ ನಡೆಸಿದರು. ವಲಯ ಅರಣ್ಯಾಧಿಕಾರಿ ಕಿರಣ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪ ವಲಯಾರಣ್ಯಾಧಿಕಾರಿ ವೀರಣ್ಣ, ಪ್ರಕಾಶ್ ಬಿ.ಟಿ., ಗಿರೀಶ್ ಎಚ್.ಪಿ., ಗಸ್ತು ಅರಣ್ಯಪಾಲಕ ಸತೀಶ್ ಡಿ’ಸೋಜಾ, ಚಾಲಕರಾದ ರಾಜೇಶ್, ತೇಜ ಪ್ರಕಾಶ್ ಮತ್ತು ಸಿಬಂದಿ ಭಾಗವಹಿಸಿದ್ದರು.