Connect with us

bangalore

ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?

Published

on

ಸೂಪರ್ ಹಿಟ್ ಕಿರಿಕ್ ಪಾರ್ಟಿ ಸಿನಿಮಾದ ಬೆಳಗ್ಗೆದ್ದು ಯಾರ ಮುಖವ ನಾನು ನೋಡಿದೆ ಹಾಡಿನಲ್ಲಿ ರಕ್ಷಿತ್  ವೈಟ್ ಟೀ-ಶರ್ಟ್ ಮೇಲೆ ಬ್ಲೂ ಬಣ್ಣದ ಶರ್ಟ್ ಧರಿಸಿದ್ದರು. ಈ ಲುಕ್ ಇದೀಗ ರಿಪೀಟ್ ಆಗಿದ್ದು ಹುಡುಗಿ ಮಾತ್ರ ಚೇಂಜ್ ಆಗಿದ್ದಾರೆ. 

 

ಬೆಂಗಳೂರು : ಸದ್ಯ ರಕ್ಷಿತ್ ಶೆಟ್ಟಿ ಸುದ್ದಿಯಲ್ಲಿದ್ದಾರೆ. ಅವರ ಸಿನೆಮಾ ಸಪ್ತ ಸಾಗರಾದಾಚೆ ಅಂತೂ ಹೆವ್ವಿ ಸೌಂಡ್ ಮಾಡ್ತಿದ್ದು, ನೆರೆಯ ಭಾಷೆಗಳಿಗೂ ರಿಮೇಕ್ ಆಗಿ ಜನರ ಮನಸ್ಸು ಗೆದ್ದಿದೆ.


ಈ ನಡುವೆ ರಕ್ಷಿತ್ ಶೆಟ್ಟಿ ಮತ್ತೆ ಲವ್ವಲ್ಲಿ ಬಿದ್ರಾ ಅನ್ನೋ ಗುಮಾನಿ ಕೂಡ ಗಾಂಧೀನಗರದ ಗಲ್ಲಿ ಗಲ್ಲಿಗಳಲ್ಲಿ ಚರ್ಚೆಯಾಗುತ್ತಿದೆ.

ರಕ್ಷಿತ್ ಶೆಟ್ಟಿ ಏನೇ ಮಾಡಿದ್ರೂ ಅದು ಸುದ್ದಿಯಾಗುತ್ತೆ. ಹುಡುಗೀನ ನೋಡಿ ನಕ್ಕಿದ್ರೂ ಅದು ಬಿಗ್ ಹೆಡ್ ಲೈನ್ ಆಗಿ ಬಿಡುತ್ತೆ.

ಇದೀಗ ನೆಟ್ಟಿಗರು ಎಷ್ಟು ಸ್ಮಾರ್ಟ್ ಆಗಿದ್ದಾರೆ  ಅಂದ್ರೆ 4-5 ವರ್ಷಗಳ ಹಿಂದಿನ ರಕ್ಷಿತ್ ಶೆಟ್ಟಿ ಫೋಟೋ ಹುಡುಕಿ ಈಗ ಸ್ವೀಟ್ ಮೀಮ್ಸ್ ಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹರಿ ಬಿಡುತ್ತಿದ್ದಾರೆ.

ಹೌದು! ಸೂಪರ್ ಹಿಟ್ ಕಿರಿಕ್ ಪಾರ್ಟಿ ಸಿನಿಮಾದ ಬೆಳಗ್ಗೆದ್ದು ಯಾರ ಮುಖವ ನಾನು ನೋಡಿದೆ ಹಾಡಿನಲ್ಲಿ ರಕ್ಷಿತ್  ವೈಟ್ ಟೀ-ಶರ್ಟ್ ಮೇಲೆ ಬ್ಲೂ ಬಣ್ಣದ ಶರ್ಟ್ ಧರಿಸಿದ್ದರು.

ಈ ಲುಕ್ ಇದೀಗ ರಿಪೀಟ್ ಆಗಿದ್ದು ಹುಡುಗಿ ಮಾತ್ರ ಚೇಂಜ್ ಆಗಿದ್ದಾರೆ.

ಅಂದು ಪಕ್ಕದಲ್ಲಿ ರಶ್ಮಿಕ ಮಂದಣ್ಣ ಇದ್ರೆ ಇಂದು ರುಕ್ಮಿಣಿ ವಸಂತ್ ಕಾಣಿಸಿಕೊಂಡಿದ್ದಾರೆ.

ರೊಮ್ಯಾಂಟಿಕ್ ಆಕ್ಷನ್ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ರಕ್ಷಿತ್ ಮತ್ತು ರಕ್ಮಿಣಿ ವಸಂತ್ ನಟಿಸಿದ್ದು , ಸಿನಿಮಾ ಹಿಟ್ ಆದ ಬೆನ್ನಲ್ಲೆ ಸಾಕಷ್ಟು ಪ್ರೆಸ್‌ಮೀಟ್ ಮತ್ತು ಸಕ್ಸಸ್ ಮೀಟ್ ಗಳಲ್ಲಿ ಈ ಜೋಡಿ ಕಾಣಿಸಿಕೊಳ್ಳೋದು ಮಾಮೂಲು.

ಆದ್ರೆ ಕಿರಿಕ್ ಪಾರ್ಟಿ ಟೈಮಲ್ಲಿ ಹಾಕಿದ ಬಟ್ಟೆಯನ್ನೇ ಇದೀಗ ಮತ್ತೆ ಶೆಟ್ರು ರಿಪೀಟ್ ಮಾಡಿರೋದನ್ನ ನೋಡಿ ಶೆಟ್ರು ಸೋ ಸಿಂಪಲ್ ಅಂತಿದ್ದಾರೆ.

ಒಟ್ನಲ್ಲಿ ಇದನ್ನು ನೋಡಿದ ನೆಟ್ಟಿಗರು ಹುಡುಗಿ ಚೇಂಜ್ ಆದ್ರೂ  ಡ್ರೆಸ್ ಇನ್ನೂ ಚೇಂಜ್ ಆಗಿಲ್ಲ ಅಲ್ವಾ ಎಂದು ಟ್ರೋಲ್ ಮಾಡುತ್ತಿದ್ದಾರೆ. ಆದ್ರೆ ಅಂದು ರಕ್ಷಿತ್ ಶೆಟ್ಟಿ ಹಾಕಿದ ಶರ್ಟಿಗೂ ಈಗ ವೈರಲ್ ಆಗುತ್ತಿರುವ ಶರ್ಟಿಗೂ ವ್ಯತ್ಯಾಸ ಇರೋದಂತೂ ಅಕ್ಷರಶಃ ಸತ್ಯ.

 

bangalore

Bigboss: ನಾಯಿ ಮರಿಯಾದ ಬಿಗ್ ಬಾಸ್ ಸಂಗೀತಾ

Published

on

Bigboss: ಬಿಗ್ ಬಾಸ್ ನಲ್ಲಿ ಸಂಗೀತಾ ಅವರು ಕೆಲವೊಂದು ಟಾಸ್ಕ್ ನಲ್ಲಿ ತೆಗೆದುಕೊಂಡ ನಿರ್ಧಾರ ಫ್ಯಾನ್ಸ್ ಗಳಿಗೆ ಹಿಡಿಸಲಿಲ್ಲ. ಅಲ್ಲಿಂದ ಅವರ ಫ್ಯಾನ್ ಫಾಲೊವರ್ಸ್ ನ ಸಂಖ್ಯೆ ಸುಮಾರು 11 ಸಾವಿರಕ್ಕೂ ಅಧಿಕ ಇಳಿಕೆಯಾಗಿದೆ.

ಕಾರ್ತಿಕ್ ನ ಗುಂಪಿನಲ್ಲಿದ್ದ ಸಂಗೀತಾ ಬಳಿಕ ವಿನಯ್ ತಂಡಕ್ಕೆ ಸೇರಿದ್ದಳೂ. ಇದೀಗ ವಾಪಸು ಕಾರ್ತಿಕ್ ಗುಂಪಿಗೆ ಸೇರಿಕೊಂಡಿದ್ದಾಳೆ.
ಆದರೂ ಕೂಡ ಸಂಗೀತನ ಫ್ಯಾನ್ಸ್ ಗಳಿಗೆ ಈಗ ಸಂಗೀತನ ನಡೆತೆಗಳು ಇಷ್ಟ ಆಗುತ್ತಿಲ್ಲ.

ಇದೀಗ ಬಿಗ್ ಬಾಸ್ ನಲ್ಲಿ ನೀಡಿರುವ ಟಾಸ್ಕ್ ನಲ್ಲಿ ಎಲ್ಲ ಸ್ಪರ್ಧಿಗಳಿ ಒಂದೊಂದು ಟಾಸ್ಕ್ ಕೊಟ್ಟಿದ್ದಾರೆ. ಅದರಲ್ಲಿ ಸಂಗೀತಾಗೆ ಅಳುವ ನಾಯಿಮರಿಯಂತಹ ಟಾಸ್ಕ್ ಸಿಕ್ಕಿದ್ದು, ನಾಯಿಯಂತೆ ಅದರ ಧ್ವನಿಯಂತೆ ಅನುಕರಣೆ ಮಾಡಿದ್ದಾರೆ.

ಇದಕ್ಕೆ ತುಕಾಲಿ ಸಂತೋಷ್ ಸಾಥ್ ನೀಡಿದ್ದಾರೆ. ಅಲ್ಲದೇ ಬಿಗ್ಗ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್​ ಮತ್ತು ವರ್ತೂರ್​ ಸಂತೋಷ್​​ಗೆ ಬಿಗ್​ ಬಾಸ್​​ ಸಂಗೀತಾ ಮತ್ತು ಕಾರ್ತಿಕ್​ ಅವರನ್ನು ಅನುಕರಿಸುವ ಟಾಸ್ಕ್​ ನೀಡಿದ್ದರು. ಅದರಂತೆ ಇಬ್ಬರೂ ಕೂಡ ಆ ಪಾತ್ರವನ್ನು ಭಿನ್ನವಾಗಿ ಮಾಡಿ ಎಲ್ಲ ಸ್ಪರ್ಧಿಗಳನ್ನು ನಕ್ಕು ನಗಿಸಿದ್ದಾರೆ. ಅಲ್ಲದೆ ಸಂಗೀತಾ ಶೃಂಗೇರಿಗೆ ಕರೆಕ್ಟ್ ಆಗಿ ಟಾಂಗ್ ಕೊಟ್ಟಿದ್ದಾರೆ.

 

Continue Reading

bangalore

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ -ಚೈತ್ರಾ ಸಹಿತ ಇಬ್ಬರಿಗೆ ಜಾಮೀನು

Published

on

ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹೋಟೆಲ್ ಉದ್ಯಮಿ ಗೋವಿಂದಬಾಬು ಪೂಜಾರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಬಂಧನಕ್ಕೀಡಾಗಿದ್ದ ಹಿಂದೂ ಕಾರ್ಯಕರ್ತೆ ಚೈತ್ರಾ ಸೇರಿ ಇಬ್ಬರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಪ್ರಮುಖ ಆರೋಪಿಯಾಗಿ ಚೈತ್ರಾ ಅವರನ್ನು ಬಂಧಿಸಲಾಗಿತ್ತು. ಟಿಕೆಟ್‌ಗಾಗಿ ಬರೋಬ್ಬರಿ 5 ಕೋಟಿ ರೂ. ಪಡೆದಿದ್ದರು ಎಂದು ಗೋವಿಂದಬಾಬು ಪೂಜಾರಿ ದೂರು ನೀಡಿದ್ದರು. ಈ ಬಗ್ಗೆ ಸಿಸಿಬಿ ಪೊಲೀಸರು ದೂರು ದಾಖಲಿಸಿಕೊಂಡು ಕಳೆದ ಎರಡು ತಿಂಗಳ ಹಿಂದೆ ವಶಕ್ಕೆ ಪಡೆದಿದ್ದರು. ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಹಾಗೂ 7ನೇ ಆರೋಪಿ ಶ್ರೀಕಾಂತ್‌ಗೆ 3ನೇ ಎಸಿಎಂಎಂ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಇಂದು ಅವರು ಪರಪ್ಪನ ಅಗ್ರಹಾರ ಕಾರಾಗೃಹದಿಂದ ಬಿಡುಗಡೆಯಾಗಲಿದ್ದಾರೆ. ವಂಚನೆ ಸಂಬಂಧ ಉದ್ಯಮಿ ಗೋವಿಂದಬಾಬು ಪೂಜಾರಿ ಸೆ.8ರಂದು ಬಂಡೇಪಾಳ್ಯ ಠಾಣೆಯಲ್ಲಿ ಚೈತ್ರಾ ಮತ್ತು ಇತರೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಆಗಿತ್ತು. ಬಳಿಕ ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಚೈತ್ರಾ, ಗಗನ್ ಕಡೂರು, ಹೊಸಪೇಟೆಯ ಸ್ವಾಮೀಜಿ ಹಾಲಶ್ರೀ ಸ್ವಾಮೀಜಿ, ಚನ್ನನಾಯ್ಕ, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಸೇರಿ 9 ಮಂದಿಯನ್ನು ಬಂಧಿಸಲಾಗಿತ್ತು.

Continue Reading

bangalore

ಆಸ್ಟ್ರೇಲಿಯಾ ಬೀಚ್ ನಲ್ಲಿ ಮಂಗ್ಳೂರು ಬೆಡಗಿ ಅನುಶ್ರೀ…

Published

on

Film: ಕನ್ನಡ ರಿಯಾಲಿಟಿ ಶೋನಲ್ಲಿ ಹೆಸರುವಾಸಿಯಾಗಿರುವ ಮಂಗ್ಳೂರು ಬೆಡಗಿ ಆಂಕರ್ ಅನುಶ್ರಿ ಇದೀಗ ಆಸ್ಟ್ರೇಲಿಯಾದತ್ತ ಟ್ರಿಪ್ ಹೋಗಿರುವ ಪೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕರಾವಳಿ ಬೆಡಗಿ ಆಗಿರುವ ಅನುಶ್ರೀ ಕನ್ನಡ ಕಿರುತೆರೆಯಲ್ಲಿ ಉತ್ತಮ ಆಂಕರ್ ಆಗಿ ಅವರ್ಡ್ ಪಡೆದುಕೊಂಡ ಅನುಶ್ರೀಯ ಮಾತು ಕೇಳೊಕೆ ಎಲ್ಲರಿಗೆ ಅಚ್ಚು ಮೆಚ್ಚು. ಬಾಯಿ ತೆರೆದರೆ ಪಟಪಟನೇ ಮಾತನಾಡುವ ಆಂಕರ್ ಇದೀಗ ಆಸ್ಟ್ರೇಲಿಯಾದತ್ತ ಕಾಲಿಟ್ಟಿದ್ದಾರೆ.


ಪ್ರತಿದಿನ ಆಂಕರ್ ಮಾಡೋದು ಅಲ್ಲ ಸೊಲ್ಪ ಹೊರಗಿನ ಪ್ರಪಂಚಕ್ಕೆ ಕಾಲಿಡಬೇಕು. ಪ್ರಕೃತಿ ಸೌಂದರ್ಯವನ್ನು ಎಂಜಾಯ್ ಮಾಡಬೇಕು. ಅದೇ ರೀತಿ ಆಸ್ಟ್ರೇಲಿಯಾಕ್ಕೆ ತೆರಳಿದ ಅನುಶ್ರೀ ಆಸ್ಟ್ರೇಲಿಯಾ ಬೀಚ್ ನಲ್ಲಿ ಅಪ್ಪು ಎಂದು ಬರೆದುಕೊಂಡಿದ್ದಾರೆ.

 

ಅಲ್ಲಿರುವ ಆಸ್ಟ್ರೇಲಿಯಾ ಸ್ಕೈ ಪಾಯಿಂಟ್, ಬೀಚ್‌ಗಳು ಹಾಗೂ ಪ್ರಾಣಿ ಸಂಗ್ರಹಾಲಯಕ್ಕೆ ಹಾಗೂ ಹಲವು ಕಡೆ ಭೆಟಿ ನೀಡಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ ಮಾಡಿದ್ದಾರೆ.


ಜೀ ಕುಟುಂಬ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ಅತಿ ಸುಂದರವಾಗಿ ನಿರೂಪಣೆ ಮಾಡಿ, ಬೆಸ್ಟ್​ ಆ್ಯಂಕರ್​ ಪ್ರಶಸ್ತಿಯನ್ನೂ ಪಡೆದ ನಟಿ ಆ್ಯಂಕರ್​ ಅನುಶ್ರೀ ಈಗ ಆಸ್ಟ್ರೇಲಿಯಾಕ್ಕೆ ಹಾರಿದ್ದಾರೆ.


ಬ್ರಿಸ್ಬೇನ್‌ನ ಉತ್ತರದ ಸನ್‌ಶೈನ್ ಕೋಸ್ಟ್ ತೀರದತ್ತ ಸಂಚಾರ ನಡೆಸಿದ ಅವರು ಸ್ಯಾಂಡಲ್ ವುಡ್ ನ ನಟ ನಗು ಮೊಗದ ಅಪ್ಪು ಪುನೀತ್ ರಾಜ್‌ಕುಮಾರ್ ಅವರನ್ನು ನೆನಪು ಮಾಡಿಕೊಂಡಿದ್ದಾರೆ.

Continue Reading

LATEST NEWS

Trending