FILM
ಓಟಿಟಿಯಿಂದ ದಿಢೀರ್ ಮಾಯವಾಯ್ತು ರಕ್ಷಿತ್ ಶೆಟ್ಟಿ ಸಿನಿಮಾ!…ಯಾಕೆ?
ಹೇಮಂತ್ ರಾವ್ ನಿರ್ದೇಶನದ, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಸೂಪರ್ ಹಿಟ್ ಚಲನಚಿತ್ರ ‘ಸಪ್ತಸಾಗರದಾಚೆ ಎಲ್ಲೋ’ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಥಿಯೇಟರ್ ನಲ್ಲಿ ಸುದೀರ್ಘ ಅವಧಿಯತ್ತ ಸಾಗಿದ ಮನು-ಪ್ರಿಯಾ ಪ್ರೇಮ್ ಕಹಾನಿ ‘ಸಪ್ತಸಾಗರದಾಚೆ ಎಲ್ಲೋ’ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿತ್ತು.
ಈ ಚಿತ್ರದಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದರು. 2ನೇ ಭಾಗಕ್ಕೆ ಚೈತ್ರಾ ಆಚಾರ್ ಜೊತೆಯಾಗಿದ್ದರು. ಚಿತ್ರತಂಡದ ಪ್ರಯತ್ನಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಸೆಪ್ಟೆಂಬರ್ 1 ರಂದು ಸರಣಿಯ ಮೊದಲ ಸಿನಿಮಾ ತೆರೆಗೆ ಬಂದಿತ್ತು. ಸಪ್ತ ಸಾಗರದಾಚೆ ಎಲ್ಲೋ ಸೈಟ್ – ಎ ಸೂಪರ್ ಹಿಟ್ ಆಗಿ ಪ್ರೇಕ್ಷಕರ ಮನಗೆದ್ದಿತ್ತಾದರು, ಸೈಡ್ -ಬಿ ಗೆ ಮಿಶ್ರ ಫಲಿತಾಂಶ ವ್ಯಕ್ತವಾಗಿತ್ತು. ಕೆಲವರಿಗೆ ಸಿನಿಮಾ ಬಹಳ ಇಷ್ಟವಾಗಿದ್ದರೆ ಮತ್ತೆ ಕೆಲವರಿಗೆ ಬೋರ್ ಎನಿಸಿತ್ತು. ಇದು ಓಟಿಟಿಗೆ ಸೂಕ್ತ ಸಿನಿಮಾ ಎಂದು ಕೆಲವರು ಹೇಳಿಬಿಟ್ಟಿದ್ದರು.
ಒಂದು ದಿನ ಮೊದಲೇ ಪೇಯ್ಡ್ ಪ್ರೀಮಿಯರ್ ಶೋಗಳ ಮೂಲಕ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಗೆದ್ದಿತ್ತು. ಮೊದಲ ಭಾಗ ನೋಡಿದ ಕೆಲವರು ಎರಡನೇ ಭಾಗಕ್ಕೆ ಬಹಳ ಕಾತರದಿಂದ ಕಾದು ಕೂತಿದ್ದರು. ಮೊದಲ ಭಾಗಕ್ಕೆ ಹೋಲಿಸಿದರೆ ಎರಡನೇ ಭಾಗ ಥಿಯೇಟರ್ಗಳಲ್ಲಿ ಅಷ್ಟಾಗಿ ಸದ್ದು ಮಾಡಲಿಲ್ಲ.
‘ಸಪ್ತಸಾಗರದಾಚೆ ಎಲ್ಲೋ’ ಸೈಡ್-A ಹಿಟ್ ಆಗಿದ್ದು ಸುಳ್ಳಲ್ಲ. ಕನ್ನಡದಲ್ಲಿ ತೆರೆಕಂಡು ಗೆದ್ದ ಚಿತ್ರವನ್ನು ತೆಲುಗಿಗೂ ಡಬ್ ಮಾಡಿ ರಕ್ಷಿತ್ ಶೆಟ್ಟಿ ಬಿಡುಗಡೆ ಮಾಡಿದ್ದರು. ತಕ್ಕಮಟ್ಟಿಗೆ ಅಲ್ಲೂ ಒಳ್ಳೆ ರೆಸ್ಪಾನ್ಸ್ ಸಿಕ್ಕಿದ್ದು ಅಮೇಜಾನ್ ಪ್ರೈಮ್ ನಲ್ಲಿ ಸ್ಟ್ರೀಮಿಂಗ್ ಮಾಡಲಾಗಿತ್ತು. ಬಳಿಕ ನವೆಂಬರ್ 17ಕ್ಕೆ ಸೈಡ್- B ತೆರೆಕಂಡಿದ್ದು, ಜನವರಿ 26ರಿಂದ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗುತ್ತಿತ್ತು.
ಆದರೆ, ಇದೀಗ ದಿಢೀರನೆ ಸಿನಿಮಾವನ್ನು ಒಟಿಟಿ ಫ್ಲಾಟ್ ಫಾರ್ಮ್ನಿಂದ ತೆಗೆಯಲಾಗಿದೆ. ಕಳೆದೆರಡು ದಿನಗಳಿಂದ ‘ಸಪ್ತಸಾಗರದಾಚೆ ಎಲ್ಲೋ’ ಸೈಡ್- B ಪ್ರೈಂ ವೀಡಿಯೋದಲ್ಲಿ ಸಿಗುತ್ತಿಲ್ಲ. ಇದಕ್ಕೆ ಕಾರಣ ಏನು ಎಂದು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಕೇಳುತ್ತಿದ್ದಾರೆ. ಇತ್ತೀಚೆಗೆ ಕನ್ನಡ ಸಿನಿಮಾಗಳನ್ನು ಕೊಂಡೊಕೊಳ್ಳಲು ಅಮೇಜಾನ್ ಪ್ರೈಂ ಹಿಂದೇಟು ಹಾಕುತ್ತಿದೆ. ಕೆಲ ಸಿನಿಮಾಗಳನ್ನು ಸಣ್ಣ ಅವಧಿಯವರೆಗೆ ಮಾತ್ರ ಸ್ಟ್ರೀಮಿಂಗ್ ಮಾಡಲು ಒಪ್ಪಂದ ಮಾಡಿಕೊಳ್ಳುತ್ತಿದೆ.
ಒಟಿಟಿಯಿಂದ ಹೊರಬರಲು ಕಾರಣವಾದ್ರು ಏನು?
‘ಸಪ್ತಸಾಗರದಾಚೆ ಎಲ್ಲೋ’ ಸೈಡ್- B ಚಿತ್ರವನ್ನು ಓಟಿಟಿಯಿಂದ ಯಾಕೆ ತೆಗೆದರು ಎನ್ನುವ ಬಗ್ಗೆ ಚಿತ್ರತಂಡ ಇದುವರೆಗೂ ಮಾಹಿತಿ ಹೊರಬಿದ್ದಿಲ್ಲ. ಕೆಲವರ ಪ್ರಕಾರ ಶೀಘ್ರದಲ್ಲೇ ಸಿನಿಮಾ ಜೀ5ನಲ್ಲಿ ಸ್ಟ್ರೀಮಿಂಗ್ ಆಗುತ್ತದೆ ಎನ್ನಲಾಗುತ್ತಿದೆ. ಸೈಡ್- B ರಿಲೀಸ್ ಮೊದಲಿಗೆ ಪ್ರೈಂ ವಿಡಿಯೋ ಹಿಂದೇಟು ಹಾಕಿತ್ತು. ಬಳಿಕ ಒಪ್ಪಿಕೊಂಡಿತ್ತು. ಇದೀಗ ಒಪ್ಪಂದ ಮುಗಿದಿದ್ದು ಸಿನಿಮಾವನ್ನು ತೆಗೆದಿದೆ ಎನ್ನುವ ಚರ್ಚೆ ಜೋರಾಗಿದೆ. ಮೊದಲಿಗೆ ಈ ಚಿತ್ರವನ್ನು ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣ ಮಾಡಬೇಕಿತ್ತು. ಹಾಗಾಗಿ ಪುಷ್ಕರ್, ಅಮೇಜಾನ್ ಪ್ರೈಂ ಜೊತೆ ಸಿನಿಮಾ ಡಿಜಿಟಲ್ ರೈಟ್ಸ್ ಒಪ್ಪಂದ ಮಾಡಿಕೊಂಡಿದ್ದರು. ಬಳಿಕ ಕೆಲ ಭಿನ್ನಾಭಿಪ್ರಾಯಗಳಿಂದ ಪುಷ್ಕರ್ ಹಾಗೂ ರಕ್ಷಿತ್ ದೂರಾಗಿದ್ದರು. ಹಾಗಾಗಿ ರಕ್ಷಿತ್ ತಾವೇ ಸಿನಿಮಾ ನಿರ್ಮಾಣದ ಹೊಣೆ ಹೊರುವಂತಾಯಿತು. ಆರಂಭದಲ್ಲಿ ಒಂದು ಸಿನಿಮಾ ಆಗಬೇಕಿದ್ದ ಕಥೆ ಬಳಿಕ 2 ಭಾಗವಾಯಿತು. ಹಾಗಾಗಿ ಎರಡನೇ ಭಾಗದ ಓಟಿಟಿ ಡೀಲ್ ರಕ್ಷಿತ್ ಶೆಟ್ಟಿ ಮಾಡಿಕೊಂಡಿದ್ದರು.
ಈ ಸಿನೆಮಾದಲ್ಲಿ ಬರುವ ಮನು- ಪ್ರಿಯಾ ಲವ್ಸ್ಟೋರಿಗೆ ಪರಭಾಷಿಕರು ಕೂಡ ಫಿದಾ ಆಗಿದ್ದು, ಅದೇ ಕಾರಣಕ್ಕೆ ಓಟಿಟಿಯಲ್ಲಿ ಸಿನಿಮಾ ಕಾಣೆಯಾಗುತ್ತಿದ್ದಂತೆ ಗೊಂದಲಕ್ಕೀಡಾಗಿದ್ದಾರೆ ಎನ್ನಲಾಗಿದೆ. ಸೈಡ್-B ಯ ಹಿಂದಿ ವರ್ಷನ್ ಅಂತೂ ಓಟಿಟಿಗೆ ಬಂದೇ ಇಲ್ಲ. ಹಾಗಾಗಿ ಯಾವಾಗ ಸಿನಿಮಾ ವೀಕ್ಷಣೆಗೆ ಸಿಗುವುದು ಎಂದು ಸೋಶಿಯಲ್ ಮೀಡಿಯಾದಲ್ಲಿ ಸಿನಿಪ್ರಿಯರು ಕೇಳುತ್ತಿದ್ದಾರೆ. ಈ ಕುರಿತು ಪರಂವಃ ಸಂಸ್ಥೆ ಪ್ರತಿಕ್ರಿಯೆ ನೀಡಬೇಕಾಗಿದೆ.
DAKSHINA KANNADA
“ಗಬ್ಬರ್ ಸಿಂಗ್” ಮೇ 3 ರಂದು ತೆರೆಗೆ ; ಇಂದು ವಿಡಿಯೋ ಸಾಂಗ್ ರಿಲೀಸ್..!
ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ‘ಗಬ್ಬರ್ ಸಿಂಗ್’ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಇದೀಗ ಈ ಸಿನೆಮಾದ ವಿಡಿಯೋ ಸಾಂಗ್ ರಿಲೀಸ್ ಆಗಿದ್ದು, ಜಸ್ಟ್ ರೋಲ್ ಫಿಲಂಸ್ನ ಯೂಟ್ಯೂಬ್ ಚಾನೆಲ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ಸೂಜಿ ಕಣ್ದ ಮೋನಾಲಿಸಾ ಎಂಬ ಉತ್ತಮ ಸಾಹಿತ್ಯವನ್ನು ಹೊಂದಿರುವ ಹಾಡನ್ನು ರಿಲೀಸ್ ಮಾಡಲಾಗಿದೆ. ಹಾಡಿಗೆ ಉಮೇಶ್ ಮಿಜಾರ್ ಸಾಹಿತ್ಯ ಬರೆದಿದ್ದರೆ, ಬೋಜರಾಜ ವಾಮಂಜೂರು, ವಿಸ್ಮಯ ವಿನಾಯಕ ಹಾಗೂ ಸ್ವತಹ ಉಮೇಶ್ ಮಿಜಾರ್ ಹಾಡುಗಳನ್ನು ಹಾಡಿದ್ದಾರೆ.
‘ಗಬ್ಬರ್ ಸಿಂಗ್’ ತುಳು ಸಿನಿಮಾ ವಿಭಿನ್ನ ಕತೆಯನ್ನೊಳಗೊಂಡಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಕತೆಯನ್ನು ಹೆಣೆಯಲಾಗಿದೆ. ಉತ್ತಮ ಕತೆ, ನವಿರಾದ ಹಾಸ್ಯದೊಂದಿಗೆ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಯಾದಾಗ ಮತ್ತೆ ಶಾಂತಿ ನೆಲೆಸುವಂತೆ ಮಾಡುವ ಖಡಕ್ ಅಧಿಕಾರಿ ಪಾತ್ರದಲ್ಲಿ ಶರಣ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ.
‘ಗಬ್ಬರ್ ಸಿಂಗ್’ ಸಿನಿಮಾ ಮೇ 3 ರಂದು ಕರಾವಳಿ ಜಿ,ಲ್ಲೆಯಾದ್ಯಂತ ತೆರೆ ಕಾಣಲಿದೆ. ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದ್ದು, ಈಗಾಗಲೇ ಮಸ್ಕತ್ ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಾಂಸಾರಿಕ ಕತೆಯ ಜೊತೆ ಇಲ್ಲಿ ಹಾಸ್ಯವೂ ಚೆನ್ನಾಗಿ ವಕ್೯ಹೌಟ್ ಆಗಿದೆ. ನವೀನ್ ಪಡೀಲ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ರವಿರಾಮ ಕುಂಜ ಇವರ ಹಾಸ್ಯ ಸಕ್ಕತ್ತಾಗಿದೆ. ಜೊತೆಗೆ ಗಿರೀಶ್ ಶೆಟ್ಟಿ ಕಟೀಲು, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್ ಮೊದಲಾದವರ ಪಾತ್ರಗಳೂ ಕೂಡಾ ಇಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ. ಸಿನಿಮಾ ಮೇ 3 ರಂದು ತೆರೆ ಕಾಣಲಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.
ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಕಲೆ: ವೆಂಕಟೇಶ್ ಬೆಂಗಳೂರು, ಸಂಗೀತ: ಡೊಲ್ಪಿನ್ ಕೊಳಲಗಿರಿ. ಹಿನ್ನಲೆ ಸಂಗೀತ: ಕಾರ್ತಿಕ್ ಮುಲ್ಕಿ, ಸಾಹಸ: ಅಲ್ಟಿಮೆಟ್ ಶಿವ್ ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್.
FILM
ಮತ್ತೆ ಬಾಯ್ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!
ಮಂಗಳೂರು : ಪ್ರೀತಿ ಎಂಬ ಎರಡಕ್ಷರವನ್ನ ಬಣ್ಣದ ಲೋಕದಲ್ಲಿರುವ ಅನೇಕರು ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಹೀಗಾಗಿಯೇ ದಿನಕ್ಕೊಂದು ಸಂಬಂಧ ಇಲ್ಲಿ ಬದಲಾಗುತ್ತೆ. ಲವ್ ಬೆನ್ನಲ್ಲಿಯೇ ಬ್ರೇಕ್ಪ್ ಆಗುತ್ತೆ. ಇದಕ್ಕೆ ಮತ್ತೊಂದು ಉದಾಹರಣೆ ಶ್ರುತಿ ಹಾಸನ್ ಮತ್ತು ಶಾಂತನು ಹಜಾರಿಕಾ.
ಹೌದು, ನಿಮಗೆ ಗೊತ್ತಿರಲಿ.. ಮೂರ್ನಾಲ್ಕು ವರ್ಷಗಳ ಹಿಂದೆ, ಕಮಲ ಹಾಸನ್ ಅವರ ಮುದ್ದಿನ ಮಗಳು ಶ್ರುತಿ ಹಾಸನ್, ಬ್ರಿಟಿಷ್ ನಟ ಮೈಕಲ್ ಕೋರ್ಸೆಲ್ ಜೊತೆ ಪ್ರೇಮದ ಖಾತೆ ತೆರೆದಿದ್ದರು. ಜೊತೆ ಜೊತೆಯಲ್ಲಿ ಇಬ್ಬರು ಅನೇಕ ಕಡೆ ಕಾಣಿಸಿಕೊಂಡಿದ್ದರು. ಆದರೆ ಆ ನಂತರ ಏನಾಯಿತೋ ಗೊತ್ತಿಲ್ಲ. ಸಂಬಂಧ ಮುರಿದು ಬಿತ್ತು.
ಎರಡನೇ ಬಾಯ್ಫ್ರೆಂಡ್:
ಮೈಕಲ್ ಕೋರ್ಸೆಲ್ ಅವರಿಂದ ದೂರವಾದ ನಂತರ ಶ್ರುತಿ ಹಾಸನ್ ಬದುಕಿನಲ್ಲಿ ಬಂದ ವ್ಯಕ್ತಿ ಶಾಂತನು ಹಜಾರಿಕಾ. ಶಾಂತನು ಜೊತೆ ಎರಡು ವರ್ಷ ಪ್ರೇಮದ ತಪಸ್ಸು ಮಾಡಿದ್ದ ಶ್ರುತಿ ಹಾಸನ್ ಅನೇಕ ಸಲ ತಮ್ಮ ಈ ಪ್ರೇಮ ಕಥೆಯನ್ನ ಹೆಮ್ಮೆಯಿಂದ ಹೇಳಿಕೊಂಡಿದ್ದರು. ತನ್ನ ಮೇಲೆ ಶಾಂತನುಗೆ ಇರುವ ಕಾಳಜಿ ಪ್ರೀತಿಯನ್ನೂ ಮೆಚ್ಚಿ ಮಾತನಾಡಿದ್ದರು. ಇನ್ನು ಎರಡು ವರ್ಷದ ಹಿಂದೆ ಅಂದರೆ 2022ರ ಸಮಯದಲ್ಲಿ ತಮ್ಮ ಮದುವೆ ಆಗಿದೆ ಎಂಬ ವಿಚಾರವನ್ನ ಕದ್ದು ಶಾಂತನು ಹೇಳಿದ್ದರು.
ಮದುವೆ ಆದ ನಂತರದಿಂದ ನಮ್ಮ ಸಂಬಂಧ ಇನ್ನು ಗಟ್ಟಿಯಾಗಿದೆ ಹಾಗೂ ಉತ್ತಮವಾಗಿದೆ. ಒಬ್ಬರಿಗೊಬ್ಬರು ಪರಸ್ಪರ ಅರ್ಥ ಮಾಡಿಕೊಂಡು ಜೀವನ ನಡೆಸಲು ನಮ್ಮ ಮದುವೆ ನಮಗೆ ದಾರಿ ಮಾಡಿಕೊಟ್ಟಿದೆ. ಮುಂದೆಯೂ ಹೀಗೆ ಸಂತೋಷದಿಂದ ದಿನಗಳನ್ನು ಕಳೆಯಲು ತೀರ್ಮಾನಿಸಿದ್ದೇವೆ ಎಂದಿದ್ದರು.
ಇದನ್ನೂ ಓದಿ “ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
ಆದರೆ ಈಗ ಶ್ರುತಿ ಹಾಸನ್ ಮತ್ತು ಶಾಂತನು ನಡುವೆ ಇದ್ದ ಪ್ರೇಮ ಸೇತುವೆ ಮುರಿದು ಬಿದ್ದಿದೆ ಅನ್ನುವ ಎಂಬ ಸುದ್ದಿ ಎಲ್ಲೆಡೆ ಕೇಳಿ ಬರುತ್ತಿದೆ. ಇದಕ್ಕೆ ಪೂರಕವಾಗಿ ಶ್ರುತಿ ಹಾಸನ್ ಸಾಮಾಜಿಕ ಜಾಲತಾಣದಲ್ಲಿ ಶಾಂತನು ಜೊತೆ ಫೋಟೋಗಳೆಲ್ಲ ಮಾಯವಾಗಿವೆ. ಶಾಂತನು ಅವರನ್ನ ಶ್ರುತಿ ಹಾಸನ್ ಅನ್ ಫ್ರೆಂಡ್ ಮಾಡಿದ್ದಾರೆ. ಒಟ್ಟಿನಲ್ಲಿ
ಸದ್ಯಕ್ಕೆ ಶ್ರುತಿ ಹಾಸನ್ ಮತ್ತು ಶಾಂತನು ನಡುವೆ ಮೊಳಕೆಯೊಡೆದಿದ್ದ ಪ್ರೀತಿ ಈಗ ಕಮರಿಹೋಗಿದೆ ಅನ್ನುವ ಮಾತು ಎಲ್ಲೆಡೆ ಕೇಳಿ ಬರುತ್ತಿದೆ. ಹರಿದಾಡುತ್ತಿರುವ ಈ ಸುದ್ದಿಯ ಬಗ್ಗೆ ಶ್ರುತಿ ಹಾಸನ್ ಸ್ಪಷ್ಟೀಕರಣ ಕೊಡ್ತಾರಾ ಅನ್ನುವುದನ್ನ ಕಾದು ನೋಡಬೇಕಿದೆ.
FILM
ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು, ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ.
ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 197 ಕ್ಕೆ ಆಗಮಿಸಿ ಮತ ಚಲಾಯಿಸಿದರು. ರಕ್ಷಿತ್ ಶೆಟ್ಟಿ ಮನೆಯ ಮುಂಭಾಗದಲ್ಲೇ ಇರುವ ಮತಗಟ್ಟೆಗೆ ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದರು. ರಕ್ಷಿತ್ ಶೆಟ್ಟಿ ಈ ಸಂದರ್ಭದಲ್ಲಿ ಸೆಲೆಬ್ರೆಟಿಯನ್ನು ಕಂಡ ಇತರ ಮತದಾರರು ಹರ್ಷಚಿತ್ತರಾಗಿ ಸೆಲ್ಫೆ ಕ್ಲಿಕಿಸಲು ಮುಂದಾದ ಘಟನೆ ನಡೆಯಿತು.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM6 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!