BELTHANGADY
ಬೆಳ್ತಂಗಡಿ: ಪ್ರವೀಣ್ ಹತ್ಯೆ ಆರೋಪಿಗಳ ಬಂಧನಕ್ಕೆ ರಕ್ಷಿತ್ ಶಿವರಾಂ ಆಗ್ರಹ
ಬೆಳ್ತಂಗಡಿ: ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರು ಕೊಲೆ ಮಾಡಿದ ಕೊಲೆಗಡುಕರನ್ನ ಕೂಡಲೇ ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸಬೇಕು ಎಂದು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರೂ ಆಗಿರುವ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಪ್ರವೀಣ್ ನೆಟ್ಟಾರು ಅವರು ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ಇದ್ದರು. ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಪ್ರವೀಣ್ ನೆಟ್ಟಾರು ಇವರ ಅಗಲುವಿಕೆಯು ತುಂಬಾ ವಿಷಾದನೀಯ.
ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ. ಅವರ ಕುಟುಂಬದವರಿಗೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೊಲೆಗಡುಕರನ್ನು ಕೂಡಲೇ ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸುತ್ತೇನೆ.
ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ. ಕಾನೂನುಬದ್ಧ ತನಿಖೆಯಾಗಿ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸುತ್ತೇನೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
BELTHANGADY
ರಸ್ತೆ ದಾಟುವ ವೇಳೆ ದ್ವಿಚಕ್ರ ವಾಹನ ಡಿ*ಕ್ಕಿ..!! ಪಾದಾಚಾರಿ ಮೃ*ತ್ಯು
ಬೆಳ್ತಂಗಡಿ: ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಮಾವ ಶೇಖರ್ ಬಂಗೇರ ಹೇರಾಜೆ(65 ವ) ಮೃ*ತಪಟ್ಟವರು.
ಗುರುವಾರ (ಮಾ.28) ರಾತ್ರಿ ಶೇಖರ್ ಬಂಗೇರ ರವರು ಹೋಟೆಲ್ ನಿಂದ ಪಾರ್ಸಲ್ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿ*ಕ್ಕಿ ಹೊಡೆದಿದೆ. ಪರಿಣಾಮ ಗಂಭೀ*ರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಬಂಟ್ವಾಳದಲ್ಲಿ ಅವರು ಸಾವನ್ನಪ್ಪಿದ್ದಾರೆ. ಸ್ಕೂಟರ್ ನಲ್ಲಿದ್ದ ಬೆಳ್ತಂಗಡಿಯ ಗೇರುಕಟ್ಟೆ ನಿವಾಸಿ ಅನುಷಾ(19ವ) ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಮೃತಪಟ್ಟ ಶೇಖರ್ ಬಂಗೇರ ಹೇರಾಜೆ ವಿಜಯ ಬ್ಯಾಂಕ್ ಮಾಜಿ ಉದ್ಯೋಗಿ, ಮುಗ್ಗ ಗುತ್ತು ಮನೆತನದ ಟ್ರಸ್ಟ್ ಕೋಶಾಧಿಕಾರಿ, ರಾಘವೇಂದ್ರ ಮಠದ ಕೋಶಾಧಿಕಾರಿ, ಗುರುನಾರಾಯಣ ಸಂಘದ ಮಾಜಿ ಉಪಾಧ್ಯಕ್ಷರಾಗಿದ್ದರು.
ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
BELTHANGADY
ದ್ವಿಚಕ್ರ ವಾಹನಕ್ಕೆ ಪಿಕ್ಅಪ್ ಡಿ*ಕ್ಕಿ ಹೊಡೆದು ಪರಾರಿ..! ಸವಾರ ಸ್ಪಾಟ್ ಡೆ*ತ್..!
ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿ*ಕ್ಕಿ ಹೊಡೆದು ದ್ವಿಚಕ್ರ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿಯ ವಾಣಿ ಕಾಲೇಜು ಬಳಿ ಮಾ.25ರಂದು ಮಧ್ಯಾಹ್ನ ನಡೆದಿದೆ.
ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ದ್ವಿಚಕ್ರವಾಹದಲ್ಲಿ ಬರುತ್ತಿದ್ದ ವೇಳೆ ಬೆಳ್ತಂಗಡಿಯಿಂದ ಹೋಗುತ್ತಿದ್ದ ಪಿಡ್ಅಪ್ ಡಿಕ್ಕಿ ಹೊಡೆದಿದೆ. ಘಟನೆಯಿಂದ ದ್ವಿಚಕ್ರ ವಾಹನ ಸವಾರ ಪುರುಷೋತ್ತಮ(19 ವ)ರವರು ಸ್ಥಳದಲ್ಲೇ ಮೃ*ತಪಟ್ಟಿದ್ದಾರೆ. ದ್ವಿಚಕ ವಾಹನದಲ್ಲಿದ್ದ ಇನ್ನೋರ್ವ ಸಹಸವಾರ ತೌಫಿಕ್(18 ವ) ಗಂಭೀರ ಗಾಯಗೊಂಡಿದ್ದು ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿಕ್ಕಿ ಹೊಡೆದ ಪಿಕ್ ಅಪ್ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದೆ. ಪಿಕ್ಅಪ್ ಡಿ*ಕ್ಕಿ ಹೊಡೆದ ರಭಸಕ್ಕೆ ಯುವಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಈ ವೇಳೆ ಲಾಯಿಲ ರಾಘವೇಂದ್ರ ನಗರದ ನಿವಾಸಿ ದಿ.ಜಯರಾಮ ಎಂಬವರ ಪುತ್ರ ಪುರುಷೋತ್ತಮ ಸ್ಥಳದಲ್ಲೇ ಅಸುನೀಗಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
BELTHANGADY
ಬೆಳ್ತಂಗಡಿ: ಬೊಳ್ಮಿನಾರು ಅರಣ್ಯ ಪರಿಸರದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ವ್ಯಕ್ತಿಯ ಶ*ವ ಪತ್ತೆ..!
ಬೆಳ್ತಂಗಡಿ: ಇಲ್ಲಿನ ಪುದುವೆಟ್ಟು ಗ್ರಾಮದ ಬೊಳ್ಮಿನಾರು, ಅರಣ್ಯ ಪರಿಸರದಲ್ಲಿ ಬುಧವಾರ(ಮಾ.20) ಅಸ್ತಿಪಂಜರ ಸ್ಥಿತಿಯಲ್ಲಿ ಓರ್ವ ವ್ಯಕ್ತಿಯ ಶ*ವ ಪತ್ತೆಯಾಗಿದೆ. ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಹಾಗೂ ಇತರ ಸ್ವತ್ತುಗಳ ಪ್ರಕಾರ ಮೃತ ವ್ಯಕ್ತಿಯನ್ನು ಕಳೆಂಜಗ್ರಾಮದ ಕಾಯರ್ತಡ್ಕದ ರಾಜು ಜೋಸೆಫ್ ಎಂದು ಗುರುತಿಸಲಾಗಿದೆ.
ಬುಧವಾರ ಮಧ್ಯಾಹ್ನದ ವೇಳೆ ಅರಣ್ಯ ಪ್ರದೇಶದಿಂದ ಸೊಪ್ಪು ತರಲು ತೆರಳಿದ್ದ ಸ್ಥಳೀಯರು ರಸ್ತೆಯಿಂದ ಸುಮಾರು 100 ಮೀಟರ್ ದೂರ ಪ್ರದೇಶದಲ್ಲಿ ಮಲಗಿರುವ ಸ್ಥಿತಿಯಲ್ಲಿದ್ದ ಶವವನ್ನು ಗುರುತಿಸಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳದಲ್ಲಿ ಮದ್ಯದ ಬಾಟಲ್ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಸಿಕ್ಕಿದ ದಾಖಲೆಗಳ ಪ್ರಕಾರ ರಾಜು ಅವರ ಮನೆಯವರನ್ನು ಸ್ಥಳಕ್ಕೆ ಕರೆಯಿಸಿದ್ದು ಅಲ್ಲಿದ್ದ ಬ್ಯಾಗ್ ಹಾಗೂ ಆಧಾರ್ ಕಾರ್ಡ್ ಆಧಾರದಲ್ಲಿ ಮೃತಪಟ್ಟ ವ್ಯಕ್ತಿ ರಾಜು ಎಂದು ಮನೆಯವರು ಸ್ಪಷ್ಟಪಡಿಸಿದ್ದಾರೆ.
ರಾಜು ಅವರು ಕೆಲವು ವರ್ಷಗಳ ಹಿಂದೆಯೇ ಮನೆ ಬಿಟ್ಟಿದ್ದರು ಎಂದು ಮನೆಯವರು ತಿಳಿಸಿದ್ದಾರೆ. ಪೊಲೀಸರು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ತಜ್ಞರ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಲಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
- LATEST NEWS7 days ago
ಅಬ್ ಕೀ ಬಾರ್ 500 ಪಾರ್… ! ಪ್ರಚಾರ ಕಣಕ್ಕಿಳಿದ ಗ್ರೇಟ್ ಕಲಿ..!
- DAKSHINA KANNADA7 days ago
ಮಂಗಳೂರಿಗೆ ಹೆಮ್ಮೆಯ ಗರಿ; ಎಜೆ ಗ್ರ್ಯಾಂಡ್ ಎಲೈಟ್ ಹೊಟೇಲ್ ಲೋಕಾರ್ಪಣೆ
- FILM4 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ವರ್ಯ ರೈ- ಅಭಿಷೇಕ್ ಬಚ್ಚನ್ ಫೋಟೋ!
- DAKSHINA KANNADA4 days ago
ಪಾರ್ಟ್ ಟೈಮ್ ಜಾಬ್ ಕೊಡಿಸುವುದಾಗಿ ನಂಬಿಸಿ ವಂಚನೆ; ಆರೋಪಿ ರಾಜಸ್ಥಾನದ ಸದ್ದಾಂ ಗೌರಿ ಬಂಧನ