Connect with us

FILM

ರಾಮ-ಸೀತೆಯಂತೆ ಕಾಣಿಸಿಕೊಂಡ ರಣ್​ಬೀರ್​, ಸಾಯಿ ಪಲ್ಲವಿ.. ರಾಮಾಯಣ ಸಿನಿಮಾ ಸೆಟ್ಟಿನ ಫೋಟೋ ಲೀಕ್​

Published

on

ರಾಮಾಯಣ ಬಾಲಿವುಡ್‌ನಲ್ಲಿ ತೆರೆ ಮೇಲೆ ಬರಲಿರುವ ಬಹುನೀರಿಕ್ಷಿತ ಸಿನಿಮಾ. ಆದರೀಗ ಈ ಸಿನಿಮಾದ ಕೆಲವು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿದೆ.

ನಿತೇಶ್ ತಿವಾರಿ ನಿರ್ದೇಶನದಲ್ಲಿ ರಾಮಾಯಣ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ ರಣ್‌ಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ ನಟಿಸುತ್ತಿರೋ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ರಣ್‌ಬೀರ್ ಮತ್ತು ಸಾಯಿ ಪಲ್ಲವಿ ಸಿನಿಮಾದಲ್ಲಿ ಭಗವಾನ್ ರಾಮ ಮತ್ತು ಸೀತಾ ದೇವಿ ಪಾತ್ರದಲ್ಲಿ ಕಾಣಿಸಿಕೊಂಡ ಫೋಟೋ ಲೀಕ್ ಆಗಿದೆ.

ಸದ್ಯ ಹರಿದಾಡುತ್ತಿರುವ ಮಾಹಿತಿ ಪ್ರಕಾರ, ಶನಿವಾರದಂದು ರಾಮಾಯಣ ಸೆಟ್‌ನಲ್ಲಿ ರಣ್‌ಬೀರ್ ಅಯೋಧ್ಯೆಯ ಶ್ರೀ ರಾಮ ಚಂದ್ರನಂತೆ ಕಾಣಿಸಿಕೊಂಡಿದ್ದಾರೆ. ಅತ್ತ ಸಾಯಿ ಪಲ್ಲವಿ ಕೂಡ ಸೀತೆಯಂತೆ ಕಂಗೊಳಿಸಿದ್ದಾರೆ. ಆದರೆ ಇದೇ ಸೆಟ್‌ನಲ್ಲಿ ಇವರಿಬ್ಬರ ಫೋಟೋ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ದಶರಥನ ವೇಷದಲ್ಲಿ ಅರುಣ್​ ಗೋಯಲ್

ಇದಲ್ಲದೆ ರಾಮಾಯಣ ಸಿನಿಮಾದಲ್ಲಿ ನಟಿಸುತ್ತಿರುವ ಅರುಣ್​ ಗೋಯಲ್​ ದಶರಥನ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ. ಲಾರಾ ದತ್ತಾ ಕೈಕೇಯಿ, ಬಾಬಿ ಡಿಯೋಲ್​, ವಿಜಯ್​ ಸೇತುಪತಿ, ಸನ್ನಿ ಡಿಯೋಲ್​ ಮೂವರು ಕುಂಭಕರಣ, ವಿಭೀಷಣ, ಹನುಮಂತನಾಗಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ರಣ್​ಬೀರ್​ ಸಸ್ಯಹಾರಿ

ಇನ್ನು ರಣ್​ಬೀರ್​ ರಾಮನ ಪಾತ್ರಕ್ಕಾಗಿ ಸಸ್ಯಹಾರವನ್ನು ಸೇವಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅನಿಮಲ್​ ಸಿನಿಮಾದ ಬಳಿಕ ರಣಬೀರ್​ ರಾಮಾಯಣ ಚಿತ್ರತಂಡ ಸೇರಿಕೊಂಡಿದ್ದಾರೆ. ಅಂದಹಾಗೆಯೇ ಅನಿಮಲ್​ನಲ್ಲಿ ನಟಿ ರಶ್ಮಿಕಾ ಮಂದಣ್ಣನವರು ರಣಬೀರ್​ ಅವರ ನಾಯಕಿಯಾಗಿ ಕಾಣಿಸಿಕೊಂಡಿದ್ದರು.

Click to comment

Leave a Reply

Your email address will not be published. Required fields are marked *

FILM

ಸಲ್ಮಾನ್ ಖಾನ್ ಜೊತೆ ನಟಿಸಲಿದ್ದಾರೆ ರಶ್ಮಿಕಾ ಮಂದಣ್ಣ; ಯಾವ ಸಿನಿಮಾ? ಇಲ್ಲಿದೆ ಡಿಟೇಲ್ಸ್

Published

on

ಮಂಗಳೂರು / ಮುಂಬೈ : ರಶ್ಮಿಕಾ ಮಂದಣ್ಣ ಯಾರಿಗೆ ತಾನೇ ಗೊತ್ತಿಲ್ಲ. ಸ್ಯಾಂಡಲ್ ವುಡ್ ನ ‘ಕಿರಿಕ್ ಪಾರ್ಟಿ’ ಮೂಲಕ ಜನಮನ ಗೆದ್ದು, ಸದ್ಯ ಪರಭಾಷೆ ಅಂಗಳಲ್ಲಿ ಮಿಂಚುತ್ತಿರುವ ನಟಿ. ತಮಿಳು, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ಬಾಲಿವುಡ್ ಸಿನಿಮಾ ‘ಅನಿಮಲ್’ ಇತ್ತೀಚೆಗೆ ತೆರೆಕಂಡು ಭಾರೀ ಯಶಸ್ಸನ್ನು ಬಾಚಿಕೊಂಡಿತ್ತು. ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಜೊತೆ ಅವರು ನಟಿಸಿದ್ದರು. ಇನ್ನು ರಶ್ಮಿಕಾ ಮಂದಣ್ಣ ಬಾಲಿವುಡ್ ಅಂಗಳದಲ್ಲಿ ಭದ್ರವಾಗಿ ನೆಲೆಯೂರಲಿದ್ದಾರೆ ಎಂದೇ ಭಾಸವಾಗಿತ್ತು. ಇದೀಗ ಮತ್ತೊಂದು ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ.

ಭಾಯ್ ಜಾನ್ ಜೊತೆ ರಶ್ಮಿಕಾ :


‘ಅನಿಮಲ್’ ಸಿನಿಮಾ ಭಾರೀ ಯಶಸ್ಸನ್ನು ಬಾಚಿಕೊಂಡಿತ್ತು. ಇದೀಗ ರಶ್ಮಿಕಾ ಮಂದಣ್ಣ ನಟ ಸಲ್ಮಾನ್ ಖಾನ್ ಜೊತೆ ನಟಿಸಲಿದ್ದಾರೆ. ಎ.ಆರ್. ಮುರುಗದಾಸ್ ನಿರ್ದೇಶನದ ಮುಂದಿನ ಬಹುನಿರೀಕ್ಷಿತ ‘ಸಿಕಂದರ್’ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಸಾಜಿದ್ ನಾಡಿಯಾಡ್ವಾಲಾ ನಿರ್ಮಾಣದ ಈ ಚಿತ್ರ ಮುಂದಿನ ಈದ್ ಹಬ್ಬಕ್ಕೆ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ.

2022 ರಲ್ಲಿ ಅಮಿತಾಬ್ ಬಚ್ಚನ್ ನಟನೆಯ ‘ಗುಡ್ ಬೈ’ ಸಿನಿಮಾ ಮೂಲಕ ರಶ್ಮಿಕಾ ಬಾಲಿವುಡ್ ಅಂಗಳಕ್ಕೆ ಲಗ್ಗೆ ಇಟ್ಟಿದ್ದರು. ಬಳಿಕ ಮಿಷನ್ ಮಜ್ನು ಸಿನಿಮಾದಲ್ಲಿ ನಟಿಸಿದ್ದರು. ಆದಾದ ಬಳಿಕ ಅನಿಮಲ್ ಸಿನಿಮಾ ಭಾರೀ ಯಶಸ್ಸು ತಂದು ಕೊಟ್ಟಿತ್ತು. ಸದ್ಯ ಅವರು ಅಲ್ಲು ಅರ್ಜುನ್ ಜೊತೆ ನಟಿಸಿದ ‘ಪುಷ್ಪ : ದಿ ರೂಲ್’ ಸಿನಿಮಾದಲ್ಲಿ ಬಿಝಿಯಾಗಿದ್ದಾರೆ. ಅಲ್ಲದೇ ತಮಿಳೀನಲ್ಲಿ ಧನುಷ್ ಜೊತೆಗೆ ಕುಬೇರ ಸಿನಿಮಾ ದಲ್ಲಿ ನಟಿಸುತ್ತಿದ್ದಾರೆ. ವಿಕ್ಕಿ ಕೌಶಲ್ ಜೊತೆ ‘ಚಾವ’ ಸಿನಿಮಾದಲ್ಲಿ ಅವರು ಬಿಝಿಯಾಗಿದ್ದಾರೆ.

ರಶ್ಮಿಕಾ ಟ್ವೀಟ್ :

ಸಲ್ಮಾನ್ ಖಾನ್ ಜೊತೆಗೆ ಇದೇ ಮೊದಲ ಬಾರಿಗೆ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಎ.ಆರ್.ಮುರುಗದಾಸ್ ನಿರ್ದೇಶನದ ‘ಸಿಕಂದರ್’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಪಾತ್ರವಾಗುತ್ತಿರುವ ಬಗ್ಗೆ ನಡಿಯಾಲ್ವಾಲ ಗ್ರಾಂಡ್ ಸನ್ ಖಾತೆಯ ಮೂಲಕ ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ : ಪ್ರಜ್ವಲ್ ಪ್ರಕರಣದ ನಡುವೆ ಖಾಸಗಿ ವೀಡಿಯೋ ವೈರಲ್; ಜ್ಯೋತಿ ರೈ ಹೇಳಿದ್ದೇನು?

ರಶ್ಮಿಕಾ ಮಂದಣ್ಣ ಕೂಡ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ನನ್ನ ಮುಂದಿನ ಸಿನಿಮಾದ ಬಗ್ಗೆ ಕೇಳುತ್ತಿದ್ದವರಿಗೆ ಇಲ್ಲಿದೆ ಮಾಹಿತಿ. ಸರ್ಪ್ರೈಸ್…ಸಿಕಂದರ್ ಸಿನಿಮಾದ ಭಾಗವಾಗಿರುವುದು ನನಗೆ ಹೆಮ್ಮೆಯ ವಿಚಾರ ಎಂದು ಬರೆದುಕೊಂಡಿದ್ದಾರೆ.

Continue Reading

FILM

ಪ್ರಜ್ವಲ್ ಪ್ರಕರಣದ ನಡುವೆ ಖಾಸಗಿ ವೀಡಿಯೋ ವೈರಲ್; ಜ್ಯೋತಿ ರೈ ಹೇಳಿದ್ದೇನು?

Published

on

ಬೆಂಗಳೂರು : ಅತ್ತ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದೆ. ಈ ನಡುವೆ ಖ್ಯಾತ ನಟಿ ಜ್ಯೋತಿ ರೈ ಅವರದ್ದೆನ್ನಲಾದ ಖಾಸಗಿ ವೀಡಿಯೋವೊಂದು ವೈರಲ್ ಆಗಿದೆ. ಒಂದಷ್ಟು ಅಶ್ಲೀಲ ವೀಡಿಯೋಗಳೂ ಸದ್ದು ಮಾಡುತ್ತಿವೆ.
ಜ್ಯೋತಿ ರೈ ಕನ್ನಡ ಕಿರುತೆರೆಯಲ್ಲಿ ಫೇಮಸ್ ನಟಿ. ಅಲ್ಲದೇ ತೆಲುಗು ಧಾರಾವಾಹಿಗಳಿಗೂ ಲಗ್ಗೆ ಇಟ್ಟಿದ್ದಾರೆ. ಇತ್ತೀಚೆಗೆ ಫೋಟೋಗಳಿಂದ ಭಾರೀ ಸುದ್ದಿಯಾಗುತ್ತಿದ್ದಾರೆ. ಹಾಟ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ಇದೀಗ ಅವರದ್ದೆನ್ನಲಾದ ಖಾಸಗಿ ವೀಡಿಯೋಗಳು ಭಾರೀ ವೈರಲ್ ಆಗಿದೆ. ಫೇಸ್ ಬುಕ್, ವಾಟ್ಸ್ ಆ್ಯಪ್, ಟ್ವಿಟ್ಟರ್ ಖಾತೆಗಳಲ್ಲಿ ಅಶ್ಳೀಲ ಫೋಟೋ, ವೀಡಿಯೋಗಳು ಹರಿದಾಡುತ್ತಿವೆ. ಈ ಬಗ್ಗೆ ಇದೀಗ ಮೌನ ಮುರಿದಿರುವ ನಟಿ ಸ್ಪಷ್ಟನೆ ನೀಡಿದ್ದಾರೆ.

ಏನಂದ್ರು ಜ್ಯೋತಿ ರೈ?

ತಮ್ಮ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಂಡು ಪಡ್ಡೆಗಳ ನಿದ್ದೆಗೆಡಿಸುತ್ತಿದ್ದ ನಟಿ ಜ್ಯೋತಿ ರೈ ಅವರದ್ದೆನ್ನಲಾದ ಅಶ್ಲೀಲ ವೀಡಿಯೋ ವೈರಲ್ ಆಗಿದೆ. ಈ ವೀಡಿಯೋ ಬಗ್ಗೆ ಸ್ವತಃ ಜ್ಯೋತಿ ರೈ ಸ್ಪಷ್ಟನೆ ನೀಡಿದ್ದಾರೆ. ಆಘಾತಕ್ಕೊಳಗಾಗಿದ್ದೇನೆ ಎಂದಿದ್ದಾರೆ.
ನಾನು ಅಪರಿಚಿತ ವ್ಯಕ್ತಿಗಳಿಂದ ಈ ಸಂದೇಶಗಳನ್ನು ಸ್ವೀಕರಿಸಿ ನಾನು ಆಘಾತಕ್ಕೊಳಗಾಗಿದ್ದೇನೆ. ನನ್ನ ಖ್ಯಾತಿ ಮತ್ತು ನನ್ನ ಕುಟುಂಬದ ಪ್ರತಿಷ್ಠೆಗೆ ಅಪಾಯದಲ್ಲಿರುವುದರಿಂದ ಈ ಬಳಕೆದಾರರು/ವ್ಯಕ್ತಿಗಳ ವಿರುದ್ಧ ಸರಿಯಾದ ಮತ್ತು ತ್ವರಿತ ಕ್ರಮವನ್ನು ತೆಗೆದುಕೊಳ್ಳುವಂತೆ ವಿನಂತಿಸುತ್ತೇನೆ. ಅಲ್ಲದೆ, ಈ ಬಳಕೆದಾರರು/ವ್ಯಕ್ತಿಗಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಸರಿಪಡಿಸಲಾಗದ ಹಾನಿ ಉಂಟಾಗುತ್ತದೆ. ನಿಮ್ಮ ಪರಿಶೀಲನೆ ಮತ್ತು ತನಿಖೆಗಾಗಿ ನಾನು ಎಲ್ಲಾ ಬಳಕೆದಾರರ ಯೂಸರ್ ಐಡಿಗಳನ್ನು ಲಗತ್ತಿಸಿದ್ದೇನೆ.

ಈ ‘ಅಜ್ಞಾತ ಬಳಕೆದಾರರ’ ವಿರುದ್ಧ ಈ ಕೆಳಗಿನ ಅಪರಾಧಗಳನ್ನು ಮಾಡಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 66 (ಇ) ಅಡಿಯಲ್ಲಿ ಖಾಸಗಿತನದ ಉಲ್ಲಂಘನೆಗಾಗಿ ಶಿಕ್ಷೆ. ಮಾಹಿತಿ ತಂತ್ರಜ್ಞಾನ ಕಾಯಿದೆ, 2000, 2000 ರ ಸೆಕ್ಷನ್ 67 ರ ಅಡಿಯಲ್ಲಿ ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಸ್ತುಗಳನ್ನು ಪ್ರಕಟಿಸಲು ಅಥವಾ ರವಾನಿಸಿದ ಕಾರಣ ಶಿಕ್ಷೆ, ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 67 (ಎ) ಅಡಿಯಲ್ಲಿ ಲೈಂಗಿಕ ಕ್ರಿಯೆಯನ್ನು ಒಳಗೊಂಡಿರುವ ವಸ್ತುಗಳನ್ನು ಎಲೆಕ್ಟ್ರಾನಿಕ್ ರೂಪದಲ್ಲಿ ಪ್ರಕಟಿಸಿದ ಕಾರಣ ಶಿಕ್ಷೆ ಮತ್ತು ಭಾರತೀಯ ದಂಡ ಸಂಹಿತೆ, 1860 ರ ಸೆಕ್ಷನ್ 509 ರ ಅಡಿಯಲ್ಲಿ ಮಹಿಳೆಯ ಘನತೆಯನ್ನು ಅವಮಾನಿಸುವ ಉದ್ದೇಶದಿಂದ ಪದಗಳು ಅಥವಾ ಕೆಲಸ ಮಾಡಿರುವ ಕಾರಣ ಶಿಕ್ಷೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ತೆಲುಗು ನಿರ್ದೇಶಕನ ಕೈ ಹಿಡಿದ ಜ್ಯೋತಿ:

ಜ್ಯೋತಿ ರೈ ತೆಲುಗು ನಿರ್ದೇಶಕ ಸುಕುಮಾರ್ ಪೂರ್ವಜ್ ಅವರೊಂದಿಗೆ ಸಹ ಜೀವನ ನಡೆಸುತ್ತಿದ್ದ ಬಗ್ಗೆ ಗಾಸಿಪ್ ಹರಿದಾಡುತ್ತಿತ್ತು. ಆದದ ಬಳಿಕ ವಿವಾಹವಾಗಿರುವ ಬಗ್ಗೆ ಸ್ವತಃ ತಿಳಿಸಿ ತನ್ನ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ನಟಿ ಜ್ಯೋತಿ ರೈ ತನ್ನ 20 ನೇ ವಯಸ್ಸಿನಲ್ಲಿ ಮೊದಲ ಮದುವೆಯಾಗಿದ್ದರು. ನಂತರ ಅವರಿಂದ ವಿಚ್ಛೇದನ ಪಡೆದಿದ್ದಾರೆ. ಆಕೆಗೆ 11 ವರ್ಷದ ಮಗನಿದ್ದಾನೆ.

Continue Reading

FILM

ಪ್ರತಿಷ್ಟಿತ ಮೆಟ್ ಗಾಲ ಸಮಾರಂಭದಲ್ಲಿ ಮಿಂಚಿದ ಆಲಿಯಾ ಭಟ್; ಆಲಿಯಾ ವಿಶಿಷ್ಟ ಉಡುಗೆಗೆ ಬೆರಗಾದ್ರು ಫ್ಯಾನ್ಸ್

Published

on

ಜಗತ್ತಿನ ವಿವಿಧ ಮನರಂಜನಾ ಕ್ಷೇತ್ರಗಳಲ್ಲಿ ತೊಡಗಿರುವ ಗಣ್ಯರು ಭಾಗಿಯಾಗುವ ಪ್ರತಿಷ್ಠಿತ ಮೆಟ್ ಗಾಲ ಸಮಾರಂಭದಲ್ಲಿ ಈ ಬಾರಿ ಆಲಿಯಾ ಭಟ್ ತನ್ನ ವಿಶಿಷ್ಟ ಉಡುಗೆಯ ಮೂಲಕ ಗಮನ ಸೆಳೆದಿದ್ದಾರೆ. ಅವರು ಸಬ್ಯಸಾಚಿ ಮುಖರ್ಜಿ ವಿನ್ಯಾಸದ ಸೀರೆಯಲ್ಲಿ ಕಂಗೊಳಿಸಿದ್ದಾರೆ. ಅವರ ಲುಕ್‌ಗೆ ಸಾಕಷ್ಟು ಮೆಚ್ಚುಗೆ ಕೇಳಿ ಬಂದಿದೆ. ಅವರ ಸೊಗಸಾದ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.


ದೇಸಿ ಉಡುಪಿಗೂ ಟ್ರೇನ್ ವಿನ್ಯಾಸ:

ತಿಳಿ ನೀಲಿ, ಬಿಳಿ ಮಿಶ್ರಿತ ಸುಂದರ ಸೀರೆಯಲ್ಲಿದ್ದ ಉದ್ದನೆಯ ಟ್ರೇನ್ ಸೆರಗು ಸೀರೆಗೆ ಮೆರುಗು ನೀಡಿತ್ತು. ಸಾಮಾನ್ಯವಾಗಿ ಗೌನ್ ಗೆ ಇಂತಹ ಟ್ರೇನ್ ವಿನ್ಯಾಸಗೊಳಿಸಲಾಗುತ್ತದೆ. ದೇಸಿ ಉಡುಪಿಗೂ ಟ್ರೇನ್ ವಿನ್ಯಾಸಗೊಳಿಸಿ ಕಂಟೆಂಪರರಿ ಸ್ಪರ್ಶ ನೀಡಬಹುದು ಎಂದು ಆಲಿಯಾ ಭಟ್ ತೋರಿಸಿದ್ದಾರೆ.


‘ಗಾರ್ಡನ್ ಆಫ್ ಟೈಮ್’ ಡ್ರೆಸ್ ಕೋಡ್ ಗೆ ಅನುಗುಣವಾಗಿ ತಿಳಿ ಗುಲಾಬಿ ಎಂಬ್ರಾಯ್ಡರಿ ಹೂವು, ತಿಳಿ ಹಸಿರು ಎಲೆ, ಬಳಿಗಳ್ಳ ವಿನ್ಯಾಸವಿದೆ. ಸೀರೆಗೊಪ್ಪುವ ಹರಳು ಖಚಿತ ಬ್ಲೌಸ್, ಕಿವಿಗೆ ದೊಡ್ಡ ಇಯರಿಂಗ್ಸ್, ಬೈತಲೆಗೆ ಹರಳಿನ ಆಭರಣ ಧರಿಸಿದ್ದು ಮತ್ತಷ್ಟು ಮೆರುಗು ನೀಡಿತ್ತು.

ಇದನ್ನೂ ಓದಿ : ಹರಕೆ ತೀರಿಸಿದ ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ; ಅಭಯವಿತ್ತ ದೈವ!

ಆಲಿಯಾ ಪಾವತಿಸಿದ್ದು ಎಷ್ಟು?


ಮೆಟ್ ಗಾಲಾ ಫ್ಯಾಶನ್ ಹೆಸರಲ್ಲಿ ಪ್ರತಿ ವರ್ಷ ಮೇ ತಿಂಗಳ ಮೊದಲ ಸೋಮವಾರದಂದು ನಡೆಯುವ ನಿಧಿ ಸಂಗ್ರಹಣೆ ಕಾರ್ಯಕ್ರಮವಾಗಿದೆ. ಇಲ್ಲಿ ಭಾಗವಹಿಸುವವರು ಪ್ರತಿ ಟಿಕೆಟ್‌ಗೆ ಪ್ರತಿ ವ್ಯಕ್ತಿಗೆ USD 75,000 ವೆಚ್ಚವಾಗುತ್ತದೆ, ಇದನ್ನು ಭಾರತೀಯ ಕರೆನ್ಸಿಗೆ ಪರಿವರ್ತಿಸಿದಾಗ ಸುಮಾರು ರೂ. 63 ಲಕ್ಷ ರೂ.ಗಳಾಗುತ್ತವೆ. ಪ್ರತಿ ಸಂಪೂರ್ಣ ಟೇಬಲ್‌ನ ಬೆಲೆ ಸುಮಾರು USD 350,000, ಇದು ಸುಮಾರು ರೂ. 2 ಕೋಟಿ 92 ಲಕ್ಷವಾಗುತ್ತದೆ. ಸಾಮಾನ್ಯವಾಗಿ ಸೆಲೆಬ್ರಿಟಿಗಳು ಯಾವುದೇ ಕಂಪನಿಯ ಮೂಲಕ ಹೋದರೆ, ಅವರ ವೆಚ್ಚವನ್ನು ಆ ಕಂಪನಿಗಳೇ ಭರಿಸುತ್ತವೆ.

ಆದರೆ, ವೈಯಕ್ತಿಕವಾಗಿ ಹೋದಾಗ ವ್ಯಕ್ತಿಯೇ ತಮ್ಮ ಟಿಕೆಟ್‌ಗಾಗಿ ಪಾವತಿಸುತ್ತಾರೆ. ಹೀಗಾಗಿ, ಆಲಿಯಾ ಭಟ್ ಕನಿಷ್ಠ 63 ಲಕ್ಷ ರೂ.ನಿಂದ 2 ಕೋಟಿ ರೂ.ವರೆಗೆ ಈ ಪ್ರದರ್ಶನದಲ್ಲಿ ಭಾಗವಹಿಸಲು ಸ್ವತಃ ಪಾವತಿಸಿದ್ದಾರೆ. ಈ ಬಾರಿ ಆಲಿಯಾ ಎರಡನೇ ಬಾರಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

Continue Reading

LATEST NEWS

Trending