Connect with us

    DAKSHINA KANNADA

    ಚಿಕಿತ್ಸೆಗೆಂದು ಬಂದ ಯುವತಿ ಮೇಲೆ ಅತ್ಯಾ*ಚಾರ..! ಕಾಸರಗೋಡು ಮೂಲದ ಯುವಕನ ಬಂಧನ

    Published

    on

    ಮಂಗಳೂರು: ಅನಾರೋಗ್ಯ ಹಿನ್ನಲೆ ಚಿಕಿತ್ಸೆಗೆ ಬಂದ ಮಹಿಳೆಗೆ ಸಹಾಯ ಮಾಡುವ ನಾಟಕವಾಡಿ ಆಕೆಯನ್ನು ಅತ್ಯಾ*ಚಾರ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕೇರಳ ಮೂಲದ ಮಹಿಳೆ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಬಂದಿದ್ದು, ಅಲ್ಲಿ ಪರಿಚಿತ ಹಾಗೂ ಸಹಾಯ ಮಾಡಲು ನಿಂತಿದ್ದ ಯುವಕನೊಬ್ಬ ಅತ್ಯಾಚಾರ ಮಾಡಿದ್ದಾಗಿ ಮಹಿಳೆ ದೂರು ನೀಡಿದ್ದಾರೆ. ಅತ್ಯಾಚಾರ ಮಾಡಿದ್ದು ಅಲ್ಲದೆ ಅದನ್ನ ತನ್ನ ಮೊಬೈಲ್ ನಲ್ಲಿ ಚಿತ್ರಿಸಿಕೊಂಡಿದ್ದು ಬಳಿಕ ಆರೋಪಿ ಆ ವಿಡಿಯೋವನ್ನು ತೋರಿಸಿ ಬ್ಲ್ಯಾಕ್ಮೇಲ್ ಮಾಡಿ ನಿರಂತರ ಅತ್ಯಾಚಾರ ನಡೆಸಿರುವುದಾಗಿ ದೂರು ದಾಖಲಾಗಿದೆ.

    ಇದನ್ನೂ ಓದಿ..; ಲ್ಯಾಪ್ ಟಾಪ್ ಚಾರ್ಜ್ ಮಾಡುವಾಗ ದುರಂ*ತ; ವಿದ್ಯುತ್ ಸ್ಪರ್ಶಿಸಿ ವೈದ್ಯೆ ಸಾ*ವು

    ಕಾಸರಗೋಡು ಮೂಲದ ನೊಂದ ಮಹಿಳೆ ಪರಿಚಿತ ಸುಜಿತ್ ಈ ಕೃತ್ಯ ಎಸಗಿರುವುದಾಗಿ ಆರೋಪಿಸಿದ್ದಾರೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಬಾರಿಗೆ ತನ್ನ ಮೇಲೆ ಅತ್ಯಾಚಾರ ನಡೆಸಿದ ಸುಜಿತ್, ವಿಡಿಯೋ ಬಹಿರಂಗ ಪಡಿಸುವ ಬೆದರಿಕೆ ಹಾಕಿ ನಿರಂತರ ಕಿರುಕುಳ ನೀಡಿದ್ದಾಗಿ ಮಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ. ಇತ್ತೀಚೆಗೆ ನೊಂದ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲಿ ಅಲ್ಲಿಯೂ ತನ್ನ ಮೇಲೆ ಸುಜೀತ್ ಅತ್ಯಾಚಾರ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಘಟನೆಯ ಬಳಿಕ ನೊಂದ ಸಂತ್ರಸ್ತ ಮಹಿಳೆ ಪೊಲೀಸರಿಗೆ ದೂರು ನೀಡಿ ರಕ್ಷಣೆ ಕೋರಿದ್ದಾರೆ. ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ಕಾಸರಗೋಡಿನ ಹೊಸದುರ್ಗದಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    DAKSHINA KANNADA

    ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಹೃದಯಾಘಾ*ತದಿಂದ ನಿ*ಧನ

    Published

    on

    ಮಂಗಳೂರು : ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಅವರು ಇಂದು(ಜುಲೈ 5) ಹೃದಯಘಾ*ತದಿಂದ ಇಹಲೋಕ ತ್ಯಜಿಸಿದ್ದಾರೆ.
    ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ನಾಯ್ಕಾಪು ಕುಂಬಳೆ ಶ್ರೀಧರ ರಾಯರ ಹುಟ್ಟೂರು. 1948ನೇ ಜುಲೈ 23 ರಂದು ಮಾಲಿಂಗ ಮುಕಾರಿ ಮತ್ತು ಕಾವೇರಿ ಅಮ್ಮ ದಂಪತಿ ಮಗನಾಗಿ ಜನಿಸಿದರು.


    ತೆ೦ಕುತಿಟ್ಟಿನ ಅಪ್ರತಿಮ ಸ್ತ್ರೀವೇಷಧಾರಿಯಾಗಿ ಜನಪ್ರಿಯರಾಗಿದ್ದ ಕುಂಬಳೆ ಶ್ರೀಧರ್ ರಾವ್ ಅವರು ದಮಯಂತಿ, ದಾಕ್ಷಾಯಿಣಿ, ಅಮ್ಮು ಬಲ್ಲಾಳ್ತಿ, ಲಕ್ಷ್ಮಿ, ಸುಭದ್ರೆ, ಸತ್ಯಭಾಮೆ ಅಲ್ಲದೆ ಪ್ರಮೀಳೆ, ಶಶಿಪ್ರಭೆ ಮೊದಲಾದ ಪಾತ್ರಗಳ ಮೂಲಕ ಜನಮನಸೂರೆಗೊಂಡಿದ್ದರು. ಪುರುಷ ವೇಷಧಾರಿಯಾಗಿಯೂ ಪ್ರಸಿದ್ಧರಾಗಿದ್ದರು. ಇರಾ, ಕೂಡ್ಲು, ಮೂಲ್ಕಿ, ಕರ್ನಾಟಕ ಮೇಳ ಮತ್ತು ಧರ್ಮಸ್ಥಳ ಮೇಳದಲ್ಲಿ ಶ್ರೀಧರ್ ರಾವ್ ಸೇವೆ ಸಲ್ಲಿಸಿದ್ದು, ಧರ್ಮಸ್ಥಳ ಮೇಳದಲ್ಲಿ ಸುಮಾರು ನಾಲ್ಕು ದಶಕಗಳ ಕಾಲ ತಿರುಗಾಟ ಮಾಡಿದ್ದರು.

    ಇದನ್ನೂ ಓದಿ : ಸೀಲ್ಡ್​ ತಂಪು ಪಾನೀಯ ಬಾಟಲ್ ಒಳಗಿತ್ತು ಜೇಡರ ಹುಳ!

    ಮೃ*ತರು ಪತ್ನಿ, ನಿವೃತ್ತ ಶಿಕ್ಷಕಿ ಸುಲೋಚನಾ, ಮೂವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

    Continue Reading

    DAKSHINA KANNADA

    ‘HSRP’ ನಂಬರ್ ಪ್ಲೇಟ್ ಅಳವಡಿಸಲು ಸೆ.15 ರವರೆಗೆ ಗಡುವು ವಿಸ್ತರಣೆ

    Published

    on

    ಬೆಂಗಳೂರು: ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸರ್ಕಾರವು ಹೈಕೋರ್ಟ್​ಗೆ ಮಾಹಿತಿ ನೀಡಿದೆ.

    ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು ನ್ಯಾಯಪೀಠದ ಮುಂದೆ ಹಾಜರಾಗಿ, ಎಚ್‌ಎಸ್‌ಆರ್​ಪಿ ಅಳವಡಿಸಿಕೊಳ್ಳಲು ನಿಗದಿಪಡಿಸಲಾಗಿದ್ದ ಅವಧಿಯನ್ನು ಸೆಪ್ಟೆಂಬರ್ 15ರವರೆಗೆ ರಾಜ್ಯ ಸರ್ಕಾರ ವಿಸ್ತರಿಸಿದೆ ಎಂದು ಮಾಹಿತಿ ತಿಳಿಸಿದರು.

    ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿತು.

    ಎಚ್‌ಎಸ್‌ಆರ್‌ಪಿಗಳನ್ನು ಅಳವಡಿಸಲು ಸಾರಿಗೆ ಇಲಾಖೆ ಗಡುವನ್ನು ವಿಸ್ತರಿಸಿರುವುದು ಇದು ನಾಲ್ಕನೇ ಬಾರಿಯಾಗಿದೆ . ಹಿಂದಿನ ಗಡುವು ನವೆಂಬರ್ 17, 2023, ಫೆಬ್ರವರಿ 17, 2024 ಮತ್ತು ಮೇ 17, 2024 ಆಗಿತ್ತು. HSRP ಗಳನ್ನು ಪಡೆಯದ ವಾಹನ ಮಾಲೀಕರು ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ.

    Continue Reading

    DAKSHINA KANNADA

    ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆ ಸಂಸ್ಥಾಪಕ ಹಂದಾಡಿ ಬಾಲಕೃಷ್ಣ ನಾಯಕ್ ನಿಧ*ನ..!

    Published

    on

    ಮಂಗಳೂರು: ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ, ಬಡಗುತಿಟ್ಟಿನ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ ತಮ್ಮ 76ರ ಹರೆಯದಲ್ಲಿ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿ*ಧನ ಹೊಂದಿದರು.


    ಎಚ್. ಸುಬ್ಬಣ್ಣ ಭಟ್ ಮತ್ತು ಇಂದು ನಾಯಕ್ ಇವರ ಜೊತೆಯಲ್ಲಿ ಬಡಗುತಿಟ್ಟಿನ ವೇಷಭೂಷಣಗಳನ್ನು ವಿವಿಧ ಸಂಘ ಸಂಸ್ಥೆಗಳಿಗೆ ಒದಗಿಸುತ್ತಾ, ಬಳಿಕ ಸ್ವಂತ ಸಂಸ್ಥೆಯನ್ನು ಸ್ಥಾಪಿಸಿದರು. ತಮ್ಮ ಅಪೂರ್ವ ಕಲಾಪ್ರತಿಭೆ ಹಾಗೂ ಸರಳ ಸಜ್ಜನಿಕೆಯಿಂದ ಎಲ್ಲ ಸಂಘ ಸಂಸ್ಥೆಗಳಿಗೂ ಅನಿವಾರ್ಯ ಎಂಬಂತೆ ಬಾಳಿದ ಧೀಮಂತರು. ಬಡಗುತಿಟ್ಟಿನ ಕಿರೀಟ ಹಾಗೂ ವೇಷಭೂಷಣಗಳ ತಯಾರಿಕೆಯಲ್ಲಿ ಸಿದ್ಧಹಸ್ತರಾಗಿದ್ದರು.

    ದೇಶವಿದೇಶಗಳಲ್ಲಿ ನೂರಾರು ಮಂದಿಗೆ ಬಡಗುತಿಟ್ಟಿನ ಪಾರಂಪರಿಕ ವೇಷಭೂಷಣ ಸಿದ್ಧಪಡಿಸಿಕೊಟ್ಟ ಕೀರ್ತಿ ಬಾಲಕೃಷ್ಣ ನಾಯಕರದ್ದು. ತನ್ನ ಮೂವರು ಪುತ್ರರೂ ಈ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವುದು ಈ ಕುಟುಂಬದ ವಿಶೇಷತೆಯಾಗಿದೆ.

    ಇವರ ಕಲಾ ಪ್ರತಿಭೆಯನ್ನು ಗುರುತಿಸಿ ಕರ್ನಾಟಕ ಯಕ್ಷಗಾನ ಅಕಾಡೆಮಿ, ಯಕ್ಷಗಾನ ಕಲಾರಂಗ ಹಾಗೂ ಕಳೆದ ವರ್ಷ ಉಡುಪಿಯಲ್ಲಿ ಜರಗಿದ ಪ್ರಥಮ ಯಕ್ಷಗಾನ ಸಮ್ಮೇಳನದಲ್ಲಿ ಗೌರವಿಸಲಾಗಿತ್ತು. ಉಡುಪಿಯ ಯಕ್ಷಶಿಕ್ಷಣ ಅಭಿಯಾನ ಯಶಸ್ವಿಯಾಗುವಲ್ಲಿ ಬಾಲಕೃಷ್ಣ ನಾಯಕ್ ಕೊಡುಗೆ ಮಹತ್ತರವಾದುದು.

    ಮೃತರು ಪತ್ನಿ, ಮೂವರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅ*ಗಲಿದ್ದಾರೆ. ಯಕ್ಷಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರೂ, ಉಡುಪಿಯ ಶಾಸಕರೂ ಆದ ಯಶಪಾಲ್ ಸುವರ್ಣ, ಸ್ಥಾಪಕ ಟ್ರಸ್ಟಿ ಕೆ.ರಘುಪತಿ ಭಟ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಬ್ರಹ್ಮಾವರದ ಅಜಪುರ ಯಕ್ಷಗಾನ ಮಂಡಳಿಯ ಅಧ್ಯಕ್ಷ ಪದ್ಮನಾಭ ಗಾಣಿಗ ಹಾಗೂ ಸದಸ್ಯರು ತೀರ್ವ ಸಂತಾಪ ಸೂಚಿಸಿದ್ದಾರೆ.

    Continue Reading

    LATEST NEWS

    Trending