Connect with us

KADABA

ಕಡಬ: ‘ಬೇಡಾ’ ಎಂದು ಗೋಗರೆದರೂ ಬಿಡದ ಕಾಮುಕ ಬಾಲಕಿ ಮೇಲೆರಗಿ ತೃಷೆ ತೀರಿಸಿಯೇ ಬಿಟ್ಟ…

Published

on

ಕಡಬ: ಅಜ್ಜನ ಮನೆಯಲ್ಲಿ ವಾಸವಾಗಿದ್ದ ಹೈಸ್ಕೂಲು ವಿದ್ಯಾರ್ಥಿನಿ ಮೇಲೆ ಯುವಕನೋರ್ವ ಅಜ್ಜನಿಗೆ ಮದ್ಯಪಾನ ಕುಡಿಸಿ ಬಾಲಕಿಯನ್ನು ಬಲವಂತವಾಗಿ ರೂಮಿಗೆ ಎಳೆದೊಯ್ದು ಅತ್ಯಾಚಾರಗೈದ ಘಟನೆ ಕಡಬದ ನೂಜಿಬಾಳ್ತಿಲ ಗ್ರಾಮದಲ್ಲಿ ನಡೆದಿದೆ.

ಬoಧಿತನನ್ನು ನೆಲ್ಯಾಡಿ ಗ್ರಾಮದ ಮಾದೇರಿ ನಿವಾಸಿ ಸುನಿಲ್ ಎಂದು ಗುರುತಿಸಲಾಗಿದೆ.


ಈತ ನೂಜಿಬಾಳ್ತಿಲದ ಖಾಸಗಿ ಶಾಲೆಯ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ಬಾಲಕಿಯನ್ನು ಬಲತ್ಕಾರವಾಗಿ ಅತ್ಯಾಚಾರಗೈದಿರುವ ಬಗ್ಗೆ ಬಾಲಕಿಯ ತಂದೆ ದೂರು ನೀಡಿದ ಹಿನ್ನೆಲೆಯಲ್ಲಿ ಕಡಬ ಪೋಲೀಸರು ಪೋಕ್ಸೋ ಪ್ರಕರಣ ದಾಖಲಿಸಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಬಾಲಕಿಯು ತನ್ನ ಅಜ್ಜನ ಜೊತೆ ವಾಸವಾಗಿದ್ದು ಆಕೆಯ ತಂದೆ ಇನ್ನೊಂದು ಮನೆಯಲ್ಲಿ ಬೇರೆಯೇ ವಾಸವಾಗಿದ್ದಾರೆ. ತಾಯಿ 5 ವರ್ಷಗಳ ಹಿಂದೆ ಮನೆ ಬಿಟ್ಟು ಹೋದವರು ವಾಪಸ್ಸಾಗಿಲ್ಲ.

ಆರೋಪಿಯು ಬಾಲಕಿಯ ಮನೆಯ ಪಕ್ಕದ ಜೋಬಿ ಎಂಬವರ ರಬ್ಬರ್ ತೋಟಕ್ಕೆ ಟ್ಯಾಪಿಂಗ್ ಕೆಲಸಕ್ಕೆ ಬರುತ್ತಿದ್ದು, ಬಾಲಕಿಯ ಮೇಲೆ ವಕ್ರದೃಷ್ಠಿ ಇಟ್ಟಿದ್ದ ಆರೋಪಿ ಬಾಲಕಿಯ ಅಜ್ಜನಲ್ಲಿ ಮಾತನಡುವ ನೆಪದಲ್ಲಿ ಅಲ್ಲಿಗೆ ಬಂದು ಬಾಲಕಿಯ ಮೊಬೈಲ್ ನಂಬರ್ ಕೇಳಿದ್ದ.

ಅದಕ್ಕೆ ಬಾಲಕಿ ಒಪ್ಪದೇ ಇದ್ದಾಗ ಆಕೆಯ ಅಜ್ಜಿನಿಂದ ನಂಬರ್ ಪಡೆದು ಆಕೆ ಶಾಲೆಗೆ ಹೋಗುವಾಗ ಮತ್ತು ಶಾಲೆಯಿಂದ ಬರುವಾಗ ಕಾಲ್ ಮಾಡಿ ಆತನ ಬೈಕಿನಲ್ಲಿ ಬಲವಂತ ಮಾಡಿ ಕುಳ್ಳಿರಿಸಿಕೊಂಡು ಹತ್ತಿರ ಕಲ್ಲುಗುಡ್ಡೆ ಪೇಟೆಯಲ್ಲಿ ಬಿಟ್ಟು ಮರಳಿ ಸಂಜೆ ಶಾಲೆಯಿಂದ ಮನೆಗೆ ಬರುವಾಗ ನನಗೆ ಫೋನ್ ಮಾಡು ಎಂದು ತಾಕೀತು ಮಾಡುತ್ತಿದ್ದ.

ಸೆಪ್ಟೆಂಬರ್ 5 ರಂದು ಸಂಜೆ ಆರೋಪಿಯು ಬಾಲಕಿ ಇದ್ದ ಮನೆಗ ಬಂದು ಬಾಲಕಿಯ ನಡೆಸಿದ್ದಾನೆ. ಈ ವಿಚಾರವನ್ನು ಯಾರಲ್ಲಾದರೂ ಹೇಳಿದರೇ ಕೊಂದು ಹಾಕುತ್ತೇನೆ ಎಂದು ಜೀವ ಬೆದರಿಕೆ ಬೇರೆ ಹಾಕಿದ್ದಾನೆ.

ಬಳಿಕ ಸೆಪ್ಟೆಂಬರ್ 26ರಂದು ಮನೆಯಲ್ಲಿ ಬಾಲಕಿಯ ತಾತ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಮತ್ತೊಮ್ಮೆ ಮನೆಗ ಬಂದು ಬಲವಂತವಾಗಿ ಅತ್ಯಾಚಾರ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಕ್ರಮ ಕೈಗೊಂಡಿರುವ ಕಡಬ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈ ಮೊದಲೇ ಆರೋಪಿ ಯುವಕನಿಗೆ ಬಾಲಕಿಯ ಮನೆಯವರು ಎಚ್ಚರಿಕೆ ನೀಡಿದ್ದರೂ ಯುವಕ ಕ್ಯಾರೇ ಅಂದಿರಲಿಲ್ಲ‌‌ ಎನ್ನಲಾಗಿದೆ. ಅಲ್ಲದೆ ಆರೋಪಿ ಯುವಕ ಹೊರಗಿನವನಾಗಿದ್ದು, ಆತನಿಗೆ ಸ್ಥಳೀಯ ಯುವಕನೊಬ್ಬ ಆಶ್ರಯ ನೀಡಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

 

 

 

Click to comment

Leave a Reply

Your email address will not be published. Required fields are marked *

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

DAKSHINA KANNADA

ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!

Published

on

ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.

ಅಸ್ಥಿಪಂಜರ

ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.

Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್‌:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಬೀದಿ ನಾಯಿಯನ್ನು ರಕ್ಷಿಸಲು ಹೋಗಿ ಉರುಳಿ ಬಿದ್ದ ಆಟೋ..!! ಚಾಲಕ ಗಂಭೀರ

Published

on

ಕಡಬ: ನಾಯಿ ಒಂದು ಸಡನ್ ಆಗಿ ರಸ್ತೆಗೆ ಅಡ್ಡ ಬಂದ ಕಾರಣ ಅದೇ ರಸ್ತೆಯಲ್ಲಿ ಬರುತ್ತಿದ್ದ ಅಟೋ, ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಅಟೋ ಉರುಳಿ ಬಿದ್ದ ಕಾರಣ ಅಟೋ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅಲಂಕಾರು ಗ್ರಾಮದ ಸುರುಳಿ ಎಂಬಲ್ಲಿ ಈ ಅಪಘಾತ ನಡೆದಿದ್ದು, ಅಟೋ ಚಾಲಕ ಸುಬ್ರಹ್ಮಣ್ಯ ನಾಯ್ಕ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸುಬ್ರಹ್ಮಣ್ಯ ನಾಯ್ಕ ಅವರು ಅಟೋ ಚಲಾಯಿಸಿಕೊಂಡು ಆಲಂಗಾರು ಕಡೆ ಬರುತ್ತಿದ್ದಾಗ ಇಕ್ಕಟ್ಟಾದ ರಸ್ತೆಯಲ್ಲಿ ನಾಯಿ ಒಂದು ಧಿಡೀರ್ ಆಗಿ ರಸ್ತೆಗೆ ಎಂಟ್ರಿ ಕೊಟ್ಟಿದೆ. ಈ ವೇಳೆ ನಾಯಿಯನ್ನು ರಕ್ಷಿಸಲು ತಕ್ಷಣ ಅಟೋದ ಬ್ರೇಕ್‌ ಹಿಡಿದಾಗ ಅಟೋ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಅಟೋದಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ದೊಡ್ಡ ಅನಾಹುತ ನಡೆದಿಲ್ಲ. ಚಾಲಕ ಸುಬ್ರಹ್ಮಣ್ಯ ನಾಯ್ಕ ಅವರು ಕಾಲು ಮುರಿತಕ್ಕೆ ಒಳಗಾಗಿದ್ದಲ್ಲದೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಪುತ್ತೂರು ಆಸ್ಪತ್ರೆಗೆ ರವಾನಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

LATEST NEWS

Trending