LATEST NEWS
ಮಾಂತ್ರಿಕನಿಂದ ದಿನವೂ ಕನಸಲ್ಲೇ ಅತ್ಯಾಚಾರ.! ಪೊಲೀಸ್ ಠಾಣೆ ಮೆಟ್ಟಲೇರಿದ ಮಹಿಳೆ
ಔರಂಗಾಬಾದ್ : ಪೊಲೀಸ್ ಠಾಣೆಗೆ ಸದಾ ವಿಚಿತ್ರವಾದ ಪ್ರಕರಣಗಳು ಬರುತ್ತಲೇ ಇರುತ್ತವೆ. ಆ ವಿಚಿತ್ರವಾದ ದೂರಿನ ತನಿಖೆ ನಡೆಸಿದಾಗ ಒಮ್ಮೊಮ್ಮೆ ಅಚ್ಚರಿಯ ಸಂಗತಿ ಹೊರಬಿದ್ದ ಘಟನೆಯೂ ನಡೆದಿದೆ.
ಇಂದಿನ ಕಾಲದಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆಯರೇ ಪೊಲೀಸ್ ಠಾಣೆಯ ಮೆಟ್ಟಿಲು ಹತ್ತಿ, ದೂರು ನೀಡಲು ಹಿಂದೇಟು ಹಾಕುತ್ತಾರೆ. ಇದರಿಂದಲೇ ಅನೇಕ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುವುದೇ ಇಲ್ಲ.
ಅಂಥದ್ದರಲ್ಲಿ ಬಿಹಾರದ ಔರಂಗಾಬಾದ್ ಜಿಲ್ಲೆಯ ಮಹಿಳೆಯೊಬ್ಬಳು ತನ್ನ ಮೇಲೆ ಕನಸಿನಲ್ಲಿ ಅತ್ಯಾಚಾರ ನಡೆದಿದೆ ಎಂದು ದೂರು ನೀಡಿದ್ದಾಳೆ!
ಹೌದು, ಮಾಟಗಾರನೊಬ್ಬ ದಿನವೂ ನನ್ನ ಕನಸಿನಲ್ಲಿ ಬಂದು ಅತ್ಯಾಚಾರ ನಡೆಸುತ್ತಿದ್ದಾನೆ ಎಂದು ಔರಂಗಾಬಾದ್ ಜಿಲ್ಲೆಯ ಕುದ್ವಾ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬಳು ದೂರು ದಾಖಲಿಸಿದ್ದಾಳೆ.
ಆ ಮಹಿಳೆಯ ಮಗುವಿಗೆ ತೀವ್ರ ಅನಾರೋಗ್ಯವಿದ್ದುದರಿಂದ ವೈದ್ಯರ ಬಳಿ ಚಿಕಿತ್ಸೆ ಕೊಡಿಸುತ್ತಿದ್ದಳು. ಆದರೂ ಆಕೆಯ ಮಗನ ರೋಗ ವಾಸಿಯಾಗಿರಲಿಲ್ಲ. ಹೀಗಾಗಿ, ಸಂಬಂಧಿಕರ ಸಲಹೆಯಂತೆ ಆಕೆ ಮಾಂತ್ರಿಕನನ್ನು ಭೇಟಿಯಾಗಿ, ತನ್ನ ಮಗನ ಆರೋಗ್ಯ ಸಮಸ್ಯೆಯನ್ನು ಬಗೆಹರಿಸುವಂತೆ ಕೋರಿದ್ದಳು.
ತನ್ನ ಮಗನ ರೋಗವನ್ನು ಗುಣ ಮಾಡುವಂತೆ ಚತುರ್ವೇದಿ ಎಂಬ ಮಾಂತ್ರಿಕನನ್ನು ಭೇಟಿಯಾಗಿದ್ದ ಮಹಿಳೆಗೆ ಆತ ಒಂದು ಮಂತ್ರ ಹೇಳಿಕೊಟ್ಟು, ದಿನವೂ ಮರೆಯದೆ ಪಠಿಸುವಂತೆ ಹೇಳಿದ್ದ.
ಆದರೆ, ಆ ಮಂತ್ರ ಹೇಳತೊಡಗಿದ 15 ದಿನಗಳ ನಂತರ ಆಕೆಯ ಮಗ ಸಾವನ್ನಪ್ಪಿದ್ದ. ಇದರಿಂದ ಆಘಾತಕ್ಕೊಳಗಾದ ಆಕೆ ಆ ಮಾಂತ್ರಿಕನನ್ನು ಭೇಟಿಯಾಗಲು ಕಾಳಿ ದೇವಸ್ಥಾನಕ್ಕೆ ಹೋಗಿದ್ದಳು. ಆಗ ಆತ ಆಕೆಯ ಮೇಲೆ ಅತ್ಯಾಚಾರ ನಡೆಸಲು ಪ್ರಯತ್ನಿಸಿದ್ದ. ಆದರೆ, ಆಕೆ ಆತನಿಂದ ಬಚಾವಾಗಿದ್ದಳು.
ಅದಾದ ಮೇಲೆ ಪ್ರತಿದಿನವೂ ಆ ಮಾಂತ್ರಿಕ ಆಕೆಯ ಮೇಲೆ ಅತ್ಯಾಚಾರ ನಡೆಸುವಂತೆ ಕನಸು ಬೀಳುತ್ತಿತ್ತು. ಕಣ್ಣು ಮುಚ್ಚಿದರೆ ಸಾಕು, ಆ ಮಾಂತ್ರಿಕ ನನ್ನ ಮೇಲೆ ಅತ್ಯಾಚಾರ ನಡೆಸುವಂತೆ ಕನಸು ಬೀಳುತ್ತದೆ.
ಈ ಕನಸಿನಿಂದ ನನಗೆ ಜೀವನವೇ ಸಾಕೆನಿಸುತ್ತಿದೆ. ರಾತ್ರಿಯಾಗುತ್ತಿದ್ದಂತೆ ಭಯ ಶುರುವಾಗುತ್ತದೆ. ನಿದ್ರೆ ಮಾಡಲೂ ಆಗದೆ ಪರದಾಡುತ್ತಿದ್ದೇನೆ.
ಇದರಿಂದ ಹೇಗಾದರೂ ಮಾಡಿ ನನಗೆ ಮುಕ್ತಿ ಕೊಡಿಸಿ ಎಂದು ಆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ.
ಈ ವಿಚಿತ್ರ ಘಟನೆ ಕೇಳಿ ಪೊಲೀಸರು ತಲೆ ಕೆಡಿಸಿಕೊಂಡಿದ್ದು, ಆಕೆಯ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದ ಚತುರ್ವೇದಿ ಎಂಬ ಮಾಂತ್ರಿಕನನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ.
ಆದರೆ, ಆತ ಆ ಆರೋಪವನ್ನು ತಳ್ಳಿಹಾಕಿದ್ದಾನೆ. ನಾನು ಇದುವರೆಗೂ ಆ ಮಹಿಳೆಯನ್ನು ಭೇಟಿಯೇ ಆಗಿಲ್ಲ, ಆಕೆ ಯಾರೆಂದು ನನಗೆ ಗೊತ್ತೇ ಇಲ್ಲ ಎಂದು ಹೇಳಿದ್ದಾನೆ. ಆತನ ವಿರುದ್ಧ ಯಾವ ಸಾಕ್ಷ್ಯಾಧಾರವೂ ಇಲ್ಲದ ಕಾರಣ ಪೊಲೀಸರು ಚತುರ್ವೇದಿಯನ್ನು ವಾಪಾಸ್ ಕಳಿಸಿದ್ದಾರೆ.
FILM
ಕೊನೆಗೂ ಉರ್ಫಿ ಜಾವೇದ್ ಇನ್ಸ್ಟಾಗ್ರಾಮ್ ಅಕೌಂಟ್ ಡಿಲೀಟ್…
Urfi javed: ಸೋಷಿಯಲ್ ಮೀಡಿಯಾದಲ್ಲಿ ಮಾಡೆಲ್ ಆಗಿ ಗುರುತಿಸಿಕೊಂಡಿರುವ ಉರ್ಫಿ ಜಾವೇದ್ ಆಕೆಯ ಇನ್ಸ್ಟಾಗ್ರಾಮ್ ಖಾತೆ ಡಿಲೀಟ್ ಆಗಿರುವುದು ಇದೀಗ ಆಕೆಗೆ ಸಂಕಷ್ಟ ಎದುರಾಗಿದೆ.
ಉರ್ಫಿ ಜಾವೇದ್ ಎಂದರೆ ಅವಳ ಡ್ರೇಸ್ ನೋಡಿ.. ಅದೇನು ಡ್ರೇಸ್ ಹಾಕಿದ್ದಾಳೆ ಅಂತಾರೆ ಜನ. ಅಂತೂ ಸಾಮಾಜಿಕ ಜಾಲತಾಣದಲ್ಲಿ ಆಕೆಯು ವಿಚಿತ್ರ ವಿಚಿತ್ರ ಪೋಟೋಗಳನ್ನು ಅಪ್ಲೋಡ್ ಮಾಡ್ತಾ ಇರುತ್ತಾಳೆ.
ಆಕೆ ಫಾಲೋವರ್ಸ್ ಹೆಚ್ಚಾಗಳು ಇಂತಹ ಡ್ರೇಸ್ ಹಾಕ್ತ ಇದ್ದಾಳ…ಎಸ್, ಈಕೆ ಅಂತಹ ವಿಚಿತ್ರವಾದ ಡ್ರೇಸ್ ಗಳನ್ನು ಹಾಕಿ ಫೋಟೊ ಶೂಟ್ ಮಾಡಿದ ಬಳಿಕ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಪ್ಲೋಡ್ ಮಾಡುತ್ತಾಳೆ. ಹಾಗೇ ಫಾಲೋವರ್ಸ್ ಗಳ ಸಂಖ್ಯೆ ಹೆಚ್ಚಾಗುತ್ತಿತ್ತು. ಸುಮಾರು 4 ಮಿಲಿಯನ್ ಗೂ ಅಧಿಕ ಫಾಲೋವರ್ಸ್ ಗಳನ್ನು ಹೊಂದಿದ್ದಳು.
ಅರೆಬರೆ ಡ್ರೇಸ್ ಹಾಕುತ್ತಾ ದಿನದಿಂದ ದಿನಕ್ಕೆ ಹೊಸ ಟ್ರೆಂಡ್ ಗಳನ್ನು ಸೃಷ್ಟಿಸುತ್ತಿದ್ದಳು. ಆದರೆ ಇದೀಗ ಆಕೆಯ ಖಾತೆಯನ್ನು ಇನ್ಸ್ಟಾಗ್ರಾಂ ಅಮಾನತು ಮಾಡಿದೆ. ಡಿಲೀಟ್ ಆಗಿರುವ ಕುರಿತು ಆಕೆ ಮಾಡೆಲ್ ಸ್ಕ್ರೀನ್ ಶಾಟ್ ತೆಗೆಯುವ ಮೂಲಕ ಹಂಚಿಕೊಂಡಿದ್ದಾಳೆ.
ಇನ್ನು ಇನ್ಸ್ಟಾ ಆಕೆಯ ಖಾತೆಯನ್ನು ಅಮಾನತುಗೊಳಿಸಿದ್ದಲ್ಲದೆ, ಈ ನಿರ್ಧಾರವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು 180 ದಿನಗಳ ಕಾಲಾವಕಾಶ ನೀಡಿದೆ. ಆದರೆ ಉರ್ಫಿ ಇವೆಲ್ಲದಕ್ಕೆ ಉತ್ತರ ನೀಡಿ ತನ್ನ ಖಾತೆಯನ್ನು ಮರಳಿ ಪಡೆಯುತ್ತಾಳಾ ಎಂಬ ಪ್ರಶ್ನೆ ಫ್ಯಾನ್ಸ್ಗೆ ಕಾಡಿದೆ. ಇನ್ಸ್ಟಾಗ್ರಾಮ್ ಖಾತೆ ಮರಳಿ ಬಂದರೆ ಆಕೆ ಇನ್ನಾದರೂ ಸರಿಯಾದ ಡ್ರೇಸ್ ಹಾಕುತ್ತಾಳ ಎಂದು ಕಾದು ನೋಡಬೇಕಷ್ಟೇ.
ಆಕೆಯ ಅರೆಬರೆ ಡ್ರೇಸ್ ನೋಡಿ ಕೆಳವರು ಆಕೆಯ ಖಾತೆ ಡಿಲೀಟ್ ಆಗಿದ್ದು, ಒಳ್ಳೆಯದೇ ಎಂದು ಹೆಳುತ್ತಿದ್ದಾರೆ. ಆದರೆ ಆಕೆ ಮಾತ್ರ ನೊಂದುಕೊಂಡಿದ್ದಾಳೆ.
FILM
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
ಬೆಂಗಳೂರು : ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬೃಂದಾವನ ಧಾರವಾಹಿಯ ನಟ ಧಾರವಾಹಿಗೆ ಆಯ್ಕೆಯಾದ ತಮ್ಮ ಅಭಿಪ್ರಾಯವನ್ನು ಕೊನೆಗೂ ಹಂಚಿಕೊಂಡಿದ್ದಾರೆ.
ಎಲ್ಲರಿಗೂ ಗೊತ್ತಿರುವಂತೆ ವರುಣ್ ಸೋಷಿಯಲ್ ಮೀಡಿಯಾದಲ್ಲಿ ಈಗಾಗ್ಲೇ ಜನಪ್ರಿಯತೆ ಪಡೆದುಕೊಂಡವರು. ಅಲ್ಲದೇ ಇತ್ತೀಚೆಗೆ ಗರ್ಲ್ ಫ್ರೆಡ್ ಜೊತೆಗೆ ಬ್ರೇಕಪ್ ಮಾಡಿಕೊಂಡಿದ್ದು ದೊಡ್ಡ ಸುದ್ದಿಯಾಗಿತ್ತು.
ಇದೀಗ ಸೀರಿಯಲ್ ಗೆ ಆಯ್ಕೆಯಾದ ಬಗ್ಗೆ ಮಾತನಾಡಿರುವ ನಟ ವರುಣ್ ಆರಾಧ್ಯ “ದೀಪಾವಳಿ ಹಬ್ಬದ ಊಟ ಮುಗಿಸಿಕೊಂಡು ಮಲಗಿಕೊಂಡಿದ್ದೆ. ರಾತ್ರಿ 12.30ಗೆ ಕರೆ ಮಾಡಿ ಸೀರಿಯಲ್ನಲ್ಲಿ ನಟಿಸುವ ಇಂಟ್ರೆಸ್ಟ್ ಇದ್ಯಾ. ಅವಕಾಶ ಇದೆ ಎಂದು ಫೋನ್ ಮಾಡಿದರು. ರಾತ್ರಿ ಆ ಸಮಯದಲ್ಲಿ ಮಾಡಿದಕ್ಕೆ ನಾನು ಗಾಬರಿ ಆಗಿದೆ ಆ ಸಮಯದಲ್ಲಿ ಆಡಿಷನ್ಗೆ ಬರೆಲು ಹೇಳಿದರು. ನನ್ನ ಸ್ನೇಹಿತರನ್ನು ಕರೆದುಕೊಂಡು ನಾಗರಭಾವಿಯಲ್ಲಿ ನಿರ್ದೇಶಕರಾದ ರಾಮ್ಜೀ ಹೇಳಿದ ಸ್ಥಳಕ್ಕೆ ಹೋದೆ. ಕೈಗೆ ಒಂದು ಸ್ಕ್ರಿಪ್ಟ್ ಕೊಟ್ಟರು ಆಡಿಷನ್ ಮಾಡಿದೆ.
ಮಧ್ಯರಾತ್ರಿ 2.30ಕ್ಕೆ ಸೆಲೆಕ್ಟ್ ಆಗಿರುವೆ ಎಂದು ಹೇಳಿದರು. ನಾನು ಫುಲ್ ಶಾಕ್ ಆಗಿಬಿಟ್ಟಿ..ಅಲ್ಲದೆ ಬೆಳಗ್ಗೆನಿಂದ ಶೂಟಿಂಗ್ ಎಂದು ಹೇಳಿದರು. ಅಷ್ಟೊತ್ತರಲ್ಲಿ ಮನೆಗೆ ಬಂದು ಅಕ್ಕ ಮತ್ತು ಅಮ್ಮ ಮಲಗಿದ್ದರು, ಅವರನ್ನು ಎಬ್ಬಿಸಿ ಸೆಲೆಕ್ಟ್ ಅನ್ನೋ ವಿಚಾರ ಹೇಳಿದೆ. ಬೆಳಗ್ಗೆ ಶೂಟಿಂಗ್ ಇತ್ತು…ಹೇರ್ ಕಟ್ ಮಾಡಿಸಬೇಕು ಮತ್ತು ಗಡ್ಡ ಟ್ರಿಮ್ ಮಾಡಬೇಕು ಎಂದು ಹೇಳಿದರು ಅದೂ ಮಾಡಿಸಿಕೊಂಡು ಬೆಳಗ್ಗೆ ಶೂಟಿಂಗ್ ಸ್ಥಳಕ್ಕೆ ಹೋದೆ ಮರು ದಿನವೇ ಪ್ರಸಾರ ಮಾಡಲು ಶುರು ಮಾಡಿದ್ದರು. ಮೊದಲ ದೃಶ್ಯವೇ ಮದುವೆ ಮನೆ ಸೀನ್ ಅಗಿತ್ತು ಎಂದಿದ್ದಾರೆ.
bengaluru
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್
ಬೆಂಗಳೂರು: ಸೈಬರ್ ಖದೀಮರ ಉಪಟಳ ಎಲ್ಲಿಯವರೆಗೆ ತಲುಪಿದೆ ಎಂದರೆ ಅದು ಇದೀಗ ಕರ್ನಾಟಕ ಹೈಕೋರ್ಟ್ ಕಲಾಪಕ್ಕೂ ತಟ್ಟಿದೆ.
ಮಂಗಳವಾರ ಸಂಜೆ ಹೈಕೋರ್ಟಿನ ಹಾಲ್ ನಂಬರ್ 6, 12, 18, 23, 24, 26 ಮತ್ತು ಇತರ ಹಾಲ್ ಗಳಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿದ್ದಾಗಲೇ ಲಿಂಕ್ ಮೂಲಕ ಭಾಗವಹಿಸಿದ್ದ ಅಪರಿಚಿತ ಆರೋಪಿಗಳು ಅಶ್ಲೀಲ ಚಿತ್ರಗಳನ್ನು ಪ್ರದರ್ಶಿಸಿ ಕಲಾಪಕ್ಕೆ ಅಡ್ಡಿ ಪಡಿಸಿದ್ದಾರೆ. ಈ ಬಗ್ಗೆ ಹೈಕೋರ್ಟಿನ ಕಂಪ್ಯೂಟರ್ ವಿಭಾಗದ ರಿಜಿಸ್ಟ್ರಾರ್ ಅವರು ಸೆಂಟ್ರಲ್ ಸೆನ್ ಕ್ರೈಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಹೈಕೋರ್ಟ್ ಪೀಠಗಳಲ್ಲಿ ಲೈವ್ ಸ್ಟ್ರೀಮಿಂಗ್ ಮತ್ತು ವೀಡಿಯೋ ಕಾನ್ಫರೆನ್ಸ್ ಸೌಲಭ್ಯವನ್ನು ಕೆಲವು ದಿನಗಳ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ. ಬುಧವಾರ ಸಂಜೆ ಹೈಕೋರ್ಟ್ ಕಲಾಪದ ವೇಳೆ ವೀಡಿಯೋ ಕಾನ್ಫರೆನ್ಸ್ ಆ್ಯಪ್ ಅನ್ನು ಹ್ಯಾಕ್ ಮಾಡಿ ಆಶ್ಲೀಲ ದೃಶ್ಯಾವಳಿಯನ್ನು ಅಪ್ ಲೋಡ್ ಮಾಡಲಾಗಿತ್ತು. ಅಶ್ಲೀಲ ವೀಡಿಯೋ ಪ್ರಸಾರವಾಗುತ್ತಿದ್ದಂತೆ ಅದನ್ನು ನಿರ್ವಹಣೆ ಮಾಡುತ್ತಿದ್ದ ಸಿಬಂದಿಯನ್ನು ಕರೆದು ವಿಚಾರಿಸಿದಾಗ ಸೈಬರ್ ಹ್ಯಾಕ್ ಆಗಿರುವ ವಿಷಯ ಗೊತ್ತಾಗಿದೆ. ಕೂಡಲೇ ವೀಡಿಯೋ ಕಾನ್ಫರೆನ್ಸ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ.
- Ancient Mangaluru6 days ago
ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ
- DAKSHINA KANNADA6 days ago
ಉಡುಪಿ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ
- bangalore5 days ago
ಇವ್ರು ಯಾರಂತ ಗೊತ್ತಾಯ್ತ ಫ್ರೆಂಡ್ಸ್? ನ್ಯೂ ಕಪಲ್ಸ್ ಫಾರಿನ್ ಟ್ರಿಪ್ ಅಂತೆ..!
- bangalore4 days ago
ದೈವಕೋಲ ವೀಕ್ಷಣೆಗೆ ಟೂರ್ ಪ್ಯಾಕೇಜ್ – ತುಳುವರ ಧಾರ್ಮಿಕ ಭಾವನೆಗೆ ಪೆಟ್ಟು..!