DAKSHINA KANNADA
ಅಪರೂಪದ ಹೃದಯ ಶಸ್ತ್ರಚಿಕಿತ್ಸೆಯ ಮೂಲಕ ವೃದ್ಧ ರೋಗಿಯ ಜೀವ ಉಳಿಸಿದ ಇಂಡಿಯಾನಾ ಆಸ್ಪತ್ರೆ
ಮಂಗಳೂರು : ಕರಾವಳಿಯ ಪ್ರಮುಖ ಆರೋಗ್ಯ ಕೇಂದ್ರಗಳಲ್ಲೊಂದಾದ ಮಂಗಳೂರಿನ ಇಂಡಿಯಾನಾ ಹಾಸ್ಪಿಟಲ್ ಮತ್ತು ಹಾರ್ಟ್ ಇನ್ಸ್ಟಿಟ್ಯೂಟ್ ಲಿಮಿಟೆಡ್ ವೃದ್ಧ ರೋಗಿಯೊಬ್ಬರಿಗೆ ಅತ್ಯಂತ ಅಪರೂಪದ ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿ ಜೀವ ಉಳಿಸುವ ಕಾರ್ಯ ಮಾಡಿದ್ದಾರೆ.
ರೋಗಿಯ ಧಮನಿಯ ಬ್ಲಾಕುಗಳನ್ನು ಅಂಜಿಯೊಪ್ಲಾಸ್ಟಿ ಮೂಲಕ ಮತ್ತು ಟ್ರಾನ್ಸ್-ಕ್ಯಾತಿಟರ್ ಮಹಾಪಧಮನಿಯ ಕವಾಟದ ಬದಲಿ / ಇಂಪ್ಲಾಂಟೇಶನ್ ಮೂಲಕ ತನ್ನ ಪ್ರಶಂಸನೀಯ ಪ್ರಯಾಣದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.
ಗೋವಾ ನಿವಾಸಿ ವಯೋವೃದ್ಧರಾದ ಆಹ್ಮದ್ ಖಾನ್ ಎಂಬವರಿಗೆ ಇಂಡಿಯಾನಾ ಆಸ್ಪತ್ರೆಯ ಮುಖ್ಯ ಇಂಟರ್ವೆನ್ಷನಲ್ ಕಾರ್ಡಿಯಾಲಜಿಸ್ಟ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ಯೂಸುಫ್ ಕುಂಬ್ಳೆ ನೇತೃತ್ವದ ವೈದ್ಯರ ತಂಡವು ಈ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದೆ.
ರಕ್ತ ಧಮನಿಯಲ್ಲಿ ಅನೇಕ ಬ್ಲಾಕ್ಗಳನ್ನು ಹೊಂದಿರುವ ತೀವ್ರವಾದ ಮಹಾಪಧಮನಿಯ ಕವಾಟದ ಸ್ಟೆನೋಸಿಸ್ನಿಂದ ಬಳಲುತ್ತಿದ್ದ ಆಹ್ಮದ್ ಖಾನ್ ಅವರು ಎದೆ ನೋವು, ಉಸಿರಾಟದ ತೊಂದರೆ ಮತ್ತು ಹೃದಯ ಸಂಬಂಧಿಸಿದ ಸಮಸ್ಯೆಗಳಿಂದ ಅಸ್ವಸ್ಥರಾಗಿ ಚಕಿತ್ಸೆಗಾಗಿ ಆಸ್ಪತ್ರೆಯನ್ನು ಸಂಪರ್ಕಿಸಿದ್ದರು. ಅವರು ಈ ಮೊದಲು ಈ ಪ್ರದೇಶದ ಅನೇಕ ಆಸ್ಪತ್ರೆಗಳನ್ನು ಚಿಕಿತ್ಸೆಗಾಗಿ ಸಂಪರ್ಕಿಸಿದ್ದರು, ಆದರೆ ಅಂತಹ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಇಂಡಿಯಾನಾ ಸಿದ್ಧಹಸ್ತ ಎಂದು ತಿಳಿಸಿದ ನಂತರ, ಇಂಡಿಯಾನಾ ಆಸ್ಪತ್ರೆಗೆ ಆಗಮಿಸಿದ್ದರು.
ಕವಾಟಗಳನ್ನು ಬದಲಾಯಿಸಲು ಮತ್ತು ಹಿಂದೆ ಬ್ಲಾಕ್ಗಳನ್ನು ತೆಗೆದುಹಾಕಲು ಅವರು ಈಗಾಗಲೇ ಎರಡು ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರು ಎದುರಿಸುತ್ತಿರುವ ಪ್ರಸ್ತುತ ಸಮಸ್ಯೆಗಳನ್ನು ನಿವಾರಿಸಲು, ಅವರು ಮತ್ತರೆಡು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು.
ಆದರೆ ಅವರು ವಯಸ್ಸಾದ ವ್ಯಕ್ತಿಯಾಗಿದ್ದರಿಂದ ಅವರನ್ನು ಮತ್ತರೆಡು ಶಸ್ತ್ರಚಿಕಿತ್ಸೆಗೆ ಒಳಪಡಿಸುವುದು ಸವಾಲಾಗಿತ್ತು ಮತ್ತು ಅಪಾಯಕಾರಿಯೂ ಆಗಿತ್ತು. ಆಂಜಿಯೋಪ್ಲ್ಯಾಸ್ಟಿ ಮೂಲಕ ಬ್ಲಾಕ್ಗಳನ್ನು ತೆಗೆದುಹಾಕುವುದರ ಜೊತೆಗೆ ಶಸ್ತ್ರಚಿಕಿತ್ಸೆಯಿಲ್ಲದೆ ಕವಾಟದ ಬದಲಿಯನ್ನು ಬದಲಾಯಿಸಲು ಡಾ. ಯೂಸುಫ್ ಕುಂಬ್ಳೆ ಸೂಚಿಸಿದ್ದರು. “ಈ ವಿಧಾನವು ಸಾಮಾನ್ಯ ಕಾರ್ಯವಿಧಾನಗಳಿಗಿಂತ ಹೆಚ್ಚು ಜಟಿಲವಾಗಿದೆ ಏಕೆಂದರೆ ಹಳೆಯ ಕೃತಕ ಕವಾಟ ಬಳಿ ಹೊಸ ಕವಾಟವನ್ನು ನಿಯೋಜಿಸಬೇಕಾಗಿತ್ತು,” ಎಂದು ಹೇಳುತ್ತಾರೆ ಖಿಂಗಿI ಯನ್ನು ನಿರ್ವಹಿಸಿದ ಕರಾವಳಿ ಮತ್ತು ಮಲೆನಾಡು ಕರ್ನಾಟಕ ಪ್ರದೇಶದ ಮೊದಲಿಗರಾದ ಡಾ. ಯೂಸುಫ್ ಕುಂಬ್ಳೆ.
ಎರಡು ವರ್ಷಗಳ ಹಿಂದೆ ಇಂಡಿಯಾನಾ ಆಸ್ಪತ್ರೆ ಕರಾವಳಿ ಮತ್ತು ಮಲೆನಾಡು ಕರ್ನಾಟಕದಲ್ಲಿ ಮೊದಲ ಬಾರಿಗೆ TAVI ಪ್ರದರ್ಶನ ನೀಡಿತು ಮತ್ತು ಅಂದಿನಿಂದ ಹಲವಾರು ರೋಗಿಗಳ ಮೇಲೆ TAVI ಯನ್ನು ನಡೆಸಿದೆ ಎಂದು ನೆನಪಿಸಿಕೊಳ್ಳಬಹುದು. ಆದಾಗ್ಯೂ, ಇಂಡಿಯಾನಾ ಆಸ್ಪತ್ರೆಯಲ್ಲಿ ಇಂತಹ ಅಪರೂಪದ TAVI ಯನ್ನು ಇದೇ ಮೊದಲ ಬಾರಿಗೆ ನಡೆಸಲಾಯಿತು, ಹೀಗಾಗಿ ಹೆಚ್ಚು ಕ್ಲಿಷ್ಟಕರ ಹೃದಯ ಕಾಯಿಲೆಗಳಿಗೆ ಚಿಕಿತ್ಸೆ ನೀಡುವಲ್ಲಿ ಇಂಡಿಯಾನಾ ಒಂದು ಮೈಲಿಗಲ್ಲನ್ನು ಸೃಷ್ಟಿಸಿತು. ಯಾವುದೇ ಸಾಮಾನ್ಯ ಅರಿವಳಿಕೆ ಇಲ್ಲದೆ ರೋಗಿಯನ್ನು ಕೇವಲ ಸ್ಥಳೀಯ ಅರಿವಳಿಕೆ ನೀಡಿ 90 ನಿಮಿಷಗಳ ಶಸ್ತ್ರಚಿಕಿತ್ಸೆ ಪ್ರಕ್ರಿಯೆಗೆ ಒಳಪಡಿಸಲಾಯಿತು ಮತ್ತು ಅವರನ್ನು ಐಸಿಯುಗೆ 24 ಗಂಟೆಗಳ ಕಾಲ ವೀಕ್ಷಣೆಗಾಗಿ ವರ್ಗಾಯಿಸಲಾಯಿತು. ಅವರನ್ನು ಎರಡೂವರೆ ದಿನಗಳ ಬಳಿಕ ಬಿಡುಗಡೆ ಮಾಡಲಾಯಿತು. ಅವರು ಈಗ ಮಾಮೂಲಿನಂತೆ ಜೀವನವನ್ನು ನಡೆಸುತ್ತಾರೆ, ಮತ್ತು ಆರೋಗ್ಯವಂತರಾಗಿದ್ದಾರೆ.
ಯಶಸ್ವಿ ಚಿಕಿತ್ಸೆಯ ಬಗ್ಗೆ ರೋಗಿಯು ಸಂತೋಷವನ್ನು ವ್ಯಕ್ತಪಡಿಸಿದರು, ಅವರ ಕುಟುಂಬದ ಸದಸ್ಯರು ಅಂತಹ ಕ್ಲಿಷ್ಟಕರ ಹೃದಯ ಶಸ್ತ್ರಚಿಕಿತ್ಸೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಲು ಆಸ್ಪತ್ರೆಯ ವೈದ್ಯರಾದ ಡಾ.ಯುಸುಫ್ ಕುಂಬ್ಳೆ, ಡಾ.ಮಂಜುನಾಥ್ ಸುರೇಶ್ ಪಂಡಿತ್, ಡಾ.ಸಿದ್ಧಾರ್ಥ್ ವಿ.ಟಿ, ಡಾ.ಲತಾ ಆರ್., ಡಾ.ಪ್ರಾಚಿ ಶರ್ಮಾ ಮತ್ತು ಇಂಡಿಯಾನಾದ ಇಡೀ ತಂಡಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. “ಮಹಾಪಧಮನಿಯ ಕವಾಟದ ವಯಸ್ಸಿಗೆ ಸಂಬಂಧಿಸಿದ ಅವನತಿ ಮಹಾಪಧಮನಿಯ ಸ್ಟೆನೋಸಿಸ್ ಸಾಮಾನ್ಯ ಕಾರಣವಾಗಿದೆ. TAVI ವೃದ್ಧರಿಗೆ ಆದರ್ಶ ಚಿಕಿತ್ಸೆಯಾಗಿದೆ ಮತ್ತು ಇಂಡಿಯಾನಾ ಆಸ್ಪತ್ರೆ ಈ ಚಿಕಿತ್ಸೆಯಲ್ಲಿ ವಿಶೇಷ ಪರಿಣತಿ ಹೊಂದಿದೆ,” ಎನ್ನುತ್ತಾರೆ ಡಾ. ಯೂಸುಫ್ ಕುಂಬ್ಳೆ.
DAKSHINA KANNADA
ಅತ್ತಾವರ ಅಪಾರ್ಟ್ಮೆಂಟ್ನಲ್ಲಿ ಆಕಸ್ಮಿಕ ಬೆಂಕಿ – ವೃದ್ಧೆ ಸಾವು..!
ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್ ಮೆಂಟ್ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.
ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ತಕ್ಷಣ ಹೊರಬರಲಾಗದೇ ಉಸಿರುಗಟ್ಟಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
DAKSHINA KANNADA
ನ.30ರಂದು ಶ್ರೀ ಆದಿ ಕ್ಷೇತ್ರ ಜಾರದಲ್ಲಿ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ
ಮಂಗಳೂರು: ಧಾರ್ಮಿಕ ಕ್ಷೇತ್ರ ಜಾರದಲ್ಲಿ ನ. 30ರಂದು ಬೆಳಿಗ್ಗೆ 8 ಗಂಟೆಯಿಂದ ಜಾರಂದಾಯ ಬಂಟ ಪರಿವಾರ ಸಾನಿಧ್ಯ ಮತ್ತು ಕ್ಷೇತ್ರ ಕಲ್ಲುರ್ಟಿ ಸಾನಿಧ್ಯಗಳ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಲಿದೆ ಎಂದು ದೈವಜ್ಞ ಪ್ರಕಾಶ ವಿ. ಹೊಳ್ಳ ಶಕ್ತಿನಗರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
“ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಖ್ಯಾತ ವಾಸ್ತು ತಜ್ಞಮಹೇಶ್ ಮುನಿಯಂಗಳ ಇವರ ವಾಸ್ತು ವಿನ್ಯಾಸದೊಂದಿಗೆ ಸುಮಾರು 12 ರಿಂದ 15 ಕೋಟಿ ವೆಚ್ಚದಲ್ಲಿ ಹಂತ ಹಂತವಾಗಿ ಕ್ಷೇತ್ರ ಜೀರ್ಣೋದ್ಧಾರ ನಡೆಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದೆ. ಈಗಾಗಲೇ ನವೆಂಬರ್ 11ರಂದು ಜಾರಚಾವಡಿಯಲ್ಲಿ ಪ್ರಧಾನ ದೈವ ಜಾರಂದಾಯ ಬಂಟ ಮಾಯಾಂದಾಲ್ ದೈವಗಳ ನೇಮೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿದೆ. ನವೆಂಬರ್ 30ರಂದು
ಬೆಳಿಗ್ಗೆ 9.00 ಗಂಟೆಗೆ ಸರಳ ಜುಮಾದಿ ಬಂಟ ಹಾಗೂ ಪರಿವಾರ ದೈವಗಳಿಗೆ ಹಾಗೂ 11.00 ಗಂಟೆಗೆ ಶ್ರೀ ಜಾರ ಆದಿ ಕ್ಷೇತ್ರದ ಗಿರಿಯಲ್ಲಿ ಗ್ರಾಮ ದೈವ ಶ್ರೀ ಬಂಟ ಸರಳ ಜುಮಾದಿ ಬಂಟ ಮತ್ತು ಪರಿವಾರ ದೈವಗಳಿಗೆ ನಿಧಿ ಕುಂಬ ಮತ್ತು ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿದೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತಾಧಿಗಳು ತನು ಮನ ಧನಗಳಿಂದ ಸಹಕರಿಸಬೇಕು” ಎಂದು ಮನವಿ ಮಾಡಿದರು.
ಬಳಿಕ ಮಾತಾಡಿದ ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯ ಅವರು, “ಶ್ರೀ ಆದಿ ಕ್ಷೇತ್ರ ಜಾರ ಇದು ತುಳುನಾಡಿನ ಕಾರ್ಣಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಸಾನಿಧ್ಯ ಪ್ರಧಾನ ದೈವಗಳಾಗಿ ಶ್ರೀ ಉಳ್ಳಾಯ, ಶ್ರೀ ಜಾರಂದಾಯ ಬಂಟ, ಸರಳ ಧೂಮಾವತಿ ಬಂಟ, ಕಾಂತೇರಿ ಧೂಮಾವತಿ ಬಂಟ, ಮಾಯಾಂದಾಲ್ ದೈವ, ಪಿಲಿ ಚಾಮುಂಡಿ, ಬಬ್ಬರ್ಯ ದೈವಗಳು ಕ್ಷೇತ್ರ ಹಾಗೂ ಗ್ರಾಮದ ಮಾಗಣೆಯ ದೈವಗಳಾಗಿವೆ. ಕ್ಷೇತ್ರದ ಆದಿ ದೈವಗಳಾಗಿ ಕಲ್ಲುರ್ಟಿ, ಪಟ್ಟದ ಅಣ್ಣಪ್ಪ ಸ್ವಾಮಿ, ಸ್ಥಳದ ಪಂಜುರ್ಲಿ, ನಾಗಬ್ರಹ್ಮ ಪ್ರಧಾನ ಸಾನಿಧ್ಯಗಳಾಗಿವೆ” ಎಂದರು. ಸುದ್ದಿಗೋಷ್ಠಿಯಲ್ಲಿ ದೈವಜ್ಞ ಶ್ರೀ ಪ್ರಕಾಶ ವಿ. ಹೊಳ್ಳ ಶಕ್ತಿನಗರ, ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯರ , ಕ್ಷೇತ್ರದ ಗಡಿ ಪ್ರಧಾನರಾದ ಜತ್ತಿ ಪೂಜಾರಿ ಜಾರ, ಅಧ್ಯಕ್ಷರಾದ ಉದಯಶಂಕರ ಜಾರಮನೆ, ಕಾರ್ಯದರ್ಶಿ ಎಂ. ವಿಠಲ್ ಪೂಜಾರಿ ಕುಕ್ಕುದಡಿ, ಕೋಶಾಧಿಕಾರಿ ಜೀವನ್ ದಾಸ್ ಜಾರ ಮತ್ತಿತರರು ಉಪಸ್ಥಿತರಿದ್ದರು.
DAKSHINA KANNADA
Mangaluru: ಬೆಳ್ಮ ಬೋಲ್ದನ್ ಕುಟುಂಬಿಕರು ತರವಾಡು ಮನೆಯಲ್ಲಿ ಕೋಲೋತ್ಸವ
ಮಂಗಳೂರು: ಕೊಣಾಜೆ ಬೆಳ್ಮದಲ್ಲಿರುವ ಬೋಲ್ದನ್ ಕುಟುಂಬಿಕರ ತರವಾಡು ಮನೆಯಲ್ಲಿ ಕಲ್ಲುರ್ಟಿ, ಪಂಜುರ್ಲಿ, ಗುಳಿಗ ಮೂರನೇ ವರ್ಷದ ಕೋಲೋತ್ಸವ ಭಾನುವಾರ ರಾತ್ರಿ ಸಂಭ್ರಮದಿಂದ ಜರುಗಿತು.
ಭಾನುವಾರ ಬೆಳಿಗ್ಗೆ ಪ್ರಶಾಂತ್ ಉಡುಪ ಪೌರೋಹಿತ್ಯದಲ್ಲಿ ನಾಗತಂಬಿಲ, ಗಣಹೋಮ ನಡೆದ ಬಳಿಕ ಶ್ರೀ ವೆಂಕಟ್ರಮಣ ದೇವರ ಮುಡಿಪು ಕಟ್ಟುವಿಕೆಯಲ್ಲಿ ಸರ್ವ ಕುಟುಂಬಿಕರು ಪಾಲ್ಗೊಂಡು ದೇವತಾ ಕಾರ್ಯದಲ್ಲಿ ಭಾಗವಹಿಸಿದರು. ಮಧ್ಯಾಹ್ನ ಅನ್ನಸಂಪರ್ತಣೆ ನಡೆಯಿತು.
ಅದೇ ದಿನ ರಾತ್ರಿ 7.30ಕ್ಕೆ ದೈವದ ಭಂಡಾರ ಏರಿ ಬಳಿಕ ಕಲ್ಲುರ್ಟಿ , ಪಂಜುರ್ಲಿ, ಗುಳಿಗ ಕೋಲ ಉತ್ಸವ ಜರುಗಿತು. ಮರುದಿನ ಅಗೇಲು ಸೇವೆ ನಡೆಯಿತು.
ತರವಾಡು ಮನೆಯ ಮೋಹಿಣಿ ಬೆಳ್ಮ, ಐತಪ್ಪ ಬೆಳ್ತಂಗಡಿ, ಧರ್ಣಪ್ಪ ಧರ್ಮಸ್ಥಳ, ವಿಶ್ವನಾಥ ಕಡಬ, ದಯಾನಂದ್ ಹುಬ್ಬಳ್ಳಿ, ದೇವದಾಸ ಬೆಳ್ಮ, ಆನಂದ ಕಡಬ, ಚಂದ್ರಶೇಖರ ಎಕ್ಕೂರು, ಹರೀಶ ವರ್ಕಾಡಿ ಮೊದಲಾದವರು ಭಾಗವಹಿಸಿದ್ದರು.
ರಾತ್ರಿ ತರವಾಡಿನ ಆಡಳಿತ ಸಮಿತಿ ಪದಾಧಿಕಾರಿಗಳ ಸಭೆ ನಡೆದು ಲೆಕ್ಕ ಪತ್ರವನ್ನು ಕಾರ್ಯದರ್ಶಿ ಆನಂದ ಕಡಬ ಮಂಡಿಸಿದರು.
ಕ್ಷೇತ್ರದ ಅಂಗಣಕ್ಕೆ ಇಂಟರ್ಲಾಕ್ ಅಳವಡಿಸಿದ ದಯಾನಂದ ಹುಬ್ಬಳ್ಳಿ, ತರವಾಡು ಮನೆಗೆ ಗ್ರೈಂಡರ್ ನೀಡಿದ ಶೋಭಾ ವಾಮಂಜೂರು, ತರವಾಡು ಮನೆಗೆ ಕೊಡುಗೆಯಾಗಿ ನೀಡಿದ ಕುರ್ಚಿಗಳಿಗೆ ಆರ್ಥಿಕ ಸಹಕಾರ ನೀಡಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಲಾಯಿತು.
ದಿನಕರ ಕಯ್ಯಾರ, ವಿಕ್ರಾಂತ್ ಜಪ್ಪಿನಮೊಗರು , ಧನ್ರಾಜ್ ತಲಪಾಡಿ ಸೇರಿದಂತೆ ಸಮಿತಿ ಪದಾಧಿಕಾರಿಗಳು, ಸರ್ವ ಸದಸ್ಯರೂ ಉಪಸ್ಥಿತರಿದ್ದರು.
- FILM7 days ago
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ನೋಡಿ ‘ಕತ್ತೆ’ ಎಂದ ಕಿಚ್ಚ ಸುದೀಪ
- bengaluru6 days ago
ಇನ್ಸ್ಟಾಗ್ರಾಂನಲ್ಲಿ 11 ಸಾವಿರ ಫಾಲೋವರ್ಸ್ ಕಳೆದುಕೊಂಡ ಬಿಗ್ ಬಾಸ್ ಸ್ಪರ್ಧಿ ಸಂಗೀತಾ
- LATEST NEWS7 days ago
36 ಮಂದಿ ಶಬರಿಮಲೆ ಯಾತ್ರಿಕರನ್ನು ಒಯ್ಯುತ್ತಿದ್ದ ಬಸ್ ಪಲ್ಟಿ-7ಮಂದಿಗೆ ಗಾಯ..!
- DAKSHINA KANNADA6 days ago
Breaking news :ಮಂಗಳೂರಿನ ಹೊಟೇಲ್ ರೂಂನಲ್ಲಿ ಬೆಂಕಿ-ಒಳಗಿದ್ದ ವ್ಯಕ್ತಿ ಸಾವು