BELTHANGADY
ಬೆಳ್ತಂಗಡಿಯಲ್ಲಿ ಕೋಳಿ ನುಂಗಿದ ಅಪರೂಪದ ಸಾರಿಬಳ ಹಾವು
ಬೆಳ್ತಂಗಡಿ: ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅರಂತೊಟ್ಟು ಎಂಬಲ್ಲಿ ಅಪರೂಪದ ಸಾರಿಬಳ ಹಾವು ಪತ್ತೆಯಾಗಿದ್ದು ಇದನ್ನು ಉರಗ ಪ್ರೇಮಿ ಸ್ನೇಕ್ ಅಶೋಕ್ ಸುರಕ್ಷಿತವಾಗಿ ಹಿಡಿದು, ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.
ಕೊಯ್ಯೂರು ಗ್ರಾಮದ ಅರಂತೊಟ್ಟು ನಿವಾಸಿ ದೀಪಕ್ ಎಂಬುವರ ಮನೆಯಲ್ಲಿ ಸುಮಾರು 5 ಅಡಿ ಉದ್ದದ ಸಾರಿಬಳ ಹಾವು ಕೋಳಿಮರಿಯನ್ನು ನುಂಗುತ್ತಿದ್ದ ಸಮಯ ಅದನ್ನು ಕಂಡ ಮನೆಯವರು ಉರಗಮಿತ್ರ ಸ್ನೇಕ್ ಅಶೋಕ್ ಲಾಯಿಲ ಅವರಿಗೆ ಮಾಹಿತಿ ನೀಡಿದ್ದಾರೆ.
ಅವರು ತಕ್ಷಣ ಅವರು ಆಗಮಿಸಿ ರಕ್ಷಿಸಿದ್ದಾರೆ. ಫೋರೆಸ್ಟನ್ಸ್ ಬೆಕ್ಕು ಹಾವು ಅಥವಾ ಸಾರಿಬಳ ಎಂದೇ ಕರೆಯಲ್ಪಡುವ ಈ ಹಾವು ಹೆಚ್ಚಾಗಿ ಗುಜರಾತ್, ಕೇರಳ ಹಾಗೂ ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶದ ಕಾಡುಗಳಲ್ಲಿ ಕಂಡು ಬರುತ್ತದೆ. ಇವು ಜನವಸತಿ ಪ್ರದೇಶದಲ್ಲಿ ಕಂಡುಬರುವುದು ತೀರಾ ವಿರಳ.
ರಾತ್ರಿ ಸಮಯ ಹೆಚ್ಚಿನ ಸಂಚಾರ ನಡೆಸುವ ಇವುಗಳ ಪ್ರಮುಖ ಆಹಾರ ಸಣ್ಣ ಪಕ್ಷಿ, ಮೊಟ್ಟೆ, ಇಲಿ, ಬಾವಲಿ ಇತ್ಯಾದಿ. ಇವುಗಳಲ್ಲೂ ಎರಡು ಪ್ರಭೇದಗಳಿದ್ದು ಬೂದು ಬಣ್ಣ ಹಾಗೂ ಕಪ್ಪು ಚುಕ್ಕೆ, ಇನ್ನೊಂದು ಪ್ರಭೇದ ಕಪ್ಪು ಚುಕ್ಕೆಗಳೊಂದಿಗೆ, ತಿಳಿ ಕೆಂಪು, ಕಂದು ಬಣ್ಣವನ್ನು ಹೊಂದಿರುತ್ತದೆ.
ಕೊಯ್ಯೂರಿನಲ್ಲಿ ಈ ಪ್ರಭೇದದ ಹಾವು ಕಂಡುಬಂದಿದೆ. ತನ್ನ 11 ವರ್ಷಗಳ ಹಾವು ಹಿಡಿಯುವ ಸೇವೆಯಲ್ಲಿ ಇದುವರೆಗೆ ಬೂದು ಬಣ್ಣದ ಸಾರಿಬಾಳ ಎರಡು ಬಾರಿ ಹಾಗೂ ತಿಳಿ ಕೆಂಪು ಕಂಡು ಕಂದು ಬಣ್ಣದ ಹಾವು ಇದೇ ಮೊದಲ ಬಾರಿ ಕಂಡು ಬಂದಿದೆ ಎಂದು ಅಶೋಕ್ ಅವರು ತಿಳಿಸಿದ್ದಾರೆ.
ಇವು ವಿಷ ರಹಿತ ಹಾವುಗಳಾಗಿದ್ದು ಕಟ್ಟುಹಾವನ್ನು ಹೋಲುವುದರಿಂದ ಇವು ಕಂಡು ಬಂದಲ್ಲಿ ಜನರು ಕೊಲ್ಲಲು ಮುಂದಾಗುತ್ತಿದ್ದಾರೆ.
ಎಲ್ಲ ಜೀವಿಗಳಂತೆ ಹಾವುಗಳಿಗೂ ಬದುಕುವ ಹಕ್ಕಿದ್ದು ಯಾವುದೇ ಹಾವು ಕಂಡು ಬಂದರೆ ಅವುಗಳನ್ನು ರಕ್ಷಿಸುವುದು ಅತಿ ಅಗತ್ಯ ಎಂದು ಸ್ನೇಕ್ ಅಶೋಕ್ ತಿಳಿಸಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
BELTHANGADY
ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ
ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.
ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!
ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.
- FILM7 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA6 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS7 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ