bengaluru
ಡಿಸೆಂಬರ್ನಲ್ಲಿ ಮಡಿಕೇರಿ ಬೆಡಗಿ ರಶ್ಮಿಕಾ ಮಂದಣ್ಣ -ದೇವರಕೊಂಡ ಮದುವೆ?
ಬೆಂಗಳೂರು: ಸದ್ಯ ದಕ್ಷಿಣ ಭಾರತದಲ್ಲಿ ಅತ್ಯಂತ ಬಿಜಿಯಾಗಿರುವ ಕಿರಿಕ್ ಹುಡುಗಿ ರಶ್ಮಿಕಾ ಮಂದಣ್ಣ ಮದುವೆ ವಿಚಾರ ಮುನ್ನೆಲೆಗೆ ಬಂದಿದೆ.
ಇದೇ ವರ್ಷದ ಕೊನೆಯ ತಿಂಗಳಲ್ಲಿ ಅವರು ಮದುವೆ ಆಗಲಿದ್ದಾರೆ ಎನ್ನುವ ಸುದ್ದಿ ದಟ್ಟವಾಗಿದೆ.ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಒಟ್ಟಾಗಿ ಓಡಾಡುತ್ತಿರುವ ವಿಚಾರ ಗುಟ್ಟಾಗೇನೂ ಉಳಿದಿಲ್ಲ.
ಹೊಸ ವರ್ಷವನ್ನು ಒಟ್ಟಿಗೆ ಗೋವಾದಲ್ಲಿ ಆಚರಿಸಿದ್ದರು. ಅಲ್ಲದೇ, ಮುಂಬೈನ ಹೋಟೆಲ್ ನಲ್ಲಿ ತಡರಾತ್ರಿ ಒಟ್ಟಾಗಿ ಊಟ ಮಾಡಿದ ಫೋಟೋಗಳು ಮತ್ತು ವಿಡಿಯೋಗಳು ಸಖತ್ ಸದ್ದು ಮಾಡಿದ್ದವು.
ಇಬ್ಬರು ಡೇಟಿಂಗ್ ನಲ್ಲಿ ಇದ್ದಾರೆ ಎನ್ನುವ ಸುದ್ದಿ ಕೂಡ ಹಳೆತಾಗುತ್ತಿರುವ ಹೊತ್ತಿನಲ್ಲಿ ವಿಜಯ್ ಕರ್ನಾಟಕದ ಅಳಿಯನಾಗಲಿದ್ದಾರೆ ಎನ್ನುವ ತಾಜಾ ಸುದ್ದಿ ಹೊರ ಬಿದ್ದಿದೆ.
ಪುಷ್ಪಾ ಸಿನಿಮಾದ ನಂತರ ರಶ್ಮಿಕಾ ಮತ್ತಷ್ಟು ಬ್ಯುಸಿಯಾಗಿದ್ದಾರೆ. ಬಾಲಿವುಡ್ ನಿಂದಲೂ ಅವರು ಆಫರ್ಸ್ ಬರುತ್ತಿವೆ. ಹಾಗಾಗಿ ಈ ವರ್ಷದ ಅಂತ್ಯಕ್ಕೆ ಇಬ್ಬರೂ ಸಪ್ತಪದಿ ತುಳಿಯಲಿದ್ದಾರೆ ಎನ್ನುವುದು ಹೊಸ ಟ್ವಿಸ್ಟ್.ತಾನು ಇಷ್ಟಪಟ್ಟ ಹುಡುಗನನ್ನೇ ಮದುವೆ ಆಗುವುದಾಗಿ ಈಗಾಗಲೇ ರಶ್ಮಿಕಾ ಮಂದಣ್ಣ ಘೋಷಣೆ ಮಾಡಿದ್ದಾರೆ.
ರಕ್ಷಿತ್ ಶೆಟ್ಟಿ ಜತೆಗಿನ ನಿಶ್ಚಾರ್ಥ ಮುರಿದ ನಂತರ ಮದುವೆ ವಿಷಯದಲ್ಲಿ ಎಚ್ಚರಿಕೆಯ ಹೆಜ್ಜೆ ಇಡುತ್ತಿದ್ದಾರೆ. ಸದ್ಯ ಹಬ್ಬಿರುವ ಗಾಳಿ ಸುದ್ದಿ ನಿಜವಾಗತ್ತಾ? ಅಥವಾ ಇದು ಗಾಸಿಪ್ ಆಗಿಯೇ ಉಳಿಯತ್ತಾ ಎನ್ನುವುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.
ಈಗಾಗಲೇ ವಿಜಯ್ ದೇವರಕೊಂಡ ಕುಟುಂಬಕ್ಕೆ ರಶ್ಮಿಕಾ ತೀರಾ ಹತ್ತಿರವಾಗಿದ್ದರಿಂದ, ಹಬ್ಬಗಳು ಮತ್ತು ಕುಟುಂಬದ ಕಾರ್ಯಕ್ರಮಗಳಿಗೆ ವಿಜಯ್ ಕುಟುಂಬ ರಶ್ಮಿಕಾ ಆಹ್ವಾನ ನೀಡುತ್ತಿರುವುದರಿಂದ ನೂರಕ್ಕೆ ನೂರರಷ್ಟು ಈ ಜೋಡಿ ಮದುವೆ ಆಗಲಿದೆ ಎನ್ನುವುದು ಅಸಲಿ ವಿಷ್ಯ.
bengaluru
ಹರ್ಷಿಕಾ ಪೂಣಚ್ಚ – ಭುವನ್ ಗೌಡ ದಂಪತಿ ಮೇಲೆ ಹ*ಲ್ಲೆ; ನಾವು ಪಾಕಿಸ್ತಾನದಲ್ಲಿ ಅಥವಾ ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿದ್ದೇವೆಯೇ ? ಏಂದು ಕೇಳಿದ ನಟಿ
ಬೆಂಗಳೂರು : ನಟಿ ಹರ್ಷಿಕಾ ಪೂಣಚ್ಚ ಹಾಗೂ ಅವರ ಪತಿ ಭುವನ್ ಪೊನ್ನಣ್ಣ ದಂಪತಿ ಮೇಲೆ ಹ*ಲ್ಲೆ ನಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪರಿಣಾಮ ಭುವನ್ ಗೆ ಗಾ*ಯವಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹರ್ಷಿಕಾ ಪೂಣಚ್ಚ ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.
ಗೆಳೆಯರೇ, ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ? ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಗ*ಲಾಟೆಯ ವೀಡಿಯೋವನ್ನೂ ಹರ್ಷಿಕಾ ಹಂಚಿಕೊಂಡಿದ್ದಾರೆ. ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಭ*ಯಾನಕ ಅನುಭವ ಆಗಿದೆ ಎಂದು ಅವರು ಹೇಳಿದ್ದಾರೆ.
ಹರ್ಷಿಕಾ ಬರೆದ ಪೋಸ್ಟ್ ನಲ್ಲಿ ಏನಿದೆ?
ಗೆಳೆಯರೇ ,ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ? ನಮಸ್ಕಾರ, ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ನಮ್ಮ ಬೆಂಗಳೂರಿನಲ್ಲಿ ನನಗಾದ ಭಯಾನಕ ಅನುಭವವನ್ನು ಹಂಚಿಕೊಳ್ಳಲು ನಿರ್ಧರಿಸಿದ್ದೇನೆ.
ನನ್ನ ಸ್ನೇಹಿತರು, ಕುಟುಂಬ ಮತ್ತು ಪೊಲೀಸ್ ಇಲಾಖೆಯಲ್ಲಿನ ಕೆಲವು ಪರಿಚಯಸ್ಥರೊಂದಿಗೆ ಮಾತನಾಡಿದ ನಂತರ ನಾನು ಈ ವಿಷಯವನ್ನು ಅಲ್ಲಿಗೇ ಬಿಟ್ಟು ಬಿಡುತ್ತೇನೆ ಎಂದು ಯೋಚಿಸಿದೆ ಆದರೆ ನನ್ನ ಅನುಭವದಿಂದ ಮತ್ತಿರರಿಗೆ ಸಹಾಯ ವಾಗ ಬಹುದು ಎಂದು ಯೋಚಿಸಿ ನಾನು ಅದರ ಬಗ್ಗೆ ಪೋಸ್ಟ್ ಮಾಡಲು ನಿರ್ಧರಿಸಿದೆ.
ಒಂದೆರಡು ದಿನಗಳ ಹಿಂದೆ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ “ಕರಾಮಾ” ಎಂಬ ರೆಸ್ಟೊರೆಂಟ್ನಲ್ಲಿ ಸಂಜೆ ಕುಟುಂಬದೊಂದಿಗೆ ಊಟ ಮಾಡಲು ತೆರಳಿದ್ದೆ. ಭೋಜನವನ್ನು ಮುಗಿಸಿದ ನಂತರ ನಾವು ವಾಲೆಟ್ ಪಾರ್ಕಿಂಗ್ನಿಂದ ನಮ್ಮ ವಾಹನವನ್ನು ಸ್ವೀಕರಿಸಿ ಹೊರಡುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಡ್ರೈವರ್ ಸೀಟ್ ಕಿಟಕಿಯ ಬಳಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡು, ನಿಮ್ಮ ವಾಹನವು ತುಂಬಾ ದೊಡ್ಡದಾಗಿದೆ, ಇದ್ದಕ್ಕಿದ್ದಂತೆ ಚಲಿಸಿದಲ್ಲಿ ಅದು ನಮ್ಮನ್ನು ಮುಟ್ಟಬಹುದು ಎಂದು ವಾದಿಸಲು ಪ್ರಾರಂಭಿಸಿದರು.
ನನ್ನ ಪತಿಯ ಚಿನ್ನದ ಸರ ಕಸಿಯಲು ಯತ್ನ :
ನನ್ನ ಪತಿ “ಇನ್ನು ವಾಹನ ಮೂವ್ ಮಾಡಿಲ್ವಲ್ಲ ಸೈಡು ಬಿಡಿ” ಎಂದು ಹೇಳಿದರು. ಏಕೆಂದರೆ ಅವರು ಸಂಭವನೀಯ ಘಟನೆ ಬಗ್ಗೆ ಮಾತನಾಡುತ್ತಿದ್ದು ಅದರಲ್ಲಿ ಅರ್ಥವಿರಲಿಲ್ಲ. ನಾವು ವಾಹನವನ್ನು ಸ್ವಲ್ಪ ಮುಂದಕ್ಕೆ ಸರಿಸಿದೆವು, ಅಷ್ಟರೊಳಗೆ ಈ ಇಬ್ಬರು ವ್ಯಕ್ತಿಗಳು ನಮ್ಮನ್ನು ಅವರ ಭಾಷೆಯಲ್ಲಿ ನಿಂದಿಸಲು ಪ್ರಾರಂಭಿಸಿದರು, ಈ ಲೋಕಲ್ ಕನ್ನಡಿಗರಿಗೆ ಪಾಠ ಕಲಿಸಬೇಕು ಎಂದು ಹೇಳಿ ನನ್ನ ಪತಿಯ ಮುಖದ ಮೇಲೆ ಹೊಡೆಯಲು ಸಹ ಪ್ರಯತ್ನಿಸಿದರು.
ನನ್ನ ಪತಿ ತುಂಬಾ ತಾಳ್ಮೆಯಿಂದಿದ್ದರು ಮತ್ತು ಹೆಚ್ಚು ಪ್ರತಿಕ್ರಿಯಿಸಲಿಲ್ಲ. ನನಗೆ ಆಶ್ಚರ್ಯವಾಯಿತು. ಏಕೆಂದರೆ ಅವರು ಸಾಮಾನ್ಯವಾಗಿ ತುಂಬಾ ಸಿಟ್ಟು ಸ್ವಭಾವದವರು. 2 – 3 ನಿಮಿಷಗಳಲ್ಲಿ ಅದೇ ಗ್ಯಾಂಗ್ನ 20 – 30 ಸದಸ್ಯರ ಗುಂಪು ಜಮಾಯಿಸಿತು ಮತ್ತು ಅವರಲ್ಲಿ 2 ಜನರು ನನ್ನ ಗಂಡನ ಚಿನ್ನದ ಸರವನ್ನು ಕಿತ್ತು, ಅದನ್ನು ಬಹಳ ಕೌಶಲ್ಯದಿಂದ ತಮ್ಮ ಕಡೆಗೆ ಎಳೆಯಲು ಪ್ರಯತ್ನಿಸಿದರು. ನನ್ನ ಪತಿ ಇದನ್ನು ಸಮಯಕ್ಕೆ ಸರಿಯಾಗಿ ಅರಿತುಕೊಂಡರು. ಅದನ್ನು ಹಿಡಿದಿಟ್ಟುಕೊಂಡು ನನಗೆ ಕೊಟ್ಟರು.
ಕನ್ನಡ ಮಾತನಾಡಿದ್ದಕ್ಕೆ ನಿಂದನೆ :
ಅಷ್ಟೊತ್ತಿಗಾಗಲೇ ಇಡೀ ತಂಡವು ಚಿನ್ನದ ಸರ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕೈಗೆ ಸಿಗದೆ ರೊಚ್ಚಿಗೆದ್ದು ವಾಹನಕ್ಕೆ ಹಾನಿ ಮಾಡಿ ನಮಗೆ ಅಥವಾ ಯಾರಿಗೂ ಅರ್ಥವಾಗದ ವಿಷಯಗಳನ್ನು ಹೇಳಿ ನಮ್ಮನ್ನು ದೈಹಿಕವಾಗಿ ನಿಂದಿಸಲು ಪ್ರಯತ್ನಿಸಿದರು. ನಮ್ಮ ವಾಹನದಲ್ಲಿ ಮಹಿಳೆಯರು ಮತ್ತು ಕುಟುಂಬದವರು ಇದ್ದ ಕಾರಣ ನನ್ನ ಪತಿ ಹೆಚ್ಚು ಪ್ರತಿಕ್ರಿಯಿಸಲಿಲ್ಲ.
ಅಲ್ಲದೆ, ನಾನು ಗಮನಿಸಿದ್ದು ಏನೆಂದರೆ ಇವರಿಗೆ ನಾವು ಕನ್ನಡದಲ್ಲಿ ಮಾತನಾಡುತ್ತಿದ್ದೇವೆ ಎಂಬುದು ಸಮಸ್ಯೆ ಆಗಿತ್ತು. ಅವರು ನೀವು ನಮ್ಮ ಪ್ರದೇಶಕ್ಕೆ ಬಂದು ನಿಮಗೆ ಬೇಕಾದ ಭಾಷೆಗಳಲ್ಲಿ ಮಾತನಾಡುವುದನ್ನು ನಿಲ್ಲಿಸಿ. “ಯೇ ಲೋಕಲ್ ಕನ್ನಡ್ ವಾಲಾ ಹೇ” (ಈ ವ್ಯಕ್ತಿಗಳು ಸ್ಥಳೀಯ ಕನ್ನಡ ಜನರು) ನನ್ನ ಗಂಡ ಮತ್ತು ನಾನು ಕನ್ನಡದಲ್ಲಿ ಮಾತ್ರ ಮಾತನಾಡಿದಾಗ ಅದು ಅವರನ್ನು ಹೆಚ್ಚು ಕೆರಳಿಸಿತು.
ನಿಮ್ಮ “ಕನ್ನಡ ಸ್ಟೈಲ್”ಯನ್ನು ನೀವೇ ಇಟ್ಟುಕೊಳ್ಳಿ ಎಂದರು. ಆ ಗುಂಪಿನಲ್ಲಿ ಹೆಚ್ಚಿನವರು ಹಿಂದಿ, ಉರ್ದು ಮತ್ತು ಕೆಲವರು ಮುರಿದ ಕನ್ನಡದಲ್ಲಿ ಮಾತನಾಡುತ್ತಿದ್ದರು.
ಪೊಲೀಸರೂ ಸಹಾಯ ಮಾಡಲಿಲ್ಲ :
ನಾನು ನಮಗೆ ಪರಿಚಯವಿದ್ದ ಒಬ್ಬರು ಇನ್ಸ್ಪೆಕ್ಟರ್ಗೆ ತುರ್ತು ಕರೆ ಮಾಡಿದಾಗ ಅವರೆಲ್ಲರೂ ಏನೂ ಆಗಿಲ್ಲ ಎಂಬಂತೆ ಕೆಲವೇ ಸೆಕೆಂಡುಗಳಲ್ಲಿ ಚದುರಿ ಹೋದರು. ನಾವು ಅವರನ್ನು ಹುಡುಕಲು ಪ್ರಯತ್ನಿಸಿದೆವು. ಆದರೆ ಅವರು ಮಾಯವಾಗಿದ್ದರು. ನಾವು ಸಮೀಪದಲ್ಲಿ ಹತ್ತಿರದ ಪೊಲೀಸ್ ಠಾಣೆಯ ಗಸ್ತು ಪೊಲೀಸ್ ವಾಹನವನ್ನು ಕಂಡು ಘಟನೆಯನ್ನು ASI ಶ್ರೀ ಉಮೇಶ್ ಅವರಿಗೆ ವಿವರಿಸಿದೆವು.
ಅವರು ನಮಗೆ ಸಹಾಯ ಮಾಡಲು ಹೆಚ್ಚು ಆಸಕ್ತಿ ತೋರಲಿಲ್ಲ. ಇಲಾಖೆಯ ಮೇಲಧಿಕಾರಿಗಳ ಜತೆ ಮಾತನಾಡಬೇಕು ಎಂದ ಅವರು, ಬಂದು ಏನಾಯಿತು ಎಂದು ತಿಳಿದುಕೊಳ್ಳುವ ಸೌಜನ್ಯವನ್ನು ತೋರಲಿಲ್ಲ. ಕೇವಲ 2 ಕಟ್ಟಡಗಳ ಮುಂದಿರುವ ರೆಸ್ಟೊರೆಂಟ್ನ ಮುಂದೆ ಮೂಸಂಬಿ ಜ್ಯೂಸ್ ಕುಡಿಯುತ್ತ ಕಾರ್ ನಲ್ಲಿ ಕುಳಿತಿದ್ದರು.
ಈ ಘಟನೆಯ ನಂತರ ನಾನು ಮಾನಸಿಕವಾಗಿ ಸಂಪೂರ್ಣ ಆಘಾತಕ್ಕೊಳಗಾಗಿದ್ದೇನೆ. ನಾನು ಹುಟ್ಟಿ ಬೆಳೆದ ನಗರದಲ್ಲಿ ಹೊರಗೆ ಹೋಗಲು ನನಗೆ ಇನ್ನೂ ಭಯವಾಗುತ್ತಿದೆ. ನನಗೆ ಜೀವನದಲ್ಲಿ ಎಲ್ಲವನ್ನು ಕೊಟ್ಟ ನಗರದಲ್ಲಿ ಇಂತಹ ಅನುಭವ ಆಗಿದ್ದು ಇದೇ ಮೊದಲು. ಇದನ್ನು ಪೊಲೀಸ್ ಇಲಾಖೆ ಮತ್ತು ಕರ್ನಾಟಕ ಸರ್ಕಾರದ ಗಮನಕ್ಕೆ ತರಲು ಮತ್ತು ಭವಿಷ್ಯದಲ್ಲಿ ಯಾವುದೇ ಮಹಿಳೆ ಅಥವಾ ಕುಟುಂಬಗಳು ಬೆಂಗಳೂರಿನಲ್ಲಿ ಇಂತಹ ಕೆಟ್ಟ ಅನುಭವಕ್ಕೆ ಒಳಗಾಗಬಾರದು ಎಂದು ನಾನು ಇದನ್ನು ಪೋಸ್ಟ್ ಮಾಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
ನಾವು ಪಾಕಿಸ್ತಾನದಲ್ಲಿದ್ದೇವಾ?
ಬೆಂಗಳೂರಿನಲ್ಲಿ ಶಾಂತಿಯುತವಾಗಿ ಜೀವನ ನಡೆಸುತ್ತಿರುವ ಜನರೊಂದಿಗೆ ಇಂತಹ ಗ*ಲಾಟೆ ಸೃಷ್ಟಿಸುವ ಹಕ್ಕು ಯಾರಿಗೂ ಇಲ್ಲ! ಇದನ್ನು ಕಣ್ಣೆದುರು ನೋಡುತ್ತಿರುವಾಗ ನನ್ನ ಮನಸ್ಸಿನಲ್ಲಿ ಒಂದೆರಡು ಪ್ರಶ್ನೆಗಳು ಮೂಡಿದವು.
1. ನಾವು ಪಾಕಿಸ್ತಾನದಲ್ಲಿ ಅಥವಾ ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿದ್ದೇವೆಯೇ ?
2. ಹಾಗಿದ್ದರೆ ನಾವು ನಮ್ಮ ಊರಿನಲ್ಲಿ ಕನ್ನಡ ಮಾತನಾಡುವುದೇ ತಪ್ಪಾ?
3. ನಮ್ಮ ಸ್ವಂತ ನಗರದಲ್ಲಿ ನಾವು ಎಷ್ಟು ಸುರಕ್ಷಿತವಾಗಿರುತ್ತೇವೆ?
4. ನಮ್ಮ ಬೆಂಗಳೂರಿನಲ್ಲಿ ಹುಟ್ಟಿ ಬೆಳೆದು, ಇಂತಹ ದೀರ್ಘಾವಧಿಯ ಮಾನಸಿಕ ಆಘಾತಕ್ಕೆ ಕಾರಣವಾಗುವ ಇಂತಹ ಘಟನೆಗಳನ್ನು ಮುಚ್ಚಿ ಹಾಕಬೇಕೆ ?
‘ಕರ್ನಾಟಕದ ಮಾನ್ಯ ಮುಖ್ಯ ಮಂತ್ರಿಗಳು ಹಾಗು ಕರ್ನಾಟಕದ ರಾಜ್ಯ ಪೊಲೀಸ್ ಇಲಾಖೆಯವರು ಈ ಬಗ್ಗೆ ವಿಚಾರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತೇನೆ. ಇಂತಿ , ಹರ್ಷಿಕಾ ಪೂಣಚ್ಚ [ಚಿತ್ರನಟಿ]ಬೆಂಗಳೂರು. (ಈ ಇಡೀ ಘಟನೆಯ ನಡುವೆ ನನ್ನ ಕುಟುಂಬದ ಸದಸ್ಯರು ಚಿತ್ರೀಕರಿಸಿದ ವೀಡಿಯೊವನ್ನು ಪೋಸ್ಟ್ ಮಾಡುತ್ತಿದ್ದೇನೆ. ಅಷ್ಟು ಸ್ಪಷ್ಟವಾಗಿಲ್ಲ ಹಾಗು ಘಟನೆಯ ಮದ್ಯದಿಂದ ಅವರಿಗೆ ತಿಳಿದಷ್ಟು ಚಿತ್ರೀಕರಿಸಿದ್ದಾರೆ) ಎಂದು ಹರ್ಷಿಕಾ ಪೋಸ್ಟ್ ಮಾಡಿದ್ದಾರೆ.
ಇನ್ನು ಈ ಪೋಸ್ಟ್ ಗೆ ಹಲವರು ಕಮೆಂಟ್ಸ್ ಮಾಡಿದ್ದು, ಕಮಿಷನರ್ ಗೆ ಈ ಪೋಸ್ಟ್ ಟ್ಯಾಗ್ ಮಾಡಿ ಎಂದಿದ್ದಾರೆ. ಇನ್ನು ಕೆಲವರು, ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದಾರೆ. ಇಂತಹ ಹೋಟೆಲ್ ಹಾಗೂ ಸ್ಥಳಗಳಿಗೆ ಭೇಟಿ ನೀಡಬೇಡಿ ಎಂದು ಸಲಹೆ ನೀಡಿದ್ದಾರೆ.
bengaluru
ಬೆಂಗಳೂರಿನ ಖ್ಯಾತ ಯೂಟ್ಯೂಬರ್ ಬಂಧನ; ಮುಳುವಾಯ್ತು ಆ ಒಂದು ವೀಡಿಯೋ!
ಬೆಂಗಳೂರು : ಬೆಂಗಳೂರಿನ ಖ್ಯಾತ ಯೂಟ್ಯೂಬರ್ ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಯಲಹಂಕ ಮೂಲದ ವಿಕಾಸ್ ಗೌಡ ಬಂಧಿತ ಯೂಟ್ಯೂಬರ್. ಅನುಮತಿ ಇಲ್ಲದ ಸ್ಥಳದಲ್ಲಿ ವಿಡೀಯೋ ಚಿತ್ರೀಕರಣ ಮಾಡಿದ್ದೇ ವಿಕಾಸ್ ಪಾಲಿಗೆ ಮುಳುವಾಗಿದೆ.
ವಿಕಾಸ್ ಮಾಡಿದ ತಪ್ಪೇನು?
ವಿಕಾಸ್ ಗೌಡ ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ನಲ್ಲಿ ವೀಡಿಯೋ ಚಿತ್ರೀಕರಿಸಿದ್ದರು. ಈ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ‘ಟಿಕೆಟ್ ಇಲ್ಲದೆ ಒಳಗಡೆ ಬಂದಿದ್ದೇನೆ. 24 ಗಂಟೆ ರನ್ ವೇ ಬಳಿಯೇ ಇದ್ದೆ. ಎಲ್ಲ ಅಧಿಕಾರಿಗಳ ಸಿಬ್ಬಂದಿ ಕಣ್ಣು ತಪ್ಪಿಸಿ ವಿಮಾನ ನಿಲ್ದಾಣದ ಒಳಗೆ ಪ್ರವೇಶ ಮಾಡಿ, ವಿಡಿಯೋ ಮಾಡಿದ್ದೇನೆ ಎಂದಿದ್ದರು.
ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈ ವೀಡಿಯೋ ಗಮನಿಸಿದ ಸಿಐಎಸ್ ಎಫ್ ಅಧಿಕಾರಿಗಳು ವಿಕಾಸ್ ಗೌಡ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಟಿಕೆಟ್ ಪಡೆದಿದ್ದ ವಿಕಾಸ್ :
ವಿಕಾಸ್ ಗೌಡ ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಪಡೆದಿದ್ದರು. ಟಿಕೆಟ್ ಪಡೆದು ಪ್ರಯಾಣ ಬೆಳೆಸದೆ ರನ್ ವೇ ಯಲ್ಲಿ ಉಳಿದುಕೊಂಡಿದ್ದರು. ಸುಮಾರು ನಾಲ್ಕೈದು ಗಂಟೆ ಉಳಿದುಕೊಂಡು, ವೀಡಿಯೋ ಮಾಡಿ ತೆರಳಿದ್ದರು ಎನ್ನಲಾಗಿದೆ. ಈ ಬಗ್ಗೆ ಸ್ವತಃ ವಿಕಾಸ್ ಗೌಡ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾರೆ.
ವಿಕಾಸ್ ಗೌಡ ಯೂಟ್ಯೂಬ್ ಮೂಲಕ ಖ್ಯಾತರಾಗಿದ್ದಾರೆ. ಟ್ರಾವೆಲ್, ಫುಡ್ ಹೀಗೆ ವಿವಿಧ ರೀತಿಯ ವಿಚಾರಗಳನ್ನು ಯೂಟ್ಯೂಬ್ ನಲ್ಲಿ ಹಂಚಿಕೊಳ್ಳುತ್ತಿದ್ದರು. ಅವರು 113k Subscribers ಹೊಂದಿದ್ದಾರೆ. ಅವರ ವೀಡಿಯೋಗಳು ಸಾವಿರಗಟ್ಟಲೆ ವೀಕ್ಷಣೆ ಪಡೆಯುತ್ತವೆ. ಆದರೆ, ಈ ಬಾರಿ ಅವರು ಮಾಡಿರುವ ಎಡವಟ್ಟಿಂದ ಜೈಲು ಸೇರುವಂತಾಗಿದೆ.
bengaluru
ರಾಮೇಶ್ವರಂ ಕೆಫೆ ಸ್ಫೋ*ಟ ಪ್ರಕರಣ : ಪ.ಬಂಗಾಳದಲ್ಲಿ ಮಾಸ್ಟರ್ ಮೈಂಡ್ ಅರೆಸ್ಟ್
ಬೆಂಗಳೂರು : ಕರ್ನಾಟಕವನ್ನು ಬೆಚ್ಚಿ ಬೀಳಿಸಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋ*ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಬಂಧಿಸಲಾಗಿದೆ. ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ಬಂಧಿಸಲಾಗಿದೆ.
ಮುಸಾವೀರ್ ಐಇಡಿ ತಂದಿದ್ದ ಹಾಗೂ ಅಬ್ದುಲ್ ಮತೀನ್ ತಾಹ ಸ್ಫೋ*ಟಕ್ಕೆ ರೂಪುರೇಷೆ ಸಿದ್ಧಪಡಿಸಿದ್ದ ಎನ್ನಲಾಗಿದೆ. ಇಬ್ಬರು ತೀರ್ಥಹಳ್ಳಿಯವರು ಎಂದು ಹೇಳಲಾಗಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಇವರಿಗೆ ಸಹಾಯ ಮಾಡಿದ್ದ ಮುಜಾಮೀಲ್ ಷರೀಫ್ ಎಂಬಾತನನ್ನು ಕೂಡ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಎನ್ ಐ ಎ :
ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಬಲೆ ಬೀಸಿದ್ದ ಎನ್ಐಎ ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಎನ್ಐಎ ಶೋಧ ನಡೆಸಿತ್ತು. ರಾಮೇಶ್ವರಂ ಕೆಫೆ ಬಾಂ*ಬ್ ಸ್ಫೋ*ಟ ಪ್ರಕರಣ ಬ್ಲಾಸ್ಟ್ ನ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹ ಹಾಗೂ ಮಸಾವೀರ್ ಬಗ್ಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಘೋಷಿಸಿತ್ತು. ಇಬ್ಬರ ಫೋಟೋ ರಿಲೀಸ್ ಮಾಡಿದ್ದ ಎನ್ಐಎ ಅಧಿಕಾರಿಗಳು, ಈ ಇಬ್ಬರ ಬಗ್ಗೆಯೂ ಸುಳಿವು ನೀಡುವಂತೆ ಮನವಿ ಮಾಡಿದ್ದರು. ಅಲ್ಲದೇ, ಇವರಿಬ್ಬರ ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದರು.
ಇಬ್ಬರೂ ಶಂಕಿತ ಉ*ಗ್ರರು ಅಸ್ಸಾಂ ಮತ್ತು ಬಂಗಾಳದಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದ ಎನ್ಐಎ ತಂಡ ಇದೀಗ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಮಾರ್ಚ್ 1 ರಂದು ವೈಟ್ಫೀಲ್ಡ್ ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂ*ಬ್ ಸ್ಫೋ*ಟಗೊಂಡಿತ್ತು. ಇದು ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆಯಲ್ಲಿ ಕೆಲವರು ಗಾ*ಯಗೊಂಡಿದ್ದರು. ಬಳಿಕ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಲಾಗಿತ್ತು.