Connect with us

    FILM

    ಸಲ್ಮಾನ್ ಖಾನ್ ಜೊತೆ ನಟಿಸಲಿದ್ದಾರೆ ರಶ್ಮಿಕಾ ಮಂದಣ್ಣ; ಯಾವ ಸಿನಿಮಾ? ಇಲ್ಲಿದೆ ಡಿಟೇಲ್ಸ್

    Published

    on

    ಮಂಗಳೂರು / ಮುಂಬೈ : ರಶ್ಮಿಕಾ ಮಂದಣ್ಣ ಯಾರಿಗೆ ತಾನೇ ಗೊತ್ತಿಲ್ಲ. ಸ್ಯಾಂಡಲ್ ವುಡ್ ನ ‘ಕಿರಿಕ್ ಪಾರ್ಟಿ’ ಮೂಲಕ ಜನಮನ ಗೆದ್ದು, ಸದ್ಯ ಪರಭಾಷೆ ಅಂಗಳಲ್ಲಿ ಮಿಂಚುತ್ತಿರುವ ನಟಿ. ತಮಿಳು, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ಬಾಲಿವುಡ್ ಸಿನಿಮಾ ‘ಅನಿಮಲ್’ ಇತ್ತೀಚೆಗೆ ತೆರೆಕಂಡು ಭಾರೀ ಯಶಸ್ಸನ್ನು ಬಾಚಿಕೊಂಡಿತ್ತು. ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಜೊತೆ ಅವರು ನಟಿಸಿದ್ದರು. ಇನ್ನು ರಶ್ಮಿಕಾ ಮಂದಣ್ಣ ಬಾಲಿವುಡ್ ಅಂಗಳದಲ್ಲಿ ಭದ್ರವಾಗಿ ನೆಲೆಯೂರಲಿದ್ದಾರೆ ಎಂದೇ ಭಾಸವಾಗಿತ್ತು. ಇದೀಗ ಮತ್ತೊಂದು ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ.

    ಭಾಯ್ ಜಾನ್ ಜೊತೆ ರಶ್ಮಿಕಾ :


    ‘ಅನಿಮಲ್’ ಸಿನಿಮಾ ಭಾರೀ ಯಶಸ್ಸನ್ನು ಬಾಚಿಕೊಂಡಿತ್ತು. ಇದೀಗ ರಶ್ಮಿಕಾ ಮಂದಣ್ಣ ನಟ ಸಲ್ಮಾನ್ ಖಾನ್ ಜೊತೆ ನಟಿಸಲಿದ್ದಾರೆ. ಎ.ಆರ್. ಮುರುಗದಾಸ್ ನಿರ್ದೇಶನದ ಮುಂದಿನ ಬಹುನಿರೀಕ್ಷಿತ ‘ಸಿಕಂದರ್’ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಸಾಜಿದ್ ನಾಡಿಯಾಡ್ವಾಲಾ ನಿರ್ಮಾಣದ ಈ ಚಿತ್ರ ಮುಂದಿನ ಈದ್ ಹಬ್ಬಕ್ಕೆ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ.

    2022 ರಲ್ಲಿ ಅಮಿತಾಬ್ ಬಚ್ಚನ್ ನಟನೆಯ ‘ಗುಡ್ ಬೈ’ ಸಿನಿಮಾ ಮೂಲಕ ರಶ್ಮಿಕಾ ಬಾಲಿವುಡ್ ಅಂಗಳಕ್ಕೆ ಲಗ್ಗೆ ಇಟ್ಟಿದ್ದರು. ಬಳಿಕ ಮಿಷನ್ ಮಜ್ನು ಸಿನಿಮಾದಲ್ಲಿ ನಟಿಸಿದ್ದರು. ಆದಾದ ಬಳಿಕ ಅನಿಮಲ್ ಸಿನಿಮಾ ಭಾರೀ ಯಶಸ್ಸು ತಂದು ಕೊಟ್ಟಿತ್ತು. ಸದ್ಯ ಅವರು ಅಲ್ಲು ಅರ್ಜುನ್ ಜೊತೆ ನಟಿಸಿದ ‘ಪುಷ್ಪ : ದಿ ರೂಲ್’ ಸಿನಿಮಾದಲ್ಲಿ ಬಿಝಿಯಾಗಿದ್ದಾರೆ. ಅಲ್ಲದೇ ತಮಿಳೀನಲ್ಲಿ ಧನುಷ್ ಜೊತೆಗೆ ಕುಬೇರ ಸಿನಿಮಾ ದಲ್ಲಿ ನಟಿಸುತ್ತಿದ್ದಾರೆ. ವಿಕ್ಕಿ ಕೌಶಲ್ ಜೊತೆ ‘ಚಾವ’ ಸಿನಿಮಾದಲ್ಲಿ ಅವರು ಬಿಝಿಯಾಗಿದ್ದಾರೆ.

    ರಶ್ಮಿಕಾ ಟ್ವೀಟ್ :

    ಸಲ್ಮಾನ್ ಖಾನ್ ಜೊತೆಗೆ ಇದೇ ಮೊದಲ ಬಾರಿಗೆ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಎ.ಆರ್.ಮುರುಗದಾಸ್ ನಿರ್ದೇಶನದ ‘ಸಿಕಂದರ್’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಪಾತ್ರವಾಗುತ್ತಿರುವ ಬಗ್ಗೆ ನಡಿಯಾಲ್ವಾಲ ಗ್ರಾಂಡ್ ಸನ್ ಖಾತೆಯ ಮೂಲಕ ಸ್ಪಷ್ಟಪಡಿಸಲಾಗಿದೆ.

    ಇದನ್ನೂ ಓದಿ : ಪ್ರಜ್ವಲ್ ಪ್ರಕರಣದ ನಡುವೆ ಖಾಸಗಿ ವೀಡಿಯೋ ವೈರಲ್; ಜ್ಯೋತಿ ರೈ ಹೇಳಿದ್ದೇನು?

    ರಶ್ಮಿಕಾ ಮಂದಣ್ಣ ಕೂಡ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ನನ್ನ ಮುಂದಿನ ಸಿನಿಮಾದ ಬಗ್ಗೆ ಕೇಳುತ್ತಿದ್ದವರಿಗೆ ಇಲ್ಲಿದೆ ಮಾಹಿತಿ. ಸರ್ಪ್ರೈಸ್…ಸಿಕಂದರ್ ಸಿನಿಮಾದ ಭಾಗವಾಗಿರುವುದು ನನಗೆ ಹೆಮ್ಮೆಯ ವಿಚಾರ ಎಂದು ಬರೆದುಕೊಂಡಿದ್ದಾರೆ.

    FILM

    ಮತ್ತೆ ಕಿರುತೆರೆಗೆ ಲಗ್ಗೆ ಇಟ್ಟ ನಟ ರೂಪೇಶ್ ಶೆಟ್ಟಿ; ‘Huu ಅಂತೀಯಾ…Uhuu ಅಂತೀಯಾ’ ಅಂದ್ರು ರಾಕ್ ಸ್ಟಾರ್!

    Published

    on

    ಮಂಗಳೂರು : ರೂಪೇಶ್ ಶೆಟ್ಟಿ ಕೋಸ್ಟಲ್ ವುಡ್ ನಲ್ಲಿ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಕಲಾವಿದ. ಕನ್ನಡ ಸಿನಿಮಾಗಳಲ್ಲೂ ಮಿಂಚಿದ್ದಾರೆ. ಈಗಾಗಲೇ ಕಿರುತೆರೆಗೆ ಲಗ್ಗೆ ಇಟ್ಟಿರುವ ಅವರು ಬಿಗ್ ಬಾಸ್ ಸೀಸನ್ 9 ರ ವಿಜೇತರಾಗಿ ಹೊರಹೊಮ್ಮಿದ್ದರು. ಇದೀಗ ಮತ್ತೆ ಕಿರುತೆರೆಗೆ ಲಗ್ಗೆ ಇಡುತ್ತಿದ್ದಾರೆ.


    ನಿರೂಪಕನಾಗಿ ಎಂಟ್ರಿ:


    ಸಾಲು ಸಾಲು ಸಿನಿಮಾಗಳಲ್ಲಿ ಬಿಝಿಯಾಗಿರುವ ರೂಪೇಶ್ ಶೆಟ್ಟಿ ಕಿರುತೆರೆಗೆ ಮತ್ತೆ ಲಗ್ಗೆ ಇಡುತ್ತಿದ್ದಾರೆ. ಅದು ಹೊಸ ರಿಯಾಲಿಟಿ ಶೋನಲ್ಲಿ. ಹಾಗಂತ ಅವರು ಸ್ಪರ್ಧಿಯಾಗಿ ಕಾಣಿಸಿಕೊಳ್ಳುತ್ತಿಲ್ಲ. ಬದಲಿಗೆ ನಿರೂಪಕರಾಗಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಅದುವೇ ‘Huu ಅಂತೀಯಾ…Uhuu ಅಂತೀಯಾ’. ಇದೊಂದು ವಿಭಿನ್ನ ಬಗೆಯ ವಿನೂತನ ಗೇಮ್ ಶೋ ಆಗಿದೆ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ವೀಕೆಂಡ್ ನಲ್ಲಿ ಈ ಶೋ ಪ್ರಸಾರವಾಗಲಿದೆ.
    ರೂಪೇಶ್ ಶೆಟ್ಟಿ ಹಾಗೂ ಅರುಣ್ ಇಬ್ಬರು ಜೊತೆಯಾಗಿ ಈ ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ.

    ಹೇಗಿರಲಿದೆ ಶೋ:

    ಈ ಶೋನಲ್ಲಿ ಒಟ್ಟು ಮೂರು ಸುತ್ತುಗಳು ಇರುತ್ತವೆ. ಈ ಶೋನಲ್ಲಿ ಭಾಗವಹಿಸುವ ಸೆಲೆಬ್ರಿಟಿಗಳಿಗೆ ಬರೋಬ್ಬರಿ 6 ಲಕ್ಷ ರೂಪಾಯಿ ಗೆಲ್ಲುವ ಅವಕಾಶ ಇರುತ್ತದೆ.
    ಮೊದಲ ಸುತ್ತಿನಲ್ಲಿ ಸ್ಪರ್ಧಿಗಳು ಒಬ್ಬರ ನಂತರ ಒಬ್ಬರು ಆಟ ಆಡುತ್ತಾರೆ. ನಿರೂಪಕರು ನೀಡಿದ ಸತ್ಯ ಮತ್ತು ಸುಳ್ಳು ಸಂಗತಿಗಳನ್ನು ಸ್ಪರ್ಧಿಗಳು ಸರಿಯಾಗಿ ಆರಿಸಿದರೆ 1 ಲಕ್ಷ ರೂಪಾಯಿ ಗೆಲ್ಲಬಹುದು. ಎರಡನೇ ಸುತ್ತಿನಲ್ಲಿ ಸ್ಪರ್ಧಿಗಳಿಗೆ ಊಟದ ಸವಾಲು ಎದುರಾಗುತ್ತೆ. ಇದರಲ್ಲಿ ಗೆದ್ದವರಿಗೆ 2 ಲಕ್ಷ ರೂಪಾಯಿ ಸಿಗಲಿದೆ. ಹಾಗೇ ಕೊನೆಯ ಸುತ್ತಿನಲ್ಲಿ ಕೇವಲ ಇಬ್ಬರು ಸ್ಪರ್ಧಿಗಳು ಆಟ ಆಡುತ್ತಾರೆ. ಇಲ್ಲಿ ಗೆದ್ದವರಿಗೆ 3 ಲಕ್ಷ ರೂಪಾಯಿ ಸಿಗುತ್ತೆ.

    ಇದನ್ನೂ ಓದಿ : ದರ್ಶನ್ ‘ಡೆವಿಲ್’ಗೆ ಹೀರೋಯಿನ್ ಫಿಕ್ಸ್; ಡಿಬಾಸ್ ಗೆ ಜೊತೆಯಾದ್ರು ಕರಾವಳಿ ಬೆಡಗಿ!

    ಪ್ರಾರಂಭ ಯಾವಾಗ ?

    ‘Huu ಅಂತೀಯಾ…Uhuu ಅಂತೀಯಾ’ ಮೇ 19 ರಿಂದ ಪ್ರತಿ ಭಾನುವಾರ ರಾತ್ರಿ 7 ಗಂಟೆಗೆ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗಲಿದೆ. ಮೊದಲ ಸಂಚಿಕೆಯಲ್ಲಿ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಅಮೃತಾ ಅಯ್ಯಂಗಾರ್ ಮೂವರು ಸೆಲೆಬ್ರೆಟಿಗಳು ಭಾಗವಹಿಸುತ್ತಿದ್ದಾರೆ.

    Continue Reading

    FILM

    ದಾಂಪತ್ಯಕ್ಕೆ ಕಾಲಿಡಲಿದ್ದಾರಾ ‘ಪ್ರಭಾಸ್‌’..! ಈ ಪೋಸ್ಟ್‌ ಹಿಂದಿನ ಅಸಲಿಯತ್ತೇನು!?

    Published

    on

    ಟಾಲಿವುಡ್‌ ನ ಮೋಸ್ಟ್ ಬ್ಯಾಚುಲರ್‌ ಎಂದೇ ಹೆಸರಾಗಿರುವ ಪ್ರಭಾಸ್ ಸದಾ ತಮ್ಮ ಮದುವೆಯ ವಿಚಾರವಾಗಿಯೇ ಸುದ್ದಿಯಲ್ಲಿರುತ್ತಾರೆ. ಸೂಪರ್ ಸ್ಟಾರ್ ಪ್ರಭಾಸ್‌ರವರ ಹೆಸರಿನ ಜೊತೆ ಹಲವು ಸ್ಟಾರ್ ನಟಿಯರ ಹೆಸರುಗಳು ತುಣುಕು ಹಾಕುತ್ತಿತ್ತು. ಅದರಲ್ಲೂ ಪುತ್ತೂರಿನ ಬೆಡಗಿ ಅನುಷ್ಕಾ ಶೆಟ್ಟಿ ಯವರ ಹೆಸರು ಆಗಾಗ ಕೇಳಿಬರುತ್ತಿತ್ತು. ಇನ್ನು ಬಾಹುಬಲಿ ಸಿನೆಮಾದ ಬಳಿಕ ಇವರಿಬ್ಬರು ಪ್ರೀತಿಯಲ್ಲಿದ್ದಾರೆ, ಇನ್ನೇನು ದಾಂಪತ್ಯ ಜೀವನಕ್ಕೂ ಕಾಲಿಡಲಿದ್ದಾರೆ ಎಂದು ಹೇಳಲಾಗಿತ್ತು. ಈ ಮಧ್ಯೆ ಪ್ರಭಾಸ್ ಹಾಗೂ ಅನುಷ್ಕಾ ಅದೆಲ್ಲವನ್ನು ಅಲ್ಲಗಳೆದಿದ್ದಾರೆ.

    ಇದೀಗ ಪ್ರಭಾಸ್ ಅವರ ಒಂದು ಪೋಸ್ಟ್‌ ಅಭಿಮಾನಿಗಳಲ್ಲಿ ಖುಷಿ ನೀಡಿದೆ. ತಮ್ಮ ಇನ್ಸ್ಟಾಗ್ರಾಮ್‌ ನಲ್ಲಿ ‘ಡಾರ್ಲಿಂಗ್ಸ್‌!!.. ಕೊನೆಗೂ ನನ್ನ ಜೀವನದಲ್ಲಿ ಒಬ್ಬ ವಿಶೇಷ ವ್ಯಕ್ತಿ ಬರಲಿದ್ದಾರೆ.. ಸ್ವಲ್ಪ ಕಾಯಿರಿ” ಎಂದು ಬರೆದುಕೊಂಡು ಪೋಸ್ಟ್‌ ಮಾಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಖುಷಿ ಜೊತೆ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ. ಇನ್ನೂ ಈ ಪೋಸ್ಟ್‌ ನೋಡಿದ ಬಳಿಕ ಪ್ರಭಾಸ್ ಮದುವೆಗೆ ಸಜ್ಜಾಗಿದ್ದಾರಾ..!? ಎಂಬುದಾಗಿಯೂ ಕುತೂಹಲ ಮೂಡಿದೆ. ಇನ್ನೂ ಕೆಲವರು ಸಿನೆಮಾ ಪ್ರಚಾರಕ್ಕಾಗಿ ಈ ತಂತ್ರವನ್ನು ಬಳಸಿದ್ದಾರಾ ಎನ್ನುವುದು ಅನುಮಾನ ಮೂಡಿದೆ.

    ದರ್ಶನ್ ‘ಡೆವಿಲ್’ಗೆ ಹೀರೋಯಿನ್ ಫಿಕ್ಸ್; ಡಿಬಾಸ್ ಗೆ ಜೊತೆಯಾದ್ರು ಕರಾವಳಿ ಬೆಡಗಿ!

    ಸಿನೆಮಾ ಪ್ರಚಾರಕ್ಕಾಗಿ ಪೋಸ್ಟ್‌ ಹಾಕಿದ್ರಾ ಪ್ರಬಾಸ್..?

    kalki

    ಸಲಾರ್ ಸಿನೆಮಾ ಹಿಟ್ ಬಳಿಕ ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ ‘ ಸಿನೆಮಾ ತೆರೆಗೆ ಬರಲು ಸಿದ್ಧವಾಗಿದೆ. ಇನ್ನೂ ಈ ಸಿನೆಮಾದಲ್ಲಿ ಘಟಾನುಘಟಿಗಳು ಬಣ್ಣ ಹಚ್ಚಿದ್ದಾರೆ. ಅಮಿತಾಬಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ದಿಶಾ ಪಟಾನಿ ಮುಂತಾದವರು ನಟಿಸಿದ್ದಾರೆ. ಇದೇ ಸಿನೆಮಾದ ಪ್ರಚಾರಕ್ಕಾಗಿ ಮಾಡಿರುವ ತಂತ್ರ ಎಂದು ಹೇಳಲಾಗಿದೆ. ಇನ್ನು ಈ ಸಿನೆಮಾ ಪ್ರಚಾರಕ್ಕಾಗಿಯೇ ಹೊಸ ವಿನ್ಯಾಸದ ಕಾರೊಂದನ್ನು ತಯಾರು ಮಾಡಲಾಗಿದೆಯಂತೆ. ಹೀಗಾಗಿ ಪ್ರಭಾಸ್ ‘ ನನ್ನ ಜೀವನದಲ್ಲಿ ಹೊಸ ವ್ಯಕ್ತಿ ಆಗಮನ’ ಎಂದು ಬರೆದುಕೊಂಡಿರಬಹುದು ಎಂದು ಊಹಿಸಲಾಗಿದೆ.

    ಅದೇನೆ ಇರಲಿ ಪ್ರಭಾಸ್ ಮದುವೆ ಆಗಲು ನಿರ್ಧಿರಿಸಿದ್ದಾರಾ..? ಅಥವಾ ಸಿನೆಮಾ ಪ್ರಚಾರಕ್ಕಾಗಿ ಹೀಗೆ ಬರೆದುಕೊಂಡಿದ್ದಾರಾ..? ಅನ್ನೋದರ  ಅಸಲಿಯತ್ತು  ಇನ್ನೆರೆಡು ದಿನಗಳಲ್ಲಿ ಕಾದು ನೋಡಬೇಕಿದೆ.

     

     

    Continue Reading

    FILM

    ದರ್ಶನ್ ‘ಡೆವಿಲ್’ಗೆ ಹೀರೋಯಿನ್ ಫಿಕ್ಸ್; ಡಿಬಾಸ್ ಗೆ ಜೊತೆಯಾದ್ರು ಕರಾವಳಿ ಬೆಡಗಿ!

    Published

    on

    ಬೆಂಗಳೂರು : ಚಾಲೆಂಜಿಂಗ್ ದರ್ಶನ್ ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಾರೆ. ಚಿತ್ರ ಬಿಡುಗಡೆಗೂ ಮುನ್ನ ಚಿತ್ರದ ಪ್ರತೀ ಅಪ್ಡೇಟ್ ಗಾಗಿ ತುದಿಗಾಲಲ್ಲಿ ನಿಂತಿರುತ್ತಾರೆ. ಹೊಸ ಚಿತ್ರ ಅನೌನ್ಸ್ ಆದಾಗಿನಿಂದ ಪ್ರತಿ ಸುದ್ದಿಗಾಗಿಯೂ ಅಭಿಮಾನಿಗಳು ಕುತೂಹಲದಿಂದ ನಿರೀಕ್ಷೆಯಲ್ಲಿರುತ್ತಾರೆ.
    ‘ಕಾಟೇರ’ ಚಿತ್ರದ ಯಶಸ್ಸಿನ ನಂತರ ದರ್ಶನ್ ‘ಡೆವಿಲ್’ ಚಿತ್ರವನ್ನು ಅನೌನ್ಸ್ ಮಾಡಿದ್ದರು. ಈಗಾಗಲೇ ಪೋಸ್ಟರ್, ಮೇಕಿಂಗ್ ವೀಡಿಯೋಗಳು ಸದ್ದು ಮಾಡುತ್ತಿವೆ. ಡಿ ಬಾಸ್ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

    ಕರಾವಳಿ ಬೆಡಗಿ ನಾಯಕಿ :

    ದರ್ಶನ್ ಜೊತೆ ನಾಯಕಿಯಾಗಿ ಯಾರು ನಟಿಸಲಿದ್ದಾರೆ ಎಂಬ ಕುತೂಹಲಕ್ಕೂ ಈಗ ತೆರೆ ಬಿದ್ದಿದೆ, ಕರಾವಳಿಯ ಬೆಡಗಿ ದರ್ಶನ್ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಹೌದು, ಕರಾವಳಿ ಮೂಲದ ರಜನಾ ರೈ ‘ಡೆವಿಲ್’ ಚಿತ್ರದ ನಾಯಕಿ. ಈ ಹಿಂದೆಯೂ ರಚನಾ ಡೆವಿಲ್ ಗೆ ನಾಯಕಿ ಆಗಲಿದ್ದಾರೆ ಎಂಬ ಗಾಳಿ ಸುದ್ದಿಯೊಂದು ಹರಿದಾಡುತ್ತಿತ್ತು. ಇದೀಗ ಅದು ದೃಢವಾಗಿದೆ. ಪೋಸ್ಟರ್ ಕೂಡ ಬಿಡುಗಡೆಯಾಗಿದೆ.

    ಸಿನಿಮಾದ ನಿರ್ಮಾಣ ಸಂಸ್ಥೆಯಾದ ಜೈ ಮಾತಾ ಕಂಬೈನ್ಸ್‌ ತನ್ನ ಸೋಶಿಯಲ್‌ ಮೀಡಿಯಾ ಪುಟದಲ್ಲಿ ಪೋಸ್ಟರ್ ಹಂಚಿಕೊಂಡಿದ್ದು, ‘ವೆಲ್‌ಕಮ್‌ ಆನ್‌ ಬೋರ್ಡ್‌, ಶುದ್ಧ ಕೌಶಲ್ಯಕ್ಕಾಗಿ ಗುರುತಿಸಲಾಗಿದೆ. ರಚನಾ ರೈ ಸ್ವಾಗತ’ ಎಂದುಬರೆದುಕೊಂಡಿದೆ. ಪೋಸ್ಟರ್ ನಲ್ಲಿ ನೆಲದ ಪ್ರತಿಭೆಗೆ ಮನ್ನಣೆ ಎಂದು ಬರೆಯಲಾಗಿದೆ.


    ಪುತ್ತೂರು ಮೂಲದ ರಚನಾ ಈಗಾಗಲೇ ತುಳು, ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ರೂಪೇಶ್ ಶೆಟ್ಟಿ ಜೊತೆ ತುಳು ಚಿತ್ರ ‘ಸರ್ಕಸ್’ನಲ್ಲಿ ನಾಯಕಿಯಾಗಿ ಮಿಂಚಿದ್ದಾರೆ. ಕನ್ನಡದಲ್ಲಿ ಧನ್ವೀರ್ ಗೌಡ ಜೊತೆ ‘ವಾಮನ’ದಲ್ಲೂ ನಟಿಸಿದ್ದಾರೆ. ಬ್ಯಾಡ್ಮಿಂಟನ್ ಪ್ಲೇಯರ್ ಆಗಿರುವ ರಚನಾ ಮಾಡೆಲ್ ಕ್ಷೇತ್ರದಲ್ಲೂ ಮಿಂಚಿದ್ದಾರೆ. ಡ್ಯಾನ್ಸರ್ ಕೂಡಾ ಹೌದು. ‘ಓ ಮೈ ಡಾಗ್’ ಎಂಬ ಪುಸ್ತಕವನ್ನೂ ಅವರು ಬರೆದಿದ್ದಾರೆ.

    ಇದನ್ನೂ ಓದಿ : ನಟಿ ಪವಿತ್ರಾ ಜಯರಾಂ ಸಾ*ವಿನ ಬೆನ್ನಲ್ಲೇ ಆತ್ಮಹ*ತ್ಯೆಗೆ ಶರಣಾದ ಸಹನಟ ಚಂದು!

    ‘ತಾರಕ್’ ಬಳಿಕ ‘ಡೆವಿಲ್’ ಚಿತ್ರದ ಮೂಲಕ ಮತ್ತೆ ಪ್ರಕಾಶ್ ವೀರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಆರಂಭವಾಗಿದ್ದು, ದರ್ಶನ್ ಕೈಗೆ ಪೆಟ್ಟಾದ ಹಿನ್ನೆಲೆಯಲ್ಲಿ ಚಿತ್ರೀಕರಣ ಸ್ಥಗಿತವಾಗಿತ್ತು. ಸದ್ಯ ದರ್ಶನ್ ಗುಣಮುಖರಾಗಿದ್ದು, ಸದ್ಯದಲ್ಲೇ ಡೆವಿಲ್ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

    Continue Reading

    LATEST NEWS

    Trending