Connect with us

    LATEST NEWS

    ಆರ್‌ಸಿಬಿ ಅಭ್ಯಾಸ ಪಂದ್ಯ ರದ್ದು..! ನಾಲ್ವರು ಉಗ್ರರ ಅರೆಸ್ಟ್

    Published

    on

    ಬೆಂಗಳೂರು: ಇಂದು(ಮೇ.22) ರಾಜಸ್ಥಾನ್ ರಾಯಲ್ಸ್ ಹಾಗೂ ಬೆಂಗಳೂರು ಚಾಲೆಂಜರ್ಸ್ ನಡುವೆ ಇಂದು ಎಲಿಮಿನೇಟೆಡ್ ಪಂದ್ಯ ನಡೆಯಲಿದೆ. ಹಾಗಾಗಿ ನಿನ್ನೆ ಆರ್‌ಸಿಬಿ ಅಭ್ಯಾಸ ಪಂದ್ಯವನ್ನು ಆಡಬೇಕಿತ್ತು. ಆದರೆ ಅದು ರದ್ದಾಗಿದ್ದು ಇದಕ್ಕೆ ಮೂಲ ಕಾರಣ ಈಗ ಹೊರ ಬಿದ್ದಿದೆ.

    virat kohli

    ಆರ್​ಸಿಬಿ ಸುದ್ದಿಗೋಷ್ಠಿಯನ್ನ ರದ್ದುಗೊಳಿಸಿದೆ ಎಂಬ ಮಾತುಗಳು ಕೇಳಿಬಂದಿದೆ. ಜೊತೆಗೆ ಆರ್​ಸಿಬಿ ಅಭ್ಯಾಸವನ್ನು ರದ್ದು ಗೊಳಿಸಿದೆ ಎನ್ನಲಾಗುತ್ತಿದೆ. ಮಂಗಳವಾರ ಆರ್‌ಸಿಬಿ ಗುಜರಾಜ್ ಮೈದಾನದಲ್ಲಿ ಅಭ್ಯಾಸ ನಡೆಸಬೇಕಿತ್ತು. ಆದರೆ ಯಾವುದೇ ಕಾರಣವನ್ನು ಬಿಚ್ಚಿಡದೆ ಆರ್​ಸಿಬಿ ಅಭ್ಯಾಸವನ್ನು ರದ್ದುಗೊಳಿಸಿತು. ಇನ್ನು ರಾಜಸ್ಥಾನ್​ ತಂಡ ಅಭ್ಯಾಸವನ್ನು ನಡೆಸಿದೆ. ಇದಕ್ಕೆ ಮೂಲ ಕಾರಣ ವಿರಾಟ್​ ಕೊಹ್ಲಿಗೆ ಬಂದಿದ್ದ ಭದ್ರತಾ ಬೆದರಿಕೆ. ವಿರಾಟ್‌ ಕೊಹ್ಲಿಗೆ ಭದ್ರತಾ ಬೆದರಿಕೆ ಇರುವ ಕಾರಣ ಆರ್​ಸಿಬಿ ಸುದ್ದಿಗೋಷ್ಟಿ ನಡೆಸಿಲ್ಲ ಎಂಬ ಮಾತುಗಳು ಕೇಳಿಬಂದಿವೆ.

    ನಾಲ್ವರು ಉಗ್ರರ ಬಂಧನ..!

    ಗುಜರಾತ್​ ಪೊಲೀಸರು ಸೋಮವಾರದಂದು ಭಯೋತ್ಪಾದಕರು ಎಂಬ ಶಂಕೆ ಮೇಲೆ ನಾಲ್ವರನ್ನು ಅರೆಸ್ಟ್​ ಮಾಡಿದ್ದರು. ಗುಜರಾತ್​​ ವಿಮಾನ ನಿಲ್ದಾಣದಲ್ಲಿ ಅವರನ್ನು ಬಂಧಿಸಿದರು. ವಿಚಾರಣೆ ನಡೆಸಿದ ಬಳಿಕ ಬಂಧಿತರ ಅಡುಗು ತಾಣವನ್ನು ಪತ್ತೆಹಚ್ಚಿದ್ದಾರೆ. ಈ ವೇಳೆ ವಿಡಿಯೋಗಳು, ಪಠ್ಯ ಸಂದೇಶಗಳು ಹಾಗೂ ಶಸ್ತ್ರಾಸ್ತ್ರ ವಶಕ್ಕೆ ಪಡೆದುಕೊಂಡಿದ್ದಾರೆ.

    Read More..; ಪೆನ್ ಡ್ರೈವ್ ಪ್ರಕರಣ : ಪುತ್ರ ಪ್ರಜ್ವಲ್ ಬಗ್ಗೆ ಹಾಸನದಲ್ಲಿ ರೇವಣ್ಣ ಪ್ರತಿಕ್ರಿಯೆ

    ಈ ವಿಚಾರವನ್ನು ರಾಜಸ್ಥಾನ ರಾಯಲ್ಸ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ತಿಳಿಸಲಾಗಿತ್ತು. ಅಹಮದಾಬಾದ್‌ಗೆ ವಿರಾಟ್‌ ಕೊಹ್ಲಿ ಬಂದ ನಂತರ ಈ ವಿಚಾರವನ್ನು ತಿಳಿಸಲಾಗಿದೆ. ವಿರಾಟ್‌ ಕೊಹ್ಲಿ ದೇಶದ ಸಂಪತ್ತು ಮತ್ತು ಅವರ ಭದ್ರತೆ ನಮ್ಮ ಅತ್ಯಂತ ಆದ್ಯತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ವಿಜಯ್ ಸಿಂಗ್ ಜ್ವಾಲಾ ಹೇಳಿದರು.

    LATEST NEWS

    ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ..! ವಾಹನ ಸವಾರರಿಗೆ ಬಿಗ್ ಶಾಕ್..

    Published

    on

    ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್‌ ದರ ಏರಿಕೆಗೊಳಿಸಿ ವಾಹನ ಸವಾರರಿಗೆ ಶಾಕ್ ನೀಡಿದೆ.

    ಪೆಟ್ರೋಲ್, ಡಿಸೇಲ್ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಿಟೇಲ್‌ ಸೇಲ್ಸ್‌ ಟ್ಯಾಕ್ಸ್‌ ದರ ಹೆಚ್ಚಳ ಮಾಡಲಾಗಿದೆ. ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂಪಾಯಿ ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದಿದ್ದು, ಈಗ 29.84% ಗೆ ಏರಿಕೆ ಅಂದರೆ 3.9% ಹೆಚ್ಚಳವಾಗಿದೆ. ಅಂತೆಯೇ ಡೀಸೆಲ್ ಈ‌ ಹಿಂದೆ- 14.34% ಇದ್ದಿದ್ದು, ಈಗ 18.44%ಗೆ ಏರಿಕೆ ಕಂಡಿದೆ. ಅಂದರೆ 4.1% ರಷ್ಟು ಏರಿಕೆಯಾಗಿದೆ. ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ಪೆಟ್ರೋಲ್‌ ದರ 100 ರೂಪಾಯಿ ದಾಟಲಿದೆ. ಈಗ ಪೆಟ್ರೋಲ್‌ ದರ 99.54 ರೂ. ಇದ್ದು, ಮುಂದೆ 102 ರೂಪಾಯಿಗೆ ಏರಿಕೆಯಾಗಲಿದೆ. ಇವತ್ತಿನ ಡೀಸೆಲ್‌ ದರ 85.93 ರೂಪಾಯಿ ಇದೆ. ಅದು 89.43 ರೂಪಾಯಿಗೆ ಏರಿಕೆಯಾಗಲಿದೆ.

    Continue Reading

    LATEST NEWS

    ಪ್ರಕಾಶ್ ಶೆಟ್ಟಿ, ರೊನಾಲ್ಡ್‌ ಕೊಲಾಸೋರಿಗೆ ಗೌರವ ಡಾಕ್ಟರೇಟ್ ಪ್ರದಾನ

    Published

    on

    ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವ ಶನಿವಾರ ವಿ.ವಿ.ಯ ಆವರಣದಲ್ಲಿರುವ ಮಂಗಳಾ ಸಭಾಂಗಣದಲ್ಲಿ ಶನಿವಾರ ಜರಗಿತು.

    ಮಂಗಳೂರು ವಿವಿ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ, ಅನಿವಾಸಿ ಭಾರತೀಯ ಉದ್ಯಮಿ ಡಾ। ರೊನಾಲ್ಡ್‌ ಕೊಲಾಸೋ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನಿಸಿದರು. ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ। ತುಂಬೆ ಮೊಯ್ದೀನ್ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದರು.

    155 ಮಂದಿಗೆ ಪಿಎಚ್‌ಡಿ, 58 ಚಿನ್ನದ ಪದಕ ಮತ್ತು 57 ನಗದು ಬಹುಮಾನ ಪ್ರದಾನ ಮಾಡಿದರು.

    ಉನ್ನತ ಶಿಕ್ಷಣ ಸಚಿವ, ಸಹಕುಲಾಧಿಪತಿ ಡಾ। ಎಂ.ಸಿ.ಸುಧಾಕರ್ ಉಪಸ್ಥಿತರಿದ್ದರು. ನವದೆಹಲಿಯ ಅಭಿವೃದ್ಧಿಶೀಲ ರಾಷ್ಟ್ರಗಳ ಸಂಶೋಧನೆ ಮತ್ತು ಮಾಹಿತಿ ವ್ಯವಸ್ಥೆ ಮಹಾನಿರ್ದೇಶಕ ಪ್ರೊ। ಸಚಿನ್ ಚತುರ್ವೇದಿ ಅವರು ಘಟಿಕೋತ್ಸವ ಭಾಷಣ ಮಾಡಿದರು.

    ವಿ.ವಿ. ಕುಲಪತಿ ಪ್ರೊ। ಪಿ.ಎಲ್. ಧರ್ಮ ಪ್ರಸ್ತಾವಿಸಿದರು. ಕುಲಸಚಿವ (ಆಡಳಿತ) ರಾಜು ಮೊಗವೀರ, ಕುಲಸಚಿವ (ಪರೀಕ್ಷಾಂಗ) ಡಾ। ದೇವೇಂದ್ರಪ್ಪ, ವಿ.ವಿ.ಯ, ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯ ಪರಿಷತ್ ಸದಸ್ಯರು, ವಿವಿಧ ನಿಕಾಯಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

    Continue Reading

    DAKSHINA KANNADA

    ಏಕಕಾಲಕ್ಕೆ ಅರಳಿ ನಿಂತ 42 ಬ್ರಹ್ಮಕಮಲ ಪುಷ್ಪ; ಮಧ್ಯರಾತ್ರಿಯೇ ವಿಶೇಷ ಪೂಜೆ ಸಲ್ಲಿಕೆ!

    Published

    on

    ಉತ್ತರ ಕನ್ನಡ: ಶ್ರಾವಣದ ಸಂಜೆಗಳಲ್ಲಿ ಬ್ರಹ್ಮ ಕಮಲ ಅರಳುವುದು ವಾಡಿಕೆ. ಒಮ್ಮೊಮ್ಮೆ ಅದಕ್ಕೆ ವ್ಯತಿರಿಕ್ತವಾಗಿ ಬೇಗವೂ ಬ್ರಹ್ಮ ಕಮಲ ಅರಳುತ್ತದೆ. ಆದರೆ ಒಮ್ಮೆಲೆ ಪುಷ್ಪಗುಚ್ಛದಷ್ಟು ಅಂದವಾಗಿ ಒಂದೆಡೆಗೇ ಅರಳುವ ಬ್ರಹ್ಮಕಮಲದ ಸೊಬಗನ್ನು ನೋಡುವ ಅನುಭವವೇ ಬೇರೆ! ಬ್ರಹ್ಮಕಮಲವು ಅಧ್ಯಾತ್ಮಿಕ ಸ್ಥಾನವನ್ನು ಹಿಂದೂ ಹಾಗೂ ಜೈನ, ಬೌದ್ಧ ಧರ್ಮಗಳಲ್ಲಿ ಹೊಂದಿದೆ. ಹೀಗಾಗಿ ಬ್ರಹ್ಮಕಮಲ ಬರೀ ಹೂವಾಗದೇ ಈ ಹೂವೇ ಆರಾಧನೆಯ ವಸ್ತುವಾಗಿರುವುದು ವಿಶೇಷ!

    ಏಕಕಾಲಕ್ಕೆ 42 ಹೂಗಳು!

    ಯಲ್ಲಾಪುರ ಪಟ್ಟಣದ ರಾಮಾಪುರ ವ್ಯಾಪ್ತಿಯಲ್ಲಿ ವಾಸಿಸುವ ಗಣೇಶ್ ಪಂಡರಾಪುರ ಅವರ ಮನೆಯ ವಿಶೇಷವಾದ ಬ್ರಹ್ಮಕಮಲದ ಹೂವುಗಳು! ಯಾಕೆ ವಿಶೇಷ ಎಂದರೆ, ಹೋದ ವರ್ಷ ಇವರ ಮನೆಯಲ್ಲಿ ಸುಮಾರು 84 ಬ್ರಹ್ಮಕಮಲಗಳು ಒಟ್ಟಿಗೆ ಅರಳಿದ್ದವು. ಈ ವರ್ಷ 42 ಬ್ರಹ್ಮಕಮಲ ಏಕಕಾಲಕ್ಕೆ ಅರಳಿ ನಿಂತಿವೆ.

    ಪುಷ್ಪಕ್ಕೆ ಪೂಜೆ!

    ಮಧ್ಯರಾತ್ರಿ 12: 40 ರ ಸುಮಾರಿಗೆ ಈ ಹೂವುಗಳೆಲ್ಲಾ ಅರಳಿದ್ದವು ತಕ್ಷಣ ಗಣೇಶ್ ಪಂಡರಾಪುರ ಅವರ ಕುಟುಂಬ ವಾಡಿಕೆಯಂತೆ ಪೂಜೆ ಮಾಡಿ ನಂತರ ಮನೆಯವರಿಗೆ ಜನರಿಗೆ ಪ್ರಸಾದ ಹಂಚಿ ಹೂವುಗಳ ಮುಂದೆ ಭಕ್ತಿ ಭಾವದಿಂದ ಪ್ರಾರ್ಥನೆ ಸಲ್ಲಿಸಿದರು, ಬ್ರಹ್ಮಕಮಲ ಅರಳುವ ವೇಳೆ ಕೇಳಿದ ಕೋರಿಕೆಗಳು ಈಡೇರುತ್ತವೆ ಎಂಬುದು ಪ್ರಸಿದ್ಧ ಲೋಕಾರೂಢಿಯ ನಂಬಿಕೆ.

    Continue Reading

    LATEST NEWS

    Trending