Connect with us

LATEST NEWS

ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆಗೆ ಯತ್ನ…!

Published

on

ಬೆಂಗಳೂರು : ರಿಯಲ್ ಎಸ್ಟೆಟ್ ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಾಯಿ ಡೆವಲಪರ್ಸ್ ಮಾಲೀಕ ಉದ್ಯಮಿ ಪ್ರಭಾಕರ್ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ತಿಳಿದು ಬಂದಿದೆ.
ಆರ್ ಆರ್ ನಗರದ ತನ್ನ ಮನೆಯಲ್ಲಿ ಪ್ರಭಾಕರ್ ರೆಡ್ಡಿ ಪೆನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರೆಡ್ಡಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರಿಯಲ್ ಎಸ್ಟೆಟ್ ಉದ್ಯಮಿಯಾಗಿರುವ ಪ್ರಭಾಕರ್ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಯತ್ನಿಸಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.ಆಸ್ಪತ್ರೆಗೆ‌ ಭೇಟಿ ನೀಡಿ ಆರ್ ಆರ್ ನಗರ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

LATEST NEWS

ಪತಂಜಲಿಯ 14 ಉತ್ಪನ್ನಗಳ ಲೈಸನ್ಸ್ ರದ್ದು..!

Published

on

ದೆಹಲಿ: ಸುಪ್ರೀಂಕೋರ್ಟ್ ನಲ್ಲಿ ಪ್ರತೀ ಬಾರಿಯೂ  ಛೀಮಾರಿ ಹಾಕಿಸಿಕೊಳ್ಳುತ್ತಿರುವ ಯೋಗಗುರು ಬಾಬಾರಾಮದೇವ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೀಗ ಉತ್ತರಾಖಂಡ ಸರಕಾರ ಬಾಬಾರಾಮದೇವ್‌ ವಿರುದ್ಧ ಖಡಕ್ ನಿರ್ಧಾರ ತೆಗೆದುಕೊಂಡಿದೆ.

pathanjali

ಆರ್ಯುವೇದ ಉತ್ಪನ್ನಗಳ ಕುರಿತು ವಿವಾದಾ ತ್ಮಕ ಜಾಹೀರಾತು ನೀಡಿದ ಎದುರಿಸುತ್ತಿರುವ ಯೋಗ ಗುರು ಬಾಬಾ ರಾಮ್‌ದೇವ್ ಅವರ ಪತಂಜಲಿ ಸಂಸ್ಥೆಯ 14 ಉತ್ಪನ್ನಗಳ ಲೈಸೆನ್ಸ್ ಅನ್ನು ರದ್ದು ಮಾಡಿ ಉತ್ತರಾಖಂಡ ಸರ್ಕಾರ ನಿರ್ಧಾರ ಕೈಗೊಂಡಿದೆ.

ಮುಂದೆ ಓದಿ..; ಕೈಗಳನ್ನು ತೋರಿಸಿ ಲಕ್ಷಗಟ್ಟಲೆ ಹಣ ಸಂಪಾದಿಸುತ್ತಾಳಂತೆ ಈ ಮಹಿಳೆ..! ಅಷ್ಟಕ್ಕೂ ಯಾರು ಈಕೆ?

ಈ ಕುರಿತು ಅದು ಸೋಮವಾರ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಕೆ ಮಾಡಿದೆ. ಪತಂಜಲಿ ಸಂಸ್ಥೆಗೆ ಸೇರಿದ ದಿವ್ಯಾ ಫಾರ್ಮಸಿ ಉತ್ಪಾದಿಸುವ ‘ದೃಷ್ಟಿ ಐ ಡ್ರಾಪ್’, ‘ಸ್ವಾಸರಿ ಗೋಲ್ಡ್’, ‘ಸ್ವಾಸರಿ ವಟಿ’, ‘ಬೋನ್‌ಚೋಂ’, ‘ಸ್ವಾಸರಿ ಪ್ರವಾಹಿ’, ‘ಸ್ವಾಸರಿ ಅವಲೇಹ್’, ‘ಮುಕ್ತಾ ವಟಿ ಎಕ್‌ಸ್ಟ್ರಾ ಪವರ್‌’, ‘ಲಿಪಿ ಡೋಮ್ “, ‘ಮಧುಗ್ರಿಟ್’, ‘ಮಧುನಾ ಶಿನಿ ವಟಿ ಎಕ್ಷಾ ಪವರ್’, ‘ಲಿವಾಮೃತ್‌ ಅಡ್ವಾನ್ಸ್’, ‘ಲಿವೋ ಗ್ರಿಟ್’, ‘ಐಗ್ರಿಟ್ ಗೋಲ್ಡ್’ ಉತ್ಪನ್ನಗಳ ಲೈಸೆನ್ಸ್‌ ರದ್ದು ಮಾಡಲಾಗಿದೆ.

 

Continue Reading

LATEST NEWS

70 ರ ವೃದ್ಧನಿಗೆ ಸಂಗಾತಿ ಬೇಕಾಗಿದ್ದಾಳೆ; ಆತ ಜಾಹೀರಾತಿಗಾಗಿ ಮಾಡುತ್ತಿರೋ ಖರ್ಚೆಷ್ಟು ಗೊತ್ತಾ!?

Published

on

ಇತ್ತೀಚೆಗೆ ಯುವಕರು ಮದುವೆಯಾಗಲು ಯುವತಿಯರು ಸಿಗುತ್ತಿಲ್ಲ ಎಂದು ಗೋಳಾಡುವುದನ್ನು ಕಾಣುತ್ತೇವೆ ಹುಡುಗಿಯರು ಸಿಗುತ್ತಿಲ್ಲವೆಂದು ನಾನಾ ರೀತಿಯ ಸರ್ಕಸ್ ಮಾಡುತ್ತಾರೆ. ಇತ್ತೀಚೆಗೆ ಆಟೋ ಮೂಲಕ ಪ್ರಚಾರ, ವೀಡಿಯೋ ಮೂಲಕ ಪ್ರಚಾರ ಹೀಗೆ ನಾನಾ ರೀತಿಯಲ್ಲಿ ‘ವಧು ಬೇಕಾಗಿದ್ದಾಳೆ’ ಎಂದು ಜಾಹೀರಾತು ನೀಡುತ್ತಾರೆ. ಅದೇನೋ ಯುವಕರು ಬಿಡಿ…ಆದರೆ, ಇಲ್ಲಿ 70 ರ ಹರೆಯದ ವೃದ್ಧನೂ ಜಾಹೀರಾತು ಕೊಟ್ಟಿದ್ದಾರೆ. ಆಶ್ಚರ್ಯವಾದರೂ ಇದು ಸತ್ಯ!

ಜಾಹೀರಾತಿಗಾಗಿ ಮಾಡುತ್ತಿರೋ ಖರ್ಚೆಷ್ಟು?

ವಯಸಾಗುತ್ತಿದ್ದಂತೆ ಸಂಗಾತಿಯ ಆಸರೆ ಬೇಕಾಗುತ್ತದೆ. ಒಂಟಿಯಾಗಿರುವುದು ಕಷ್ಟ ಎಂದೆನಿಸುತ್ತದೆ. ಈಗ ಈ ಅಜ್ಜನಿಗೂ ಮದುವೆಯಾಗಲು ಮನಸ್ಸಾಗಿದೆ. ಸಂಗಾತಿಯ ಸಂಗಡ ಬೇಕೆನಿಸಿ ಆತ ಗೆಳತಿಯ ಅರಸುತ್ತಿದ್ದಾರೆ. ಆತನ ವಯಸ್ಸು 70 ವರ್ಷ…ತನಗೆ ಜೊತೆಗಾರ್ತಿ ಬೇಕೆಂಬ ಹಂಬಲದಲ್ಲಿ ಜಾಹೀರಾತು ನೀಡುತ್ತಿದ್ದಾರೆ.

ಜಾಹೀರಾತಿಗಾಗಿ ಆತ ಖರ್ಚು ಮಾಡುತ್ತಿರುವುದು ಎಷ್ಟು ಗೊತ್ತಾ!? 30 ಸಾವಿರ ರೂಪಾಯಿ. ಆತ ವಾರಕ್ಕೆ ಇಷ್ಟು ಖರ್ಚು ಮಾಡುತ್ತಿದ್ದಾರೆ. ಅದಕ್ಕೆ ಉತ್ತಮ ಪ್ರತಿಕ್ರಿಯೆಯೂ ಬರುತ್ತಿದೆಯಂತೆ.

ಆಕೆ ಕರೆದಲ್ಲಿ ಹೋಗಲು ಸಿದ್ಧ!

ಅಂದಹಾಗೆ ವೃದ್ಧನ ಹೆಸರು ಗಿಲ್ಬರ್ಟ್. ಆತ ಅಮೆರಿಕಾದ ಟೆಕ್ಸಾಸ್ ನ ಸ್ವೀಟ್ ವಾಟರ್ ಸಿಟಿಯಲ್ಲಿ ವಾಸವಿದ್ದಾನೆ. 20 ಅಡಿ ಬಿಲ್ ಬೋರ್ಡ್ ಹಾಕಿಸಿ ಪ್ರತಿವಾರ $400 ನೀಡುತ್ತಿದ್ದಾನೆ. ಒಂಟಿಯಾಗಿರುವ ತನಗೆ ಸಂಗಾತಿ ಹುಡುಕುತ್ತಿರುವುದಾಗಿ ಆತ ಜಾಹೀರಾತು ಮೂಲಕ ತಿಳಿಸಿದ್ದಾನೆ. ಜೊತೆಗೆ ಆತ. ಆಕೆ ಕರೆದ ಕಡೆ ರಿಲೊಕೇಟ್ ಆಗಲು ಸಹ ಸಿದ್ಧನಿದ್ದಂತೆ. ಆಕೆಗೆ ಇಲ್ಲಿ ಇರಲು ಇಷ್ಟವಿಲ್ಲದಿದ್ದರೆ, ಎಲ್ಲಿ ಬೇಕಾದರೂ ರಿ ಲೊಕೇಟ್ ಆಗಲು ಸಿದ್ಧ ಎಂದು ಬರೆದುಕೊಂಡಿದ್ದಾರೆ.

ನಾನು ಬಿಲ್‌ಬೋರ್ಡ್‌ ಜಾಹೀರಾತು ಹಾಕಿಸಿದ್ದು ಕಂಡು ನೂರಾರು ಮಂದಿ ಕರೆ ಮಾಡುತ್ತಿದ್ದಾರೆ. ಆದರೆ ಅದರಲ್ಲಿ ಬಹುತೇಕರು ಹಣ ಮಾತ್ರ ಕೇಳುತ್ತಿದ್ದಾರೆ. ನಾನು ಜಾಹೀರಾತು ನೀಡಿದ್ದು ಕಂಡು ಅವರು ನಾನು ಶ್ರೀಮಂತ ಎಂದುಕೊಂಡಿದ್ದಾರೆ. ಹೀಗಾಗಿ ನನಗೆ ಬರುವ ಕರೆಗಳನ್ನು ಪರಿಶೀಲಿಸಲು ನಾನು ನನ್ನ ಸ್ನೇಹಿತರಿಗೆ ವರ್ಗಾಯಿಸುತ್ತೇನೆ ಅವರು ವಿಚಾರಣೆ ನಡೆಸುತ್ತಾರೆ ಎಂದು ಗಿಲ್ಬರ್ಟ್ ಹೇಳಿಕೊಂಡಿದ್ದಾರೆ.

ನನಗೆ ಸರಿಯಾದ ವ್ಯಕ್ತಿ ಸಿಕ್ಕರೆ ನಾನು ಎಲ್ಲಿಗೆ ಬೇಕಾದರು ಪ್ರಯಾಣಿಸುತ್ತೇನೆ. ನಾನು ಸರಿಯಾದ ವ್ಯಕ್ತಿಯನ್ನು ಭೇಟಿಯಾದರೆ ಅವರ ಕಣ್ಣುಗಳನ್ನು ನೋಡಲು ಮತ್ತು ಅವರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಲು ನಾನು ಬಯಸುತ್ತೇನೆ. ಯಾರನ್ನಾದರೂ ಭೇಟಿಯಾಗಲು ಯುರೋಪಿಗೆ ಬೇಕಾದರು ನಾನು ಹೋಗುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ನಿಲ್ದಾಣದಲ್ಲಿ ರೈಲು ಇಳಿಯುವಾಗ ಬಿದ್ದು ಮೃ*ತಪಟ್ಟರೆ ಅದಕ್ಕೆ ರೈಲ್ವೆ ಇಲಾಖೆಯೇ ಹೊಣೆ ಎಂದ ಹೈಕೋರ್ಟ್; ಏನಿದು ಪ್ರಕರಣ? ಆದೇಶದಲ್ಲಿ ಏನಿದೆ?

ಹಲವರಿಂದ ಕರೆ !

ಗಿಲ್ಬರ್ಟ್ 2015 ರಿಂದ ಒಂಟಿಯಾಗಿ ಬದುಕುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಇತ್ತ ಜಾಹೀರಾತು ನೋಡಿ ಕರೆ ಮಾಡುವವರು ಮೊದಲಿಗೆ ಹಣ ಮತ್ತು ಆಸ್ತಿ ಕುರಿತು ವಿಚಾರಣೆ ನಡೆಸುತ್ತಿದ್ದಾರಂತೆ. ಅಲ್ಲದೆ ಆಸ್ತಿಯನ್ನ ತಮ್ಮ ಹೆಸರಿಗೆ ವರ್ಗಾಯಿಸಿದರೆ ಮಾತ್ರ ಆತನ ಜೊತೆ ಇರಲು ಬಯಸಿರುವುದಾಗಿಯೂ ಹೇಳಿದ್ದಾರಂತೆ. ಆದರೆ ತಾನು ಆಸ್ತಿ, ಹಣದ ಹಿಂದೆ ಬಿದ್ದು ಈ ರೀತಿ ಜಾಹೀರಾತು ನೀಡಿಲ್ಲ, ಕೊನೆಯ ದಿನಗಳಲ್ಲಿ ನನ್ನ ಜೊತೆ ಇರುವವರು ಬೇಕಾಗಿದ್ದಾರೆ. ಅಂತವರು ಸಿಗುವವರೆಗೆ ಹುಡುಕುತ್ತೇವೆ ಎಂದಿದ್ದಾರೆ.

ಅಲ್ಲದೆ ಜಾಹೀರಾತು ನೋಡಿ ಆ ಮೂಲಕ ಸಂಪರ್ಕಿಸುವವರು ಹೆಚ್ಚಿನವರು ಕುಟುಂಬ, ಮದುವೆಯಾಗಿ ಮಕ್ಕಳು ಇದ್ದವರು ಆಗಿದ್ದಾರಂತೆ. ಅವರಲ್ಲಿ ಕೆಲವರು ಹಣ ನೀಡಿದರೆ ಅವರ ಜೊತೆ ಮನೆಯಲ್ಲಿ ಬಿಟ್ಟುಕೊಳ್ಳುವುದಾಗಿಯೂ ಆಫರ್ ನೀಡಿದ್ದರಂತೆ. ಇದನ್ನು ತಿರಸ್ಕರಿಸಿರುವುದಾಗಿ ಗಿಲ್ಬರ್ಟ್ ತಿಳಿಸಿದ್ದಾರೆ.

ನನ್ನ ಬಳಿ ಯಾವ ಆಸ್ತಿ ಇಲ್ಲ ಎಂದಿರುವ ಗಿಲ್ಬರ್ಟ್, ವಯಸ್ಸಿನಲ್ಲಿ ದುಡಿದ ಹಣ, ಒಂದು ಮನೆ ಇದೆ, ಹಣ ಮಾಡುವ ವಯಸ್ಸು ಸಹ ನನಗಿಲ್ಲ. ನಾನು ಶ್ರೀಮಂತನಲ್ಲ. ಜಾಹೀರಾತು ನೀಡಿದ್ದು ನೋಡಿ ಎಲ್ಲರು ನಾನು ಶ್ರೀಮಂತ ಕರೆ ಮಾಡುತ್ತಾರೆ. ನನ್ನ ಬಳಿ ಹಣವಿಲ್ಲವೆಂದಾಗ ಕರೆ ಕಟ್ ಮಾಡುತ್ತಿದ್ದಾರೆ ಎಂದು ಗಿಲ್ಬರ್ಟ್ ಅಳಲು ತೋಡಿಕೊಂಡಿದ್ದಾರೆ.

Continue Reading

LATEST NEWS

ನಿಲ್ದಾಣದಲ್ಲಿ ರೈಲು ಇಳಿಯುವಾಗ ಬಿದ್ದು ಮೃ*ತಪಟ್ಟರೆ ಅದಕ್ಕೆ ರೈಲ್ವೆ ಇಲಾಖೆಯೇ ಹೊಣೆ ಎಂದ ಹೈಕೋರ್ಟ್; ಏನಿದು ಪ್ರಕರಣ? ಆದೇಶದಲ್ಲಿ ಏನಿದೆ?

Published

on

ಬೆಂಗಳೂರು : ಚಲಿಸುತ್ತಿರುವ ರೈಲಿನಿಂದ ಇಳಿಯುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃ*ತಪಟ್ಟರೆ ಅದಕ್ಕೆ ರೈಲ್ವೆ ಇಲಾಖೆಯೇ ಹೊಣೆ. ಮೃ*ತ ಪ್ರಯಾಣಿಕರ ಕುಟುಂಬಕ್ಕೆ ರೈಲ್ವೇ ಇಲಾಖೆಯೇ ಪರಿಹಾರ ನೀಡುವ ಕೆಲಸ ಮಾಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.


ಏನಿದು ಪ್ರಕರಣ ?

ಜಯಮ್ಮ ಎಂಬವರು ರೈಲಿನಿಂದ ಬಿದ್ದು ಇಹಲೋಕ ತ್ಯಜಿಸಿದ್ದರು. ಜಯಮ್ಮ ತನ್ನ ಸಹೋದರಿಯೊಂದಿಗೆ ತಪ್ಪಾಗಿ ಬೇರೊಂದು ರೈಲು ಹತ್ತಿದ್ದರು. ಇದು ಗೊತ್ತಾಗಿ ಆಕೆ ಕೆಳಗಿಳಿಯುವ ವೇಳೆ ರೈಲು ಚಲಿಸಲು ಆರಂಭಿಸಿತ್ತು. ಆಗ ನಿಯಂತ್ರಣ ಕಳೆದುಕೊಂಡು ಆಕಸ್ಮಿಕವಾಗಿ ಕೆಳಗೆ ಬಿದ್ದು ತೀವ್ರವಾಗಿ ಗಾ*ಯಗೊಂಡು ಸ್ಥಳದಲ್ಲೇ ಮೃ*ತಪಟ್ಟಿದ್ದರು. ಇದನ್ನು ಪರಿಗಣಿಸಿ ಆಕೆಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ನಿರ್ದೇಶಿಸುವಂತೆ ನ್ಯಾಯಪೀಠಕ್ಕೆ ಅರ್ಜಿದಾರರ ಪರ ವಕೀಲ ಮನವಿ ಮಾಡಿದರು.

ರೈಲು ಇಳಿಯುವಾಗ ಸಂಭವಿಸಿದ ಅವಘಡದಲ್ಲಿ ಮೃ*ತಪಟ್ಟ ಜಯಮ್ಮ ಎಂಬವರ ಸಾ*ವಿಗೆ ಪರಿಹಾರ ಕಲ್ಪಿಸುವ ಸಂಬಂಧ ರೈಲ್ವೆ ಹಕ್ಕುಗಳ ನ್ಯಾಯಮಂಡಳಿ ಹೊರಡಿಸಿರುವ ತೀರ್ಪನ್ನು ಅರ್ಜಿದಾರರು ಪ್ರಶ್ನಿಸಿದ್ದರು.

ರಾಮನಗರ ಜಿಲ್ಲೆಯ ಚನ್ನಪಟ್ಟಣ ನಿವಾಸಿ ರೋಜಮಣಿ ಹಾಗೂ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಚ್.ಪಿ.ಸಂದೇಶ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ತೀರ್ಪು ನೀಡಿದೆ.

ರೈಲ್ವೆ ಇಲಾಖೆ ವಾದ ಏನಾಗಿತ್ತು?

ಈ ಘಟನೆ ಆಕಸ್ಮಿಕವಾಗಿ ನಡೆದಿದ್ದಲ್ಲ, ಉದ್ದೇಶಪೂರ್ವಕ ಎಂದು ರೈಲ್ವೆ ಇಲಾಖೆ ಹೇಳಿದರೂ ಅದಕ್ಕೆ ಸಾಕ್ಷ್ಯಾಧಾರ ಒದಗಿಸಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿ ರೈಲ್ವೆ ಹಕ್ಕುಗಳ ನ್ಯಾಯಮಂಡಳಿ ಹೊರಡಿಸಿರುವ ಆದೇಶವನ್ನು ತಳ್ಳಿಹಾಕುವಂತೆ ಅರ್ಜಿದಾರರು ವಾದಿಸಿದ್ದರು.

ಮೃ*ತ ಮಹಿಳೆ ತಪ್ಪಾಗಿ ಬೇರೊಂದು ರೈಲು ಹತ್ತಿದ್ದರು. ಆಗ ಅವರು ಒಂದೋ ಪ್ರಯಾಣ ಮುಂದುವರಿಸಿ ಮುಂದಿನ ನಿಲ್ದಾಣದಲ್ಲಿ ಇಳಿಯಬೇಕು. ಇಲ್ಲವೇ ಅಲಾರ್ಮ್ ಚೈನ್ ಎಳೆಯಬೇಕು. ಅದೆರಡನ್ನೂ ಮಾಡದೆ ರೈಲಿನಿಂದ ಇಳಿಯಲು ಪ್ರಯತ್ನಿಸಿ ಸ್ವಯಂಪ್ರೇರಿತ ಮತ್ತು ಉದ್ದೇಶಪೂರ್ವಕವಾಗಿ ಜಿಗಿದಿದ್ದಾರೆ.

ಹೀಗಾಗಿ ಘಟನೆ ಆಕಸ್ಮಿಕವಾಗಿ ಸಂಭವಿಸಿದೆ ಎನ್ನಲಾಗದು. ಆದ್ದರಿಂದ ರೈಲ್ವೆ ಕಾಯ್ದೆಯ ಸೆಕ್ಷನ್ 123(ಇ) ಅನ್ವಯ ಪರಿಹಾರ ಕಲ್ಪಿಸಲು ಸಾಧ್ಯವಿಲ್ಲ ಎಂದು ರೈಲ್ವೆ ಇಲಾಖೆ ಪ್ರತಿವಾದ ಮಂಡಿಸಿತ್ತು.

ಇದನ್ನೂ ಓದಿ : ಊಟಿಗೆ ಪ್ರಯಾಣ ಬೆಳೆಸೋ ಯೋಚನೆಯಲ್ಲಿದ್ದೀರಾ? ಹಾಗಾದ್ರೆ ಈ ಆದೇಶ ಪಾಲಿಸೋದು ಕಡ್ಡಾಯ!

ಪರಿಹಾರ ಎಷ್ಟು?

ಜಯಮ್ಮ ಸಾ*ವಿಗೆ ರೈಲ್ವೆಯಿಂದ 8 ಲಕ್ಷ ರೂ. ಪರಿಹಾರ ಕೋರಿದ್ದರು. ಆದೇಶದಲ್ಲಿ ಪೀಠವು ಪ್ರತಿವಾದಿಗಳು 4 ಲಕ್ಷ ರೂ. ವಾರ್ಷಿಕ ಶೇ.7 ಬಡ್ಡಿಯೊಂದಿಗೆ ಪಾವತಿಸುವಂತೆ ಹೇಳಿದೆ. ಇದಕ್ಕೆ ತಪ್ಪಿದ್ದಲ್ಲಿ ಪ್ರತಿವಾದಿಗಳು ಅರ್ಜಿದಾರರ ಮನವಿಯಂತೆ 8 ಲಕ್ಷ ರೂ. ಪಾವತಿಸಬೇಕು ಎಂದು ನ್ಯಾಯಪೀಠ ತಿಳಿಸಿದೆ.

ಘಟನೆ ನಡೆದಿದ್ದು ಹೇಗೆ ?

2014ರ ಫೆ.22 ರಂದು ಜಯಮ್ಮ ತನ್ನ ಸಹೋದರಿ ರತ್ನಮ್ಮ ಅವರೊಂದಿಗೆ ಚನ್ನಪಟ್ಟಣ ರೈಲು ನಿಲ್ದಾಣಕ್ಕೆ ಹೋಗಿ ಮೈಸೂರಿನ ಅಶೋಕಪುರಂಗೆ ಹೋಗಲು ‘ತಿರುಪತಿ ಪ್ಯಾಸೆಂಜರ್’ ರೈಲಿಗಾಗಿ ಕಾಯುತ್ತಿದ್ದರು. ಆಗ ‘ಟುಟಿಕೋರಿನ್ ಎಕ್ಸ್‌ಪ್ರೆಸ್’ ರೈಲು ಬಂದಿದೆ. ಇಬ್ಬರೂ ಆ ರೈಲು ಹತ್ತಿದ್ದರು.

ಆಮೇಲೆ ಅವರಿಗೆ ಗೊತ್ತಾಗಿದೆ, ರೈಲು ಅಶೋಕಪುರಂಗೆ ಹೋಗುವುದಿಲ್ಲ ಎಂಬುದು. ಹಾಗಾಗಿ ರೈಲಿನಿಂದ ಜಯಮ್ಮ ಇಳಿಯಲು ತೊಡಗಿದ್ದಾರೆ. ಆ ವೇಳೆ ರೈಲು ಚಲಿಸಲಾರಂಭಿಸಿತು, ಪರಿಣಾಮ ಸಮತೋಲನ ತಪ್ಪಿ ಆಕಸ್ಮಿಕವಾಗಿ ಕೆಳಗೆ ಬಿದ್ದು ಸ್ಥಳದಲ್ಲೇ ಸಾ*ವಿಗೀಡಾದರು. ಘಟನೆಗೆ ಪರಿಹಾರ ಕಲ್ಪಿಸಲು ಸಾಧ್ಯವಿಲ್ಲ ಎಂದು ರೈಲ್ವೆ ನ್ಯಾಯಮಂಡಳಿ ಅರ್ಜಿ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಮೃ*ತರ ಕುಟಂಬಸ್ಥರು ಹೈಕೋರ್ಟ್ ಮೆಟ್ಟಿಲೇರಿದ್ದರು.

Continue Reading

LATEST NEWS

Trending