Connect with us

DAKSHINA KANNADA

 ಪ್ರಯಾಣಿಕನ ಜೀವ ಉಳಿಸಲು ಮಂಗಳೂರಿನಲ್ಲಿ ಆಸ್ಪತ್ರೆ ಅಲೆದಾಡಿದ ಬಸ್ ನಿರ್ವಾಹಕ..!

Published

on

 ಪ್ರಯಾಣಿಕನ ಜೀವ ಉಳಿಸಲು ಮಂಗಳೂರಿನಲ್ಲಿ ಆಸ್ಪತ್ರೆ ಅಲೆದಾಡಿದ ಬಸ್ ನಿರ್ವಾಹಕ..!

ಮಂಗಳೂರು : ತನ್ನ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಜೀವ ಉಳಿಸಲು ನಿರ್ವಾಹಕನೋರ್ವ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಲು ಸ್ವತಹ ಮುಂದಾಗಿ ಮಾನವೀಯತೆ ಮೆರೆದಿದ್ದಾರೆ.

ಗಣೇಶ್ ಅವರು ಕಳೆದ ನವಂಬರ್ 16 ರಂದು ಬೆಳಗ್ಗೆ ಎಂದಿನಂತೆ ಬಜಪೆ ಕೈಕಂಬ ಮಾರ್ಗವಾಗಿ ಸಂಚರಿಸುವ ಶಾನ್ ಎಂಬ ಸರ್ವಿಸ್ ಬಸ್ ನಲ್ಲಿ ತನ್ನ ಕರ್ತವ್ಯ ನಿರ್ವಹಿಸುತ್ತಿದ್ದರು.

ಆ ದಿನ ಪ್ರಯಾಣಿಸುತ್ತಿದ್ದ ಉತ್ತರಪ್ರದೇಶದ ವಾರಣಾಸಿ ನಿವಾಸಿ ರಾಜೇಶ್ ಚೌಹಾನ್ (40) ಸುರತ್ಕಲ್ ಸಮೀಪದ ಕಾಟಿಪಳ್ಳ ಬಳಿ ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದರು.

ತಕ್ಷಣ ಗಣೇಶ್ ಅವರು ಟಿಕೇಟ್ ಕಲೆಕ್ಷನ್ ಕೆಲಸ ಚಾಲಕ ರಮೇಶ್ ಅವರಿಗೆ ವಹಿಸಿ ಈತನನ್ನು ಸುರತ್ಕಲ್ ಖಾಸಗೀ ಆಸ್ಪತ್ರೆಗೆ ಕರೆ ತಂದರು.

ಆದರೆ ಆರೋಗ್ಯ ಸ್ಥಿತಿ ಕೈ ಮೀರಿದ್ದರಿಂದ ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ವೈದ್ಯರು ಸಲಹೆ ನೀಡಿದರು.

ತಕ್ಷಣ ಸ್ಥಳೀಯ ಸೇವಾ ಸಂಘದ ಆಂಬುಲೆನ್ಸ್ ನಲ್ಲಿ ವೆನ್ ಲಾಕ್ ಗೆ ಕರೆ ತಂದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಚೌಹಾನ್ ಮೃತಪಟ್ಟರು. ಬಳಿಕ ಘಟನೆ ಕುರಿತು ಸುರತ್ಕಲ್ ಪೊಲೀಸರಿಗೆ ಗಣೇಶ್ ಮಾಹಿತಿ ನೀಡಿ ದೂರು ದಾಖಲಿಸಿದರು.

ಇಂದಿನ ಕಾಲದಲ್ಲಿ ಪೊಲೀಸು,ಕೇಸು ಎಂದು ದೂರ ಸರಿದು ಸುಮ್ಮನಿರುವ ಮಂದಿಯ ನಡುವೆ ಗಣೇಶ್ ಅವರು ಹೊರ ರಾಜ್ಯದ ಕಾರ್ಮಿಕನ ಜೀವ ಉಳಿಸಲು ತನ್ನ ಕೆಲಸವನ್ನು ಬಿಟ್ಟು ದಿನ ಪೂರ್ತಿ ಆತನ ಬಳಿ ಇದ್ದು ಸ್ಪಂದಿಸಿ ಮಾನವೀಯತೆ ಮೆರೆದಿದ್ದು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ಸುರತ್ಕಲ್ ಪೊಲೀಸ್ ಸಿ ಐ ಚಂದ್ರಪ್ಪ ಹಾಗೂ ಠಾಣೆಯ ಅಧಿಕಾರಿಗಳು, ಸಿಬಂದಿಗಳು ಗಣೇಶ್ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿ ಅಭಿನಂದಿಸಿದ್ದಾರೆ

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending