DAKSHINA KANNADA
ನಳೀನ್ ಗೆ ಸೋಲಿನ ರುಚಿ ತೋರಿಸ್ತಾರ ರೆಬೆಲ್ ಹರೀಶ್ ಕುಮಾರ್..?
ಮಂಗಳೂರು: ಇನ್ನೇನು ಕೆಲವೇ ತಿಂಗಳು ಬಾಕಿ. ದೇಶಾದ್ಯಂತ ಲೋಕಸಭೆ ಎಲೆಕ್ಷನ್ ಕಾವು ಜೋರಾಗಿದೆ. ದಿನದಿಂದ ದಿನಕ್ಕೆ ಅಭ್ಯರ್ಥಿಗಳು ಯಾರು ಸಮರ್ಥ ಎಂಬುದರ ಲೆಕ್ಕಾಚಾರದಲ್ಲಿ ಆಯಾ ಪಕ್ಷದವರು ಸನ್ನದ್ಧರಾಗಿದ್ದರೆ. ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಆಯಾ ಕ್ಷೇತ್ರಗಳಲ್ಲಿ ಕುತೂಹಲ ಕೌತುಕ. ಹೀಗಿರುವಾಗ ಲೋಕಸಭಾ ಚುನಾವಣೆಯ 2024 ದ.ಕ. ಜಿಲ್ಲೆಯ ಲೋಕಸಭಾ ಕ್ಷೇತ್ರ ಹಾಗೂ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಗಳು ಯಾರಾಗಬಹುದೆಂಬ ಲೆಕ್ಕಾಚಾರಗಳು ನಡೆಯುತ್ತಿವೆ. ಅಷ್ಟೇ ಅಲ್ಲ ದ.ಕ. ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಅಖಾಡ ಒಂದು ರೂಪ ಪಡೆದುಕೊಳ್ಳುತ್ತಿದೆ.
ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತೊಮ್ಮೆ ಆಯ್ಕೆಯಾಗುವುದು ಪಕ್ಕ… ಅದರಲ್ಲಿ ಎರಡು ಮಾತಿಲ್ಲ. ಸಂಘಟನಾತ್ಮಕವಾಗಿ ನಳಿನ್ ಪ್ರಬಲವಾಗಿರುವುದೇ ಹಾಗೂ ಹೈಕಮಾಂಡ್ ಕೃಪಾಕಟಾಕ್ಷ ಈ ಆಯ್ಕೆಗೆ ಕಾರಣ ಎನ್ನಲಾಗುತ್ತಿದೆ. ಇನ್ನೊಂದು ಕಡೆ ಮಂಗಳೂರಿನ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಯಾಗಿ ಹಾಲಿ ಎಂಎಲ್ಸಿ ಹರೀಶ್ ಕುಮಾರ್ ಆಯ್ಕೆಯಾಗುವ ಸಾಧ್ಯತೆ ಬಹುತೇಕವಾಗಿ ಎದ್ದು ಕಾಣುತ್ತಿದೆ. ವಿಧಾನ ಪರಿಷತ್ತಿನಲ್ಲಿ ಜನಸಾಮಾನ್ಯರ ರೆವಿನ್ಯೂ ವಿಷಯಗಳಿಗೆ ಸಂಬಂಧಪಟ್ಟಂತೆ ಹಲವಾರು ಪ್ರಶ್ನೆಗಳನ್ನು ಎತ್ತಿರುವುದು ಹಾಗೂ ಪಕ್ಷದ ಒಳಗೆ ಎಲ್ಲರೊಂದಿಗೆ ಆತ್ಮೀಯತೆಯಿಂದ ಇರುವುದು. ಯಾರೊಂದಿಗೂ ವೈರತ್ವವಿಲ್ಲದ ಹರೀಶ್ ಕುಮಾರ್ ಅವರಿಗೆ ಪ್ಲಸ್ ಪಾಯಿಂಟ್ ಎನ್ನಲಾಗುತ್ತಿದೆ.
ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಅತ್ಯಂತ ಜನಪ್ರಿಯತೆಯನ್ನು ಕಂಡವರು. ಎಲ್ಲರೊಂದಿಗೆ ಅತ್ಯಂತ ಸರಳತೆಯಿಂದ ಕೂಡಿಕೊಂಡು ಪಕ್ಷವನ್ನ ಬೆಳೆಸಿದ ಹೆಮ್ಮೆ ಕರಾವಳಿಗರಲ್ಲಿ ಕೇಳಿ ಬರುವ ಮಾತು. ಇವರಿಗೆ ಮತ್ತೊಂದು ಪ್ಲಸ್ ಪಾಯಿಂಟ್ ಜಾತಿ ಲೆಕ್ಕಾಚಾರ. ಬಿಲ್ಲವ ಸಮುದಾಯಕ್ಕೆ ಸೇರಿದ ಇವರು ಪ್ರಬಲ ನಾಯಕನೂ ಹೌದು. ಜಾತಿ ಬೆಂಬಲವೂ ಹರೀಶ್ ಕುಮಾರ್ ಮೇಲಿದೆ. ಹೀಗಿರುವಾಗ ಕಾಂಗ್ರೆಸ್ ನಿಂದ ದ.ಕ. ಜಿಲ್ಲೆ ಲೋಕಸಭಾ ಕ್ಷೇತ್ರಕ್ಕೆ ಹರೀಶ್ ಕುಮಾರ್ ಪ್ರಬಲ ಪೈಪೋಟಿ ಕೊಡಬಲ್ಲ ಅಭ್ಯರ್ಥಿ ಎಂಬುದು ಪಕ್ಕ. ಜೊತೆಗೆ ಬಿಜೆಪಿಯ ನಳೀನ್ ಕುಮಾರ್ ಕಟೀಲ್ ವಿರುದ್ಧ ಅಚ್ಚರಿ ಎಂಬಂತೆ ಗೆಲುವನ್ನು ಕಾಣಲು ಹರೀಶ್ ಕುಮಾರ್ ಅವರಿಂದ ಸಾಧ್ಯ ಎಂಬುದು ಕರಾವಳಿಯಲ್ಲಿ ಗುಸು ಗುಸು ಮಾತು ಆರಂಭವಾಗಿಬಿಟ್ಟಿದೆ. ಹಾಗಾಗಿಯೇ ಈ ಬಾರಿ ಹರೀಶ್ ಕುಮಾರ್ ಅವ್ರನ್ನ ಕಾಂಗ್ರೆಸ್ ದ.ಕ. ಲೋಕ ಅಭ್ಯರ್ಥಿಯಾಗಿ ಬಹುತೇಕ ಫೈನಲ್ ಮಾಡುವುದು ಪಕ್ಕ ಆಗಿದೆ.
ಉಳಿದಂತೆ ರಾಜಕೀಯ ಪಡಸಾಲೆಯ ಲೆಕ್ಕದಲ್ಲೂ ಬಿಜೆಪಿಯ ನಳೀನ್ ಗೆ ಈ ಬಾರಿ ಸೋಲಿನ ಆತಂಕವೂ ಇದೆ. ಹಾಗಾಗಿ ಕಾಂಗ್ರೆಸ್ ನಿಂದ ಸಮರ್ಥ ಅಭ್ಯರ್ಥಿಯಾಗಿ ಹರೀಶ್ ಕುಮಾರ್ ಅವರನ್ನು ಕಣಕ್ಕಿಳಿಸಿದರೆ ಗೆಲುವು ಪಕ್ಕ ಎಂಬುದು ಗೋಚರವಾಗಿದೆ. ಇತ್ತ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಆಯ್ಕೆಯಾಗುವ ಸಂಭವವಿದೆ ಎನ್ನಲಾಗುತ್ತಿದೆ. ಆಡಳಿತದ ಬಗ್ಗೆ ಉತ್ತಮ ಜ್ಞಾನ ಹೊಂದಿರುವ ಜಯಪ್ರಕಾಶ್ ಹೆಗ್ಡೆ ಜನಪ್ರಿಯತೆಯನ್ನು ಗಳಿಸಿಕೊಂಡಿರುವ ರಾಜಕೀಯ ನಾಯಕ. ಇರುವವರಿಗೆ ಪೂರಕವಾದ ಅಂಶ ಆಗಿದೆ ಎನ್ನಲಾಗುತ್ತಿದೆ.
ಈ ಬಾರಿ ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಆಯ್ಕೆ ಆಗುವ ಸಂಭವವಿದೆ ಎನ್ನಲಾಗುತ್ತಿದೆ. ಶಾಸಕರಾಗಿ, ಮಂತ್ರಿಯಾಗಿ ಉತ್ತಮ ಕೆಲಸವನ್ನು ಮಾಡಿರುವ ಪ್ರಮೋದ್ ಮಧ್ವರಾಜ್ ಬಗ್ಗೆ ಜನರಲ್ಲಿ ಉತ್ತಮ ಒಲವು ಇದೆ ಎನ್ನಲಾಗುತ್ತಿದೆ. ಉಡುಪಿ ಚಿಕ್ಕಮಗಳೂರು ಹಾಗೂ ಮಂಗಳೂರು ಲೋಕಸಭಾ ಕ್ಷೇತ್ರವನ್ನು ಎರಡು ಪಕ್ಷಗಳು ಗಂಭೀರವಾಗಿ ಪರಿಗಣಿಸಿದ್ದು ರಣತಂತ್ರವನ್ನು ರೂಪಿಸುತ್ತಿವೆ. ಬಂದಿರುವ ಮಾಹಿತಿಗಳ ಪ್ರಕಾರ ಪರಸ್ಪರ ಸ್ಪರ್ಧೆಗೆ ಒಂದು ಹಂತದ ಅಖಾಡ ಸಿದ್ಧವಾಗಿದೆ ಎನ್ನಲಾಗಿದೆ.
DAKSHINA KANNADA
Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!
ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.
ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ
DAKSHINA KANNADA
Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು
ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.
ನವೀನ್ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.
DAKSHINA KANNADA
ಕಟೀಲು ಕ್ಷೇತ್ರಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ
ಕಿನ್ನಿಗೋಳಿ: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ ನೀಡಿದರು.
ದೇವಳದ ವತಿಯಿಂದ ಶ್ರೀ ರಾಮುಲು ಅವರನ್ನು ಗೌರವಿಸಲಾಯಿತು.
ಈ ಸಂದರ್ಭ ವೆಂಕಟರಮಣ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಉಪಸ್ಥಿತರಿದ್ದರು.
ಕ್ಷೇತ್ರದಲ್ಲಿ ಅವರು ಅನ್ನಪ್ರಸಾದವನ್ನು ಸ್ವೀಕರಿಸಿ ಸರಳತೆ ಮೆರೆದರು. ಬಳಿಕ ಕ್ಷೇತ್ರದ ಕುರಿತಂತೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.
- bangalore4 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- FILM3 days ago
ಆಲಿಯಾ ಭಟ್ ಡೀಫ್ ಫೇಕ್ ವಿಡಿಯೋ ವೈರಲ್ – ವಿಡಿಯೋ ನೋಡಿದ್ರಾ..?
- bangalore6 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್
- DAKSHINA KANNADA6 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!