LATEST NEWS
ರಿಲಯನ್ಸ್ ಜಿಯೋದಿಂದ ಎರಡು ಹೊಸ ಸಬ್ಸೀ ಕೇಬಲ್ ವ್ಯವಸ್ಥೆ ಯೋಜನೆ..!
ನವದೆಹಲಿ: ಭಾರತದಲ್ಲಿ ಮುಂಚೂಣಿಯಲ್ಲಿರುವ 4ಜಿ ಮತ್ತು ಮೊಬೈಲ್ ಬ್ರಾಡ್ ಬ್ಯಾಂಡ್ ಡಿಜಿಟಲ್ ಸೇವಾ ಪೂರೈಕೆದಾರ ರಿಲಾಯನ್ಸ್ ಜಿಯೋ ಇನ್ಫೋಕಾಮ್ ಲಿ. ಭಾರತವನ್ನು ಕೇಂದ್ರವಾಗಿಟ್ಟುಕೊಂಡು ಜಿಯೋ ಅತೀ ದೊಡ್ಡ ಅಂತರಾಷ್ಟ್ರೀಯ ಜಲಾಂತರ್ಗಾಮಿ ಕೇಬಲ್ ವ್ಯವಸ್ಥೆಯನ್ನು ನಿರ್ಮಿಸುತ್ತಿದೆ.
ಜಾಗತಿಕ ಪಾಲುದಾರರು ಹಾಗೂ ವಿಶ್ವದರ್ಜೆಯ ಜಲಾಂತರ್ಗಾಮಿ ಕೇಬಲ್ ಪೂರೈಕೆದಾರ ಸಬ್ ಕಾಮ್ ಸಹಯೋಗದೊಂದಿಗೆ ಜಿಯೋ ಪ್ರಸ್ತುತ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಡೇಟಾ ಬೇಡಿಕೆಗೆ ಬೆಂಬಲ ಒದಗಿಸುವ ನಿಟ್ಟಿನಲ್ಲಿ ಮುಂದಿನ ತಲೆಮಾರಿನ ಎರಡು ಕೇಬಲ್ ವ್ಯವಸ್ಥೆಗಳನ್ನು ಅಳವಡಿಸುತ್ತದೆ.
ಇಂಡಿಯಾ ಏಷ್ಯಾ ಎಕ್ಸ್ ಪ್ರೆಸ್ ವ್ಯವಸ್ಥೆಯು ಭಾರತವನ್ನು ಸಂಪರ್ಕಿಸುತ್ತದೆ. ಭಾರತ ಯುರೋಪ್ ಎಕ್ಸ್ ಪ್ರೆಸ್ ವ್ಯವಸ್ಥೆ ಭಾರತವನ್ನು ಮಧ್ಯ ಪ್ರಾಚ್ಯ ಹಾಗೂ ಯುರೋಪ್ ಜತೆ ಸಂಪರ್ಕಿಸಲಿದೆ.
ಈ ವ್ಯವಸ್ಥೆ ತಡೆ ರಹಿತಅಂತರ್ ಸಂಪರ್ಕ ಹೊಂದಿರಲಿದೆ. ಇದರೊಂದಿಗೆ ಜಾಗತಿಕ ಸೇವೆ ವಿಸ್ತರಣೆಗೆ ಜಗತ್ತಿನ ಪ್ರಮುಖ ಅಂತರ್ ವಿನಿಮಯ ಬಿಂದುಗಳು ಮತ್ತು ವಿಚಾರ ಕೇಂದ್ರಗಳನ್ನು ಸಂಪರ್ಕಿಸಲಿದೆ.
ಭಾರತದ ಆಂತರಿಕ ಹಾಗೂ ಬಾಹ್ಯ ಮಾಹಿತಿ ಮತ್ತು ಸೇವೆಗಳಿಗೆ ಗ್ರಾಹಕ ಮತ್ತು ಉದ್ಯಮ ಬಳಕೆದಾರರ ಸಾಮರ್ಥ್ಯವನ್ನು ಐಎಎಕ್ಸ್ ಮತ್ತುಐಇಎಕ್ಸ್ ವೃದ್ಧಿಸಲಿವೆ.
ಫೈಬರ್ ಆಪ್ಟಿಕ್ ಅಂತರ್ ಟೆಲಿಕಮ್ಯುನಿಕೇಶನ್ ಇತಿಹಾಸದಲ್ಲೇ ಮೊದಲ ಬಾರಿಗೆ ಅಂತರಾಷ್ಟ್ರೀಯ ನೆಟ್ ವರ್ಕ್ ನಕ್ಷೆಯಲ್ಲಿ ಭಾರತವನ್ನು ಕೇಂದ್ರವನ್ನಾಗಿಸಿದೆ.
2016ರಲ್ಲಿ ಜಿಯೋ ಸೇವೆಗಳು ಆರಂಭವಾದಾಗಿನಿಂದ ಭಾರತಕ್ಕೆ ಹೆಚ್ಚಿದ ಪ್ರಾಮುಖ್ಯತೆಯು ಡೇಟಾ ಬಳಕೆಯಲ್ಲಿನ ಬೃಹತ್ ಬದಲಾವಣೆಯನ್ನು ಇಲ್ಲಿ ಗುರುತಿಸಬಹುದಾಗಿದೆ.
BANTWAL
ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.
LATEST NEWS
ನಟಿ ಅಮೂಲ್ಯ ಮಾವನ ಮನೆಗೆ ಚುನಾವಣಾ ಅಧಿಕಾರಿಗಳ ದಾಳಿ.. 31 ಲೀಟರ್ ಮದ್ಯ ವಶ..!!
ಬೆಂಗಳೂರು: ನಟಿ ಅಮೂಲ್ಯ ಅವರ ಮಾವ ರಾಜರಾಜೇಶ್ವರಿ ನಗರ ಮಾಜಿ ಕಾರ್ಪೋರೇಟರ್ ರಾಮಚಂದ್ರಪ್ಪರವರ ಮನೆ ಮೇಲೆ ಎ.24ರಂದು ರಾತ್ರಿ ಚುನಾವಣಾ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಆರ್.ಆರ್ ನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಿದ ಅಧಿಕಾರಿಗಳು ಮನೆಯಲ್ಲಿ ಶೋಧ ಮಾಡಿದ್ದಾರೆ. ರಾತ್ರಿ 10 ಗಂಟೆ ಸುಮಾರಿಗೆ 10 ವಾಹನಗಳಲ್ಲಿ ಬಂದಿದ್ದ 30ಕ್ಕೂ ಹೆಚ್ಚು ಚುನಾವಣಾ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಈ ವೇಳೆ ರಾಮಚಂದ್ರ, ನಟಿ ಅಮೂಲ್ಯ ಮತ್ತು ಪತಿ ಜಗದೀಶ್ ಮನೆಯಲ್ಲೇ ಇದ್ದರು. ಚುನಾವಣಾ ಅಧಿಕಾರಿ, ಅಬಕಾರಿ ಪೊಲೀಸ್, ವಾಣಿಜ್ಯ ತೆರಿಗೆ ಅಧಿಕಾರಿಗಳಿಂದ ನಡೆದ ಜಂಟಿ ದಾಳಿಯಲ್ಲಿ ಸತತ 4 ಗಂಟೆಗಳ ಕಾಲ ಶೋಧ ನಡೆಸಿದ್ದಾರೆ.
31 ಲೀಟರ್ ಮದ್ಯ ವಶ:
ಇನ್ನು ಚುನಾವಣಾ ಅಧಿಕಾರಿಗಳ ದಾಳಿ ವೇಳೆ ರಾಮಚಂದ್ರಪ್ಪ ಅವರ ನಿವಾಸದಲ್ಲಿ ಬೆಲೆ ಬಾಳುವ ವಸ್ತುಗಳು ಪತ್ತೆಯಾಗಿಲ್ಲ ಬದಲಾಗಿ 31 ಲೀಟರ್ ಮದ್ಯವನ್ನು ವಶ ಪಡಿಸಿಕೊಳ್ಳಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ರಾಮಚಂದ್ರಪ್ಪ ಮೊಮ್ಮಕ್ಕಳ ಹುಟ್ಟುಹಬ್ಬಕ್ಕಾಗಿ ಮದ್ಯ ತರಿಸಿದ್ದೆವು. ಆದರೆ ಚುನಾವಣೆ ಹಿನ್ನೆಲೆ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡಲು ಆಗುವುದಿಲ್ಲ. ಇದೀಗ ಮದ್ಯವನ್ನು ವಶಕ್ಕೆ ಪಡೆದಿದದ್ದಾರೆ. ಇನ್ನು ವಶಕ್ಕೆ ಪಡೆದಿದ್ದಾರೆ ಎನ್ನುವುದಕ್ಕೆ ನನ್ನ ಸಹಿಯನ್ನು ಪಡೆದುಕೊಂಡು ಹೋಗಿದ್ದಾರೆ. ಈ ಭಾಗದಲ್ಲಿ ಬಿಜೆಪಿ ಲೀಡ್ ಬರುತ್ತೆ. ಇದನ್ನು ಸಹಿಸಲಾಗದ ಕೆಲವರು ಅಧಿಕಾರವನ್ನು ದುರುಪಯೋಗ ಮಾಡುತ್ತಿದ್ದಾರೆ. ಈ ಭಾಗದಲ್ಲಿ ಕಾಂಗ್ರೆಸ್ ಹಣವನ್ನು ಹಂಚಿಕೆ ಮಾಡುತ್ತಿತ್ತು. ಅದಕ್ಕೆ ನಾವು ಅಡ್ಡಿ ಪಡಿಸುತ್ತೇವೆ ಎಂದು ನಮ್ಮ ಮನೆ ಮೇಲೆ ದಾಳಿ ಮಾಡಿದ್ದಾರೆ ಎಂದು ದೂರಿದರು.
ಮುಂದೆ ಓದಿ..; ಬಡಗುತಿಟ್ಟು ಯಕ್ಷಗಾನದ ಗಾನ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ..
ಅಧಿಕಾರಿಗಳಿಗೆ ಪದೇ ಪದೇ ಬರುತ್ತಿದ್ದ ಫೋನ್ ಕಾಲ್:
ದಾಳಿ ವೇಳೆ ಆರ್ಓಗೆ ಪದೇ ಪದೇ ಫೋನ್ ಬರುತಿತ್ತು. ಅವರನ್ನು ಎರಡು ದಿನ ಒಳಗಡೆ ಹಾಕಿಸಿ ಎಂದು ಫೋನಿನಲ್ಲಿ ಇದ್ದ ವ್ಯಕ್ತಿ ಹೇಳುತ್ತಿದ್ದರು. ಮೊಮ್ಮಕ್ಕಳ ಹುಟ್ಟುಹಬ್ಬಕ್ಕೆ ಮದ್ಯ ತರಿಸಿದ್ದೆ. ಚುನಾವಣೆ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಹುಟ್ಟುಹಬ್ಬ ಆಚರಿಸಬಾರದು ಎಂದು ಸುಮ್ಮನೆ ಆಗಿದ್ದೆವು. ಏನೋ ದೊಡ್ಡದಾಗಿ ಸಿಗುತ್ತೆ ಎಂದು ಕೂಲ್ ಆಗಿ ಬಂದ ಅಧಿಕಾರಿಗಳು ಹಾಟ್ ಆಗಿ ಹೊರ ನಡೆದರು ಎಂದು ರಾಮಚಂದ್ರಪ್ಪ ಹೇಳಿದ್ದಾರೆ.
DAKSHINA KANNADA
ಕೇರಳದ ಹಕ್ಕಿ ಜ್ವರ…ದಕ್ಷಿಣ ಕನ್ನಡದ ಗಡಿಯಲ್ಲಿ ಕಟ್ಟೆಚ್ಚರ..!
ಮಂಗಳೂರು: ಕೇರಳದ ಅಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕೇರಳದ ಗಡಿ ಭಾಗಗಳಲ್ಲಿ ವಿಸೇಷ ನಿಗಾ ವಹಿಸಲಾಗಿದೆ.
ಇಂದಿನಿಂದ ತಲಪಾಡಿ, ಜಾಲ್ಸೂರು ಮತ್ತು ಸಾರಡ್ಕದಲ್ಲಿ ವಿಶೇಷ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗುವುದು. ಈ ಚೆಕ್ ಪೋಸ್ಟ್ಗಳಲ್ಲಿ ಕೋಳಿ ಉತ್ಪನ್ನಗಳನ್ನು ಕೇರಳಕ್ಕೆ ತಲುಪಿಸಿದ ನಂತರ ದಕ್ಷಿಣ ಕನ್ನಡಕ್ಕೆ ಹಿಂದಿರುಗುವ ವಾಹನಗಳನ್ನು ಸ್ಯಾನಿಟೈಸ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಮಂಗಳೂರಿನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಆ ಜಿಲ್ಲೆಯಲ್ಲಿ ಇದು ಎರಡನೇ ಪ್ರಕರಣವಾಗಿದೆ. ಇದುವರೆಗೆ ದಕ್ಷಿಣ ಕನ್ನಡದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ನಾವು ಜಾಗರೂಕರಾಗಿರುತ್ತೇವೆ ಮತ್ತು ಮೂರು ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸುತ್ತೇವೆ ಎಂದು ಕರ್ನಾಟಕ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ ಇದು ಕೋವಿಡ್ಗಿಂತ ಭೀಕರ ಸೋಂಕು…ಜಗತ್ತಿಗೆ ಹರಡುವ ಆತಂಕದಲ್ಲಿ ತಜ್ಞರು..!
ಏನಿದು ಹಕ್ಕಿ ಜ್ವರ?
ಹೆಚ್5ಎನ್1 ವೈರಸ್ನಿಂದ ಹರಡುವ ಸೋಂಕನ್ನು ಹಕ್ಕಿ ಜ್ವರ ಎಂದು ಕರೆಯಲಾಗುತ್ತದೆ. ಈ ವೈರಸ್ ಹೆಚ್ಚಿನ ಮರಣ ಪ್ರಮಾಣದೊಂದಿಗೆ ತೀವ್ರವಾದ ಜ್ವರವನ್ನು ಉಂಟುಮಾಡಬಲ್ಲದ್ದಾಗಿದೆ. ಆದರೆ, ಮನುಷ್ಯರಲ್ಲಿ ಈ ರೋಗದ ಹರಡುವಿಕೆ ಬಹಳ ಅಪರೂಪ. ಇಲ್ಲಿಯವರೆಗೆ, ಈ ವೈರಸ್ ಮಾನವರಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಹರಡಿದ ಬಗ್ಗೆ ವರದಿಯಾಗಿಲ್ಲ. ಆದರೂ ಈ ಬಗ್ಗೆ ನಿರ್ಲಕ್ಷ್ಯ ತೋರುವಂತಿಲ್ಲ.
ಹಕ್ಕಿ ಜ್ವರ ವಿಶಿಷ್ಟವಾಗಿ ವಲಸೆ ಹಕ್ಕಿಗಳ ಮೇಲೆ ಪರಿಣಾಮ ಬೀರುತ್ತದೆ. ಆದರೆ ಪ್ರಸ್ತುತ ಬೇಸಿಗೆಯಲ್ಲಿ ಹಕ್ಕಿಗಳ ವಲಸೆ ಸಾಮಾನ್ಯವಾಗಿ ಕಡಿಮೆ ಇರುತ್ತದೆ. ವೈರಸ್ ಸೋಂಕಿತ ಕೋಳಿಗಳಿಂದ ಇತರ ಪಕ್ಷಿಗಳಿಗೆ ಮತ್ತು ಮನುಷ್ಯರಿಗೆ, ವಿಶೇಷವಾಗಿ ಕೋಳಿ ಸಾಕಣೆ ಕೇಂದ್ರಗಳು ಮತ್ತು ಮಾಂಸ ಸಂಸ್ಕರಣಾ ಘಟಕಗಳಲ್ಲಿ ಕೆಲಸ ಮಾಡುವವರಿಗೆ ಹರಡಬಹುದು. ಆದಾಗ್ಯೂ, ಇದು ವ್ಯಕ್ತಿಯಿಂದ ವ್ಯಕ್ತಿಗೆ ಹರಡುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.
- DAKSHINA KANNADA7 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
- DAKSHINA KANNADA7 days ago
ಕೊರಗಜ್ಜನ ಫೋಟೋವನ್ನು ಮನೆಯಲ್ಲಿ ಇಟ್ಟು ಆರಾಧಿಸಬಹುದಾ?
- FILM3 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- LATEST NEWS6 days ago
ಆಲದ ಮರದ ಪೊಟರೆಯಲ್ಲಿ ಪತ್ತೆಯಾಯ್ತು 64 ಲಕ್ಷ ರೂ.!