Connect with us

LATEST NEWS

ಟ್ವಿಟ್ಟರ್‌ ಎಂಡಿ ಗೆ ಬಂಧನದಿಂದ ಮುಕ್ತಿನೀಡಿದ ಕರ್ನಾಟಕ ಹೈಕೋರ್ಟ್‌

Published

on

ಬೆಂಗಳೂರು: ಗಾಜಿಯಾಬಾದ್ ಹಲ್ಲೆ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು ಸಮನ್ಸ್ ಜಾರಿ ಮಾಡಿರುವ ಟ್ವಿಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್​ ವಿಚಾರಣೆಗೆ ಅಂಗೀಕರಿಸಿದೆ.

ವಿಚಾರಣೆಯನ್ನು ಮಂಗಳವಾರಕ್ಕೆ (ಜೂನ್ 29) ಮುಂದೂಡಿರುವ ನ್ಯಾಯಾಲಯ, ವರ್ಚುವಲ್ ವಿಚಾರಣೆ ಮಾಡಬಹುದು ಎಂದು ಸೂಚಿಸಿದೆ. ಉತ್ತರ ಪ್ರದೇಶ ಪೊಲೀಸರಿಂದ ಬಂಧನ ಭೀತಿ ಎದುರಿಸುತ್ತಿದ್ದ ಮನೀಶ್ ಅವರಿಗೆ ಇದರಿಂದ ತಾತ್ಕಾಲಿಕವಾಗಿ ನೆಮ್ಮದಿ ಸಿಕ್ಕಂತೆ ಆಗಿದೆ.

ವಿಚಾರಣೆ ಮುಗಿಯುವವರೆಗೆ ಮನೀಶ್ ಮಹೇಶ್ವರಿ ಅವರನ್ನು ಬಂಧಿಸುವಂತಿಲ್ಲ ಎಂದು ಹೇಳಿರುವ ನ್ಯಾಯಮೂರ್ತಿ ಜಿ.ನಾಗೇಂದ್ರ ಅವರ ಏಕಸದಸ್ಯ ನ್ಯಾಯಪೀಠ, ಪೊಲೀಸರು ವರ್ಚುವಲ್ ಮಾದರಿಯಲ್ಲಿ ವಿಚಾರಣೆ ನಡೆಸಬಹುದು. ತನಿಖೆಗೆ ನಾವು ತಡೆ ನೀಡುವುದಿಲ್ಲ ಎಂದು ತಿಳಿಸಿದೆ.

ಉತ್ತರ ಪ್ರದೇಶ ಪೊಲೀಸರು ಭಾರತೀಯ ಅಪರಾಧ ದಂಡ ಸಂಹಿತೆಯ (ಸಿಆರ್​ಪಿಸಿ) ಸೆಕ್ಷನ್ 41ಎ ಅಡಿಯಲ್ಲಿ ನೀಡಿರುವ ನೋಟಿಸ್​ ಅನ್ನು ಮನೀಶ್​ ಮಹೇಶ್ವರಿ ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ‘ಕೇವಲ ಎರಡು ದಿನಗಳ ಹಿಂದೆ ನಾನು ಸಾಕ್ಷಿಯಾಗಿದ್ದೆ. ಆದರೆ ಈಗ ನನ್ನನ್ನು ಆರೋಪಿ ಎಂದು ಪೊಲೀಸರು ಹೇಳುತ್ತಿದ್ದಾರೆ’ ಎಂದು ವಿವರಿಸಿದರು.

ಗಾಜಿಯಾಬಾದ್ ಪೊಲೀಸರು ಜೂನ್ 17ರಂದು ಕ್ರಿಮಿನಲ್ ಪ್ರೊಸೀಜರ್ ಕೋಡ್ ಅನ್ವಯ ನನ್ನನ್ನು ಸಾಕ್ಷಿ ಎಂದು ಉಲ್ಲೇಖಿಸಿ ನೊಟೀಸ್ ಕಳಿಸಿದ್ದರು. ಆದರೆ ಎರಡು ದಿನಗಳ ನಂತರ ಸಿಆರ್​ಪಿಸಿ ಸೆಕ್ಷನ್ 41ರ ಪ್ರಕಾರ ಮತ್ತೊಂದು ನೊಟೀಸ್ ಜಾರಿ ಮಾಡಿದರು. ಈ ಸೆಕ್ಷನ್ ಅನ್ವಯ ನೊಟೀಸ್ ಜಾರಿಯಾದರೆ ಸಮನ್ಸ್​ ಜಾರಿ ದಾಖಲೆಯಲ್ಲಿರುವ ಹೆಸರಿನವರನ್ನು ಬಂಧಿಸಲು ಅವಕಾಶ ಇರುತ್ತದೆ.

‘ನಾನು ಬೆಂಗಳೂರಿನಲ್ಲಿದ್ದೇನೆ. ಪೊಲೀಸರು ನನಗೆ ಇಮೇಲ್ ಮೂಲಕ ನೊಟೀಸ್ ಕಳಿಸಿದ್ದಾರೆ. ನಾನು ಈಗ ಗಾಜಿಯಾಬಾದ್​ಗೆ ಬರುವ ಸ್ಥಿತಿಯಲ್ಲಿಲ್ಲ, ಆನ್​ಲೈನ್ ವಿಚಾರಣೆ ಎದುರಿಸಲು ಸಿದ್ಧ ಎಂದು ಪ್ರತಿಕ್ರಿಯಿಸಿದ್ದೇನೆ. ಆದರೆ ಅವರು ನಾನು ಅವರೆದುರು ಹಾಜರಾಗಲೇ ಬೇಕು ಎನ್ನುತ್ತಿದ್ದಾರೆ’ ಎಂದು ಅವರು ವಿವರಿಸಿದರು. ಗಾಜಿಯಾಬಾದ್ ಪೊಲೀಸರು ಸಮನ್ಸ್ ಜಾರಿ ಮಾಡಿದ ನಂತರ ಜೂನ್ 23ರಂದು ಕರ್ನಾಟಕ ಹೈಕೋರ್ಟ್​ನಲ್ಲಿ ಈ ಸಂಬಂಧ ಅರ್ಜಿ ದಾಖಲಾಗಿತ್ತು.

LATEST NEWS

ಈಜಲು ಹೋದ ಅಣ್ಣ ನೀರು*ಪಾಲು.! ತಂಗಿಯ ವೀಡಿಯೋದಲ್ಲಿ ಸೆರೆಯಾಯ್ತು ಅಣ್ಣನ ಸಾ*ವಿನ ಕೊನೆ ಕ್ಷಣ..!

Published

on

ಕೋಲಾರ: ಕೃಷಿ ಹೊಂಡದಲ್ಲಿ ಈಜುತ್ತಿರುವುದನ್ನು ತಂಗಿ ವೀಡಿಯೋ ಮಾಡುತ್ತಿದ್ದಾಗಲೇ ಸಹೋದರ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆಯೊಂದು ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ನಾಗವಾಳ ಗ್ರಾಮದಲ್ಲಿಈ ಘಟನೆ ನಡೆದಿದೆ.

swim death

ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?

ಮೈಸೂರಿನ ರಾಘವೇಂದ್ರ ನಗರ ನಿವಾಸಿ ಗೌತಮ್(26 ವ) ಮೃತ ದುರ್ದೈವಿ. ಗೌತಮ್ ತನ್ನ ತಂದೆಯ ಊರು ವೇಮಗಲ್ ಸಮೀಪದ ನಾಗಾವಾಳಕ್ಕೆ ಬಂದಿದ್ದರು. ಈ ವೇಳೆ ಕುಟುಂಬ ಸದಸ್ಯರು ಹಾಗೂ ತಂಗಿಯ ಜೊತೆ ಕೃಷಿ ಹೊಂಡದ ಬಳಿ ಹೋಗಿದ್ದಾರೆ.  ಅಲ್ಲಿ ತಂಗಿಯ ಬಳಿ ವೀಡಿಯೋ ಮಾಡಲು ಮೊಬೈಲ್ ಕೊಟ್ಟು ಹೊಂಡಕ್ಕೆ ಈಜಲು ಧುಮುಕಿದ್ದಾರೆ. ಸರಿಯಾಗಿ ಈಜಲು ಗೊತ್ತಿರದ ಗೌತಮ್ ನೀರಿಗೆ ಧುಮುಕಿದ್ದು, ಇತ್ತ ತಂಗಿ ಈಚೆ ಬಾ ಎಂದು ಕೂಗುವುದು ವೀಡಿಯೋದಲ್ಲಿ ರೆಕಾರ್ಡ್‌ ಆಗಿದೆ. ನೋಡು ನೋಡುತ್ತಿದ್ದಂತೆ ಗೌತಮ್ ನೀರಲ್ಲಿ ಮುಳುಗಿ ಉಸಿರು ಚೆಲ್ಲಿದ್ದಾರೆ. ಇನ್ನು ಈ ವೀಡಿಯೋದಲ್ಲಿ ಗೌತಮ್ ನೀರಿನಲ್ಲಿ ಮುಳುಗುವ ದೃಶ್ಯ ಸೆರಯಾಗಿದೆ. ಈ ಕುರಿತಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Continue Reading

FILM

ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ‘ಗಬ್ಬರ್ ಸಿಂಗ್’ ತುಳು ಚಲನಚಿತ್ರ ಬಿಡುಗಡೆ

Published

on

ಉಡುಪಿ : ಬಹು ನಿರೀಕ್ಷಿತ ತುಳು ಚಿತ್ರ “ಗಬ್ಬರ್ ಸಿಂಗ್” ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ಬಿಡುಗಡೆ ಸಮಾರಂಭವೂ ನಡೆಯಿತು.

ತೊಟ್ಟಂ ಚರ್ಚ್ ನ ಧರ್ಮಗುರು ಫಾದರ್ ಡೆನಿಸ್ ಡೆಸಾ, ಶಂಕರಪುರದ ಸಾಯಿ ಈಶ್ವರ ಗುರೂಜಿ, ಮಿಯಾರ್ ಮಸೀದಿಯ ಮೌಲ್ವಿ  ಅಬುಲ್ ಹಸನ್, ರಾಜಕೀಯ ಮುಖಂಡರಾದ ಗೀತಾಂಜಲಿ ಸುವರ್ಣ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ, ಸರಳಾ ಕಾಂಚನ್, ಶಿಲ್ಪಾ ಭಟ್, ಉಡುಪಿ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕೃಷ್ಣಮೂರ್ತಿ ಆಚಾರ್ಯ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಚಿತ್ರದ ಕಲಾವಿದರಾದ ವೀಣಾ ಎಸ್ ಶೆಟ್ಟಿ, ಸಂದೀಪ್ ಭಕ್ತ, ಆದ್ಯ, ಚಂದ್ರಹಾಸ್ ಕಪ್ಪೆಟ್ಟು, ಕಿಶೂ ಎಂಟರ್‌ಪ್ರೈಸಸ್ ವ್ಯವಸ್ಥಾಪಕ ನಿರ್ದೇಶಕರಾದ ಕಿಶೋರ್ ಗೊನ್ಸಾಲ್ವಿಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದರು.

ಇದನ್ನೂ ಓದಿ : ಕೋಸ್ಟಲ್ ವುಡ್ ಅಂಗಳದಲ್ಲಿ ‘ಗಬ್ಬರ್ ಸಿಂಗ್’ ಹವಾ ಶುರು

‘ಗಬ್ಬರ್ ಸಿಂಗ್’ ಚಿತ್ರವು ಕೌಟುಂಬಿಕ ಅಂಶಗಳನ್ನು ಒಳಗೊಂಡಿರುವ ಆಕ್ಷನ್ ಥ್ರಿಲ್ಲರ್ ಆಗಿದೆ. ಕಥೆ ಮತ್ತು ಚಿತ್ರಕಥೆಯನ್ನು ಸತೀಶ್ ಪೂಜಾರಿ ಬಾರ್ಕೂರು ರಚಿಸಿದ್ದು, ಪ್ರದೀಪ್ ನಿರ್ದೇಶನವಿದೆ. ತುಳು ಚಿತ್ರರಂಗದ ಹೆಸರಾಂತ ನಟರುಗಳು ಈ ಚಿತ್ರದಲ್ಲಿ ಪಾತ್ರವಾಗಿದ್ದಾರೆ.

Continue Reading

LATEST NEWS

ಆಭರಣ ಮಳಿಗೆಯಲ್ಲಿ ಎಸಿ ಸ್ಫೋಟ; ಮೂವರಿಗೆ ಗಂ*ಭೀರ ಗಾಯ

Published

on

ಬಳ್ಳಾರಿ :ಎಸಿ ಸ್ಫೋ*ಟಗೊಂಡ ಪರಿಣಾಮ ಮೂವರು ಗಂ*ಭೀರವಾಗಿ ಗಾ*ಯಗೊಂಡಿರುವ ಘಟನೆ ಬಳ್ಳಾರಿಯ ಕಲ್ಯಾಣ್ ಜ್ಯುವೆಲರ್ಸ್‍ನಲ್ಲಿ ನಡೆದಿದೆ. ಗಾಯಾಳುಗಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಬಳ್ಳಾರಿ ಬೆಂಗಳೂರು ರಸ್ತೆಯಲ್ಲಿರುವ ಮಳಿಗೆಯಲ್ಲಿ ಈ ಅವಘ*ಡ ಸಂಭವಿಸಿದೆ. ಏಕಾಏಕಿ ಎಸಿ ಬ್ಲಾ*ಸ್ಟ್ ಆದ ಪರಿಣಾಮ ಮಳಿಗೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ.

ಇದನ್ನೂ ಓದಿ : ಏನಾಶ್ಚರ್ಯ! ರೋಬೋಟ್ ಜೊತೆ ಮದುವೆಯಾಗುತ್ತಿದ್ದಾನೆ ಈ ಯುವಕ!

ಸ್ಫೋ*ಟದ ತೀವ್ರತೆಗೆ ಕಿಟಕಿ ಗಾಜುಗಳು ಒಡೆದು ಹೋಗಿವೆ. ಘಟನೆಯಿಂದಾಗಿ ಮಳಿಗೆಯಲ್ಲಿ ದಟ್ಟ ಹೊಗೆ ಆವರಿಸಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದ ಸ್ಫೋ*ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

Continue Reading

LATEST NEWS

Trending