Connect with us

BANTWAL

ಧಾರ್ಮಿಕ, ಸಾಮಾಜಿಕ ಧುರೀಣ ಕೊಡುಗೈದಾನಿ ಕೆ.ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ನಿಧನ..!

Published

on

ಮಂಗಳೂರು : ಧಾರ್ಮಿಕ, ಸಾಮಾಜಿಕ ಧುರೀಣ, ಕೊಡುಗೈ ದಾನಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಂಟ್ವಾಳ ತಾಲೂಕಿನ ಕೆ.ಸೇಸಪ್ಪ ಕೋಟ್ಯಾನ್ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಹುಬ್ಬಳ್ಳಿಯಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ ವೇಳೆ ಇವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅಲ್ಲಿಯೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಗುರುವಾರ ಅವರು ಚಿಕಿತ್ಸೆ ಗೆ ಸ್ಪಂದಿಸಿದೆ ಸಂಜೆ ವೇಳೆ ಮೃತಪಟ್ಟಿದ್ದಾರೆ.

ಬಂಟ್ವಾಳದಲ್ಲಿ ಯಶಸ್ವಿ ಉದ್ಯಮಿ ಎಂಬ ಹೆಗ್ಗಳಿಕೆ ಗೆ ಪಾತ್ರವಾಗಿದ್ದ ಇವರು ಶುಭ ಬೀಡಿ, ಶುಭ ಟ್ರಾವೆಲ್ಸ್ , ಶುಭಲಕ್ಮೀ ಮದುವೆ ಹಾಲ್, ಸಹಿತ ಅನೇಕ ಉದ್ಯಮ ನಡೆಸುತ್ತಿದ್ದು, ಅನೇಕ ಕುಟುಂಬಗಳಿಗೆ ಉದ್ಯೋಗ ನೀಡಿದ ಅನ್ನದಾತರಾಗಿದ್ದರು.

ಇವರ ಮದುವೆಯಾಗಿ ಐವತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇತ್ತೀಚಿಗೆ ಮನೆಯಲ್ಲಿ ಶುಭಯಾನ ಎಂಬ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಿದ್ದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಯನ್ನು ಈ ಬಾರಿ ಪಡೆದಿದ್ದರು.ಇವರು ಧಾರ್ಮಿಕ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಅನನ್ಯ ವಾಗಿದ್ದು, ಅನೇಕ ದೈವ ದೇವಸ್ಥಾನ ಗಳು ಜೀರ್ಣೋದ್ಧಾರ ಇವರ ಮೂಲಕ ನಡೆದಿವೆ.

ಬಂಟ್ವಾಳ ‌ಪೋಲೀಸ್ ಲೈನ್ ನ ದೇವಸ್ಥಾನದ ಅಧ್ಯಕ್ಷ ರಾಗಿದ್ದ ಇವರು ಕಳೆದ 25 ವರ್ಷಗಳಿಂದ ಬಂಟ್ವಾಳ ಬಿಲ್ಲವ ಸಂಘದ ಯಶಸ್ವಿ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದರು.

ಭುವನೇಶ್ ಪಚ್ಚಿನಡ್ಕ , ಪತ್ನಿ ಹಾಗೂ ನಾಲ್ಕು ಹೆಣ್ಣು ಮಕ್ಕಳನ್ನು ಹಾಗೂ ಅಪಾರ ಬಂಧು ಬಳಗ ವನ್ನು ಅಗಲಿದ್ದಾರೆ.

ಮೃತದೇಹವನ್ನು ಇಂದು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮೃತರ ಸ್ವಗೃಹ ಪಚ್ಚಿನಡ್ಕದ ಶುಭ ನಿಲಯದಲ್ಲಿ ಇಡಲಾಗುತ್ತಿದ್ದು, ಮಧ್ಯಾಹ್ನ 12.30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ.

BANTWAL

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

Published

on

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2017 ರಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಾಲಮ ಹೆಹರು ತಾಲೂಕಿನ ಚಿನ್ನಪಳ್ಳಿ ಪೆದ್ದ ಗ್ರಾಮದ ನಿವಾಸಿ ಬಿ. ಮೌಲಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಿ. ಮೌಲಾ ಉಳ್ಳಾಲ ತಾಲೂಕಿನ ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ಇದ್ದಾನೆ ಎಂಬುದಾಗಿ ಲಭಿಸಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿ ಆತನನ್ನು ಬಂಧಿಸಿದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿ, ನ್ಯಾಯಾಲಯವು ಆರೋಪಿಗೆ ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ ಸ್ಟೆಬಲ್‌ ಗಣೇಶ್ ಪ್ರಸಾದ್ ಮತ್ತು ಕಾನ್‌ ಸ್ಟೆಬಲ್‌ ವಿಜಯ ಕುಮಾರ ಅವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

 

Continue Reading

BANTWAL

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಬಾಲವಿಕಾಸದ ವಿದ್ಯಾರ್ಥಿನಿಗೆ ಪ್ರಶಸ್ತಿ

Published

on

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪೆರಾಜೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಮಂಗಳೂರಿನ ರಾಮಕೃಷ್ಣ ಹೈ ಸ್ಕೂಲ್ ಬಂಟ್ಸ್ ಹಾಸ್ಟೆಲ್  ಇದರ ಜಂಟಿ ಆಶ್ರಯದಲ್ಲಿ ಡಿ.1ರಂದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ನಡೆದಿತ್ತು.


ಈ ಪ್ರತಿಭಾ ಕಾರಂಜಿಯಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ದೇವಿಕಾ ಕೆ ಭಾಗವಹಿಸಿ ಪ್ರೌಢ ಶಾಲಾ ವಿಭಾಗದ ಕನ್ನಡ ಕವನ ವಾಚನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಇವರನ್ನು ಶಾಲಾ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Continue Reading

BANTWAL

Bnatwala: ಡಿ.3ರಂದು ಅಕ್ಷಯ ಪಾತ್ರ ಪ್ರತಿಷ್ಠಾನದ ಕೇಂದ್ರೀಕೃತ ಅಡುಗೆ ಮನೆ ಉದ್ಘಾಟನೆ

Published

on

ಬಂಟ್ವಾಳ: ಅಕ್ಷಯ ಪಾತ್ರ ಫೌಂಡೇಶನ್ ಇದರ ಅಡುಗೆ ಮನೆಯ ಉದ್ಘಾಟನಾ ಸಮಾರಂಭವು ಡಿ. 3 ರಂದು ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ಸಮೀಪ ನಡೆಯಲಿದೆ.

ಅಕ್ಷಯ ಫೌಂಡೇಶನ್ ಮಕ್ಕಳ ಹಸಿವನ್ನು ಹೋಗಲಾಡಿಸುವ ತನ್ನ ಅಚಲವಾದ ಕಾರ್ಯಕ್ಕೆ ಹೆಸರುವಾಸಿಯಾಗಿದ್ದು, ಮಂಗಳೂರಿನಲ್ಲಿ ತನ್ನ ಕೇಂದ್ರೀಕೃತ ಅಡುಗೆ ಮನೆಯ ಉದ್ಘಾಟನೆಯೊಂದಿಗೆ ಮಹತ್ವದ ಮೈಲಿಗಲ್ಲು ತಲುಪಿದೆ. ದಾನಿಗಳಾದ ಜಿಟಿ ಫೌಂಡೇಶನ್ ಮತ್ತು ದಿಯಾ ಸಿಸ್ಟಮ್ಸ್ (ಮಂಗಳೂರು) ಪ್ರೈ.ಲಿ. ಲಿಮಿಟೆಡ್‌ನ ವಿಜಯ್ ಮತ್ತು ಶಾಮ ಕೇಡಿಯಾ, ದಿವಂಗತ  ಡಾ. ವಿ ರವಿಚಂದ್ರನ್ ಅವರ ನಿರಂತರ ಬೆಂಬಲ ಮತ್ತು ದೂರದೃಷ್ಟಿ ಕೊಡುಗೆಯೇ ಈ ಅಡುಗೆ ಮನೆಯಾಗಿದೆ. ಈ ಸಮಾರಂಭವು ಉಡುಪಿಯ ಪುತ್ತಿಗೆ ಮಠದ ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಲಿದೆ.

ಈ ಉದ್ಘಾಟನಾ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್,  ಬೆಂಗಳೂರಿನ ಸೆಂಚುರಿ ರಿಯಲ್ ಎಸ್ಟೇಟ್ ಗ್ರೂಪ್‌ನ ಅಧ್ಯಕ್ಷ ಡಾ. ಪಿ ದಯಾನಂದ ಪೈ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ ಕೆ, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಕ್ಷಯ ಪಾತ್ರ ಪ್ರತಿಷ್ಠಾನದ ಅಧ್ಯಕ್ಷ ಮಧು ಪಂಡಿತ್ ದಾಸ ಮತ್ತು ಅಕ್ಷಯ ಪಾತ್ರ ಫೌಂಡೇಶನ್‌ನ ಉಪಾಧ್ಯಕ್ಷ ಚಂಚಲಪತಿ ದಾಸ ಅವರು ಉಪಸ್ಥಿತರಿರುವರು.

124 ಸರ್ಕಾರಿ ಮತ್ತು 41 ಸರ್ಕಾರಿ ಅನುದಾನಿತ ಸಂಸ್ಥೆಗಳು ಸೇರಿದಂತೆ 165 ಕ್ಕೂ ಹೆಚ್ಚು ಶಾಲೆಗಗಳಿಗೆ ಅಗತ್ಯ ಪೌಷ್ಟಿಕಯುತವಾದ 25,000 ಊಟವನ್ನು ಉತ್ಪಾದಿಸುವ ಸಾಮರ್ಥ್ಯದೊಂದಿಗೆ ಈ ಅಡುಗೆಕೋಣೆ ರೂಪುಗೊಂಡಿದೆ. ಅಡುಗೆಮನೆಯ ವೈವಿಧ್ಯಮಯ ಮೆನುವು ಸಮತೋಲಿತ ಪೋಷಣೆಯನ್ನು ಖಾತ್ರಿಗೊಳಿಸುತ್ತದೆ. ಸೌರಶಕ್ತಿ ಮತ್ತು ಸ್ವಚ್ಛ ಎಲ್ಪಿಜಿ ಯೊಂದಿಗೆ ಪರಿಸರಸ್ನೇಹಿ ಅಡುಗೆಮನೆ ಇದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

LATEST NEWS

Trending