Connect with us

LATEST NEWS

ಜ್ವರಕ್ಕೆ ಮಾತ್ರ ಅಲ್ಲ ಬಟ್ಟೆಯ ಕಲೆಯನ್ನು ತೆಗೆಯುತ್ತದೆ ಡೋಲೋ 650 ಮಾತ್ರೆ..!

Published

on

ಮಂಗಳೂರು: ಮನೆಯಲ್ಲಿನ ಮಹಿಳೆಯರಿಗೆ ಒಂದೇ ಒಂದು ಟೆನ್ಶನ್ ಅಂದರೆ ಬಟ್ಟೆ ಒಗೆಯುವಾಗ ಕಲೆ ಹೋಗದೇ ಇರುವುದು. ಏನೇ ಹಾಕಿದರೂ ಕೆಲವೊಂದು ಕಲೆಗಳು ಹಾಗೇ ಉಳಿದು ಬಿಡುತ್ತವೆ. ಡಿಟರ್ಜೆಂಟ್ ಪೌಡರ್ ಅಥವಾ ಡಿಟರ್ಜೆಂಟ್ ಲಿಕ್ವಿಡ್ ಹಾಕಿದರೂ ಬಟ್ಟೆಯ ಕಲೆ ಮಾತ್ರ ಹೋಗುವುದಿಲ್ಲ.

ಕೆಲವೊಂದು ವೈರಲ್ ವಿಡಿಯೋಗಳನ್ನು ನೀವು ನೋಡಿರಬಹುದು. ಪೇಸ್ಟ್ ಹಾಕಿ ಉಜ್ಜಿದ್ರೆ  ಕಲೆ ಹೋಗುತ್ತೆ. ಇಲ್ಲ ಅಡುಗೆ ಸೋಡ ಹಾಕಿ ಉಜ್ಜಿದ್ರೆ ಕಲೆ ಹೋಗುತ್ತದೆ ಇಂತಹ ಅದೆಷ್ಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಹಾರಿದಾಡುತ್ತಿರುತ್ತವೆ. ಈ ಬಟ್ಟೆಯ ಕಲೆ ಹೋಗುವಷ್ಟರಲ್ಲಿ ಮನೆಯ ಮಹಿಳೆಯರಿಗೆ ಸಾಕಾಗಿರುತ್ತದೆ. ಆದರೆ ಇನ್ನು ಮುಂದೆ ಈ ಟೆನ್ಶನ್ ಬೇಡ. ಮನೆಯಲ್ಲಿ ಡೋಲೋ 650 ಮಾತ್ರ ಇದ್ರೆ ಸಾಕು. ಕ್ಷಣ ಮಾತ್ರದಲ್ಲಿ ಎಂತಹ ಕಲೆ ಕೂಡಾ ಮಾಯವಾಗುತ್ತದೆ.

ಡೋಲೋ 650 ಮಾತ್ರೆ

ಜ್ವರ, ತಲೆನೋವು, ಮೈ ಕೈ ನೋವಿಗೆ ಬಳಸುವ ಈ ಡೋಲೋ 650 ಮಾತ್ರೆಯನ್ನು ಸುಲಭವಾಗಿ ಬಳಸಿಕೊಂಡು ಬಟ್ಟೆಯಲ್ಲಿನ ಕಲೆಯನ್ನು ಮಾಯ ಮಾಡಬಹುದು. ಇಂತಹ ವಿಡಿಯೋ ಒಂದು ಈಗ ಸೋಷಿಯಲ್ ಮಿಡೀಯಾದಲ್ಲಿ ಹರಿದಾಡುತ್ತಿದೆ. ನಂದು ನಾಯರ್ ಅವರು ಈ ವಿಡಿಯೋವನ್ನು ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಡೋಲೋ 650 ಮಾತ್ರೆಯನ್ನು ಬಳಸಿಕೊಂಡು ಬಿಳಿ ಬಟ್ಟೆಯಲ್ಲಿದ್ದ ಕಲೆಯನ್ನು ತೆಗೆದುಹಾಕಿದ್ದಾರೆ.

ಇವರು ಒಂದು ಕಪ್‌ ಬಿಸಿ ನೀರಿಗೆ ಎರಡು ಡೋಲೋ 650 ಮಾತ್ರೆಗಳನ್ನು ಪುಡಿ ಮಾಡಿ ಹಾಕಿದ್ದಾರೆ. ಅದೇ ನೀರಿಗೆ ಒಂದು ಸ್ಪೂನ್‌ ಅಡುಗೆ ಸೋಡಾ, ಜೊತೆಗೆ ಡಿಟರ್ಜೆಂಟ್ ಪೌಡರ್ ಹಾಕಿ ಮಿಕ್ಸ್ ಮಾಡಿದ್ದಾರೆ . ಇದಾದ ಬಳಿಕ ಈ ನೀರಿಗೆ ಕಲೆಯಾಗಿರೋ ಬಟ್ಟೆಯನ್ನು ಹಾಕಿದ್ದಾರೆ.

3 ನಿಮಿಷಗಳ ಬಳಿಕ ಆ ಬಟ್ಟೆಯನ್ನು ಹೊರ ತೆಗೆದರೆ ಆ ಬಟ್ಟೆಯಲ್ಲಿ ಯಾವುದೇ ಕಲೆಗಳು ಇಲ್ಲದಿರುವುದನ್ನು ಈ ವೈರಲ್ ವಿಡಿಯೋದಲ್ಲಿ ನೋಡಬಹುದು.

Click to comment

Leave a Reply

Your email address will not be published. Required fields are marked *

LATEST NEWS

ಐದು ಮಕ್ಕಳಿದ್ದಾರೆಂದು ಚಿಂತೆಗೊಳಗಾದ ತಂದೆ..! ಅಕ್ಕನಿಂದಲೇ ಇಬ್ಬರು ಸಹೋದರಿಯರ ಕೊ*ಲೆ..!

Published

on

ಉತ್ತರ ಪ್ರದೇಶ:  ಐದು ಮಕ್ಕಳು ಇರುವುದರಿಂದ ತಂದೆ ಚಿಂತೆಗೊಳಗಾಗಿದ್ದಾರೆ ಎಂದು ಸ್ವತಃ ಅಕ್ಕನೇ ಇಬ್ಬರು ಸಹೋದರಿಯರನ್ನು ಕೊಂ*ದ ಹೇಯ ಕೃತ್ಯ ಉತ್ತರಪ್ರದೇಶದಲ್ಲಿ ನಡೆದಿದೆ.  ಮೇ.16ರಂದು ತಡರಾತ್ರಿ 12.30ರ ಸುಮಾರಿಗೆ ನೂರ್‌ಪುರ್ ಪೊಲೀಸ್ ಠಾಣೆಗೆ ಗೌಹಾವರ್ ಜೈತ್ ಗ್ರಾಮದ ಮನೆಯೊಂದರಲ್ಲಿ ಇಬ್ಬರು ಬಾಲಕಿಯರ ಶ*ವ ಪತ್ತೆಯಾಗಿರುವುದರ ಬಗ್ಗೆ ಪೊಲೀಸರು ತಿಳಿಸಿದ್ದಾರೆ.

murder

ರಿತು(7 ವ), ಪವಿತ್ರ(5 ವ) ಮೃತಪಟ್ಟ ಬಾಲಕಿಯರು. ಪೊಲೀಸರು ಘಟನೆ ಬಗ್ಗೆ ತಿಳಿದ ಕೂಡಲೇ ಮನೆಗೆ ಧಾವಿಸಿದ್ದಾರೆ. ಈ ವೇಳೆ ಇಬ್ಬರು ಬಾಲಕಿಯರ ಮೃತದೇಹ ಮನೆಯ ನೆಲದ ಮೇಲೆ ಬಿದ್ದಿತ್ತು. ಸಹದೇವ್ ಹಾಗೂ ಸವಿತಾ ತಮ್ಮ ಐದು ಮಂದಿ ಮಕ್ಕಳ ಜೊತೆ ವಾಸ ಮಾಡ್ತಾಇದ್ದರು. ಸವಿತಾ ಅವರ 13 ವರ್ಷ ಮತ್ತು 9 ವರ್ಷದ ಇಬ್ಬರು ಹಿರಿಯ ಹೆಣ್ಣು ಮಕ್ಕಳು ಮೊದಲ ಪತಿಯ ಮಕ್ಕಳಾಗಿದ್ದಾರೆ. ಇನ್ನು ಮೃತ ಪಟ್ಟ ಬಾಲಕಿಯರು ಸೇರಿದಂತೆ 1.5 ವರ್ಷದ ಮಗು ಎರಡನೇ ಪತಿ ಸಹದೇವ್‌ರವರ ಮಕ್ಕಳು.

ನಟಿ ಪವಿತ್ರಾ ಜಯರಾಂ ಸಾ*ವಿನ ಬೆನ್ನಲ್ಲೇ ಆತ್ಮಹ*ತ್ಯೆಗೆ ಶರಣಾದ ಸಹನಟ ಚಂದು!

ಪೊಲೀಸರ ಪ್ರಾಥಮಿಕ ವಿಚಾರಣೆಯಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಮನೆಗೆ ನುಗ್ಗಿ ಸಹೋದರಿಯರನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಬಾಲಕಿ ಹೇಳಿದ್ದಾಳೆ. ಬಳಿಕ ತಾನೇ ಈ ಕೃ*ತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಆಕೆಯ ತಂದೆ ಮನೆಯಲ್ಲಿ ಹೆಚ್ಚು ಸದಸ್ಯರು ಇರುವುದರಿಂದ ಚಿಂತೆಗೆ ಒಳಗಾಗಿದ್ದರು. ಹೀಗಾಗಿ ನಾನು ಇಬ್ಬರು ಸಹೋದರಿಯರನ್ನು ಸ್ಕಾರ್ಫ್‌ನಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದೇನೆ ಎಂದು ಹೇಳಿದ್ದಾಳೆ. ಮೃತರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬಾಲಕಿಯಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಎಸ್‌ಪಿ ಜದೌನ್ ತಿಳಿಸಿದ್ದಾರೆ.

 

Continue Reading

LATEST NEWS

ಕೊನೆಗೂ ಮೌನ ಮುರಿದ ಎಚ್‌ಡಿ ದೇವೇಗೌಡ..! ಪ್ರಜ್ವಲ್ ಬಗ್ಗೆ ಹೇಳಿದ್ದೇನು?

Published

on

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನ ಮಂತ್ರಿ ದೇವೇಗೌಡರವರು ಮೌನ ಮುರಿದಿದ್ದಾರೆ. ಇದೇ ಮೊದಲ ಬಾರಿಗೆ ಪ್ರಜ್ವಲ್ ಪೆಂಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದಾರೆ.  ಬೆಂಗಳೂರಿನಲ್ಲಿ ಮಾತನಾಡಿದ ದೇವೇಗೌಡರು, ಪ್ರಜ್ವಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ. ನಮ್ಮದೇನು ತಕರಾರಿಲ್ಲ. ಆದರೆ ರೇವಣ್ಣ ವಿಚಾರದಲ್ಲಿ ಜನರಿಗೆ ಸತ್ಯ ಗೊತ್ತಿದೆ.  ರೇವಣ್ಣ ಪ್ರಕರಣ ಕೋರ್ಟ್‌ನಲ್ಲಿ ನಡೆಯುತ್ತಿದೆ. ಈ ಪ್ರಕರಣದಲ್ಲಿ ರೇವಣ್ಣರನ್ನು ಯಾವ ರೀತಿ ಸಿಲುಕಿಸಿದ್ದಾರೆ. ಕೇಸ್ ಹೇಗೆ ದಾಖಲು ಮಾಡಿದ್ದಾರೆ ಎಂದು ನಮಗೆ ತಿಳಿದಿದೆ. ಕೋರ್ಟ್‌ನಲ್ಲಿ ಜಡ್ಜ್‌ಮೆಂಟ್ ನಡೀತಿದೆ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

devegowda

ಇದನ್ನೂ ಓದಿ..; ಪ್ರಜ್ವಲ್ ರೇವಣ್ಣ ಪ್ರಕರಣ; ವೀಡಿಯೋ, ಫೋಟೋ ಅಪ್ಲೋಡ್ ಮಾಡಿದ್ದಾತ ಅರೆಸ್ಟ್

ಇಂದು 92ನೇ ಹುಟ್ಟು ಹಬ್ಬ ಹಿನ್ನೆಲೆ ಜೆಪಿ ನಗರದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.  ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ದೇವೇಗೌಡರು ಈಗಾಗಲೇ ಈ ಘಟನೆ ಬಗ್ಗೆ ಕುಮಾರಾಸ್ವಾಮಿ ಅವರು ನಮ್ಮ ಕುಟುಂಬದ ಪರವಾಗಿ ಮಾತನಾಡಿದ್ದಾರೆ.  ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವುದು ಸರ್ಕಾರದ ಜವಾಬ್ದಾರಿ. ಇದರಲ್ಲಿ ಅನೇಕರ ಹೆಸರು ಇದೆ, ಆದರೆ ನಾನು ಅವರ ಹೆಸರನ್ನು ಹೇಳಲು ಬಯಸುವುದಿಲ್ಲ. ಇನ್ನು ಸಂತ್ರಸ್ಥ ಮಹಿಳೆಯರಿಗೆ ಪರಿಹಾರ ನೀಡಬೇಕು. ಈ ಪ್ರಕರಣದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಅವರೆಲ್ಲರಿಗೂ ಶಿಕ್ಷೆ ಆಗಬೇಕು. ಈ ಕುರಿತಾಗಿ ಕುಮಾರಸ್ವಾಮಿಯವರು ಬಿಡಿ ಬಿಡಿಯಾಗಿ ತಿಳಿಸಿದ್ದಾರೆಎಂದು ಹೇಳಿದರು. .

Continue Reading

FILM

ನಟಿ ಪವಿತ್ರಾ ಜಯರಾಂ ಸಾ*ವಿನ ಬೆನ್ನಲ್ಲೇ ಆತ್ಮಹ*ತ್ಯೆಗೆ ಶರಣಾದ ಸಹನಟ ಚಂದು!

Published

on

ಕಿರುತೆರೆಯ ಖ್ಯಾತ ನಟಿ ಪವಿತ್ರಾ ಜಯರಾಮ್ ಇತ್ತೀಚೆಗೆ ಹೈದರಾಬಾದ್ ಸಮೀಪ ಕಾರು ಅಪಘಾತದಲ್ಲಿ ಇಹಲೋಕ ತ್ಯಜಿಸಿದ್ದರು. ಈ ವೇಳೆ ಅವರ ಗೆಳೆಯ ಹಾಗೂ ತೆಲುಗು ನಟ ಚಂದು ಅವರಿಗೂ ಪೆಟ್ಟಾಗಿದೆ. ಗೆಳತಿಯನ್ನು ಕಳೆದುಕೊಂಡ ನೋವಿನಲ್ಲಿದ್ದ ಚಂದು ಆತ್ಮಹ*ತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಚಂದು ಹಾಗೂ ಪವಿತ್ರಾ ಜಯರಾಂ ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು.

ಪವಿತ್ರಾ ಹಾಗೂ ಚಂದು ಇಬ್ಬರೂ ಸೋಶಿಯಲ್ ಮೀಡಿಯಾಗಳಲ್ಲಿ ಆ್ಯಕ್ಟಿವ್ ಆಗಿದ್ದರು. ಇಬ್ಬರು ಜೊತೆಯಾಗಿ ಹಾಡುಗಳಿಗೆ ಹೆಜ್ಜೆ ಹಾಕುತ್ತಿದ್ದರು. ಯಾವಾಗಲೂ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದರು. ದರ್ಶನ್ ಸಿನಿಮಾಗೆ ಪವಿತ್ರಾ ಅವರಿಗೆ ಆಫರ್ ಬಂದಿತ್ತು. ಹೀಗಾಗಿ ಇವರಿಬ್ಬರು ಜೊತೆಯಾಗಿ ಬೆಂಗಳೂರಿಗೆ ಬಂದಿದ್ದರು. ಹಿಂತಿರುಗುವಾಗ ಪ್ರಯಾಣಿಸುತ್ತಿರುವ ಕಾರು ಅಪಘಾತವಾಗಿತ್ತು. ಈ ವೇಳೆ ನಟಿ ಪವಿತ್ರಾ ಜಯರಾಂ ಸಾ*ವನ್ನಪ್ಪಿದ್ದರು. ಚಂದು ಗಾಯಗೊಂಡಿದ್ದರು.

ಇದನ್ನೂ ಓದಿ : ಬ್ಯಾಂಡೇಜ್ ಸುತ್ತಿಕೊಂಡೇ ಕೇನ್ಸ್ ರೆಡ್ ಕಾರ್ಪೆಟ್ ಮೇಲೆ ಕಾಣಿಸಿಕೊಂಡ ಐಶ್ವರ್ಯ ರೈ

ಪವಿತ್ರಾ ಸಾವಿಗೆ ತೀವ್ರ ನೊಂದಿದ್ದ ಚಂದು ಸೋಶಿಯಲ್ ಮೀಡಿಯಾದಲ್ಲಿ ಮಿಸ್ ಯೂ ಎಂದು ಪವಿತ್ರಾ ಜೊತೆಗಿನ ವೀಡಿಯೋ, ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಇದೀಗ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ವರದಿಯಾಗಿದೆ.

 

Continue Reading

LATEST NEWS

Trending