LATEST NEWS
ರೇಣುಕಾಸ್ವಾಮಿ ಕೊಲೆ ಪ್ರಕರಣ ; ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಪತ್ನಿ ಮೊದಲ ಪೋಸ್ಟ್; ಏನಂದ್ರು ವಿಜಯಲಕ್ಷ್ಮಿ?
ಬೆಂಗಳೂರು : ರೇಣುಕಾಸ್ವಾಮಿ ಕೊ*ಲೆ ಪ್ರಕರಣ ಇಡೀ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ಸಂಬಂಧ ನಟ ದರ್ಶನ್ ಬಂಧಿತರಾಗಿದ್ದಾರೆ. ಪತಿ ಬಂಧನದ ಬೆನ್ನಲ್ಲೇ ತಮ್ಮ ಸೋಶಿಯಲ್ ಮೀಡಿಯಾ ಖಾತೆ ನಿಷ್ಕ್ರಿಯಗೊಳಿಸಿದ್ದ ವಿಜಯಲಕ್ಷ್ಮಿ ದರ್ಶನ್ ಮತ್ತೆ ಖಾತೆ ತೆರೆದಿದ್ದಾರೆ. ಇದೀಗ ಪೋಸ್ಟ್ ಒಂದನ್ನು ಹಾಕಿದ್ದಾರೆ.
ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ.
ಪೋಸ್ಟ್ ನಲ್ಲಿ ಏನಿದೆ?
ಮೊದಲಿಗೆ, ಶ್ರೀ ರೇಣುಕಾ ಸ್ವಾಮಿ ಅವರ ಕುಟುಂಬಸ್ಥರಿಗೆ ನಾನು ಹೃದಯಪೂರ್ವಕ ಸಾಂತ್ವನವನ್ನು ತಿಳಿಸಲು ಬಯಸುತ್ತೇನೆ. ಅವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಮನೆಯವರಿಗೆ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ನ್ಯಾಯಾಲಯದಿಂದ ತಡೆಯಾಜ್ಞೆಯೊಂದನ್ನು ತಂದಿರುವ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಪೋಲಕಲ್ಪಿತ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿರುವ ಪ್ರತಿಯನ್ನು ಹಂಚಿಕೊಂಡಿದ್ದಾರೆ.
ಕಳೆದ ಕೆಲವು ದಿನಗಳಲ್ಲಿ, ದರ್ಶನ್ ಅವರು, ನಾನು, ನಮ್ಮ ಮಗ, ದರ್ಶನರ ಸೆಲೆಬ್ರಿಟೀಸ್ ಮತ್ತು ಕುಟುಂಬದವರು ಪದಗಳಲ್ಲಿ ವಿವರಿಸಲಾಗದ ನೋವನ್ನು ಅನುಭವಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ : ಕಳ್ಳಭಟ್ಟಿ ಸೇವಿಸಿ 25 ಮಂದಿ ಸಾ*ವು, 60 ಜನರು ಅಸ್ವ*ಸ್ಥ; ಜಿಲ್ಲಾಧಿಕಾರಿ ಸೇರಿ 10 ಮಂದಿ ಅಮಾನತು
ಗೌರವಾನ್ವಿತ ನ್ಯಾಯಾಲಯದ ಮೇಲ್ಕಂಡ ಆದೇಶದಂತೆ, ಇನ್ನು ಮುಂದಾದರೂ ಅಸತ್ಯಗಳು ಹಾಗೂ ಅನಧಿಕೃತ ಮಾಹಿತಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗದಿರಲಿ ಎಂದು ಕೇಳಿಕೊಳ್ಳುತ್ತೇನೆ. ತಾಯಿ ಚಾಮುಂಡೇಶ್ವರಿ ಮತ್ತು ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ಸತ್ಯಮೇವ ಜಯತೆ ಎಂದು ವಿಜಯಲಕ್ಷ್ಮೀ ಹೇಳಿದ್ದಾರೆ.
DAKSHINA KANNADA
ಮೈಸೂರು ದಸರಾದಲ್ಲಿ ತುತ್ತೂರಿ ಬ್ಯಾನ್
ಮಂಗಳೂರು/ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದೆ. ಜಂಬೂ ಸವಾರಿ ನೋಡಲು ಜನರು ಕಾಯುತ್ತಿದ್ದಾರೆ. ಈ ಹಿಂದೆ ದಸರಾ ಆನೆಗಳೊಂದಿಗೆ ಫೋಟೋ, ರೀಲ್ಸ್ ಗೆ ಸರ್ಕಾರ ಬ್ರೇಕ್ ಹಾಕಿತ್ತು. ಈಗ ತತ್ತೂರಿ ಬ್ಯಾನ್ ಮಾಡಲಾಗಿದೆ.
ತುತ್ತೂರಿ ಬ್ಯಾನ್ ಮಾಡುವಂತೆ ಸೂಚಿಸಿ ಮೈಸೂರು ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ತುತ್ತೂರಿ ಕಿರಿಕಿರಿ ಉಂಟುಮಾಡುವ ಹಿನ್ನೆಲೆ ಈ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಪೊಲೀಸ್ ಕಾಯ್ದೆ 1963, ಕಲಂ 35, 36 ಮತ್ತು 92 (Q) ಅಡಿ ವುವುಜೆಲಾ (ತುತ್ತೂರಿ) ಮಾರಾಟ ಮಾಡುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆ 1963 ಸೆಕ್ಷನ್ 92 (Q) ಪ್ರಕಾರ ಹಾಗೂ ಭಾರತೀಯ ನ್ಯಾಯ ಸಂಹಿತೆ-2023 ಸೆಕ್ಷನ್ 270ರಲ್ಲಿ ಸಾರ್ವಜನಿಕ ಉಪದ್ರವವನ್ನು ಅಪರಾಧವೆಂದು ಪರಿಗಣಿಸಿದ್ದು, ಸಾರ್ವಜನಿಕ ಆರೋಗ್ಯ, ಸುರಕ್ಷತೆ, ನೈತಿಕತೆಗೆ ಕಿರಿಕಿರಿ ಉಂಟುಮಾಡುತ್ತದೆ ಎಂದು ಪರಿಗಣಿಸಲಾಗಿದೆ.
ಇದನ್ನೂ ಓದಿ : ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂ*ಬ್ ಬೆದರಿಕೆ ಇ-ಮೇಲ್
ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನಿನನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈ ಘಟಕದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
LATEST NEWS
ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 3 ಮೃ*ತ್ಯು, 7 ಗಾ*ಯ
ಮಂಗಳೂರು/ಹರಿಯಾಣ: ಹರಿಯಾಣದ ಸೋನಿಪತ್ನಲ್ಲಿ ಇಂದು (ಸೆ.28) ಬೆಳಿಗ್ಗೆ ಅಕ್ರಮವಾಗಿ ನಡೆಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋ*ಟವು ಸಂಭವಿಸಿದ್ದು, 3 ಜನರ ಮೃ*ತ್ಯು ಹಾಗೂ 7 ಮಂದಿಗೆ ಗಂ*ಭೀರ ಗಾಯವಾಗಿದೆ.
ವೇದ್ ಎಂಬುವವರ ಮನೆಯಲ್ಲಿ ಪಟಾಕಿಗಳನ್ನು ತಯಾರಿಸುತ್ತಿದ್ದು, ಮನೆಯಲ್ಲಿ ಸಂಗ್ರಹಿಸಿದ ರಾಸಾಯನಿಕಗಳಿಂದ ಬೆಂ*ಕಿ ಅವ*ಘಡ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೂವರ ದೇಹವು ಛಿಧ್ರ*ವಾಗಿದ್ದು, ಗಾ*ಯಾಳುಗಳನ್ನು ಆಸ್ಪತ್ರೆಗೆ ಚಿಕಿ*ತ್ಸೆಗಾಗಿ ಕಳುಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದು, ಪಟಾಕಿ ಕಾರ್ಖಾನೆ ನಡೆಸುತ್ತಿದ್ದ ವೇದ್ ಪರಾರಿಯಾಗಿದ್ದಾನೆ. ಈ ಕುರಿತು ಸೋನಿಪತ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
DAKSHINA KANNADA
ಮಂಗಳೂರು : ಅರ್ಚನಾ ಕಾಮತ್ ತ್ಯಾಗ ಸಂಸ್ಮರಣಾ ರಕ್ತದಾನ ಶಿಬಿರ
ಮಂಗಳೂರು : ಬದುಕಿರುವಾಗಲೇ ದೇಹದ ಅಂಗವೊಂದನ್ನು ಆಪ್ತ ಸಂಬಂಧಿಗೆ ದಾನ ಮಾಡಿ ವಿಧಿಲೀಲೆಗೆ ಬಲಿಯಾದ ಉಪನ್ಯಾಸಕಿ ಅರ್ಚನಾ ಕಾಮತ್ ಅವರ ದಿವ್ಯಾತ್ಮಕ್ಕೆ ನುಡಿ ನಮನ ಕಾರ್ಯಕ್ರಮ ಮತ್ತು ರಕ್ತದಾ ನ ಶಿಬಿರ ಮಂಗಳೂರಿನ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ನಡೆಯಿತು.
ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಆಯೋಜಿಸಿದ ಈ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಶಾಸಕ ಕಾಮತ್ ಬಾಲ್ಯದಿಂದಲೇ ಪರಿಚಯರಾಗಿದ್ದ ಅರ್ಚನಾ ಕಾಮತ್ ಅವರು ಶಿಕ್ಷಕಿಯಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನವರಾಗಿದ್ದರು. ಅವರ ಬದುಕು ನಮಗೆ ಆದರ್ಶವಾಗಿದೆ. ಅವರ ಇಡೀ ಕುಟುಂಬ ನಮಗೆ ಆತ್ಮೀಯವಾಗಿದೆ. ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ರಕ್ತದಾನ ಶಿಬಿರ ಆಯೋಜಿಸಿ ಅರ್ಚನಾ ಅವರ ಆತ್ಮೀಯರನ್ನು ಒಂದುಗೂಡಿಸಿ ಮಾದರಿ ಕಾರ್ಯ ಮಾಡಿದೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ನಮ್ಮನ್ನು ಅಗಲಿದ ಅರ್ಚನಾ ಕಾಮತ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರ ಬಗ್ಗೆ ಮಾತನಾಡುವುದು ತುಂಬಾ ನೋವಿನ ಸಂಗತಿ ಎಂದು ಭಾವುಕರಾದರು.
ಈ ಸಂದರ್ಭ ರಥಬೀದಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಸಿಎ ಜಗನ್ನಾಥ್ ಕಾಮತ್, ಬೆಸೆಂಟ್ ಶಿಕ್ಷಣ ಸಂಸ್ಥೆಯ ಪ್ರಮುಖರಾದ ಮಣೇಲ್ ಅಣ್ಣಪ್ಪ ನಾಯಕ್ ಮೊದಲಾದವರು ಉಪಸ್ಥಿತರಿದ್ದರು. ಬಿಎನ್ ಐ, ಸಹ್ಯಾದ್ರಿ ಶಿಕ್ಷಣ ಸಂಸ್ಥೆ, ಕೆನರಾ ಹೈಸ್ಕೂಲ್ ಅಸೋಸಿಯೇಷನ್, ಕೆಎಂಸಿ ಆಸ್ಪತ್ರೆ, ಬೆಸೆಂಟ್ ಶಿಕ್ಷಣ ಸಂಸ್ಥೆ, ಯೂತ್ ಆಫ್ ಜಿಎಸ್ ಬಿ, ಸಿಎ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ರಕ್ತದಾನ ಶಿಬಿರದಲ್ಲಿ 98ಕ್ಕೂ ಅಧಿಕ ನಾಗರಿಕರು ರಕ್ತದಾನ ಮಾಡಿದರು.
ಇದನ್ನೂ ಓದಿ : ಮುದ್ದಾದ ಮಗಳ ಮುಖ ರಿವೀಲ್ ಮಾಡಿದ ಮಿಲನಾ ದಂಪತಿ
ಅರ್ಚನಾ ಕಾಮತ್ ಅವರ ಪತಿ, ಸಹೋದರಿ ಹಾಗೂ ಸಂಬಂಧಿಕರು ರಕ್ತದಾನ ಮಾಡಿ ನೋವಿನಲ್ಲಿಯೂ ಹೃದಯ ವೈಶಾಲ್ಯತೆ ಮೆರೆದು ಮಾದರಿಯಾದರು.
- LATEST NEWS6 days ago
ವೃಶ್ಚಿಕದಲ್ಲಿ ಬುಧ-ಶುಕ್ರ ಯುತಿ; ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ
- LATEST NEWS4 days ago
ಸೆಪ್ಟಂಬರ್ 29 ರಿಂದ ಆಕಾಶದಲ್ಲಿ ಎರಡು ಚಂದ್ರ ಗೋಚರ..! ಏನಿದು ವಿಸ್ಮಯ..?
- LATEST NEWS4 days ago
ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃ*ತ್ಯು
- LATEST NEWS3 days ago
ಲಕ್ಷ್ಮೀ ಹೆಬ್ಬಾಳ್ಕರ್ಗೆ 1 ಕೆಜಿ ಬಂಗಾರದ ಆಫರ್ ನೀಡಿದ ಮಾಜಿ ಸಚಿವ