Thursday, March 23, 2023

ತಣ್ಣೀರುಬಾವಿ ಬೀಚ್‌ನಲ್ಲಿ ಸಮುದ್ರ ಪಾಲಾಗುತ್ತಿದ್ದ ಐವರು ವಿದ್ಯಾರ್ಥಿಗಳ ರಕ್ಷಣೆ

ಮಂಗಳೂರು: ಐವರು ವಿದ್ಯಾರ್ಥಿಗಳು ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದು, ಸರ್ಫಿಂಗ್‌ ತರಬೇತಿ ನೀಡುತ್ತಿದ್ದವರು ಅವರನ್ನು ರಕ್ಷಿಸಿ ಸುರಕ್ಷಿತವಾಗಿ ದಡಕ್ಕೆ ಕರೆ ತಂದ ಘಟನೆ ನಗರದ ತಣ್ಣೀರುಬಾವಿ ಬೀಚ್‌ನಲ್ಲಿ ನಿನ್ನೆ ನಡೆದಿದೆ.


ವಿದ್ಯಾರ್ಥಿಗಳು ಫಾತಿಮಾ ಚರ್ಚ್‌ ಸಮೀಪ ಕಡಲಲ್ಲಿ ಈಜುತ್ತಿದ್ದರು. ಅಲೆಗಳ ಅಬ್ಬರ ಜೋರಾಗಿದ್ದ ಕಾರಣ ದಡದತ್ತ ಈಜಲು ಸಾಧ್ಯವಾಗದೇ ಅಸಹಾಯಕ ಸ್ಥಿತಿಗೆ ತಲುಪಿದ್ದರು.

ಆಗ ಸ್ಥಳದಲ್ಲಿದ್ದ ರಾಷ್ಟ್ರೀಯ ಈಜುಪಟುಗಳಾದ ಸಂಕೇತ್‌ ಬೆಂಗ್ರೆ, ಶಿಲ್ಪಾ ಬೆಂಗ್ರೆ ಧಾವಿಸಿ ಬಂದು ಇಬ್ಬರನ್ನು ರಕ್ಷಿಸಿದ್ದಾರೆ. ಇದರಿಂದ ಭಾರೀ ಅಪಾಯವೊಂದು ತಪ್ಪಿ ಹೋಗಿದೆ.

ಉಳಿದ ಮೂವರೂ ಕೂಡ ಅಪಾಯದಲ್ಲಿದ್ದು, ರಕ್ಷಣೆಗೆ ಕೂಗಿಕೊಂಡದ್ದನ್ನು ಗಮನಿಸಿದ ತೇಜಸ್‌ ಮತ್ತು ಇತರ ಸರ್ಫ್‌ ತರಬೇತುದಾರರು ಸ್ಥಳಕ್ಕೆ ಧಾವಿಸಿ ಅವರನ್ನು ಸರ್ಫ್‌ ಬೋರ್ಡ್‌ ಮೂಲಕ ದಡಕ್ಕೆ ಕರೆತಂದರು. ಹಾಗೂ ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿ ಕಳುಹಿಸಿಕೊಟ್ಟಿದ್ದಾರೆ.

ತೇಜಸ್ ಜೀವರಕ್ಷಣೆಯ ತರಬೇತಿ ಪಡೆದವರಾಗಿದ್ದಾರೆ. ಐವರ ಜೀವ ಉಳಿಸಿದ ಈಜುಪಟುಗಳ ಕಾರ್ಯ ಭಾರೀ ಶ್ಲಾಘನೆಗೆ ಪಾತ್ರವಾಗಿದೆ. ವಿದ್ಯಾರ್ಥಿಗಳನ್ನು ಮೂಡುಬಿದಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...

ಉಡುಪಿ : ಕಳವಾದ 74 ಲಕ್ಷ ರೂಪಾಯಿ ಸೊತ್ತುಗಳು ಮರಳಿ ಮಾಲಕರಿಗೆ ಹಸ್ತಾಂತರಿಸಿದ ಪೊಲೀಸರು.!

ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ,ದರೋಡೆ ಮತ್ತಿತರ ಕಾರಣಗಳಿಂದ ಸುತ್ತುಗಳನ್ನು ಕಳೆದುಕೊಂಡವರಿಗೆ ಅವರ ಚಿನ್ನಾಭರಣ ಸೊತ್ತು ಮತ್ತು ನಗದನ್ನು ಹಸ್ತಾಂತರಿಸಲಾಯಿತು.ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್...

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...