Connect with us

    DAKSHINA KANNADA

    ಕದ್ರಿ ನಿವಾಸಿಗಳೇ ಎಚ್ಚರ…ನಗರದಲ್ಲಿ ಕಾಡುಕೋಣ ಪ್ರತ್ಯಕ್ಷ.!

    Published

    on

    ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ರಾತ್ರೋ ರಾತ್ರಿ ಕಾಡು ಕೋಣವೊಂದು ಪ್ರತ್ಯಕ್ಷವಾಗಿ ಜನರ ಆತಂಕಕ್ಕೆ ಕಾರಣವಾಗಿದೆ. ನಗರದ ಜನವಸತಿ ಪ್ರದೇಶಗಳಲ್ಲೇ ಈ ಕಾಡು ಕೋಣದ ಓಡಾಟದ ಗುರುತು ಲಭಿಸಿದೆ. ಈ ಬೆನ್ನಲ್ಲೇ ಕೋಣವನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯ ಅಧಿಕಾರಿಗಳು ತೀವ್ರ ಕಾರ್ಯಾಚರಣೆಗೆ ಮುಂದಾಗಿದ್ದರೂ ಕೋಣ ಪತ್ತೆಯಾಗದೆ ಜನರು ಆತಂಕಗೀಡಾಗಿದ್ದಾರೆ.

    ಮಂಗಳೂರು ನಗರದಲ್ಲಿ ರಾತ್ರೋ ರಾತ್ರಿ ಕಾಡು ಕೋಣವೊಂದು ಪ್ರತ್ಯಕ್ಷವಾಗಿ ಜನರ ನಿದ್ದೆಗೆಡಿಸಿದೆ. ರಸ್ತೆ ಮಧ್ಯದಲ್ಲಿ ಕಾಡು ಕೋಣದ ಓಡಾಟ ಕಂಡು ಜನರು ದಂಗಾಗಿದ್ದಾರೆ. ನಾಯಿಗಳು ಈ ಕಾಡುಕೋಣವನ್ನು ಕಂಡು ಓಡಿಸುವ ಪ್ರಯತ್ನ ಮಾಡಿದೆ. ನಗರದ ಜನವಸತಿ ಪ್ರದೇಶದಲ್ಲೇ ಕಾಡು ಕೋಣವು ಕಾಣ ಸಿಕ್ಕಿದ್ದು ಜನರ ಆತಂಕಕ್ಕೆ ಕಾರಣವಾಗಿದೆ. ಸೋಮವಾರದ ತಡರಾತ್ರಿ ಮಂಗಳೂರಿನ ಕದ್ರಿ ಕೈ ಬಟ್ಟಲು ಪ್ರದೇಶದಲ್ಲಿ ಈ ಕೋಣವು ಸಾರ್ವಜನಿಕರಿಗೆ ಕಂಡು ಬಂದಿದೆ. ಜನರು ಎದುರಾಗಿದ್ದನ್ನು ಕಂಡ ಕೋಣವು ಸ್ಥಳದಿಂದ ಓಡಿ ಹೋಗಿದ್ದು, ಬಳಿಕ ಕದ್ರಿ ಸುತ್ತಮುತ್ತಲಿನ ಗುಡ್ಡದ ಕಾಡು ಪ್ರದೇಶದ ಒಳಗೆ ಅವಿತಿರ ಬಹುದು ಎಂದು ಶಂಕಿಸಲಾಗಿದೆ. ರಸ್ತೆಯಲ್ಲಿ ಈ ಕಾಡು ಕೋಣದ ಓಡಾಟದ ದೃಶ್ಯವನ್ನು ಹಲವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದ್ದಾರೆ. ಇದೇ ವೇಳೆ ನಗರದ ಕದ್ರಿ ಪ್ರದೇಶದ ಹಲವೆಡೆ ಸಿಸಿ ಕ್ಯಾಮೆರಾಗಳಲ್ಲೂ ಈ ದೈತ್ಯಾಕಾರದ ಕಾಡು ಕೋಣದ ಓಡಾಟವು ಸೆರೆಯಾಗಿದೆ. ಇದರ ಬೆನ್ನಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿದ್ದು, ಸೋಮವಾರ ರಾತ್ರಿಯಿಂದಲೇ ಕಾಡು ಕೋಣವನ್ನು ಸೆರೆ ಹಿಡಿಯಲು ಕಾರ್ಯಚರಣೆಯನ್ನು ಆರಂಭಿಸಿದ್ದಾರೆ.

    ಸೋಮವಾರ ರಾತ್ರಿಯಿಂದಲೇ ಕೋಣದ ಪತ್ತೆಗಾಗಿ ಕಾರ್ಯಚರಣೆ ಆರಂಭವಾಗಿದ್ದು, ಕೋಣ ಓಡಾಟ ನಡೆಸಿದ ಬಗೆಗೆ ಹಲವು ಪ್ರದೇಶಗಳಲ್ಲಿ ಸುಳಿವು ದೊರೆತಿದೆ. ಕೆಲವೊಂದು ಮನೆಗಳ ಕಬ್ಬಿಣದ ಬೇಲಿ ದಾಟಿ, ಕಬ್ಬಿಣದ ಸರಳಿನ ಬೇಲಿ ಹಾರಿ ಬೇಲಿ ಬೆಂಡಾಗಿ ಮುರಿದ ಪರಿಸ್ಥಿತಿಯಲ್ಲಿದೆ. ಇದಲ್ಲದೆ ರಕ್ಷಣಾ ತಂಡದವರಿಗೆ ಕಾಡು ಕೋಣದ ಹೆಜ್ಜೆ ಗುರುತು ಹಾಗೂ ಸೆಗಣಿ ಲಭಿಸಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಎರಡು ಕಾಡು ಕೋಣಗಳಿರುವ ಬಗ್ಗೆ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.  ಬೆಳಗ್ಗಿನಿಂದ ಸಂಜೆಯವರೆಗೂ ಅಧಿಕಾರಿಗಳು ಕೋಣಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಈವರೆಗೆ ಕೋಣ ಪತ್ತೆಯಾಗಿಲ್ಲ. ಡ್ರೋನ್ ಕ್ಯಾಮೆರದ ಮೂಲಕವು ಕೋಣದ ಪತ್ತೆಗಾಗಿ ಹುಡುಕಾಟ ನಡೆದಿದ್ದು, ಯಾವುದೇ ಸುಳಿವು ಸಿಕ್ಕಿಲ್ಲ. ಈ ಕಾಡು ಕೋಣಗಳು ಹಗಲಿಗಿಂತ ರಾತ್ರಿ ಹೊತ್ತಿನಲ್ಲೇ ಹೆಚ್ಚು ಓಡಾಟ ನಡೆಸುವ ಕಾರಣದಿಂದಾಗಿ, ಇಂದು ರಾತ್ರಿ ನಗರದ ಗುಡ್ಡ ಗಾಡು ಪ್ರದೇಶದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಚರಣೆಯನ್ನ ಮುಂದುವರಿಸಲಿದ್ದಾರೆ.

    ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಮಂಗಳೂರು ನಗರ ಪ್ರದೇಶದಲ್ಲಿ ಕಾಡು ಕೋಣವೊಂದು ಜನರ ನಿದ್ದೆ ಗೆಡಿಸಿತ್ತು, ಆದರೆ ಅರವಳಿಕೆ ನೀಡಿದ ಕಾರಣ ಆ ಕೋಣವು ಮೃತ ಪಟ್ಟಿತ್ತು. ಹಾಗಾಗಿ ಈ ಬಾರಿ ಕೋಣದ ರಕ್ಷಣೆ ಸಂದರ್ಭ ಅರಿವಳಿಕೆಯನ್ನು ನೀಡದೆ ನಗರ ಪ್ರದೇಶದಿಂದ ಕೋಣಕ್ಕೆ ಸೇಫ್ ಎಕ್ಸಿಟ್ ನೀಡಲಾಗುವುದು ಎಂದು ರಕ್ಷಣಾ ತಂಡದ ಭುವನ್ ತಿಳಿಸಿದ್ದಾರೆ. ಒಟ್ಟಿನಲ್ಲಿ ನಗರ ಪ್ರದೇಶಕ್ಕೆ ನುಗ್ಗಿದ್ದ ಕೋಣವನ್ನು ರಕ್ಷಿಸುವ ಕಾರ್ಯಚರಣೆ ಭರದಿಂದ ನಡೆಯುತ್ತಿದೆ. ಯಾವುದೇ ಅಪಾಯ ಸಂಭವಿಸಿದ ಹಾಗೆ ಕೋಣವನ್ನು ಸೆರೆ ಹಿಡಿಯಲೇ ಬೇಕೆಂದು ಅರಣ್ಯ ಇಲಾಖೆ ಪಣ ತೊಟ್ಟಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವ ಅವಶ್ಯಕತೆಯಿದೆ. ಅರಣ್ಯ ಇಲಾಖೆಯ ಇಂದಿನ ರಾತ್ರಿಯ ಕಾರ್ಯಚರಣೆ ಫಲ ಕೊಡುತ್ತಾ ಎಂದು ಕಾದು ನೋಡಬೇಕಿದೆ.

     

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending