Connect with us

    chikkamagaluru

    ಚಿಕ್ಕಮಗಳೂರು: ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ..! ಜಿಲ್ಲಾಧಿಕಾರಿ ಆದೇಶ

    Published

    on

    ಚಿಕ್ಕಮಗಳೂರು: ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಉಡುಪಿ, ಕೊಡಗು ಜಿಲ್ಲೆ ಸೇರಿದಂತೆ ಹಲವು ಕಡೆಯ ಜನರು ತತ್ತರಿಸಿ ಹೋಗಿದ್ದಾರೆ. ಇನ್ನು ಸಮುದ್ರದ ತೀರದ ಜನರಿಗೆ ಜಿಲ್ಲಾಡಳಿತ ಕಟ್ಟೆಚ್ಚರ ನೀಡಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ್ದು, ಬೀಚ್‌ನತ್ತ ಬರುವ ಪ್ರವಾಸಿಗರಿಗೂ ನಿರ್ಬಂಧ ಹೇರಲಾಗಿದೆ.

    ಮಲೆನಾಡು ಪ್ರದೇಶಗಳಲ್ಲಿ ಮಳೆ ಮುಂದುವರಿಯುತ್ತಿದೆ. ಈ ಪ್ರದೇಶಗಳಲ್ಲಿ ಗುಡ್ಡ, ಬೆಟ್ಟಗಳು ಹೆಚ್ಚಿರುವುದರಿಂದ ಆತಂಕ ಹೆಚ್ಚಾಗಿದೆ. ಗಾಳಿ ಮಳೆಗೆ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಶೃಂಗೇರಿ, ಕಳಸ, ನರಸಿಂಹರಾಜಪುರ, ಮೂಡಿಗೆರೆ, ಕುದುರೆಮುಖ ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿದ್ದು ಗುಡ್ಡೆ, ಬೆಟ್ಟಗಳಲ್ಲಿ ನಿರ್ಮಾಣವಾಗಿರುವ ಸಣ್ಣ ಜಲಪಾತಗಳು ತುಂಬಿ ಹರಿಯುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಹಲವು ಪ್ರವಾಸಿತಾಣಗಳಿಗೆ ಬರುವ ಪ್ರವಾಸಿಗರು ತಮ್ಮ ಪ್ರವಾಸವನ್ನು ಮುಂದೂಡುವಂತೆ ಜಿಲ್ಲಾಡಳಿತ ಮನವಿ ಮಾಡಿಕೊಂಡಿದ್ದು, ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಗೆ ಜು.22 ರವರೆಗೆ ಪ್ರವಾಸ ನಿರ್ಬಂಧವನ್ನು ಹೇರಿದೆ.

    ನೆರೆಯಿಂದ ಜಲಾವೃತಗೊಂಡ ಮನೆ..! ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ಹೋಗಲಾಗದೆ ಪರದಾಟ..!

    ಮುಳ್ಳಯ್ಯನಗಿರಿ ಪ್ರದೇಶಕ್ಕೆ ಹೋಗುವ ದಾರಿ ಕಿರಿದಾಗಿದ್ದು ಬೆಟ್ಟ ಗುಡ್ಡಗಳ ನಡುವೆಯೇ ಹಾದು ಹೋಗಬೇಕಿದೆ. ಹಾಗಾಗಿ ಈ ಪ್ರದೇಶದಲ್ಲಿ ಅಪಾಯ ಸಂಭವಿಸುವ ಸಾದ್ಯತೆ ಹೆಚ್ಚಿದೆ. ಈ ಪ್ರದೇಶದಲ್ಲಿ ಈಗಾಗಲೇ ಸಣ್ಣ ಪ್ರಮಾಣದ ಗುಡ್ಡ ಕುಸಿತ ಗೊಂಡಿದ್ದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.  ಸ್ಥಳೀಯ ವಾಹನಗಳನ್ನು ಹೊರತುಪಡಿಸಿ ಹೊರಗಿನ ಯಾವುದೇ ವಾಹನಗಳಿಗೆ ಈ ಪ್ರದೇಶಗಳಲ್ಲಿ ಜು.22ವರೆಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    chikkamagaluru

    ಗನ್ ಒರೆಸುತ್ತಿದ್ದ ವೇಳೆ ಮಿಸ್‌ ಫಯರ್; ವ್ಯಕ್ತಿ ಸಾ*ವು

    Published

    on

    ಚಿಕಮಗಳೂರು: ಮನೆಯಲ್ಲಿದ್ದ ಗನ್ ಒರೆಸುತ್ತಿದ್ದ ವೇಳೆ ಮಿಸ್‌ ಫಯರ್‌ ಆಗಿ ವ್ಯಕ್ತಿಯೊಬ್ಬ ಸಾವನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಳವಾಸ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಕಳವಾಸೆ ಗ್ರಾಮದ ಅರುಣ್ (47 ವ) ಎಂದು ಹೇಳಲಾಗಿದೆ.

    ಅರುಣ್ ಎಂಬವರು ತನ್ನ ಮನೆಯ ಶೆಡ್‌ ನಲ್ಲಿದ್ದ ಗನ್‌ನನ್ನು ಶುಚಿಗೊಳಿಸುತ್ತಿದ್ದ ವೇಳೆ ಏಕಾಏಕಿ ಗುಂಡು ಹಾರಿ ಅರುಣ್‌ರವರ ಬಲಕಣ್ಣನ್ನು ಹೊಕ್ಕಿದೆ. ಘಟನೆಯಿಂದ ಗಂಭೀರ ಗಾಯಗೊಂಡ ಅರುಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಈ ಘಟನೆ ಸಂಭವಿಸಿದ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಇದು ಆತ್ಮಹತ್ಯೆಯೋ ಅಥವಾ ಮಿಸ್ ಫಯರ್‌ ಆಗಿ ಗುಂಡು ತಗುಳಿದೆಯೋ ಅನ್ನೋದು ತನಿಖೆ ವೇಳೆ ಬಯಲಿಗೆ ಬರಬೇಕಿದೆ.

    ನಟಿಗೆ ಲೈಂಗಿಕ ಕಿರುಕುಳ ಆರೋಪ; ಮಲಯಾಳಂ ನಿರ್ದೇಶಕ ರಂಜಿತ್‌ ವಿರುದ್ದ ಎಫ್‌ಐಆರ್..!

    ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    chikkamagaluru

    ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸ್ಥಳದಲ್ಲೇ ಸಾ*ವು

    Published

    on

    ಚಿಕ್ಕಮಗಳೂರು/ಪುತ್ತೂರು: ಆಹಾರ ಅರಸಿ ನಾಡಿಗೆ ಬಂದ ಗಜರಾಜ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಳಗಾಮೆಯ ಆಶ್ರಯ ಎಸ್ಟೇಟ್ ಬಳಿ ನಡೆದಿದೆ. ಇಲ್ಲಿನ ಭದ್ರ ಅಭಯಾರಣ್ಯದಿಂದ ಆಹಾರ ಅರಸಿ ಬಂದ ಕಾಡಾನೆ ಬೇಲಿ ದಾಟುವ ವೇಳೆ, ಅಲ್ಲಿನ ತೋಟಕ್ಕೆ ಅಳವಡಿಸಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಆನೆ ಸ್ಥಳದಲ್ಲೇ ಮೃತಪಟ್ಟಿದೆ.

    ಇನ್ನು ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು ತೋಟದ ಮಾಲೀಕನ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.

    Continue Reading

    chikkamagaluru

    ಆಸ್ತಿ ವಿಚಾರಕ್ಕಾಗಿ ತಮ್ಮನನ್ನೇ ಕೊಚ್ಚಿ ಕೊ*ಲೆಗೈದ ಅಕ್ಕಂದಿರು..!!

    Published

    on

    ಚಿಕ್ಕಮಗಳೂರು:  ಚಿಕ್ಕಮಗಳೂರು ತರೀಕೆರೆಯಲ್ಲಿ ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಮೂವರು ಸಹೋದರಿಯರೇ ಸೇರಿ ತಮ್ಮನನ್ನು ಕೊಚ್ಚಿ ಹ*ತ್ಯೆ ಮಾಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.

    ರಾಘವೇಂದ್ರ(43 ವ) ಕೊಲೇಗೀಡಾದವರು. ಮೂವರು ಅಕ್ಕಂದಿರು ಹಾಗೂ ತಮ್ಮನ ನಡುವೆ ಆಗಾಗ ಆಸ್ತಿ ವಿಚಾರಕ್ಕಾಗಿ ಜಗಳ ಉಂಟಾಗುತ್ತಿತ್ತು. ರಾಘವೇಂದ್ರ ಅವರು ಮನೆಯಲ್ಲಿದ್ದಾಗ ಮೂವರು ಅಕ್ಕಂದಿರು ಹಾಗೂ ಭಾವ ಸೇರಿಕೊಂಡು ಮೊದಲು ತಮ್ಮನ ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಬಳಿಕ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

    ಇದ್ದಕ್ಕಿದ್ದಂತೆಯೇ ಸ್ಫೋ*ಟಗೊಂಡ ಗ್ಯಾಸ್​ ಸಿಲಿಂಡರ್.. ಕೂಲಿ ಕಾರ್ಮಿಕ ಸಾ*ವು, ಮತ್ತೋರ್ವ ಗಂಭೀ*ರ

    ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ. ಮೃತ ರಾಘವೇಂದ್ರರವರ ಅಕ್ಕಂದಿರಾದ ಸುಮಾ, ಸುಧಾ, ರೇಣುಕಾ, ಭಾವ ಸಿದ್ದರಾಮಪ್ಪ ಅವರನ್ನು ತರಿಕೇರೆ ಪೊಲೀಸರು ಬಂಧಿಸಿದ್ದಾರೆ.

    Continue Reading

    LATEST NEWS

    Trending