Connect with us

    LATEST NEWS

    ಜೋತುಬಿದ್ದ ವಿದ್ಯುತ್ ತಂತಿ ತಗುಲಿ ಸವಾರರು ಮೃ*ತ್ಯು ..!

    Published

    on

    ಮಂಗಳೂರು/ಚಾಮರಾಜನಗರ: ಮಳೆಯಿಂದ ಜೋತು ಬಿದ್ದ ವಿದ್ಯುತ್ ತಂತಿ ಕರೆಂಟ್ ಹೊಡೆದು ಬೈಕ್ ಸವಾರರಿಬ್ಬರು ದಾ*ರಣ ಅಂ*ತ್ಯ ಕಂಡ ಘಟನೆ ಚಾಮರಾಜನಗರ ದಲ್ಲಿ ನಡೆದಿದೆ.

     

    ಚಾಮರಾಜನಗರದ ಅಯ್ಯನಪುರ ಗ್ರಾಮದ ನಿವಾಸಿಗಳಾದ ನಾಗೇಂದ್ರ (48) ಮತ್ತು ಮಲ್ಲೇಶ್ (40) ಮೃ*ತ ದು*ರ್ದೈವಿಗಳು.

    ಬುಧವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ಅಯ್ಯನಪುರ-ಹಿತ್ತಲಗುಡ್ಡೆ ರಸ್ತೆಯಲ್ಲಿ ತೆರಳುತ್ತಿದ್ದಾಗ, ಭಾರಿ ಮಳೆಯ ಕಾರಣ ವಿದ್ಯುತ್ ಕಂಬದ ಕೆಳಭಾಗದಲ್ಲಿ ಜೋತುಕೊಂಡಿದ್ದ ತಂತಿ ತಗುಲಿ ಇಬ್ಬರು ಸ್ಥಳದಲ್ಲೆ ಮೃ*ತಪಟ್ಟಿರುತ್ತಾರೆ.

    ಸ್ಥಳಕ್ಕೆ ಪೂರ್ವ ಪೊಲೀಸ್‌ ಠಾಣೆ ಪೊಲೀಸರು ಭೇಟಿ ನೀಡಿದ್ದು , ಪ್ರಕರಣ ದಾಖಲು ಮಾಡಿದ್ದಾರೆ. ಸೂಕ್ತ ಪರಿಹಾರ ನೀಡುವಂತೆ ಚೆಸ್ಕಾಂ ನ್ನು ಮೃ*ತರ ಸಂಬಂಧಿಕರು ಆಗ್ರಹಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಸುರತ್ಕಲ್ : ಸಮುದ್ರಪಾಲಾಗಿದ್ದ ಯುವಕನ ಶ*ವ ಪತ್ತೆ

    Published

    on

    ಸುರತ್ಕಲ್ : ಅಲೆಗಳ ಹೊಡೆತಕ್ಕೆ ಸಮುದ್ರಪಾಲಾಗಿದ್ದ ಯುವಕನ ಶವ ಸಸಿಹಿತ್ಲು ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ, 21 ವರ್ಷದ ಪ್ರಜ್ವಲ್ ಮೃ*ತ ಯುವಕ.

    ನಿನ್ನೆ ಸುರತ್ಕಲ್‌ ಸಮೀಪದ ಮುಕ್ಕ ರೆಡ್‌ ರಾಕ್‌ ಬಳಿಯ ಕಡಲ ಕಿನಾರೆಗೆ 8 ಜನ ಸ್ನೇಹಿತರು ವಿಹಾರಕ್ಕೆ ಬಂದಿದ್ದರು. ಸಮುದ್ರ ಕಿನಾರೆಯಲ್ಲಿ ಅಲೆಗಳ ಜೊತೆ ಆಟವಾಡುತ್ತಿದ್ದ ವೇಳೆ ಜೋರಾಗಿ ಅಪ್ಪಳಿಸಿದ ಅಲೆಯಲ್ಲಿ ಪ್ರಜ್ವಲ್ ಕೊಚ್ಚಿಕೊಂಡು ಹೋಗಿದ್ದ. ಅಲೆಗಳ ಹೊಡೆತದಿಂದ ತಪ್ಪಿಸಿಕೊಂಡ ಇತರ ಯುವಕರು ತಮ್ಮ ಜೀ*ವ ಉಳಿಸಿಕೊಂಡಿದ್ದರು.

    ಇದನ್ನೂ ಓದಿ : ಬಿಗ್ ಬಾಸ್ ಮನೆಯ ರಾಜಕೀಯ ವಿಚಾರಿಸಲು ನ್ಯೂಸ್ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

    ಈ ಬಗ್ಗೆ ಯುವಕನ ಸಂಬಂಧಿಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ನಾಪತ್ತೆಯಾದ ಯುವಕನಿಗಾಗಿ ಶೋಧಕಾರ್ಯ ನಡೆಸಲಾಗಿತ್ತು. ಇಂದು ಯುವಕನ ಶ*ವ ಪತ್ತೆಯಾಗಿದೆ.

    Continue Reading

    LATEST NEWS

    ಮತ್ತೆ 85 ವಿಮಾನಗಳಿಗೆ ಬಾಂಬ್ ಬೆದರಿಕೆ

    Published

    on

    ನವದೆಹಲಿ: ಕಳೆದ ಕೆಲ ದಿನಗಳಿಂದ ಹಲವು ವಿಮಾನಗಳಿಗೆ ಬಾಂಬ್ ಬೆದರಿಕೆಯನ್ನು ಇಮೇಲ್, ಎಕ್ಸ್ ಮೂಲಕ ಹಾಕಲಾಗಿತ್ತು. ಇಂದು ಮತ್ತೆ ಸರಣಿ ಮುಂದುವರೆದಿದ್ದು ಹೊಸದಾಗಿ 85 ವಿಮಾನಗಳಿಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ.

    ಇಂದು ಇಂಡಿಗೊ, ಏರ್ ಇಂಡಿಯಾ, ವಿಸ್ತಾರಾ ಮತ್ತು ಅಕಾಸಾ ಏರ್ ಸೇರಿದಂತೆ 85 ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಕೆಲ ವಿಮಾನಗಳ ಸಂಚಾರದಲ್ಲೂ ವ್ಯತ್ಯಯ ಉಂಟಾಗಿದೆ. ಬಾಂಬ್ ಬೆದರಿಕೆಯಿಂದಾಗಿ ವಿಮಾನಗಳನ್ನು ಬಾಂಬ್ ನಿಷ್ಕ್ರೀಯ ದಳದವರು ತಪಾಸಣೆಗೆ ಒಳಪಡಿಸುತ್ತಿದ್ದಾರೆ.

    Continue Reading

    LATEST NEWS

    ಹೆಣ್ಣು ಹೆತ್ತಿದಕ್ಕೆ ಅವಮಾನ; 3 ಹೆಣ್ಣು ಮಕ್ಕಳ ತ*ಬ್ಬಲಿಯಾಗಿಸಿ ಹೊರಟ ತಾಯಿ

    Published

    on

    ಮಂಗಳೂರು/ಕೊಪ್ಪಳ: ಮೂರು ಹೆಣ್ಣು ಹೆತ್ತಳು ಎನ್ನುವ ಕಾರಣಕ್ಕೆ ಪತಿ ಸೇರಿದಂತೆ ಪತಿಯ ಕುಟುಂಬಸ್ಥರು ನಿಂದಿಸಿದರು ಎನ್ನುವ ಕಾರಣಕ್ಕೆ ಮನನೊಂದು ಹನುಮವ್ವ ಆ*ತ್ಮಹತ್ಯೆ ಮಾಡಿಕೊಂಡು ಇ*ಹಲೋಕ ತ್ಯಜಿಸಿದ್ದಾರೆ.
    ತಾಯಿ ಎದೆಗವಚಿಕೊಂಡು ಹಾಲು ಉಣ್ಣಬೇಕಾದ ನಾಲ್ಕು ತಿಂಗಳು ಹೆಣ್ಣು ಕೂಸು ಈಗ ಅ*ನಾಥ. ಅಷ್ಟೇ ಅಲ್ಲ, ನಾಲ್ಕು, ಮೂರು ವರ್ಷದ ಇನ್ನೆರಡು ಹೆಣ್ಣು ಮಕ್ಕಳೂ ಸಹ ಅ*ನಾಥವಾಗಿವೆ.

    ಮುಖ್ಯ ಯುವತಿಯ ಪತಿ ಗಣೇಶ ಮಾಡಿದ ತಪ್ಪಿಗೆ ಜೈಲು ಸೇರಿದ್ದಾನೆ.

    ಈಗ ಮಕ್ಕಳು ತಂದೆ, ತಾಯಿ ಇಲ್ಲದೆ ಅ*ನಾಥವಾಗಿವೆ. ಇತರ ಐವರು ಆರೋಪಿಗಳು ನಾಪತ್ತೆಯಾಗಿದ್ದರು. ಬಳಿಕ ತೀವ್ರವಾದ ಕಾರ್ಯಾಚರಣೆಯ ವೇಳೆ ಒಬ್ಬೊಬ್ಬರೆ ಪತ್ತೆಯಾಗುತ್ತಿದ್ದಾರೆ.

    ಕೊ*ಲೆಯಾಗಿರುವ ಶಂಕೆ :

    ಮಗಳು ಆ*ತ್ಮಹತ್ಯೆ ಮಾಡಿಕೊಂಡಿರಲು ಸಾಧ್ಯವೇ ಇಲ್ಲ ಎಂದು ತಂದೆ ತಾಯಿ ಪೊಲೀಸರ ಹೇಳಿದ್ದು, ಕೊ*ಲೆಯಾಗಿರಬಹುದು ಏಂದು ಶಂಕಿಸಲಾಗಿದೆ. ಹೆಣ್ಣು ಮಕ್ಕಳನ್ನೇ ಹೆತ್ತಿರುವ ಕಾರಣಕ್ಕೆ ಗಂಡನ ಮನೆಯವರು ಹಿಂಸೆ ನೀಡುತ್ತಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ.

    ಆ ಮೂವರು ಮಕ್ಕಳು ಗಣೇಶನ ಸಹೋದರನ ಮನೆಯಲ್ಲಿದ್ದಾರೆ ಎಂದು ಕೊಪ್ಪಳ ಗ್ರಾಮೀಣ ಠಾಣೆ ಸಿಪಿಐ ಡಿ. ಸುರೇಶ ತಿಳಿಸಿದ್ದಾರೆ.

    ಸಮಗ್ರ ತನಿಖೆಯಾಗಬೇಕು. ಆಕೆಯನ್ನು ಕೊಂದವರಿಗೆ ಶಿಕ್ಷೆಯಾಗಬೇಕು. ಹೆಣ್ಣು ಹೆರುವುದೇ ತಪ್ಪಾ, ಇಂಥವರಿಗೆ ದೇವರು ಶಿಕ್ಷೆ ನೀಡಲಿ ಎಂದು ಮೃತಳ ತಂದೆ ಬಸಪ್ಪ ಕೋರಿ ಹೇಳಿದ್ದಾರೆ. ಸದ್ಯ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    Trending