Homebengaluruಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ ಖ್ಯಾತಿಯ ಆರ್​.ಜೆ ರಚನಾ ಇನ್ನಿಲ್ಲ

ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ ಖ್ಯಾತಿಯ ಆರ್​.ಜೆ ರಚನಾ ಇನ್ನಿಲ್ಲ

ಮಂಗಳೂರು: ಮಾತಿನ ಮಲ್ಲಿ ಎಂದೇ ಕರೆಸಿಕೊಳ್ಳುತ್ತಿದ್ದ ರೇಡಿಯೋ ಜಾಕಿ ರಚನಾ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ರೆಡಿಯೋ ಮಿರ್ಚಿಯಲ್ಲಿ ಆರ್‌ಜೆ ಆಗಿದ್ದ ರಚನಾ ತಮ್ಮ ಮಾತುಗಳಿಂದಲೇ ಜನರ ಮನ ಗೆದ್ದಿದ್ದರು.


ಬಳಿಕ ರೆಡಿಯೋ ಜಾಕಿ ವೃತ್ತಿಗೆ ವಿದಾಯ ಕೋರಿದ್ದ ಅವರು ಮನೆಯಲ್ಲೇ ಇದ್ದರು ಅಂತ ಹೇಳಲಾಗ್ತಿದೆ. ಆದರೆ ಫಿಟ್‌ ಆಂಡ್‌ ಫೈನ್ ಆಗಿದ್ದ ರಚನಾ ಹೃದಯಾಘಾತಕ್ಕೆ ಬಲಿಯಾಗಿರುವುದು ಸದ್ಯ ಎಲ್ಲರಿಗೂ ಶಾಕ್ ಕೊಟ್ಟಿದೆ.

ಜೆಪಿ ನಗರದ ಪ್ಲಾಟ್‌ನಲ್ಲಿ ರಚನಾಗೆ ಎದೆ ನೋವು ಕಾಣಿಸಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ನಿಧನರಾಗಿದ್ದಾರೆ ಎನ್ನಲಾಗುತ್ತಿದೆ.


ತಮ್ಮ ಮಾತಿನ ಮೂಲಕವೇ ಕನ್ನಡಿಗರ ಹೃದಯ ಗೆದ್ದಿದ್ದ ಮುದ್ದು ಮುಖದ ರಚನಾಗೆ ಕೇವಲ 35 ವರ್ಷ ವಯಸ್ಸಾಗಿತ್ತು. ಕಳೆದ ಮೂರು ವರ್ಷಗಳಿಂದ ಅರ್‌ಜೆ ಕೆಲಸ ಬಿಟ್ಟಿದ್ದ ರಚನಾ ಪೋಷಕರು ಚಾಮರಾಜಪೇಟೆಯಲ್ಲಿದ್ದರು.

ರಚನಾ ಪಾರ್ಥೀವ ಶರೀರವನ್ನು ಚಾಮರಾಜ ಪೇಟೆ ನಿವಾಸಕ್ಕೆ ಕೊಂಡೊಯ್ಯಲಾಗಿದೆ. ಅರಳು ಹುರಿದಂತೆ ಮಾತನಾಡುತ್ತಿದ್ದ ರಚನಾ ಸಖತ್​ ಫಿಟ್​ ಅಂಡ್​​ ಫೈನ್ ಆಗಿದ್ದರು.

ರಕ್ಚಿತ್​ ಶೆಟ್ಟಿ ಅವರ ಸಿಂಪಲ್ಲಾಗಿ ಒಂದ್​ ಸ್ಟೋರಿ ಸಿನಿಮಾದಲ್ಲಿ ರಚನಾ ಅಭಿನಯಿಸಿದ್ದು, ಸಿನಿಮಾದಲ್ಲೂ ರೆಡಿಯೋ ಜಾಕಿಯಾಗಿ ರಚನಾ ಪಾತ್ರದಲ್ಲೇ ನಟಿಸಿದ್ದರು.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...