ಎಚ್ಚೆತ್ತುಕೊಂಡ ಹರೇಕಳ ಗ್ರಾಮಸ್ಥರು: ಗ್ರಾಮಕ್ಕೆ ಬರುವ ರಸ್ತೆಯನ್ನೇ ಬಂದ್ ಮಾಡಿದ್ರು.!
ಎಚ್ಚೆತ್ತುಕೊಂಡ ಹರೇಕಳ ಗ್ರಾಮಸ್ಥರು: ಗ್ರಾಮಕ್ಕೆ ಬರುವ ರಸ್ತೆಯನ್ನೇ ಬಂದ್ ಮಾಡಿದ್ರು.!
ಮಂಗಳೂರು: ದಿನೇದಿನೇ ಕೊರೊನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿದೆ. ಬೆಳಗ್ಗೆ ಎದ್ದ ತಕ್ಷಣ ಒಂದು ಪಾಸಿಟಿವ್, ಒಂದು ಸಾವು ಅನ್ನೋ ಸುದ್ದಿಗಳು ನಮ್ಮ ಕಿವಿಗೆ ಅಪ್ಪಳಿಸುತ್ತಲೇ ಇರುತ್ತದೆ.
ಹಾಗಾಗಿ ಹೆಚ್ಚು ಹರಡದಂತೆ ಇಡೀ ದೇಶಕ್ಕೆ ದಿಗ್ಭಂಧನ ಹಾಕಲಾಗಿದೆ. ಇತ್ತ ದ.ಕ. ಜಿಲ್ಲೆ ಲಾಕ್ ಡೌನ್ ಮಾಡಲಾಗಿದ್ದರೂ ಕೆಲವೊಂದು ಗ್ರಾಮಾಂತರ ಪ್ರದೇಶದಲ್ಲಿ ಜನ ಕ್ಯಾರೆ ಅನ್ನದೇ ಓಡಾಟ ಮಾಡುತ್ತಿದ್ದಾರೆ.
ಈಗಾಗ್ಲೆ ಬಂಟ್ವಾಳದ ಸಜೀಪ ಗ್ರಾಮಕ್ಕೆ ಕೊರೊನಾ ಕಾಲಿಟ್ಟಿದ್ದು, 10 ತಿಂಗಳ ಮುದ್ದು ಮಗುವಿಗೆ ಕೊರೊನಾ ಕಾಡಿದೆ.
ಈ ಹಿನ್ನಲೆಯಲ್ಲಿ ಸದ್ಯ ಗ್ರಾಮೀಣ ಪ್ರದೇಶದಲ್ಲೂ ಜನ ಎಚ್ಚರಗೊಂಡಿದ್ದು, ಹರೇಕಳ ಗ್ರಾಮದ ಆಲಡ್ಕದಲ್ಲಿ ಸ್ಥಳೀಯರೇ ಒಟ್ಟು ಸೇರಿ ಹೊರಗಿನವರ ವಾಹನ ಸಂಚಾರವನ್ನು ತಡೆಯಲು ರಸ್ತೆಯನ್ನು ಬಂದ್ ಮಾಡುವ ಮೂಲಕ ಕೊರೋನ ಹರಡುವುದನ್ನು ತಡೆಯಲು ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ.
ಹರೇಕಳ ಗ್ರಾಮದ ಆಲಡ್ಕ ಪ್ರದೇಶದಲ್ಲಿ ಸುಮಾರು 200ರಷ್ಟು ಮನೆಯಿದೆ.
ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೊಳಿಸಲಾಗಿದ್ದರೂ ಗ್ರಾಮೀಣ ಪ್ರದೇಶವಾದ ಹರೇಕಳದಲ್ಲಿ ಜನರ ಓಡಾಟ ನಿರಂತರವಾಗಿತ್ತು.
ಅಲ್ಲದೆ ಹರೇಕಳ ಮಾತ್ರವಲ್ಲದೆ ಹೊರಗಿನ ಗ್ರಾಮದ ಯುವಕರು ಕೂಡಾ ಇಲ್ಲಿಗೆ ವಾಹನದ ಮೂಲಕ ಬರುತ್ತಿದ್ದು ಇದು ಇಲ್ಲಿಯ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿತ್ತು.
ಇದೀಗ ಹೊರಗಿನವರು ಇಲ್ಲಿ ಬಂದು ಸೋಂಕು ಹರಡುವುದನ್ನು ತಪ್ಪಿಸುವ ಉದ್ದೇಶದಿಂದ ಹರೇಕಳ ಆಲಡ್ಕದ ಗ್ರಾಮಸ್ಥರು ಮುನ್ನೆಚ್ಚರಿಕಾ ಕ್ರಮ ವಹಿಸಿಕೊಂಡು ಆಲಡ್ಕಕ್ಕೆ ಪ್ರವೇಶಿಸುವ ರಸ್ತೆಯನ್ನು ಬಂದ್ ಮಾಡಿದ್ದಾರೆ.
ಸದ್ಯ ಹೊರಗಿನ ವಾಹನಕ್ಕೆ ಇಲ್ಲಿ ಸಂಪೂರ್ಣ ನಿಷೇಧ ಹೇರಲಾಗಿದ್ದು, ಆಲಡ್ಕ ಗ್ರಾಮದ ಅಗತ್ಯ ವಾಹನಗಳಿಗಷ್ಟೇ ಇಲ್ಲಿ ಪ್ರವೇಶವನ್ನು ನೀಡಲಾಗುತ್ತಿದೆ.
ಕಳೆದ ಎರಡು ದಿನಗಳ ಹಿಂದೆಯಷ್ಟೇ ಕೇರಳ ಗಡಿ ರಸ್ತೆಯನ್ನು ಮುಡಿಪು, ಬಾಳೆಪುಣಿ, ನರಿಂಗಾನ ಪ್ರದೇಶದಲ್ಲಿ ಪೊಲೀಸರು ಬಂದ್ ಗೊಳಿಸಿದ್ದರು.
ಇದೀಗ ಹರೇಕಳ ಪರಿಸರದಲ್ಲಿ ಗ್ರಾಮಸ್ಥರು ಕೂಡಾ ಎಚ್ಚೆತ್ತುಕೊಂಡು ಹೊರಗಿನಿಂದ ಬರುವವರನ್ನು ತಡೆಯುವ ಉದ್ದೇಶದಿಂದ ರಸ್ತೆ ಬಂದ್ ಗೊಳಿಸುವ ಮೂಲಕ ಜಾಗೃತರಾಗಿದ್ದಾರೆ.
LATEST NEWS
ದಸರಾ ಆನೆಗಳ ಕಾದಾಟ..! ಬೆಚ್ಚಿಬಿದ್ದ ಜನರು, ಅಧಿಕಾರಿಗಳು..!!
ಮೈಸೂರು/ಮಂಗಳೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಯ ಆನೆಗಳು ಶುಕ್ರವಾರ(ಸೆ.20) ರಾತ್ರಿ ದಿಢೀರ್ ಕಾದಾಟಕ್ಕೆ ಇಳಿದಿದ್ದು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ದಸರಾ ಹಬ್ಬದ ಪ್ರಯುಕ್ತ ಆನೆಗಳಿಗೆ ತಾಲೀಮು ನಡೆಸಲಾಗುತ್ತಿದೆ. ಮಳೆಯಿರುವ ಕಾರಣ ಅರಮನೆ ಮೈದಾನದಲ್ಲೇ ಆನೆಗಳಿಗೆ ತಾಲೀಮನ್ನು ಕೈಗೊಳ್ಳಲಾಗಿತ್ತು. ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಧನುಂಜಯ್ ಹಾಗೂ ಕಂಜನ್ ಆನೆಗಳ ಮಧ್ಯೆ ಗುದ್ದಾಟ ಆಋಂಭವಾಗಿದೆ. ಊಟದ ಸಮಯದಲ್ಲಿ ಈ ಜಗಳ ಶುರುವಾಗಿದ್ದು ಧನುಂಜಯ್ ಆನೆ ಕಂಜನ್ನನ್ನು ಅರಮನೆಯಿಂದ ಹೊರಗೆ ಓಡಿಸಿಕೊಂಡು ಬಂದಿದೆ. ಈ ವೇಳೆ ಕಜನ್ ತನನ್ ಮಾವುತನನನ್ಉ ಕೆಳಗೆ ಬೀಳಿಸಿದೆ. ಧನುಂಜಯ್ ಆನೆ ಕಂಜನ್ನನ್ನು ಓಡಿಸಿಕೊಂಡು ಹೋಗಿದ್ದು ಜಯಮಾರ್ತಾಂಡ ದ್ವಾರದಿಂದ ಹೊರಗೆ ಬಂದಿದೆ. ಇದರಿಂದ ಕೆಲಕಾಲ ಜನ, ಮಾವುತರು, ಅಧಿಕಾರಿಗಳಲ್ಲಿ ಆತಂಕ ಸೃಷ್ಟಿಯಾಯಿತು. ಆನೆಗಳು ದೊಡ್ಡಕೆರೆ ಮೈದಾನ ಬಳಿ ಬ್ಯಾರಿಕೇಡ್ ತಳ್ಳಿಕೊಂಡು ರಸ್ತೆಗೆ ಪ್ರವೇಶಿಸುತ್ತಿದ್ದಂತೆ ಜನರು ಭಯದಿಂದ ದಿಕ್ಕಾಪಾಲಾಗಿ ಓಡಿಹೋದರು.
ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ : ಸಿಎಂ ಸಿದ್ಧರಾಮಯ್ಯ
ದೊಡ್ಡಕೆರೆ ಮೈದಾನದ ಬೆಂಗಳೂರು- ನೀಲಗಿರಿ ರಸ್ತೆಯಲ್ಲಿನ ವಾಹನಗಳನ್ನು ನೋಡುತ್ತಿದ್ದಂತೆ ಕಂಜನ್ ಬೆದರಿ ನಿಂತಿತು. ಮಾವುತರು ಕಾವಾಡಿಗರು ಸಮಾಧಾನ ಪಡಿಸಿದರು. ಯಾವುದೇ ಅನಾಹುತ ಸಂಭವಿಸಿಲ್ಲ. ಕಾವಾಡಿಗಳ ಚಾಣಾಕ್ಷತದಿಂದ ಆನೆಗಳ ಆಟೋಟಕ್ಕೆ ಬ್ರೇಕ್ ಬಿದ್ದಿದೆ. ಬಳಿಕ ಅರಮನೆಗೆ ಆನೆಗಳನ್ನು ಸಿಬ್ಬಂದಿ ಕರೆತಂದಿದ್ದಾರೆ. ಸದ್ಯ ಕೋಡಿಸೋಮೇಶ್ವರ ದೇವಸ್ಥಾನ ಸಮೀಪ ಇರುವ ಆನೆಗಳು ಬಿಡಾರ ಬಿಟ್ಟಿವೆ.
DAKSHINA KANNADA
ಮಂಗಳೂರು : ಬೈಕ್ಗೆ ಲಾರಿ ಡಿ*ಕ್ಕಿ; ವಿದ್ಯಾರ್ಥಿ ಸಾ*ವು
ಮಂಗಳೂರು : ಲಾರಿಯೊಂದು ಬೈಕ್ಗೆ ಡಿ*ಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃ*ತಪಟ್ಟ ಘಟನೆ ಕುಂಟಿಕಾನ ಪ್ಲೈಓವರ್ನ ಮೇಲೆ ಶುಕ್ರವಾರ(ಸೆ.21) ನಡೆದಿದೆ.
ಪಾಣೆಮಂಗಳೂರು ಸಮೀಪದ ಮೆಲ್ಕಾರ್ ನಿವಾಸಿ ಜಾಸಿಮ್ (18) ಮೃ*ತಪಟ್ಟ ವಿದ್ಯಾರ್ಥಿ. ನಗರ ಹೊರಲವಲಯದ ಕೂಳೂರಿನಲ್ಲಿರುವ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಎ ಓದುತ್ತಿದ್ದ ಜಾಸಿಮ್ ಶುಕ್ರವಾರ ಸಂಜೆ ಕೂಳೂರಿನಿಂದ ಕೆಪಿಟಿ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಲಾರಿಯೊಂದು ಡಿ*ಕ್ಕಿ ಹೊಡೆಯಿತು ಎನ್ನಲಾಗಿದೆ.
ಇದನ್ನೂ ಓದಿ : ನಾಲ್ಕನೇ ಮಗುವೂ ಹೆಣ್ಣಾಯಿತೆಂದು ಹಸುಗೂಸನ್ನು ನೆಲಕ್ಕೆ ಬಡಿದು ಕೊಂ*ದ ತಂದೆ
ಪರಿಣಾಮ ನಿಯಂತ್ರಣ ತಪ್ಪಿದ ಜಾಸಿಮ್ ರಸ್ತೆಗೆ ಬಿದ್ದಿದ್ದರು. ಇದರಿಂದ ಗಂಭೀ*ರ ಗಾ*ಯಗೊಂಡ ಅವರು ಮೃ*ತಪಟ್ಟಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ದತ್ತಿ ಇಲಾಖೆ ದೇವಸ್ಥಾನದಲ್ಲಿ ನಂದಿನಿ ತುಪ್ಪ ಬಳಕೆಗೆ ಸೂಚನೆ..!
ಮಂಗಳೂರು : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಕರ್ನಾಟಕದ ದತ್ತಿ ಇಲಾಖೆ ಫುಲ್ ಅರ್ಲರ್ಟ್ ಆಗಿದೆ. ಕರ್ನಾಟಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ.
ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಅವರು ಈ ಬಗ್ಗೆ ಇಲಾಖೆಗೆ ಸೂಚನೆ ನೀಡಿದ್ದಾರೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ದತ್ತಿ ಇಲಾಖೆ ದೇವಸ್ಥಾನದ ಸೇವೆಗಳಿಗೆ , ದೀಪಗಳಿಗೆ, ಪ್ರಸಾದ ತಯಾರಿಗೆ ಮತ್ತು ಅನ್ನಛತ್ರದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚಿಸಿದೆ.
ತಿರುಪತಿ ದೇವಾಲಯದ ಲಡ್ಡು ತಯಾರಿಗೆ ಕರ್ನಾಟಕದ ನಂದಿನಿ ತುಪ್ಪವೇ ರವಾನೆ ಆಗುತ್ತಿದೆ. ಆದ್ರೆ ಜಗನ್ ರೆಡ್ಡಿಯ ಸರ್ಕಾರದ ನಾಲ್ಕು ವರ್ಷ ನಂದಿನಿ ತುಪ್ಪ ತಿರುಪತಿಗೆ ಪೂರೈಕೆ ಮಾಡಿರಲಿಲ್ಲ. ಹೀಗಾಗಿ ತಿರುಪತಿ ಲಡ್ಡುವಿಗೆ ಬಳಕೆ ಮಾಡಿದ ತುಪ್ಪಕ್ಕೂ ನಂದಿನಿ ತುಪ್ಪಕ್ಕೂ ಯಾವುದೇ ಸಂಭಂಧ ಇಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.