BANTWAL
ಕಲ್ಲಡ್ಕದಲ್ಲಿ ಹದಗೆಟ್ಟ ರಸ್ತೆ: ಧೂಳಿನಿಂದ ವಿಪರೀತ ಸಮಸ್ಯೆ-ಸಾರ್ವಜನಿಕರ ಆಕ್ರೋಶ..!
ಕಲ್ಲಡ್ಕದಲ್ಲಿ ಹದಗೆಟ್ಟ ರಸ್ತೆ ಮತ್ತು ಧೂಳಿನಿಂದ ಸಮಸ್ಯೆಗಳು ಉಂಟಾಗಿದ್ದು, ಇದರಿಂದ ರೋಸಿಹೋದ ಕಲ್ಲಡ್ಕದ ವರ್ತಕರು, ಹಾಗೂ ಸಾರ್ವಜನಿಕರು ಗುರುವಾರ ಪಕ್ಷ, ಜಾತಿ, ಧರ್ಮ ಬೇಧ ಮರೆತು ಒಗ್ಗಟ್ಟಾಗಿ ಗುತ್ತಿಗೆ ಕಂಪನಿ ವಾಹನಗಳನ್ನು ತಡೆಗಟ್ಟಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಬಂಟ್ವಾಳ: ಕಲ್ಲಡ್ಕದಲ್ಲಿ ಹದಗೆಟ್ಟ ರಸ್ತೆ ಮತ್ತು ಧೂಳಿನಿಂದ ಸಮಸ್ಯೆಗಳು ಉಂಟಾಗಿದ್ದು, ಇದರಿಂದ ರೋಸಿಹೋದ ಕಲ್ಲಡ್ಕದ ವರ್ತಕರು, ಹಾಗೂ ಸಾರ್ವಜನಿಕರು ಗುರುವಾರ ಪಕ್ಷ, ಜಾತಿ, ಧರ್ಮ ಬೇಧ ಮರೆತು ಒಗ್ಗಟ್ಟಾಗಿ ಗುತ್ತಿಗೆ ಕಂಪನಿ ವಾಹನಗಳನ್ನು ತಡೆಗಟ್ಟಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಗುತ್ತಿಗೆ ಕಂಪನಿ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು, ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದ್ದು, ಮುಂದಿನ ಬುಧವಾರದೊಳಗೆ ಕೆಲಸ ಆರಂಭಿಸುವುದಾಗಿ ಭರವಸೆ ನೀಡಿದ ಬಳಿಕ ತಾತ್ಕಾಲಿಕವಾಗಿ ಅಂತ್ಯಗೊಂಡಿತು.
ಈ ಸಂದರ್ಭ ಮಾತನಾಡಿದ ಪ್ರತಿಭಟನಾಕಾರರು ಕಲ್ಲಡ್ಕದಲ್ಲಿ ರಸ್ತೆ ಸಂಪೂರ್ಣ ಹಾಳಾಗಿದ್ದು, ಹೊಂಡ ಮುಚ್ಚಿ, ರಸ್ತೆಯನ್ನು ಸದೃಢವಾಗಿಸುವ ಕೆಲಸ ಆರಂಭಿಸಬೇಕು, ಧೂಳಿನ ಸಮಸ್ಯೆ ತಲೆದೋರಿದ್ದು, ಇದಕ್ಕೆ ಮುಕ್ತಿ ನೀಡಬೇಕು, ಡ್ರೈನೇಜ್ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.
ಬುಧವಾರದೊಳಗೆ ಕಾಮಗಾರಿ ಆರಂಭಗೊಳ್ಳದೇ ಇದ್ದರೆ, ಕಲ್ಲಡ್ಕ ಪೇಟೆ ಬಂದ್, ಹೆದ್ದಾರಿ ತಡೆಯಂಥ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.
ಸಂಸದ ನಳಿನ್ ಕುಮಾರ್ ಕಟೀಲ್ ಆ. 16ಕ್ಕೆ ಬಂಟ್ವಾಳಕ್ಕೆ ಬಂದಿದ್ದ ಸಂದರ್ಭ ಕಲ್ಲಡ್ಕದ ವರ್ತಕರ, ಸಾರ್ವಜನಿಕರ ನಿಯೋಗ ಭೇಟಿ ಮಾಡಿ, ಕಲ್ಲಡ್ಕದಲ್ಲಿ ಹೆದ್ದಾರಿ ಕಾಮಗಾರಿ ಸಂದರ್ಭ ಉಂಟಾಗುವ ತೊಂದರೆ ಕುರಿತು ಗಮನ ಸೆಳೆದಿದ್ದರು.
ಮುಖ್ಯವಾಗಿ ಹದಗೆಟ್ಟ ರಸ್ತೆ ಹಾಗೂ ಧೂಳಿನಿಂದ ಉಂಟಾಗುವ ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದರು.
ಈ ಸಂದರ್ಭ ಮಳೆ ಕಡಿಮೆಯಾದಾಗ ಗಟ್ಟಿಯಾದ ಡಾಂಬರು ಹಾಕಿಸುವುದು ಹಾಗೂ ಧೂಳಿಗೆ ತಕ್ಷಣವೇ ಕಲ್ಲಡ್ಕದಲ್ಲಿ ಪ್ರತಿನಿತ್ಯ ನೀರು ಸಿಂಪಡಿಸುವ ಕುರಿತು ಸಂಸದ ನಳಿನ್ ಸೂಚನೆ ನೀಡಿದ್ದರು.
ಆದರೆ ಸಂಸದರು ಸೂಚನೆ ನೀಡಿದಾಗ ಒಪ್ಪಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಯಾವುದನ್ನೂ ಅನುಷ್ಠಾನ ಮಾಡದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಯಿತು.
ಗುರುವಾರ ಮಧ್ಯಾಹ್ನ ಪ್ರತಿಭಟನೆ ನಡೆದ ಸಂದರ್ಭ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಎಸ್.ಐ. ರಾಮಕೃಷ್ಣ ಮತ್ತು ಸಿಬಂದಿ, ಗುತ್ತಿಗೆ ಕಂಪನಿಯ ಅಧಿಕಾರಿಗಳು ಆಗಮಿಸಿ ಮಾತುಕತೆ ನಡೆಸಿದರು.
ಈ ಸಂದರ್ಭ ಸಮಸ್ಯೆ ಕುರಿತು ಪ್ರತಿಭಟನಾಕಾರರು ಅಧಿಕಾರಿಗಳಿಗೆ ಮನದಟ್ಟು ಮಾಡಿದರು.
BANTWAL
Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!
ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.
ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.
ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.
ಜಮೀಲಾ ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.
ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
BANTWAL
Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!
ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.
ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.
ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.
ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.
BANTWAL
Bantwala: ಕಾರುಗಳ ನಡುವೆ ಸರಣಿ ಅಪಘಾತ..!
ಪಾಣೆಮಂಗಳೂರು ಸೇತುವೆಯಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.
ಬಂಟ್ವಾಳ: ಪಾಣೆಮಂಗಳೂರು ಸೇತುವೆಯಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.
ಪಾಣೆಮಂಗಳೂರು ಸೇತುವೆಯಲ್ಲಿ ಎರಡು ಕಾರುಗಳು ಡಿಕ್ಕಿಯಾಗಿದ್ದು, ಇದರ ಹಿಂಬದಿಯಿಂದ ಬಂದ ಮತ್ತೆ ಎರಡು ವಾಹನಗಳು ಢಿಕ್ಕಿ ಯಾಗಿದೆ.
ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ.
ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯವಾಗದೆ ಪಾರಾಗಿದ್ದಾರೆ.
ಇದರ ಜೊತೆಗೆ ಸೇತುವೆ ಸಮೀಪ ನೆಹರು ನಗರ ಎಂಬಲ್ಲಿ ಲಾರಿಯೊಂದರ ಟಯರ್ ಕೆಟ್ಟು ಹೋಗಿ ನಿಂತಿತ್ತು.
ಹೀಗಾಗಿ ತಾಸುಗಟ್ಟಲೆ ವಾಹನಗಳು ಸಾಲಾಗಿ ನಿಂತಿದ್ದವು.
ಸೇತುವೆಯಲ್ಲಿ ಅಪಘಾತ ಸಂಭವಿಸಿದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.
ವಾಹನಗಳನ್ನು ಕ್ಲಿಯರ್ ಮಾಡಲು ಟ್ರಾಫಿಕ್ ಪೋಲೀಸರು ಹರಸಹಾಸ ಪಟ್ಟರು.
ಅಪಘಾತ ನಡೆದು ಕೆಲವೇ ಹೊತ್ತಿನಲ್ಲಿ ವಾಹನಗಳ ಸಾಲು ಸುಮಾರು ಉದ್ದಕ್ಕೆ ತಲುಪಿತ್ತು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾದ ಹಿನ್ನೆಲೆಯಲ್ಲಿ ವಾಹನ ಸವಾರರು ಪಾಣೆಮಂಗಳೂರು ಪೇಟೆ ಮೂಲಕ ಹಳೆ ಸೇತುವೆ ಮೂಲಕ ಸಂಚಾರಕ್ಕೆ ಪ್ರಯತ್ನ ಮಾಡಿದರಾದರೂ ಅಲ್ಲಿಯೂ ಟ್ರಾಫಿಕ್ ಸಮಸ್ಯೆ ಉಂಟಾಯಿತು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ವಾಹನಗಳು ಹೋಗಿ ಸಾಲು ಸಾಲಾಗಿ ನಿಂತಿರುವ ಪೋಟೋ ವೈರಲ್ ಆಗಿದೆ.
ರಾತ್ರಿ ಹೊತ್ತು ವಾಹನಗಳ ಲೈಟ್ ಮತ್ತು ನೇತ್ರಾವತಿ ನದಿಯ ನೀರು ಕಂಗೊಳಿಸುವ ಚಿತ್ರವನ್ನು ಪಾಣೆಮಂಗಳೂರು ಮಂಗಳೂರು ಹೊಸ ಸೇತುವೆಯಿಂದ ಕ್ಲಿಕ್ ಮಾಡಿದ್ದಾರೆ.
ಪೊಲೀಸ್ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡಿದರು.
- DAKSHINA KANNADA6 days ago
Ullala: 25 ಕೋಟಿ ರೂ. ಲಾಟರಿ ಒಲಿದಿದೆ ಎಂಬ ಲಿಂಕ್ ಕಳುಹಿಸಿ ಮೋಜಿನಾಟ..!
- FILM5 days ago
ಕುರೂಪಿಯಾದ ಹಾಲಿವುಡ್ ನಟಿ ಆ್ಯಮಿ ಜಾಕ್ಸನ್..!
- DAKSHINA KANNADA6 days ago
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ರಾಂಬೋ ಸರ್ಕಸ್- ಜನರನ್ನು ಬೆರಗುಗೊಳಿಸುವ ವಿಸ್ಮಯ ಪ್ರದರ್ಶನ..!
- FILM5 days ago
Film: ಹಂದಿ ಮಾಂಸ ಸೇವಿಸಿದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ..!