LATEST NEWS
IMA ವಂಚನೆ ಪ್ರಕರಣ: ಮೂರು ದಿನ ಸಿಬಿಐ ಪೊಲೀಸರ ವಶಕ್ಕೆ ಮಾಜಿ ಸಚಿವ ರೋಷನ್ ಬೇಗ್..!
IMA ವಂಚನೆ ಪ್ರಕರಣ: ಮೂರು ದಿನ ಸಿಬಿಐ ಪೊಲೀಸರ ವಶಕ್ಕೆ ಮಾಜಿ ಸಚಿವ ರೋಷನ್ ಬೇಗ್..!
ಬೆಂಗಳೂರು : ಐಎಂಎ ಕಂಪನಿಯ ಬಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಮೂರು ದಿನಗಳ ಕಾಲ ಸಿಬಿಐ ಪೊಲೀಸರ ವಶಕ್ಕೆ ನೀಡಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
ನ್ಯಾಯಾಂಗ ವಶದಲ್ಲಿದ್ದ ರೋಷನ್ ಬೇಗ್ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ನೆಪವನ್ನು ಅವರು ನೀಡಿದ್ದರು.
ಇತ್ತ ಬಹುಕೋಟಿ ವಂಚನೆಯಲ್ಲಿ ಮಾಜಿ ಸಚಿವರ ಪಾತ್ರ ಇರುವ ಹಿನ್ನಲೆ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡದಂತೆ ಸಿಬಿಐ ಮನವಿ ಸಲ್ಲಿಕೆ ಮಾಡಿತ್ತು.
ಅಲ್ಲದೇ ಪ್ರಕರಣದ ಕುರಿತ ಹೆಚ್ಚಿನ ವಿಚಾರಣೆಗೆ ಅವರನ್ನು ವಶಕ್ಕೆ ನೀಡುವಂತೆ ಮನವಿಯನ್ನು ಸಿಬಿಐ ಸಲ್ಲಿಸಿತ್ತು. ಈ ಕುರಿತು ಅರ್ಜಿ ಪರಿಸಶೀಲಿಸಿದ ಸಿಬಿಐ ನ್ಯಾಯಾಲಯ ಈ ಆದೇಶ ನೀಡಿದೆ.
ನ. 28ರಿಂದ ಬೇಗ್ ಅವರನ್ನು ಮೂರು ದಿನಗಳ ಸಿಬಿಐ ವಶಕ್ಕೆ ಪಡೆಯಲಿದ್ದು, ವಿಚಾರಣೆ ನಡೆಸಲಿದೆ.ಪ್ರಕರಣ ಸಂಬಂಧ ಭಾನುವಾರ ಸಿಬಿಐ ರೋಷನ್ ಬೇಗ್ ಅವರನ್ನು ಬಂಧಿಸಿತ್ತು. ಈ ವೇಳೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶಿಸಿತ್ತು.
120B, r/w 420, 406, 405 ಮತ್ತು 128 ಸೆಕ್ಷನ್ ಅಡಿಯಲ್ಲಿ ರೋಷನ್ ಬೇಗ್ ಮೇಲೆ ಕೇಸ್ ದಾಖಲು ಮಾಡಲಾಗಿದೆ. ರೋಷನ್ ಬೇಗ್ನನ್ನು ಪೊಲೀಸ್ ಕಸ್ಟಡಿಗೆ ಪಡೆಯಲು ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.
ಇನ್ನು ನಿನ್ನೆ ಪರಪ್ಪನ ಅಗ್ರಹಾರದಲ್ಲಿ ಕ್ವಾರಂಟೈನ್ ಸಿಂಗಲ್ ಸೆಲ್ನಲ್ಲಿದ್ದ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಆಕ್ಸಿಜನ್ ಬೆಡ್ಗೆ ಶಿಫ್ಟ್ ಮಾಡಲಾಗಿದೆ.
ಇಂದು ಮುಂಜಾನೆಯಿಂದ ಆರೋಗ್ಯ ಸಮಸ್ಯೆ ಉಂಟಾಗಿದ್ದು, ಅವರನ್ನು ಜೈಲು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸಕ್ಕರೆ ಕಾಯಿಲೆ, ಬಿಪಿ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಅವರು ಬಳಲುತ್ತಿದ್ದಾರೆ.
ಈ ನಡುವೆ ನಿನ್ನೆ ಪ್ರಕರಣದ ಸಂಬಂಧ ಸಿಬಿಐ ರೋಷನ್ ಬೇಗ್ ಅವರ ಕುಟುಂಬಸ್ಥರ ಮನೆ ಮೇಲೆ ದಾಳಿ ನಡೆಸಿದ್ದು, ಪ್ರಕರಣದ ಕುರಿತು ಸಾಕ್ಷ್ಯ ಹುಡುಕಾಟ ನಡೆಸಿತ್ತು.
ಐಎಂಎ ಬಹುಕೋಟಿ ಪ್ರಕರಣದಲ್ಲಿ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮನ್ಸೂರ್ ಖಾನ್ನಿಂದ ರೋಷನ್ ಬೇಗ್ ಸುಮಾರು 200 ಕೋಟಿ ಹಣ ಪಡೆದಿದ್ದಾರೆ ಎಂಬ ಆರೋಪವಿದೆ.
ಇದರ ಜೊತೆಗೆ ಐಷಾರಾಮಿ ಉಡುಗೊರೆಯನ್ನು ಅವರು ಪಡೆದಿದ್ದಾರೆ ಎಂಬ ಆರೋಪ ದಾಖಲಾಗಿದೆ.
ಇನ್ನು ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರೋಷನ್ ಬೇಗ್ ಕಾಂಗ್ರೆಸ್ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಮುಂದಾಗಲು ತಯಾರಿ ನಡೆಸಿದ್ದರು. ಬೇಗ್ ಸಿಬಿಐನಿಂದ ತಪ್ಪಿಸಿಕೊಳ್ಳಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿತ್ತು.
DAKSHINA KANNADA
Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!
ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.
ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ
DAKSHINA KANNADA
Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು
ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.
ನವೀನ್ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.
LATEST NEWS
ಕೋಟಿಯ ಒಡೆಯನಾದ 8ನೇ ತರಗತಿ ಪೋರ..!!
ನವದೆಹಲಿ: ಕೌನ್ ಬನೇಗಾ ಕರೋಡ್ ಪತಿ ಎಂಬ ಹಿಂದಿ ಶೋ ನಲ್ಲಿ ಕೋಟಿ ಗೆದ್ದ 14ವರ್ಷದ ಪೋರ ಸಣ್ಣ ವಯಸ್ಸಿನಲ್ಲೇ ದಾಖಲೆ ಬರೆದಿದ್ದಾನೆ.
ಬಾಲಿವುಡ್ ಸ್ಟಾರ್ ಅಮಿತಾಭ್ ಬಚ್ಚನ್ ನಡೆಸಿಕೊಡುವಂತಹ ಹಿಂದಿಯ ಕೌನ್ ಬನೇಗಾ ಕರೋಡ್ ಪತಿ ಎಂಬ ಶೋ ನಲ್ಲಿ ಹರಿಯಾಣದ ಮಹೇಂದ್ರಗಢ್ ಮೂಲದ 8ನೇ ತರಗತಿ ವಿದ್ಯಾರ್ಥಿ ಮಯಾಂಕ್ ಭಾಗವಹಿಸಿ 15 ಪ್ರಶ್ನೆಗಳಿಗೆ ಉತ್ತರಿಸಿ ಒಂದು ಕೋಟಿ ಗೆದ್ದು ದಾಖಲೆ ಬರೆದಿದ್ದಾನೆ. ಕೌನ್ ಬನೇಗಾ ಕರೋಡ್ ಪತಿಯಲ್ಲಿ ನಡೆಯುವ ಜನಪ್ರಿಯ ಪ್ರಶ್ನೆಗಳಿಗೆ ಉತ್ತರಿಸಿದ 14 ವರ್ಷದ ಕಿರಿಯ ಪೋರ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.
ಜನಪ್ರಿಯ ರಸಪ್ರಶ್ನೆ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ಪತಿಯಲ್ಲಿ 1 ಕೋಟಿ ರೂ.ಗೆದ್ದ ಹೆಗ್ಗಳಿಕೆಗೆ ಹರಿಯಾಣದ ಮಹೇಂದ್ರಗಢ್ನ 8 ನೇ ತರಗತಿಯ ವಿದ್ಯಾರ್ಥಿ ಮಯಾಂಕ್ ಪಾತ್ರನಾಗಿದ್ದಾನೆ. 14 ವರ್ಷದ ಈ ಬಾಲಕ 1 ಕೋಟಿ ರೂ.ಗೆದ್ದ ಅತ್ಯಂತ ಕಿರಿಯ ಸ್ಪರ್ಧಿಯಾಗಿದ್ದು, ಹೊಸ ಇತಿಹಾಸ ನಿರ್ಮಿಸಿದ್ದಾನೆ. 15 ಪ್ರಶ್ನೆಗಳಿಗೆ ಉತ್ತರ ಕೊಟ್ಟು, 1 ಕೋಟಿ ರೂ ಗೆದ್ದು, 16ನೇ ಪ್ರಶ್ನೆಗೂ ಸರಿಯಾದ ಉತ್ತರ ನೀಡಿದ್ದಾನೆ. ಈತನ ಗುರಿ ಕೇವಲ ಒಂದು ಕೋಟಿ ಆಗಿರಲಿಲ್ಲ. ಏಳು ಕೋಟಿಯನ್ನು ಗುರಿಯಾಗಿಸಿಟ್ಟುಕೊಂಡಿದ್ದ. ಏಳು ಕೋಟಿಯ ಪ್ರಶ್ನೆಗೆ ಉತ್ತರಿಸೋಕೆ ಆಗದೇ ಆಟದಿಂದ ವಾಪಸ್ಸಾಗಿದ್ದಾನೆ. ಈತನ ಸಾಧನೆಗೆ ಹರಿಯಾಣ ಸಿಎಂ ಮನೊಹರ್ ಲಾಲ್ ಖಟ್ಟರ್ ಅಭಿನಂದಿಸಿದ್ದಾರೆ. ಇದು ಮೊದಲ ಬಾರಿ 14 ವರ್ಷದ ಪೋರ ಕೋಟಿಗೆದ್ದ ಇತಿಹಾಸವಾಗಿದೆ.
- FILM3 days ago
ಆಲಿಯಾ ಭಟ್ ಡೀಫ್ ಫೇಕ್ ವಿಡಿಯೋ ವೈರಲ್ – ವಿಡಿಯೋ ನೋಡಿದ್ರಾ..?
- bangalore4 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- bangalore6 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್
- DAKSHINA KANNADA6 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!