Connect with us

DAKSHINA KANNADA

ಮಂಗಳೂರಿನಲ್ಲಿ ಮತ್ತೆ ಹರಿದ ನೆತ್ತರು : ಬೊಕ್ಕಪಟ್ನದಲ್ಲಿ ರೌಡಿ ಶೀಟರ್ ಬರ್ಬರ ಕೊಲೆ..!

Published

on

ಮಂಗಳೂರಿನಲ್ಲಿ ಮತ್ತೆ ಹರಿದ ನೆತ್ತರು : ಬೊಕ್ಕಪಟ್ನದಲ್ಲಿ ರೌಡಿ ಶೀಟರ್ ಬರ್ಬರ ಕೊಲೆ..!

ಮಂಗಳೂರು : ಮಂಗಳೂರು ನಗರದಲ್ಲಿ ನೆತ್ತರು ಹರಿದಿದೆ. ನಗರದ ಬೊಕ್ಕಪಟ್ಟಣ್ಣದ ಕರ್ನಲ್‌ ಗಾರ್ಡನ್‌ ಬಳಿ ರೌಡಿಶೀಟರ್‌ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.ನಿನ್ನೆ ತಡರಾತ್ರಿ ಈ ಘಟನೆ ಆಗಿರಬಹುದೆಂದು ಶಂಕಿಸಲಾಗಿದ್ದು ಮೃತ ವ್ಯಕ್ತಿಯನ್ನು ಇಂದ್ರಜೀತ್‌ (29) ಎಂದು ಗುರುತ್ತಿಸಲಾಗಿದೆ.

ನಿನ್ನೆ ರಾತ್ರಿ ಇಂದ್ರಜೀತ್ ಖಾಸಾಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ. ಈ ಸಂದರ್ಭ ಅಲ್ಲಿ ಯಾವುದೋ ವಿಚಾರಕ್ಕೆ ಗಲಾಟೆ ನಡೆದಿದೆ.ಬಳಿಕ ಕಾರ್ಕ್ರಮ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭ ಕರ್ನಲ್‌ ಗಾರ್ಡನ್‌ ಬಳಿ ಈತನನ್ನು ಇರಿದು ಹತ್ಯೆಗೈಯಲಾಗಿದೆ ಎಂದು ತಿಳಿದು ಬಂದಿದ್ದು, ಈ ಹಿಂದೆ ಈತನ ಹತ್ಯೆ ಯತ್ನ ನಡೆದಿತ್ತು,

ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸೀಲನೆ ನಡೆಸಿದ್ದು ಬರ್ಕೆ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲು ಮಾಡಲಾಗಿದೆ.

ಇಂದ್ರಜಿತ್ ತಾಯಿ ಸ್ಥಳೀಯ ಕ್ಯಾಟರಿಂಗ್​ನಲ್ಲಿ ಕೆಲಸ ಮಾಡಿಕೊಂಡಿದ್ದು ನಿನ್ನೆ ರಾತ್ರಿ ಎಂಟು ಗಂಟೆಯವರೆಗೂ ಇಂದ್ರಜಿತ್ ಮನೆಯಲ್ಲೇ ಇದ್ದ. ಆ ಮೇಲೆ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದು ಅಲ್ಲಿ ಗಲಾಟೆ ಆಗಿ ಆತನ ಕೊಲೆಯಾಗಿದೆ.

ಬೆಳಗ್ಗಿನ ಜಾವ ಮನೆಯಲ್ಲಿದ್ದು, ರಾತ್ರಿ ತಿರುಗುವ ಚಟ ಹೊಂದಿದ್ದ ಇಂದ್ರಜಿತ್ ನಿನ್ನೆ ನಡುರಾತ್ರಿಯಲ್ಲೇ ಹತ್ಯೆಯಾಗಿದ್ದಾನೆ.ಈ ಹಿಂದೆ ಬೊಕ್ಕಪಟ್ಟಣದ ಗ್ಯಾಂಗ್ ಜೊತೆಯಲ್ಲಿ ಇಂದ್ರಜಿತ್ ಕಾಣಿಸಿಕೊಂಡಿದ್ದ.

ಈ ವೇಳೆ ಎರಡು ಗ್ಯಾಂಗ್ ಜೊತೆ ಆಗಾಗ ಗಲಾಟೆ ಆಗುತಿತ್ತು. ಮೇಲ್ನೋಟಕ್ಕೆ ಇದು ಪ್ರತೀಕಾರದ ಹತ್ಯೆ ಅಂತಾ ಹೇಳಲಾಗುತ್ತಿದೆ. ಬೊಕ್ಕಪಟ್ಟಣದ ಕರ್ನಲ್ ಗಾರ್ಡನ್ ಬಳಿ ಘಟನೆಯಾಗಿದ್ದು, ಇದೇ ಜಾಗದಲ್ಲಿ ಇಂದ್ರಜಿತ್ ತನ್ನ ಗ್ಯಾಂಗ್ ಜೊತೆ ರಾತ್ರಿ ಪಾರ್ಟಿಗಳನ್ನು ಮಾಡುತ್ತಿದ್ದ.

ಗಾಂಜಾ ಚಟವನ್ನೂ ಹೊಂದಿದ್ದ ಅಂತಾ ಹೇಳಲಾಗುತ್ತಿದೆ.

ಒಟ್ಟಿನಲ್ಲಿ, ಕರಾವಳಿಯ ಪಾತಕಲೋಕ ಮತ್ತೆ ಮೈಕೊಡವಿ ನಿಂತಿದ್ದು, ಖಾಕಿ ಖದರ್ ಮತ್ತಷ್ಟು ಬಲಗೊಳ್ಳಬೇಕಿದೆ. ಕಳೆದ ಎರಡುವಾರದಿಂದ ಮಂಗಳೂರಿನಲ್ಲಿ ನಿರಂತರವಾಗಿ ಕೊಲೆ ಮತ್ತು ಕೊಲೆಯತ್ನ ಪ್ರಕರಣಗಳು ನಡೆಯುತ್ತಿದ್ದು, ಆರಕ್ಷಕ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಬೇಕಾಗಿದೆ

Ancient Mangaluru

ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

Published

on

ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.

ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.  ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ  ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.  ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ  ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Continue Reading

DAKSHINA KANNADA

ಉಡುಪಿ : ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ

Published

on

ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್‌ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.

ಪ್ರೀತಮ್‌ ಅವರು ಬೈಕ್‌ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್‌ ಪಂಪ್‌ ಕಡೆಯಿಂದ ಸರ್ವಿಸ್‌ ರೋಡ್‌ನ‌ಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್‌ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್‌ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್‌ ಕೆಟರಿಂಗ್‌ ಉದ್ಯಮ ನಡೆಸುತ್ತಿದ್ದರು. ಪ್ರೀತಮ್‌ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Continue Reading

DAKSHINA KANNADA

ಮನೆ ಬಿಟ್ಟು ಓಡಿ ಹೋಗಿದ್ದ ಬಂಟ್ವಾಳದ ಪ್ರೇಮಿಗಳು ಕಾಸರಗೋಡಿನಲ್ಲಿ ಪತ್ತೆ

Published

on

ಬಂಟ್ವಾಳ : 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿಗಳಾದ ಅಕ್ಕ ಪಕ್ಕದ ಮನೆಗಳ ಯುವಕ ಹಾಗೂ ಯುವತಿಯನ್ನು ಬಂಟ್ವಾಳ ಪೊಲೀಸರು ಕೇರಳದ ಕಾಸರಗೋಡು ಜಿಲ್ಲೆಯ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿ ಊರಿಗೆ ಕರೆ ತಂದಿದ್ದಾರೆ.

ಉದ್ದೊಟ್ಟು ನಿವಾಸಿ ಅಬ್ದುಲ್‌ಹಮೀದ್‌ಅವರ ಪುತ್ರಿ ಆಯಿಸತ್‌ರಸ್ಮಾ(18) ಮತ್ತು ಹೈದರ್‌ಅವರ ಪುತ್ರ ಮಹಮ್ಮದ್‌ಸಿನಾನ್‌ (23) ಅವರು ನ. 23 ರಂದು ತಂತಮ್ಮ ಮನೆಗಳಲ್ಲಿ ಮಲಗಿದ್ದವರು ನ. 24ರಂದು ಬೆಳಗಾಗುವಷ್ಟರಲ್ಲಿ ಕಾಣೆಯಾಗಿದ್ದರು. ಮನೆಯವರ ದೂರಿನಂತೆ ಹುಡುಕಾಟ ನಡೆಸಿದ ಬಂಟ್ವಾಳ ಪೊಲೀಸರು ಅವರಿಬ್ಬರನ್ನೂ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿದ್ದು, ಠಾಣೆಗೆ ತಂದು ವಿಚಾರಿಸಿದಾಗ ತಾವಿಬ್ಬರೂ ಪರಸ್ಪರ ಪ್ರೀತಿಸಿದ್ದು, ಮದುವೆಯಾಗುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

Continue Reading

LATEST NEWS

Trending