Connect with us

    DAKSHINA KANNADA

    ಸಾಯಿನಾಥ ಶಿರಡಿ ಬಾಬಾ ;ಭಕ್ತಿ ಪ್ರಧಾನ ಕನ್ನಡ ಚಾರಿತ್ರಿಕ ನಾಟಕದ ಪ್ರಥಮ ಅತ್ಯದ್ಭುತ ಪ್ರದರ್ಶನ ..!

    Published

    on

    ಮಂಗಳೂರು: ಶಿರಡಿ ಸಾಯಿಬಾಬಾ  ಮಂದಿರ ಸೇವಾ ಟ್ರಸ್ಟ್ ಉರ್ವ ಚಿಲಿಂಬಿ, ಮಂಗಳೂರು ಇವರ ಆಶ್ರಯದಲ್ಲಿ ತುಳುನಾಡ ತುಡರ್ ಇದರ ಅತ್ಯದ್ಭುತ ಕಲಾವಿದರಿಂದ ಕದ್ರಿ ನವನೀತ್ ಶೆಟ್ಟಿ ವಿರಚಿತ ಸಾಯಿನಾಥ ಶಿರಡಿ ಬಾಬಾ ಭಕ್ತಿ ಪ್ರಧಾನ ಕನ್ನಡ ಚಾರಿತ್ರಿಕ ನಾಟಕದ ಪ್ರಥಮ ಪ್ರದರ್ಶನ ರಾಮನವಮಿಯ ಪ್ರಯುಕ್ತ ನಿನ್ನೆ ಸಂಜೆ ಮಂಗಳೂರಿನ ಪುರಭವನದಲ್ಲಿ ನಡೆಯಿತು. ನಯನಾ ಕೊಟ್ಯಾನ್ ನಿರ್ದೇಶನದ, ಬಿ.ಎಸ್ ಕಾರಂತ್ ಸಂಗೀತ ಹಾಗೂ ಲಾವಣ್ಯ ವಿಶ್ವಾಸ್ ಕುಮಾರ್ ದಾಸ್ ಸಂಯೋಜನೆಯ ಸಾಯಿನಾಥ ಶಿರಡಿ ಬಾಬಾ ನಾಟಕಕ್ಕೆ ಮೊದಲ ಪ್ರದರ್ಶನದಲ್ಲೆ ಕಂಡು ಕೇಳರಿಯದ ರೀತಿಯಲ್ಲಿ ಮೆಚ್ಚುಗೆ ವ್ಯಕ್ತವಾಯಿತು. ಇದಕ್ಕೂ ಮುನ್ನ ನಡೆದ ಸಭಾಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕ ಜೆ.ಆರ್ ಲೋಬೋ ನೆರವೇರಿಸಿದ್ರು. ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ” ಶಿರಡಿ ಸಾಯಿಬಾಬಾರ ಮಂದಿರದ ಮುಖಾಂತರ ಮಾಡಿರುವಂತಹ  ಸೇವಾ ಕಾರ್ಯಕ್ರಮಗಳು ಹಾಗೂ ಭಜನಾ ಕಾರ್ಯಕ್ರಮಗಳು ಉತ್ತಮವಾಗಿರುವಂತದ್ದು. ಸಾಯಿಬಾಬಾರಂತಹ  ದೇವತಾ ಮನಷ್ಯನನ್ನು ನಾವು ಇಂದು ಕೊಂಡಾಡುವಾಗ ಅವರ ತತ್ವ ಸಿದ್ದಾಂತಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದ್ರು. ಇದೇ ವೇಳೆ ಮಾತನಾಡಿದ ಶಿರಡಿ ಸಾಯಿಬಾಬಾ ಮಂದಿರ ಸೇವಾ ಟ್ರಸ್ಟ್ ನ ಆಡಳಿತ ಮೊಕ್ತೇಸರರಾದ ವಿಶ್ವಾಸ್ ಕುಮಾರ್ ದಾಸ್ “ಮಂದಿರ ಇಷ್ಟು ಅಭಿವೃದ್ಧಿ ಕಂಡು ಇನ್ನೊಬ್ಬರ ಕಷ್ಟಗಳಿಗೆ ಸ್ಪಂದಿಸುವವರೆಗೂ ಬೆಳೆದು ನಿಂತಿದೆ ಅಂದ್ರೆ ಅದಕ್ಕೆ ನಮ್ಮ ಜೊತೆ ಕೈ ಜೋಡಿಸಿ ಸಹಕರಿಸಿದ ಎಲ್ಲರೂ ಕಾರಣಕರ್ತರು ಎಂದರು.ಕಾರ್ಯಕ್ರಮದಲ್ಲಿ ಕೊರೊನಾ ಮಹಾಮಾರಿಯ ಸಂದರ್ಭ ಸಾವಿರಾರು ಜನರಿಗೆ ಶಿರಡಿ ಸಾಯಿಬಾಬಾ ಮಂದಿರದ ವತಿಯಿಂದ ಊಟೋಪಚಾರದ ವ್ಯವಸ್ಥೆ ಹಾಗೂ ಅಗತ್ಯ ವಸ್ತುಗಳ ಪೂರೈಕೆ ಮಾಡಿ ವಿಸೇಷ ಸೇವೆ ನೀಡಿದ ಸೇವಾಕರ್ತರಿಗೆ ಸನ್ಮಾನಿಸಲಾಯಿತು.

    ಈ ಸಂದರ್ಭ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಪಾಲಿಕೆ ಪ್ರತಿಪಕ್ಷ ನಾಯಕರಾದ ಎ.ಸಿ ವಿನಯ್ ರಾಜ್, ಕಾರ್ಪೋರೇಟರ್ ಕೇಶವ ಮರೋಳಿ, ನೆಹರು ಯುವ ಕೇಂದ್ರದ ಸಂಯೋಜನ ಅಧಿಕಾರಿ ರಘುವೀರ್ ಸೂಟರ್ ಪೇಟೆ, , ನಾಟಕ ರಚನೆಕಾರ ಹಾಗೂ ನಮ್ಮ ಕುಡ್ಲ ವಾಹಿನಿ ಸಿ.ಒ.ಒ ಕದ್ರಿ ನವನೀತ್ ಶೆಟ್ಟಿ, ನಮ್ಮ ಕುಡ್ಲ ನಿರ್ದೇಶಕರಾದ ಲೀಲಾಕ್ಷ ಬಿ. ಕರ್ಕೇರ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಜು. 1 ರಿಂದ ಗ್ರಾಮ ಪಂಚಾಯಿತಿಯಲ್ಲೇ ಜನನ, ಮರಣ ಪ್ರಮಾಣ ಪತ್ರ ಲಭ್ಯ

    Published

    on

    ಬೆಂಗಳೂರು: ಜುಲೈ 1 ರಿಂದ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿಯೇ ಜನನ, ಮರಣ ಪ್ರಮಾಣ ಪತ್ರ ಲಭ್ಯವಿರಲಿದೆ. ರಾಜ್ಯದಲ್ಲಿ ಜುಲೈ 1ರಿಂದ ಜಾರಿಗೆ ಬರುವಂತೆ ಜನನ ಅಥವಾ ಮರಣ ಸಂಭವಿಸಿದ 30 ದಿನಗಳ ಒಳಗೆ ನೋಂದಣಿ ಮಾಡಿ ಪ್ರಮಾಣ ಪತ್ರ ವಿತರಿಸುವ ಅಧಿಕಾರವನ್ನು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಿಗೆ ನೀಡಲಾಗಿದೆ.

    ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದು, ಜನನ, ಮರಣ ಘಟನೆಗಳು ಸಂಭವಿಸಿದ 30 ದಿನಗಳವರೆಗಿನ ಪ್ರಕರಣಗಳಲ್ಲಿ ನೋಂದಾಯಿಸಲು ಪಂಚಾಯಿತಿ ಕಾರ್ಯದರ್ಶಿ ಹಾಗೂ 30 ದಿನಗಳಿಂದ ಒಂದು ವರ್ಷದ ವರೆಗಿನ ಪ್ರಕರಣಗಳಲ್ಲಿ ಗ್ರಾಪಂ ಆಡಳಿತ ಅಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಆದೇಶ ಹೊರಡಿಸಲಾಗಿದೆ.

    ಜನನ, ಮರಣ ನಡೆದ 21 ದಿನಗಳ ಒಳಗೆ ನೋಂದಣಿ ಮಾಡಿ ಉಚಿತವಾಗಿ ಒಂದು ಪ್ರಮಾಣ ಪತ್ರ ವಿತರಿಸಬೇಕು. 21 ರಿಂದ 30 ದಿನಗಳ ನಡುವೆ ನೋಂದಾಯಿಸಿದಲ್ಲಿ ಎರಡು ರೂಪಾಯಿ ಶುಲ್ಕ, 30 ದಿನಗಳಿಂದ ಒಂದು ವರ್ಷದ ವರೆಗಿನ ಪ್ರಕರಣಗಳಲ್ಲಿ 5 ರೂ. ಶುಲ್ಕ ಪಡೆದು ನೋಂದಣಿ ಮಾಡಿಸಬಹುದು. ಒಂದು ವರ್ಷದ ಬಳಿಕ ನೋಂದಣಿ ಮಾಡಿದರೆ ಪ್ರಥಮ ದರ್ಜೆ ದಂಡಾಧಿಕಾರಿ ಆದೇಶದ ಮೇರೆಗೆ 10 ರೂಪಾಯಿ ವಿಳಂಬ ಶುಲ್ಕ ಪಡೆದು ನೋಂದಣಿ ಮಾಡಿಸಬಹುದು.

    ವಿವರಗಳಿಗಾಗಿ ಇ-ಜನ್ಮ ಸಹಾಯವಾಣಿ ಸಂಖ್ಯೆ 1800 425 6578ಗೆ ಸಂಪರ್ಕಿಸಬಹುದಾಗಿದೆ.

    Continue Reading

    DAKSHINA KANNADA

    ಡಿಸಿಎಂ ಡಿಕೆ ಶಿವಕುಮಾರ್ ಕುಕ್ಕೆ ಕ್ಷೇತ್ರಕ್ಕೆ ಭೇಟಿ

    Published

    on

    ಮಂಗಳೂರು : ಕುಟುಂಬ ಸಮೇತರಾಗಿ ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಮುಂಜಾನೆ ಆಗಮಿಸಿದ್ದ ಡಿ.ಕೆ.ಶಿವಕುಮಾರ್ ನೇರವಾಗಿ ಕುಕ್ಕೆಗೆ ಆಗಮಿಸಿ ಪೂಜಾ ಕೈಂಕರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

    ಪತ್ನಿ ಹಾಗೂ ಮಗಳ ಜೊತೆ ಆಗಮಿಸಿದ್ದ ಡಿಕೆಶಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದ್ದು, ಮಹಾ ಪೂಜೆಯಲ್ಲೂ ಭಾಗಿಯಾಗಿದ್ದಾರೆ. ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿದ್ದ ಡಿಸಿಎಂಗೆ ಕುಕ್ಕೆ ದೇವಸ್ಥಾನದ ಆಡಳಿತ ಮಂಡಳಿಯಿಂದ ಭವ್ಯ ಸ್ವಾಗತ ನೀಡಲಾಗಿತ್ತು.

    ಇದನ್ನೂ ಓದಿ : ಅಂಗಾರಕ ಸಂಕಷ್ಟಿ ದಿನ ಗಣೇಶನಿಗೆ ಈ ರೀತಿ ಪೂಜೆ ಮಾಡಿದ್ರೆ ಸಂಕಷ್ಟಗಳೆಲ್ಲಾ ನಿವಾರಣೆ ಆಗುತ್ತದೆ..!

    ವಾದ್ಯಘೋಷ ಹಾಗೂ ಕುಂಭ ಕಳಶದೊಂದಿಗೆ ಡಿಸಿಎಂ ಅವರನ್ನು ಸ್ವಾಗತಿಸಿ ದೇವಸ್ಥಾನಕ್ಕೆ ಬರಮಾಡಿಕೊಳ್ಳಲಾಗಿತ್ತು. ಡಿಕೆಶಿ ಕುಟುಂಬ ಹಲವಾರು ವರ್ಷಗಳಿಂದ ಕುಕ್ಕೆ ಕ್ಷೇತ್ರದಲ್ಲಿ ಸೇವೆಯನ್ನು ನೀಡುತ್ತಿದ್ದಾರೆ.

    Continue Reading

    DAKSHINA KANNADA

    ಅಂಗಾರಕ ಸಂಕಷ್ಟಿ ದಿನ ಗಣೇಶನಿಗೆ ಈ ರೀತಿ ಪೂಜೆ ಮಾಡಿದ್ರೆ ಸಂಕಷ್ಟಗಳೆಲ್ಲಾ ನಿವಾರಣೆ ಆಗುತ್ತದೆ..!

    Published

    on

    ಮಂಗಳೂರು: ಮಂಗಳವಾರ ಬರುವ ಸಂಕಷ್ಟಿಯನ್ನು ಅಂಗಾರಕ ಸಂಕಷ್ಟಿ ಎಂದು ಕರೆಯಲಾಗುತ್ತದೆ. ಈ ದಿನ ಉಪವಾಸ ಮಾಡಿ ವ್ರತ ಆಚರಣೆ ಮಾಡಿದರೆ ಜೀವನದಲ್ಲಿರುವ ಸಮಸ್ಯೆಗಳೆಲ್ಲಾ ಮಾಯವಾಗುತ್ತೆ ಎನ್ನಲಾಗುತ್ತದೆ. ಈ ದಿನ ಗಣೇಶನ ಪೂಜೆ ಮಾಡುವುದು ಹೇಗೆ ಎಂಬುದು ಇಲ್ಲಿದೆ.

    ಈ ದಿನ ಚಂದ್ರ ಹಾಗೂ ಗಣೇಶನ ಆರಾಧನೆ ಮಾಡುವುದು ತುಂಬಾ ಒಳ್ಳೆಯದು ಎಂದು ಹೇಳಲಾಗುತ್ತದೆ. ಸಂಕಷ್ಟ ಚತುರ್ಥಿ ವ್ರತ ಚಂದ್ರ ದರ್ಶನ ಆಗದಿದ್ದರೆ ಅಪೂರ್ಣ ಎನ್ನಲಾಗುತ್ತದೆ. ಈ ಬಾರಿ ಚಂದ್ರ ರಾತ್ರಿ 10.12 ನಿಮಿಷಕ್ಕೆ ಉದಯಿಸಲಿದ್ದು, ಚಂದ್ರನ ದರ್ಶನ ಮಾಡಿ ಉಪವಾಸ ಪೂರ್ಣಗೊಳಿಸಬೇಕು. ಮಂಗಳವಾರ ಅಂದರೆ ಅಂಗಾರಕ ಸಂಕಷ್ಟಿಯ ದಿನ ಗಣೇಶನ ವ್ರತಾಚಾರಣೆ ಹಾಗೂ ಉಪವಾಸ ಮಾಡುವುದು ಇಡೀ ವರ್ಷದಲ್ಲಿ ಬರುವ ಸಂಕಷ್ಟ ಚತುರ್ಥಿ ಆಚರಣೆ ಮಾಡುವುದಕ್ಕೆ ಸಮ ಎನ್ನಲಾಗುತ್ತದೆ.

    ಅಂಗಾರಕ ಎಂದರೆ ಮಂಗಳಕರ ಎಂದು ಅರ್ಥ. ಈ ಸಂಕಷ್ಟಿ ಆಚರಣೆ ಮಾಡುವುದರಿಂದ ಜೀವನದಲ್ಲಿ ಯಾವುದೇ ಸಮಸ್ಯೆಗಳು ಬರುವುದಿಲ್ಲ ಹಾಗೂ ಇರುವ ಸಮಸ್ಯೆಗಳು ಸಹ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಇದೆ. ಹಾಗೆಯೇ ನಾವು ಮಾಡಿಕೊಂಡ ಸಂಕಲ್ಪಗಳು ಸಹ ಈಡೇರುತ್ತದೆ ಎನ್ನಲಾಗುತ್ತದೆ.

    ಪೂಜೆ ಮಾಡುವುದು ಹೇಗೆ?

    ಅಂಗಾರಕ ಸಂಕಷ್ಟಿಯ ದಿನ ಕೆಂಪು ಬಟ್ಟೆ ಮೇಲೆ ಗಣೇಶನ ವಿಗ್ರಹ ಅಥವಾ ಫೋಟೋವನ್ನು ಪ್ರತಿಷ್ಠಾಪನೆ ಮಾಡಬೇಕು. ನಂತರ ದೇವರಿಗೆ ಹೂವುಗಳನ್ನು ಅರ್ಪಣೆ ಮಾಡಿ. ಮಲ್ಲಿಗೆ ಹೂವಿನ ಅರ್ಪಣೆ ಮಾಡುವುದು ಶ್ರೇಷ್ಠ ಎನ್ನಲಾಗುತ್ತದೆ.

    ನಂತರ ಗರಿಕೆಯನ್ನು ಅರ್ಪಣೆ ಮಾಡಬೇಕು. ನೈವೇದ್ಯಕ್ಕೆ ಲಡ್ಡು ಅಥವಾ ಮೋದಕ ಇದ್ದರೆ ಬಹಳ ಉತ್ತಮ. ಈ ಎರಡು ವಸ್ತುಗಳು ಗಣೇಶನಿಗೆ ಇಷ್ಟ. ಹಾಗೆಯೇ ದೇವರಿಗೆ ತುಪ್ಪದ ದೀಪ ಹಚ್ಚಿ, ಗಣೇಶ ಸ್ತುತಿ ಪಠಿಸಿ ಆರತಿ ಮಾಡಿ. ಅಲ್ಲದೇ ಈ ದಿನ ಪೂರ್ತಿ ಉಪವಾಸ ಇದ್ದು, ರಾತ್ರಿ ಚಂದ್ರ ದರ್ಶನ ಮಾಡಿ ಆಹಾರ ಸೇವಿಸಿ.

    Continue Reading

    LATEST NEWS

    Trending