DAKSHINA KANNADA
ವಶಕ್ಕೆ ಪಡೆದ ಐಷಾರಾಮಿ ಕಾರುಗಳ ಮಾರಾಟ ಪ್ರಕರಣ; ವಿಶೇಷ ತನಿಖಾ ತಂಡ ರಚಿಸಲು ಡಿವೈಎಫ್ಐ ಆಗ್ರಹ..!
ವಶಕ್ಕೆ ಪಡೆದ ಐಷಾರಾಮಿ ಕಾರುಗಳ ಮಾರಾಟ ಪ್ರಕರಣ; ವಿಶೇಷ ತನಿಖಾ ತಂಡ ರಚಿಸಲು ಡಿವೈಎಫ್ಐ ಆಗ್ರಹ..!
Sale of luxury cars seized; DYFI demands to create a special investigation team..
ಮಂಗಳೂರು: ಮಂಗಳೂರು ಕಮೀಷನರೇಟ್ ಅಧೀನದ ಸಿಸಿಬಿ ಪೊಲೀಸರು ವಂಚನೆ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಆರೋಪಿಗಳ ಐಷಾರಾಮಿ ಕಾರುಗಳನ್ನು ಹಿರಿಯ ಅಧಿಕಾರಿಗಳು ಶಾಮೀಲಾಗಿ ಮಾರಾಟ ಮಾಡಿರುವ ಆಘಾತಕಾರಿ ಪ್ರಕರಣ ವರದಿಯಾಗಿದೆ.
ಅಂದಿನ ಪೊಲೀಸ್ ಕಮೀಷನರ್ ವಿಕಾಸ್ ಕುಮಾರ್, ನಗರದ ಎಸಿಪಿ ಈ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿರುವುದರಿಂದ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದ ರಿಯಲ್ ಎಸ್ಟೇಟ್, ಹಣ ದ್ವಿಗುಣ ಪ್ರಕರಣದ ಆರೋಪಿಗಳಿಗೆ ಸೇರಿದ ಬಿಎಮ್ ಡಬ್ಲ್ಯೂ, ಜಾಗ್ವಾರ್ ಸಹಿತ ಮೂರು ಐಶಾರಾಮಿ ಕಾರುಗಳನ್ನು ಪೊಲೀಸರು ಮಾರಾಟ ಮಾಡಿರುವ ಪ್ರಕರಣವನ್ನು ಮಂಗಳೂರು ನಗರದ ನೂತನ ಪೊಲೀಸ್ ಕಮೀಷನರ್ ಬಯಲಿಗೆಳಿದಿದ್ದಾರೆ.
ತನಿಖೆಗೂ ಆದೇಶಿಸಿದ್ದಾರೆ. ಈ ಕುರಿತು ಕಾನೂನು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾ ನಿರೀಕ್ಷಕರು ವರದಿ ಕೇಳಿರುವ ಕುರಿತು ಸುದ್ದಿಯಾಗಿದೆ. ಇದು ಅತ್ಯಂತ ಆಘಾತಕಾರಿ ಘಟನೆಯಾಗಿದ್ದು, ಜನಸಾಮಾನ್ಯರು ಪೊಲೀಸ್ ಇಲಾಖೆಯ ಮೇಲೆ ನಂಬಿಕೆ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣಗೊಂಡಿದೆ.
ಮಂಗಳೂರಿನಿಂದ ತಿಂಗಳ ಹಿಂದೆಯಷ್ಟೆ ವರ್ಗಾವಣೆಗೊಂಡಿರುವ ಆಗಿನ ಕಮೀಷನರ್ ವಿಕಾಸ್ ಕುಮಾರ್ ಮೇಲೆ ಇದೊಂದೆ ಪ್ರಕರಣ ಅಲ್ಲದೆ ಭ್ರಷ್ಟಾಚಾರದಲ್ಲಿ ಸೆಟಲ್ ಮೆಂಟ್ ಹೆಸರಿನಲ್ಲಿ ಹಣ ಸುಲಿಗೆಯ ಹಲವು ಗಂಭೀರ ಆರೋಪಗಳು ಕೇಳಿಬಂದಿತ್ತು.
ಕ್ರಿಕೆಟ್ ಬೆಟ್ಟಿಂಗ್ ದಂಧೆಯ ಹಳೆಯ ಆರೋಪಿಗಳಿಂದ, ದಂಧೆ ನಿರತರಿಂದ ಅಪಾರ ಪ್ರಮಾಣದ ಹಣ ವಸೂಲಿ ಮಾಡಿರುವ, ಪ್ರಕರಣಗಳನ್ನು ಮುಚ್ಚಿ ಹಾಕಿರುವ ವದಂತಿಗಳು ನಗರದಲ್ಲಿ ಹರಿದಾಡಿದ್ದವು.
ಸಿಸಿಬಿಯನ್ನು ಮುಂದಿಟ್ಟು ಇಂತಹ ಹಲವು ಅಕ್ರಮ ಡೀಲಿಂಗ್ ನಡೆಸಿರುವ ಅನುಮಾನಗಳು ಈಗ ಎಲ್ಲೆಡೆ ಹರಿದಾಡುತ್ತಿದೆ. ಇದು ಪೊಲೀಸ್ ಇಲಾಖೆಯ ವೃತ್ತಿಪರತೆಗೆ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ.
ಈಗಿನ ಕಮೀಷನರ್ ಶಶಿಕುಮಾರ್ ಪ್ರಕರಣದ ತನಿಖೆಗೆ ಆದೇಶಿಸಿ ಜನರಲ್ಲಿ ಭರವಸೆ ಹುಟ್ಟಿಸಿದರೂ, ಈ ಪ್ರಕರಣದಲ್ಲಿ ಐಜಿಪಿ ದರ್ಜೆಯ ಐಪಿಎಸ್ ಅಧಿಕಾರಿಯ ಹೆಸರಿರುವುದರಿಂದ, ರಾಜಕೀಯ ನಂಟಿನ ಅನುಮಾನಗಳೂ ವ್ಯಕ್ತವಾಗಿರುವುದರಿಂದ ಪಾರದರ್ಶಕ ತನಿಖೆಗಾಗಿ ಪ್ರಕರಣವನ್ನು ದಕ್ಷ ಅಧಿಕಾರಿಗಳುಳ್ಳ ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರಿಸಬೇಕು ಎಂದು ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ.
ರಾಜಕೀಯ ಪ್ರಭಾವ ಬಳಸಿ ಈಗಿನ ಕಮೀಷನರ್ ಶಶಿ ಕುಮಾರ್ ರ ಕೈಗಳನ್ನು ಕಟ್ಟಿಹಾಕಿ, ಪ್ರಕರಣವನ್ನು ಸರಕಾರ ಮುಚ್ಚಿ ಹಾಕಲು ಯತ್ನಿಸಿದರೆ ನಾಗರಿಕರನ್ನು ಸಂಘಟಿಸಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಡಿವೈಎಫ್ ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಎಚ್ಚರಿಸಿದ್ದಾರೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!
ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.
ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.
ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.
ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.
ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ