Connect with us

    FILM

    ಸಲ್ಮಾನ್ ಖಾನ್ ಗೆ ಜೀ*ವ ಬೆ*ದರಿಕೆ; ತರಕಾರಿ ಮಾರುವ ಯುವಕನ ಬಂಧನ

    Published

    on

    ಮಂಗಳೂರು/ ಮುಂಬೈ : ಸಲ್ಮಾನ್ ಖಾನ್ ಗೆ ಜೀ*ವ ಬೆದರಿ*ಕೆಯೊಡ್ಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ.

    ಜಾರ್ಖಂಡ್ ನ ಜೆಮ್ ಶೆಡ್ ಪುರ ಮೂಲದ ತರಕಾರಿ ಮಾರಾಟಗಾರ ಶೇಖ್ ಹುಸೇನ್ ಮೌಸೀನ್(24) ಬಂಧಿತ ಆರೋಪಿ.  ನಗರ ಸಂಚಾರ ನಿಯಂತ್ರಣ ಕೊಠಡಿಯ ವಾಟ್ಸ್ ಆ್ಯಪ್ ಸಹಾಯವಾಣಿಗೆ ಕಳೆದ ವಾರ 5 ಕೋಟಿ ಬೇಡಿಕೆಯ ಬೆದರಿಕೆ ಸಂದೇಶ ಬಂದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಅನೇಕ ತಂಡ ರಚಿಸಿ ವಿವಿಧ ರಾಜ್ಯಗಳಲ್ಲೂ ಶೋಧ ಕಾರ್ಯಾಚರಣೆ ನಡೆಸಿದ್ದರು.

    ಅಲ್ಲದೆ, ಸಂಚಾರ ಪೊಲೀಸರ ವಾಟ್ಸ್ ಆ್ಯಪ್ ಸಹಾಯವಾಣಿಗೆ ಸೋಮವಾರ ಕ್ಷಮೆಯಾಚನೆಯ ಸಂದೇಶ ಬಂದಿದೆ. ಬೆದರಿಕೆ ಸಂದೇಶ ಕಳುಹಿಸಿದ್ದ ಮೊಬೈಲ್ ಫೋನ್ ಸಂಖ್ಯೆಯಿಂದಲೇ ಕ್ಷಮೆಯಾಚನೆಯ ಸಂದೇಶ ಬಂದಿದೆ ಎಂದು ಪೊಲೀಸರು ತಿಳಿಸಿದ್ದರು.

    ಸಲ್ಮಾನ್ ಖಾನ್ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ್ದ ತಂಡದ ಶಾರ್ಪ್ ಶೂಟರ್ ಒಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದರು.  ಹರಿಯಾಣದ ಸುಖ್ಬೀರ್ ಸಿಂಗ್  ಎಂಬಾತನನ್ನು ಬಂಧಿಸಲಾಗಿತ್ತು.

    ಇದನ್ನೂ ಓದಿ :ಕಲರ್ಸ್​ ಶೋಗೆ ಮರಳಿದ ಲಾಯರ್ ಜಗದೀಶ್; ಫ್ಯಾನ್ಸ್​ಗೆ ಗುಡ್ ನ್ಯೂಸ್

    ಸಲ್ಮಾನ್ ಖಾನ್ ಖಾನ್ ಗೆ ಈ ಹಿಂದೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನಿಂದ ಬೆದರಿಕೆ ಕರೆಗಳು ಬಂದಿದ್ದು, ಸದ್ಯ ಸಲ್ಮಾನ್ ಖಾನ್ ಗೆ ಭದ್ರತೆ ಒದಗಿಸಲಾಗಿದೆ. ಅಲ್ಲದೇ, ಸಲ್ಮಾನ್ ಖಾನ್ ಹೊಸ ಬುಲೆಟ್ ಪ್ರೂಫ್ ಕಾರನ್ನೂ ಖರೀದಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    BIG BOSS

    ಬಿಗ್ ಬಾಸ್ ಮನೆಯ ರಾಜಕೀಯ ವಿಚಾರಿಸಲು ನ್ಯೂಸ್ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

    Published

    on

    ಬೆಂಗಳೂರು: ಕಲರ್ಸ್ ಕನ್ನಡದಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಸೀಸನ್ 11 ಬರೀ ಗಲಾಟೆಯಲ್ಲಿ ಮುಂದುವರೆದಿದೆ. ಬಿಗ್ ಬಾಸ್ ನಲ್ಲಿ ಇತ್ತೀಚೆಗೆ ವೈಲ್ಡ್ ಕಾರ್ಡ್ ಎಂಟ್ರಿಯಲ್ಲಿ ಹನುಮಂತು ಅವರು ಆಗಮಿಸಿದ್ದರು. ಇದೀಗ ಮತ್ತೊಬ್ಬರು ಬಿಗ್ ಬಾಸ್ ಮನೆಗೆ ಬಂದಿದ್ದಾರೆ.

    ಬಿಗ್ ಬಾಸ್ ನಲ್ಲಿ ಈ ವಾರ ಸ್ಪರ್ಧಿಗಳಿಗೆ ರಾಜಕೀಯದ ಟಾಸ್ಕ್ ನೀಡಿದ್ದಾರೆ. ಅದರಂತೆ ಎರಡು ಪಕ್ಷಗಳನ್ನು ರಚಿಸಿ ಕೆಲವು ಟಾಸ್ಕ್ ನೀಡಿದ್ದಾರೆ. ಈ ನಡುವೆ ಬಿಗ್ ಬಾಸ್ ನಲ್ಲಿ ನಡೆಯುತ್ತಿರುವ ರಾಜಕೀಯ ವಿಚಾರಿಸಿಕೊಳ್ಳಲು ಬಿಗ್ ಬಾಸ್ ನ್ಯೂಸ್ ಆ್ಯಂಕರ್ ರಾಧಾ ಹಿರೇಗೌಡರ್ ಅವರನ್ನು ಬಿಗ್ ಬಾಸ್ ಮನೆಗೆ ಕಳುಹಿಸಿದೆ. ಬಿಗ್ ಬಾಸ್ ಮನೆಯ ರಾಜಕೀಯ ಆಟವನ್ನು ಪ್ರಶ್ನೆ ಮಾಡೋಕೆ ಬರ್ತಾ ಇದ್ದಾರೆ ರಾಧಾ ಹಿರೇಗೌಡರ್. ನೀವು ಬಂದಿದ್ದೀರಿ ಅಂದರೆ ನಮಗೆ ‌ನೀರು ಕುಡಿಸುತ್ತೀರಿ. ನೀವು ಸ್ಪರ್ಧಿಯಾಗಿ ಬಂದಿದ್ದೀರೋ ಹೇಗೋ ಅಂಥ ಚೈತ್ರಾ ರಾಧಾ ಅವರನ್ನು ಪ್ರಶ್ನಿಸಿದ್ದಾರೆ.

    ನನಗೆ ಪಕ್ಷ ಎಲ್ಲ ಹೊಸತಲ್ಲ. ಭಾಷಣ ರಾಜಕೀಯ. ಐಶ್ವರ್ಯಾ ಅವರೇ ಎದೆ ಮುಟ್ಟಿಕೊಂಡು ಹೇಳಿ ನಿಮ್ಮ ಪಕ್ಷದಲ್ಲಿ ಎಲ್ಲರೂ ಪ್ರಾಮಾಣಿಕರಾಗಿದ್ದಾರಾ? ಏನು ಕೊಡ್ತೀರಾ ಜನರಿಗೆ ಎಂದು ಪ್ರಶ್ನಿಸಿದ್ದಾರೆ‌. ಅದಕ್ಕೆ ತಿವಿಕ್ರಮ್ ಕಾಫಿ ಕೊಡುತ್ತೇವೆ ಅಂದಿದ್ದಾರೆ. ಐಶ್ವರ್ಯಾ ಅವರು ಮನರಂಜನೆ ಕೊಡುತ್ತೇವೆ ಅಂದಿದ್ದಾರೆ. ಅದಕ್ಕೆ ರಾಧಾ ಅವರು ಅದನ್ನು ನಿವೇನು ಕೊಡೋದು ಬಿಗ್ ಬಾಸ್ ಕೊಡುತ್ತಾರೆ. ನನ್ನನ್ನು ನಗಿಸುತ್ತೀರಾ ನಗಿಸಿ ಎಂದು ಮರು ಪ್ರಶ್ನಿಸಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ. ರಾಧಾ ಹಿರೇಗೌಡರ್ ಸ್ಪರ್ಧಿಯಾಗಿ ಬಂದಿದ್ದಾರೋ ಅಥವಾ ಗೆಸ್ಟ್ ಆಗಿ ಬಂದಿದ್ದಾರಾ ಎನ್ನುವುದನ್ನು ಕಾದು‌ ನೋಡಬೇಕಿದೆ.

    Continue Reading

    FILM

    ತುಳು ಚಿತ್ರರಂಗಕ್ಕೆ ಕಾಲಿಟ್ಟ ಗಣೇಶ್ ಪತ್ನಿ ಶಿಲ್ಪಾ ಗಣೇಶ್

    Published

    on

    ಗೋಲ್ಡನ್ ಸ್ಟಾರ್ ಗಣೇಶ್ ಕನ್ನಡ ಚಿತ್ರರಂಗದ ಜನಪ್ರಿಯ ನಟ. ಈಗ ಅವರ ಪತ್ನಿ ಶಿಲ್ಪಾ ಗಣೇಶ್ ತುಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಈ ಹಿಂದೆ ಗಣೇಶ್ ನಟನೆಯ ಕೆಲವು ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಶಿಲ್ಪಾ ಗಣೇಶ್ ಈಗ ಮೊದಲ ಬಾರಿಗೆ ತುಳು ಸಿನಿಮಾಣಕ್ಕೆ ಕೈ ಹಾಕಿದ್ದಾರೆ.

    ಸ್ವತಃ ಮಂಗಳೂರು ಮೂಲದವರಾದ ಶಿಲ್ಪಾ ಗಣೇಶ್ ತವರಿನಲ್ಲಿ ಸಿನಿಮಾ ಮಾಡುವ ಸಾಹಸ ಮಾಡುತ್ತಿದ್ದಾರೆ. ತುಳು ಸಿನಿಮಾಗಳಿಗೆ ಕಳೆದ ಕೆಲ ವರ್ಷಗಳಲ್ಲಿ ಮಾರುಕಟ್ಟೆ ದೊಡ್ಡದಾಗಿದ್ದು, ಅದರ ಲಾಭ ಪಡೆಯುವ ಆಲೋಚನೆ ಶಿಲ್ಪಾ ಗಣೇಶ್ ಅವರದ್ದು. ಉತ್ತಮ ಬಜೆಟ್​ನಲ್ಲಿ ಗುಣಮಟ್ಟದ ಸಿನಿಮಾ ನಿರ್ಮಾಣ ಮಾಡುವ ಉದ್ದೇಶದಿಂದ ಪ್ರಾಜೆಕ್ಟ್​ಗೆ ಕೈ ಹಾಕಿದ್ದು, ಸಿನಿಮಾವನ್ನು ಸಂದೀಪ್ ಬೆದ್ರ ನಿರ್ದೇಶನ ಮಾಡಲಿದ್ದಾರೆ. ಸಿನಿಮಾಕ್ಕೆ ಕತೆ ಹಾಗೂ ಚಿತ್ರಕತೆಯನ್ನು ಮೋಹನ್ ಭಟ್ಕಳ್ ಬರೆದಿದ್ದಾರೆ. ಜನಪ್ರಿಯ ಕ್ಯಾಮೆರಾಮನ್ ಹಾಗೂ ನಿರ್ದೇಶಕ ಸಂತೋಶ್ ರೈ ಪತಾಜೆ ಅವರು ಈ ಸಿನಿಮಾಕ್ಕೆ ಕ್ಯಾಮೆರಾ ಕೆಲಸ ಮಾಡಲಿದ್ದಾರೆ. ಗಟ್ಟಿಯಾದ ತಂತ್ರಜ್ಞರನ್ನೇ ಶಿಲ್ಪಾ ಗಣೇಶ್ ಅವರು ತಮ್ಮ ಮೊದಲ ತುಳು ಸಿನಿಮಾಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ.

    ಸಿನಿಮಾದ ನಾಯಕನಾಗಿ ಕರಾವಳಿ ಭಾಗದ ಬಿಜೆಪಿ ಹಾಗೂ ಬಿಲ್ಲವ ಸಮುದಾಯದ ಮುಖಂಡರೂ ಆಗಿರುವ ಹರಿಕೃಷ್ಣ ಬಂಟ್ವಾಳ ಅವರ ಪುತ್ರ ನಿತ್ಯ ಪ್ರಕಾಶ್ ಬಂಟ್ವಾಳ ನಟಿಸಲಿದ್ದಾರೆ. ನಾಯಕಿಯಾಗಿ ಹೊಸ ಮುಖವನ್ನು ಪರಿಚಯ ಮಾಡುವ ಉಮೇದಿನಲ್ಲಿದ್ದಾರೆ ಶಿಲ್ಪಾ ಗಣೇಶ್. ಸಿನಿಮಾದ ಕತೆ, ಚಿತ್ರಕತೆ, ತಂತ್ರಜ್ಞರು ಅಂತಿಮವಾಗಿದ್ದು, ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಚಾಲ್ತಿಯಲ್ಲಿವೆ. ಸಿನಿಮಾದ ಚಿತ್ರೀಕರಣ ಡಿಸೆಂಬರ್ ತಿಂಗಳಲ್ಲಿ ಪ್ರಾರಂಭ ಆಗಲಿದ್ದು, ನಟ ಗೋಲ್ಡನ್ ಸ್ಟಾರ್ ಗಣೇಶ್ ಅತಿಥಿ ಪಾತ್ರದಲ್ಲಿ ನಟಿಸುವ ಸಾಧ್ಯತೆಯೂ ಇದೆ.

    ಸಿನಿಮಾ ಕೌಟುಂಬಿಕ ಕತೆಯನ್ನು ಒಳಗೊಂಡಿದ್ದು, ಹಾಸ್ಯ ಪ್ರಧಾನ ಆಗಿರಲಿದೆ. ಮಂಗಳೂರು, ಉಡುಪಿ, ಮೂಡುಬಿದಿರೆ, ಬಂಟ್ವಾಳ ಸೇರಿದಂತೆ ಕರಾವಳಿ ಭಾಗದಲ್ಲಿ ಸಿನಿಮಾದ ಚಿತ್ರೀಕರಣ ನಡೆಯಲಿದೆ. ಚಿತ್ರದ ಹಾಡುಗಳನ್ನು ಕೆಲವು ಬೇರೆ ಲೊಕೇಶನ್​ಗಳಲ್ಲಿ ಚಿತ್ರೀಕರಣ ಮಾಡುವ ಉದ್ದೇಶ ಇದೆ ಎಂದು ನಿರ್ದೇಶಕ ಸಂದೀಪ್ ಹೇಳಿದ್ದಾರೆ.

    ಶಿಲ್ಪಾ ಗಣೇಶ್ ಮೂಲತಃ ಕರಾವಳಿಯವರು. ಉಡುಪಿ ಬಳಿಯ ಬಾರ್ಕೂರು ಅವರ ಹುಟ್ಟೂರು. ಹಾಗಾಗಿ ತಮ್ಮ ತವರು ಭಾಷೆಯಲ್ಲಿ ಸಿನಿಮಾ ನಿರ್ಮಾಣ ಮಾಡಬೇಕು ಎಂಬ ಆಸೆ ಮೊದಲಿನಿಂದಲೂ ಶಿಲ್ಪಾ ಅವರಿಗೆ ಇತ್ತಂತೆ ಹಾಗಾಗಿ ಈಗ ತುಳು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.

    Continue Reading

    BIG BOSS

    ಕಲರ್ಸ್​ ಶೋಗೆ ಮರಳಿದ ಲಾಯರ್ ಜಗದೀಶ್; ಫ್ಯಾನ್ಸ್​ಗೆ ಗುಡ್ ನ್ಯೂಸ್

    Published

    on

    ಲಾಯರ್ ಜಗದೀಶ್ ಅವರು ಮಹಿಳೆಯರ ವಿರುದ್ಧ ನಿಂದನೀಯ ಶಬ್ದಗಳ ಬಳಕೆ ಮಾಡಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಈ ಕಾರಣದಿಂದಲೇ ಅವರನ್ನು ಬಿಗ್ ಬಾಸ್​ನಿಂದ ಎಲಿಮಿನೇಟ್ ಕೂಡ ಮಾಡಲಾಯಿತು. ಅವರನ್ನು ಮರಳಿ ಕರೆಸಬೇಕು ಎನ್ನುವ ಆಗ್ರಹ ಬಿಗ್ ಬಾಸ್​ನಲ್ಲಿ ಜೋರಾಗಿದೆ. ಹೀಗಿರುವಾಗಲೇ ಜಗದೀಶ್ ಅವರು ಕಲರ್ಸ್​ ಕನ್ನಡದ ಶೋಗೆ ಅತಿಥಿಯಾಗಿ ಬಂದಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

    ಜಗದೀಶ್ ಬಿಗ್ ಬಾಸ್​ನಲ್ಲಿ ಎಲ್ಲಾ ಸ್ಪರ್ಧಿಗಳಿಗೆ ನಡುಕ ಹುಟ್ಟಿಸಿದ್ದರು. ಈ ಕಾರಣದಿಂದಲೇ 1 Vs 15 ಎಂಬ ವಾತಾವರಣ ಬಿಗ್ ಬಾಸ್ ಮನೆಯಲ್ಲಿ ಸೃಷ್ಟಿ ಆಗಿತ್ತು. ಅವರನ್ನು ಹೊರಕ್ಕೆ ಹಾಕಬೇಕು ಎಂದು ಅನೇಕರು ಪ್ರಯತ್ನಪಟ್ಟರು. ಅವರು ನಿಂದನೀಯ ಶಬ್ದಗಳ ಬಳಕೆ ಮಾಡಿ ಎಲಿಮಿನೇಟ್ ಆಗಿದ್ದಾರೆ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ. ಈಗ ಅವರನ್ನು ಕರೆಸಬೇಕು ಎಂಬ ಕೂಗು ಜೋರಾಗಿದೆ. ಹೀಗಿರುವಾಗಲೇ ಅವರು ಕಲರ್ಸ್​ನ ‘ಸಚಿರುಚಿ ಸೀಸನ್ 3’ ಶೋಗೆ ಶೆಫ್ ಆಗಿ ಬಂದಿದ್ದಾರೆ.

    ಜಗದೀಶ್ ಅವರು ಅಡುಗೆ ಮಾಡುವುದನ್ನು ತೋರಿಸಲಾಗಿದೆ. ಆ್ಯಂಕರ್ ಜಾಹ್ನವಿ ಅವರು ಜಗದೀಶ್​ಗೆ ಒಂದಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ. ಈ ಪ್ರಶ್ನೆಗಳಲ್ಲಿ ಹೈಲೈಟ್ ಆಗಿದ್ದು ‘ಹಂಸ ಮೇಲೆ ನಿಮಗೆ ಕ್ರಶ್’ ಆಗಿತ್ತಾ ಎಂಬುದು. ಇದಕ್ಕೆ ಜಗದೀಶ್ ಅವರು ನಕ್ಕಿದ್ದಾರೆ. ಜಗದೀಶ್ ಅವರು ನಗುವಿನಲ್ಲೇ ಜನರಿಗೆ ಉತ್ತರ ಸಿಕ್ಕಿದೆ.

    ಬಿಗ್ ಬಾಸ್ ಮನೆಯಲ್ಲಿರುವ ಹಂಸ ಹಾಗೂ ಜಗದೀಶ್ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು. ಪದೇ ಪದೇ ಹಂಸ ಅವರನ್ನು ಜಗದೀಶ್ ಕಾಡಿದ್ದರು. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕವೂ ಜಗದೀಶ್​ಗೆ ಈ ಕುರಿತು ಪ್ರಶ್ನೆಗಳು ಎದುರಾಗುತ್ತಿವೆ. ‘ಬಿಗ್ ಬಾಸ್ ಪಾಲಿಗೆ ಜಗದೀಶ್ ಮುಗಿದ ಅಧ್ಯಾಯ. ಹಾಗೆ ಕರೆಸೋದಾದರೆ ಹುಚ್ಚ ವೆಂಕಟ್ ಅವರನ್ನೂ ಕರೆಸಬೇಕಾಗುತ್ತದೆ’ ಎಂದು ಸುದೀಪ್ ಹೇಳಿದ್ದರು. ಈ ಮೂಲಕ ಜಗದೀಶ್ ಅವರನ್ನು ಮರಳಿ ಶೋಗೆ ಕರೆಸೋದೇ ಇಲ್ಲ ಎಂದು ಪರೋಕ್ಷವಾಗಿ ಹೇಳಿದ್ದರು.

    Continue Reading

    LATEST NEWS

    Trending