Connect with us

FILM

ಸಮಂತ ಇನ್ಸ್ಟಾ ಫೀಡ್ ನಲ್ಲಿ ಕಾಣಿಸಿಕೊಂಡ ‘ಗಂಡ’ನ ಫೋಟೋ

Published

on

ಆಂಧ್ರ ಪ್ರದೇಶ: ಸಮಂತ ರುತ್ ಪ್ರಭು ಅವರ ಇನ್ಸ್ಟಾ ಗ್ರಾಮ್ ಫೀಡ್ ನಲ್ಲಿ ಮತ್ತೆ ನಾಗಚೈತನ್ಯ ಜೊತೆಗಿನ ಹಳೆಯ ಫೋಟೋಗಳು ಕಾಣಿಸಿಕೊಂಡಿದೆ. ಮಾಜಿ ದಂಪತಿ ಮತ್ತೆ ಒಂದಾಗಬಹುದು ಎಂಬ ಸಂತೋಷದಲ್ಲಿ ಸಮಂತ ಹಾಗೂ ನಾಗಚೈತನ್ಯ ಫ್ಯಾನ್ಸ್ ಕಾಯ್ತಿದ್ದಾರೆ. 
ನಾಗ ಚೈತನ್ಯ ಹಾಗೂ ಸಮಂತ ಅವರದ್ದು ಹಲವು ವರ್ಷಗಳ ಪ್ರೀತಿ. ಪ್ರೀತಿಸಿ ಮದುವೆ ಆದ ಸಮಂತ ಏಕಾಏಕಿ ವಿಚ್ಛೇದನ ಘೋಷಿಸಿ ಶಾಕ್ ನೀಡಿದ್ರು.
ಈಗ ಮತ್ತೆ ಸಮಂತಾ ರುತ್​ ಪ್ರಭು ಹಾಗೂ ನಾಗ ಚೈತನ್ಯ ಅವರು ಒಂದಾಗುತ್ತಾರಾ ಎಂಬ ಅನುಮಾನ ಮೂಡಿದೆ.
ಕಳೆದ ವರ್ಷ ತಮ್ಮ ದಾಂಪತ್ಯ ಜೀವನಕ್ಕೆ ಫುಲ್‌ಸ್ಟಾಪ್‌ ಇಡುತ್ತಿದ್ದಂತೆ ಸಮಂತಾ ಅವರು ನಾಗ ಚೈತನ್ಯ ಅವರೊಂದಿಗಿನ ಬಹುತೇಕ ಎಲ್ಲಾ ಚಿತ್ರಗಳನ್ನು ತೆಗೆದುಹಾಕಿದ್ದರು.
ಆದರೀಗ ಮದುವೆಯ ಫೋಟೊವೊಂದು ಏಕಾಏಕಿ ಖಾತೆಯಲ್ಲಿ ಕಾಣಿಸತೊಡಗಿದೆ.
ಡಿವೋರ್ಸ್​ ಪಡೆದ ಬಳಿಕ ಸಮಂತಾ ಅವರು ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುವ ಶೈಲಿ ಕೂಡ ಬದಲಾಯಿತು. ಅನೇಕ ದೇಶಗಳಿಗೆ ಅವರು ಭೇಟಿ ನೀಡಿ ಬೋಲ್ಡ್​ ಪಾತ್ರಗಳನ್ನು ಆಯ್ಕೆ ಮಾಡಿಕೊಂಡು ನಟಿಸಿದರು.
ಅದರ ನಡುವೆ ಅವರಿಗೆ ಆರೋಗ್ಯ ಕೂಡ ಕೈ ಕೊಟ್ಟಿತ್ತು. ಅದರಿಂದ ಹಲವು ತಿಂಗಳ ಕಾಲ ಅವರು ಸಿನಿಮಾ ಕೆಲಸಗಳಿಂದ ದೂರ ಉಳಿಯಬೇಕಾಯಿತು. ಅತ್ತ, ನಾಗ ಚೈತನ್ಯ ಅವರು ನಟಿ ಶೋಭಿತಾ ಜೊತೆ ಡೇಟಿಂಗ್ ಮಾಡಲು ಆರಂಭಿಸಿದರು.
ಈಗ ಸಮಂತ ಇನ್ಸ್ಟಾ ದಲ್ಲಿ ಮದುವೆ ಫೋಟೋ ಕಾಣಿಸಿದ್ದು, ಮತ್ತೆ ಒಂದಾಗ್ತಾರ ಎಂಬ ಸಂಶಯ ಕಾಡ್ತಿದೆ. ಬೇಗ ಒಂದಾದ್ರೆ ಸ್ಯಾಮ್-ನಾಗ್ ಫ್ಯಾನ್ಸ್ ಗಂತೂ ಹಬ್ಬವೂ ಹಬ್ಬ.

 

Click to comment

Leave a Reply

Your email address will not be published. Required fields are marked *

FILM

ಕನ್ನಡ ಸಿನೆಮಾ ನಟನ ಮೇಲೆ ಮಾರಣಾಂತಿಕ ಹಲ್ಲೆ..! ‘ನ್ಯಾಯ ಬೇಕು’ ಎಂದು ವೀಡಿಯೋ ಮಾಡಿದ ನಟ

Published

on

ಬೆಂಗಳೂರು: ಕನ್ನಡದ ಹಲವು ಸಿನೆಮಾಗಳಲ್ಲಿ ನಟಿಸಿರುವ ಚೇತನ್ ರವರ ಮೇಲೆ ಮಾರಾಣಾಂತಿಕ ಹಲ್ಲೆ ನಡೆದಿದೆ.  ಬೆಂಗಳೂರಿನ ಕಗ್ಗಲಿಪುರದಲ್ಲಿ ಈ ಕೃತ್ಯ ನಡೆದಿದೆ.  ಸುಮಾರು 20 ಜನರ ತಂಡದಿಂದ ಚೇತನ್ ರವರ ಮೇಲೆ ಅಟ್ಯಾಕ್‌ ಆಗಿದ್ದು ರಕ್ತ ಸುರಿಯುವ ಹಾಗೆ ಹಲ್ಲೆ ನಡೆಸಿದ್ದಾರೆ. ತಾಯಂದಿರ ದಿನದಂದೆ ಈ ಘಟನೆ ನಡದಿದ್ದು ಚೇನತ ಬೇಸರ ವ್ಯಕ್ತಪಡಿಸಿದ್ದಾರೆ.

chethan halle

ನಿನ್ನೆ ತಾಯಂದಿರ ದಿನವಾಗಿದ್ದರಿಂದ ಚೇತನ್ ತಾಯಿ ಜೊತೆ ದೇವಸ್ಥಾನಕ್ಕೆ ಹೋಗಿ ಮರಳಿ ಬರುತ್ತಿದ್ದ ವೇಳೆ ಈ ಕೃತ್ಯ ನಡೆದಿದೆ. ಕಾರು ಅಡ್ಡ ಗಟ್ಟಿ ಸುಮಾರು 20 ಜನರ ಕಿಡಿಗೇಡಿಗಳ ತಂಡ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ‘ನನ್ನ ಕಾರಿಗೂ ಹಾನಿ ಮಾಡಿದ್ದಾರೆ. ಕಿಡಿಗೇಡಿಗಳು ಮದ್ಯ ಸೇವನೆ ಮಾಡಿದ್ದರು. ಇದು ನನ್ನ ಜೀವನದಲ್ಲಿ ನಡೆದಿರುವ ಅತೀ ಕೆಟ್ಟ ಘಟನೆ. ನನಗೆ ನ್ಯಾಯ ಸಿಗಬೇಕು ಎಂದು ನಟ ಚೇತನ್ ಹೇಳಿದ್ದಾರೆ.  ಸುಮಾರು 20 ಜನ ಸೇರಿಕೊಂಡು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅದರ ವಿಡಿಯೋ ಇದೆ. ಮೂಗು ಮುರಿದು ಹಾಕಿದ್ದಾರೆ. ಕಗ್ಗಲಿಪುರ ಪೊಲೀಸ್​ ಠಾಣೆ ಪಕ್ಕದಲ್ಲಿ ಪ್ರಥಮ ಚಿಕಿತ್ಸೆ ಪಡೆಯಲು ಬಂದಿದ್ದೇನೆ. ಈಗ ಮತ್ತೆ ಬಂದು ಕಾರು ಒಡೆದು ಹಾಕಿದ್ದಾರೆ. ಅವರು ತುಂಬ ಕೆಟ್ಟ ಜನ ಎಂದು ಚೇತನ್​ ಚಂದ್ರ ಹೇಳಿದ್ದಾರೆ.

ಅಪಘಾತದಲ್ಲಿ ಕನ್ನಡದ ನಟಿಯ ದುರಂತ ಸಾ*ವು..!

ಇನ್ನು ಹಲ್ಲೆಗೊಳಗಾದ ಚೇತನ್ ಪ್ರಥಮ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದು ಅಲ್ಲಿchetan_chanddrra ಇನ್ಸ್ಟಾಗ್ರಾಮ್‌ ಅಕೌಂಟ್‌ನಲ್ಲಿ ವೀಡಿಯೋ ಮಾಡಿ ತಮ್ಮ ಮೇಲೆ ನಡೆದಿರುವ ಹಲ್ಲೆಯ ಬಗ್ಗೆ ತಿಳಿಸಿದ್ದಾರೆ.

Continue Reading

FILM

ಅಪಘಾತದಲ್ಲಿ ಕನ್ನಡದ ನಟಿಯ ದುರಂತ ಸಾ*ವು..!

Published

on

ಅಂಧ್ರಪ್ರದೇಶ:  ಕಿರುತೆರೆ ನಟಿ ಪವಿತ್ರಾ ಜಯರಾಂ(35 ವರ್ಷ) ಅಪಘಾತದಲ್ಲಿ ಸಾ*ವಿಗೀಡಾಗಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ ಅಪಘಾತ ಸಂಭವಿಸಿದ್ದು ಪವಿತ್ರ ಸ್ಥಳದಲ್ಲೇ ಮೃ*ತಪಟ್ಟಿದ್ದಾರೆ. ಮೂಲತಃ ಕನ್ನಡಿಗರಾದ ಪವಿತ್ರ ಜಯರಾಂ, ತೆಲುಗಿನ ‘ತ್ರಿನಯನಿ’ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ‘ರೋಬೋ ಫ್ಯಾಮಿಲಿ’ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದರು. ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು.

pavithra jayaram

ನಟಿ ಪವಿತ್ರಾ ಅವರು ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದರು. ಇನ್ನು ತೆಲುಗಿನ ‘ತ್ರಿನಯನಿ’ ಧಾರಾವಾಹಿ ಮೂಲಕ ತೆಲುಗರ ಮನೆಮಾತಾಗಿದ್ದರು.  ಈ ಧಾರಾವಾಹಿ ಕನ್ನಡದಲ್ಲೂ ಪ್ರಸಾರಗೊಳ್ಳುತ್ತಿದ್ದು ಇಲ್ಲಿಯೂ ಸಾಕಷ್ಟು ಜನಪ್ರಿಯತೆಯನ್ನು ಪಡೆದಿದ್ದರು.

ಪುಷ್ಟಾ-2 ರಿಲೀಸ್ ಕ್ರೇಜ್‌ನಲ್ಲಿರುವಾಗಲೇ ‘ಅಲ್ಲು ಅರ್ಜುನ್’ ವಿರುದ್ಧ ಪೊಲೀಸ್ ಕೇಸ್.!

ಪವಿತ್ರ ಜಯರಾಂ ಇಂದು(ಮೇ.12) ಮುಂಜಾನೆ ಕಾರು ಅಪಘಾತದಲ್ಲಿ ಸಾ*ವಿಗೀಡಾಗಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಸಮೀಪ ಮೆಹಬೂಬ್ ನಗರದಲ್ಲಿ ನಡೆದ ಕಾರು ಅಪಘಾತದಲ್ಲಿ ನಟಿ ಪವಿತ್ರಾ ಸ್ಥಳದಲ್ಲೇ ಮ*ರಣ ಹೊಂದಿದ್ದಾರೆ. ಪವಿತ್ರ ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಪವಿತ್ರ ಸ್ಥಳದಲ್ಲೇ ಅಸುನೀಗಿದ್ದಾರೆ. ಶೂಟಿಂಗ್‌ ಎಂದು ಹೋಗಿದ್ದವರು ಮರಳಿ ಬಾರದ ಲೋಕ್ಕಕೆ ಹೊರಟಿದ್ದು ಇವರ ದುರಂತ ಸಾವಿಗೆ ಎಲ್ಲರೂ ಕಂಬನಿ ಮಿಡಿದಿದ್ದಾರೆ.

ನಟಿ ಪವಿತ್ರಾ ಜಯರಾಂ ಸಾವಿಗೆ ಕನ್ನಡ ಹಾಗೂ ತೆಲುಗಿನ ಕಿರುತೆರೆಯವರು ಸಂತಾಪ ಸೂಚಿಸಿದ್ದಾರೆ. ಈ ಅನಿರೀಕ್ಷಿತ ಸಾವಿನಿಂದ ಕಂಗಾಲಾಗಿರುವ ಕುಟುಂಬದ ಸದಸ್ಯರನ್ನು ನೆನೆದು ಹಲವರು ಕಂಬನಿ ಮಿಡಿದಿದ್ದಾರೆ.

Continue Reading

FILM

‘ಪುಷ್ಪ-2 ‘ರಿಲೀಸ್ ಕ್ರೇಜ್‌ನಲ್ಲಿರುವಾಗಲೇ ‘ಅಲ್ಲು ಅರ್ಜುನ್’ ವಿರುದ್ಧ ಪೊಲೀಸ್ ಕೇಸ್.!

Published

on

ಆಂಧ್ರಪ್ರದೇಶ: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ‘ಪುಷ್ಪ-2 ದಿ ರೂಲ್’ ರಿಲೀಸ್‌ ಜೋಶ್‌ನಲ್ಲಿ ಇದ್ದಾರೆ. ಆದ್ರೆ ಇದೀಗ ಅವರಿಗೊಂದು ಬಿಗ್‌ ಶಾಕ್ ಎದುರಾಗಿದೆ. ಆಂಧ್ರ ಪೊಲೀಸರು ಅಲ್ಲು ಅರ್ಜುನ್ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ.

allu arjun

ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಅಲ್ಲು ಅರ್ಜುನ್ ತಮ್ಮ ಸ್ನೇಹಿತರ ಮನೆಗೆ ಭೇಟಿ ನೀಡಿದ್ದಾರೆ. ಪೊಲೀಸರ ಅನಮತಿ ಪಡೆಯದೆ ಸ್ನೇಹಿತ, ವೈಎಸ್​​ಆರ್​​ಸಿಪಿ ಶಾಸಕ ಶಿಲ್ಪಾ ರವಿಯವರ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಅಲ್ಲು ಅರ್ಜುನ್ ನೋಡಲು ಭಾರೀ ಮಟ್ಟದಲ್ಲಿ ಅಭಿಮಾನಿಗಳು ಸೇರಿದ್ದರು. ಇದರಿಂದ ಕಂಪ್ಲೀಟ್ ಟ್ರಾಫಿಕ್ ಜಾಮ್‌ ಉಂಟಾಗಿದ್ದು ಕೆಲಸಕ್ಕೆ ತೆರಳುವವರಿಗೆ ತೊಂದರೆ ಉಂಟಾಗಿದೆ ಎನ್ನಲಾಗಿದೆ.

ಟರ್ಕಿಯಲ್ಲಿ ‘ಬಿಗ್ ಬಾಸ್’ ಖ್ಯಾತಿಯ ದೀಪಿಕಾ ದಾಸ್

ಇನ್ನು ಮೇ.13ರಂದು ಚುನಾವಣೆ ನಡೆಯಲಿದೆ. ಇನ್ನೂ ಚುನಾವಣೆಗೆ ಒಂದೇ ದಿನ ಇರುವುದರಿಂದ ಚುನಾವಣೆ ಪ್ರಚಾರಕ್ಕಾಗಿ ನಂದ್ಯಾಳದಲ್ಲಿರುವ ಸ್ನೇಹಿತನ ಮನೆಗೆ ಬಂದಿದ್ದರು. ಆದರೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಅನುಮತಿ ಪಡೆಯದೆ ಮನೆಗೆ ಭೇಟಿ ನೀಡಿದ್ದಾರೆ. ಈ ಕುರಿತು ಅಲ್ಲು ಅರ್ಜುನ್ ಹಾಗೂ ಶಾಸಕ ಶಿಲ್ಪಾ ರವಿ ವಿರುದ್ಧ  ಟೂಟೌನ್ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

ರಿಲೀಸ್‌ಗೆ ಸಿದ್ಧವಾಗಿರುವ ‘ಪುಷ್ಪ-2’ 

ಇನ್ನು ಅಲ್ಲು ಅರ್ಜುನ್, ರಶ್ಮಿಕಾ ಮಂದಣ ಅಭಿನಯದ ಪುಷ್ಪ ಪಾರ್ಟ್-2 ಬಿಡುಗಡೆಗೆ ಸಿಧ್ದವಾಗಿದೆ. ಆಗಸ್ಟ್ 15, 2024 ರ ಬಿಡುಗಡೆಯ ದಿನಾಂಕವನ್ನು ಘೋಷಣೆ ಮಾಡಿದ್ದಾರೆ. ಪುಷ್ಪ ಭಾಗ 1 ಬಾಕ್ಸ್‌ ಆಫೀಸ್‌ನಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಪಾರ್ಟ್‌ 2 ಜನರ ನಿರೀಕ್ಷೆಯನ್ನು ಹೆಚ್ಚಿಸಿದೆ.

 

Continue Reading

LATEST NEWS

Trending