Connect with us

    FILM

    ದರ್ಶನ್‌ ವಿರುದ್ಧ ಮತ್ತೊಮ್ಮೆ ಕಿಡಿಕಾರಿದ ಸ್ಯಾಂಡಲ್ ವುಡ್ ಕ್ವೀನ್..!

    Published

    on

    ಬೆಂಗಳೂರು/ಮಂಗಳೂರು:  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ ವಿರುದ್ದ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಮತ್ತೊಮ್ಮೆ ಧ್ವನಿ ಎತ್ತಿದ್ದಾರೆ.  ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿ ಜೈಲು ಸೇರಿರುವ ದರ್ಶನ್‌ ಗೆ ಅಷ್ಟೊಂದು ಹೈಪ್ ಮಾಡುವ ಅಗತ್ಯವಿಲ್ಲ. ಯಾಕಂದ್ರೆ ಅಷ್ಟೊಂದು ಅಭಿಮಾನಿಗಳನ್ನು ದರ್ಶನ್ ಹೊಂದಿಲ್ಲ. ಬೇರೆ ನಟರು ದರ್ಶನ್‌ಗಿಂತ ಹೆಚ್ಚು ಫ್ಯಾನ್ ಫಾಲೋಯಿಂಗ್‌ನ್ನು ಹೊಂದಿದ್ದಾರೆ. ಇನ್ನು ದರ್ಶನ್ ಸುತ್ತಮುತ್ತ ಇರುವವರೆಲ್ಲಾ ನಟೋರಿಯಸ್ ಕಿಲ್ಲರ್‌ಗಳು ಎಂದು ರಮ್ಯಾ ಹೇಳಿದ್ದಾರೆ.

    ದರ್ಶನ್ ಕೊಲೆ ಆರೋಪ ವಿಚಾರ ಭಾರೀ ಚರ್ಚೆಗೆ ಎಡೆ ಮಾಡಿದೆ. ಕನ್ನಡ ಚಿತ್ರರಂಗವೇ ತಲೆತಗ್ಗಿಸುವಂತೆ ಮಾಡಿದೆ. ಈ ಮಧ್ಯೆ ಸ್ಯಾಂಡಲ್‌ವುಡ್ ಕ್ವೀನ್‌ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದರು. ಇದೀಗ ಮತ್ತೊಮ್ಮೆ ರಾಷ್ಟ್ರೀಯ ಚಾನೆಲ್‌ವೊಂದರಲ್ಲಿ ಸಂದರ್ಶನ ನೀಡುವಾಗ ದರ್ಶನ್ ಕುರಿತಾಗಿ ಹೇಳಿಕೆಯನ್ನು ನೀಡಿದ್ದಾರೆ.

    Read More..;  ದರ್ಶನ್‌ ಕೊಲೆ ಪ್ರಕರಣ ಬೆನ್ನಲ್ಲೇ ‘ಯಶ್’ ವೀಡಿಯೋ ವೈರಲ್..! ಅಭಿಮಾನಿಗಳಿಗೆ ಯಶ್ ಹೇಳಿದ್ದೇನು?

    ದರ್ಶನ್‌ಗೆ ಹೈಪ್‌ ಮಾಡುವಷ್ಟು ಫ್ಯಾನ್ ಫಾಲೋಯಿಂಗ್ ಇಲ್ಲ. ಅವರಿಗಿಂತ ಬೇರೆ ನಟರಿಗೆ ಹೆಚ್ಚು ಫ್ಯಾನ್‌ ಫಾಲೋವರ್ಸ್‌ ಇದ್ದಾರೆ. ಅಷ್ಟು ದೊಡ್ಡ ಮಟ್ಟದಲ್ಲಿ ಫ್ಯಾನ್ಸ್‌ ಇದ್ದಿದ್ರೆ ಅವರು ಮಾಡೋ ಸಿನೆಮಾಗಳೆಲ್ಲಾ ಹಿಟ್ ಆಗಬೇಕಿತ್ತು. ಸಿನೆಮಾ ಅಲ್ಲದೆ ರಾಜಕೀಯದಲ್ಲೂ ಕಳೆದ ಆರು ತಿಂಗಳಿನಿಂದ ರಾಜಕಾರಣಿಗಳ ಪರ ಪ್ರಚಾರ ನಡೆಸಿದ್ದರು. ಆದರೆ ಅವರಲ್ಲಿ ಕೆಲವರು ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದಾರೆ. ಇನ್ನು ದರ್ಶನ್ ಅರೆಸ್ಟ್‌ ಆದ ಪೊಲೀಸ್ ಸ್ಟೇಷನ್ ಮುಂಭಾಗದಲ್ಲಿ 20ರಿಂದ 50 ಜನ ನಿಂತ ಮಾತ್ರಕ್ಕೆ ಅವರಿಗೆ ಸಿಕ್ಕಾಪಟ್ಟೆ ಫ್ಯಾನ್‌ ಫಾಲೋಯಿಂಗ್ ಇದ್ದಾರೆ ಅನ್ನೋದು ಸರಿಯಲ್ಲ ಎಂದು ರಮ್ಯಾ ಹೇಳಿದ್ದಾರೆ. ದರ್ಶನ್ ಸುತ್ತಮುತ್ತಲೂ ಇರುವ ಜನರು ನಟೋರಿಯಸ್‌ಗಳು. ಕೊಲೆ, ಅಪಹರಣ, ಜನರ ಮೇಲೆ ಹಲ್ಲೆ ಮಾಡುವುದರಲ್ಲಿ ತೊಡಗಿಕೊಂಡವರು. ದರ್ಶನ್ ಫ್ಯಾನ್‌ ಕ್ಲಬ್‌ ಅಪಹರಣ, ಕೊಲೆಗಳನ್ನು ಮಾಡುತ್ತಿದ್ದಾರೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಮತ್ತೊಂದಿಲ್ಲ ಎಂದು ರಮ್ಯಾ ಆಕ್ರೋಶ ಹೊರ ಹಾಕಿದ್ದಾರೆ.

    ಇನ್ನು ನಟ ದರ್ಶನ್ ಜೈಲು ಸೇರುತ್ತಿದ್ದಂತೆಯೇ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದರು . ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಯಾರೇ ಆಗಲಿ ಕಾನೂನನ್ನು ಕೈಗೆತ್ತಿಕೊಳ್ಳುವಂತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದರೆ ಪೊಲೀಸರಿಗೆ ದೂರು ಕೊಡಬೇಕಿತ್ತು. ಅವರು ವಿಚಾರಿಸಿಕೊಳ್ಳುತ್ತಿದ್ದರು.  ಆದರೆ ನೀವು ಜನರನ್ನು ಹೊಡೆದು ಕೊಲ್ಲುವುದಲ್ಲ. ಈ ವಿಚಾರದಲ್ಲಿ ನಾನು ಪೊಲೀಸರ ಕೆಲಸವನ್ನು ಮೆಚ್ಚುತ್ತೇನೆ. ಯಾವುದೇ ಒಂದು ಒತ್ತಡಕ್ಕೆ ಮಣಿಯದೇ ತನಿಖೆ ಮಾಡುತ್ತಿದ್ದು, ಪೊಲೀಸರ ಮೇಲೆ ಜನರು ಭರವಸೆ ಉಳಿಸಿಕೊಳ್ಳುವ ಕೆಲಸ ಮಾಡಿದ್ದಾರೆ ಎಂದು ಪೋಸ್ಟ್‌ ಹಾಕಿದ್ದರು.

    FILM

    ದರ್ಶನ್ ಸರ್ ನನಗೆ ಗುರು ಸಮಾನರು…ಧರ್ಮೋ ರಕ್ಷತಿ ರಕ್ಷಿತಃ… ಎಂದ ನಟಿ ರಚಿತಾ ರಾಮ್; ಹೇಳಿದ್ದೇನು?

    Published

    on

    ಬೆಂಗಳೂರು : ರೇಣುಕಾಸ್ವಾಮಿ ಹ*ತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್ ಬಂಧನವಾಗಿದೆ. ಇತ್ತ ನಟ, ನಟಿಯರು ಪ್ರತಿಕ್ರಿಯೆ ನೀಡಲು ಆರಂಭಿಸಿದ್ದಾರೆ. ಇದೀಗ ರಚಿತಾ ರಾಮ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಇನ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


    “ಧರ್ಮೋ ರಕ್ಷತಿ ರಕ್ಷಿತಃ” ಎಂದು ಅವರು ಪೋಸ್ಟ್ ಹಂಚಿಕೊಂಡಿದ್ದಾರೆ. ನಮಸ್ಕಾರ..ಈ ನೋಟ್‌ನ ನಾನು ನಟಿಯಾಗಿ ಅಲ್ಲ ಸಾಮನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತಿಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು..! ಎಂದಿದ್ದಾರೆ.

    ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು.

    ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆ ನನಗಿದೆ.

    ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್‌ ಸರ್‌ ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್‌ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೇ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತೀರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತೀರಿ ಎಂದು ಆಶಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

    ಇದನ್ನೂ ಓದಿ : ನಟ ದರ್ಶನ್ ಮತ್ತೊಬ್ಬ ಮ್ಯಾನೇಜರ್ ಆತ್ಮಹ*ತ್ಯೆ!? ಡೆ*ತ್ ನೋಟ್ ನಲ್ಲಿ ಏನಿದೆ!?

    ದರ್ಶನ್ ಹಾಗೂ ರಚಿತಾ ರಾಮ್ ಜೊತೆಯಾಗಿ ನಾಲ್ಕು ಸಿನಿಮಾಗಳಲ್ಲಿ ನಟಿಸಿದ್ದಾರೆ. ಡಿಂಪಲ್ ಕ್ವೀನ್ ತನ್ನ ಸಿನಿ ಜರ್ನಿ ಆರಂಭಿಸಿದ್ದೇ ದರ್ಶನ್ ಜೊತೆಗೆ, ಅದೂ ‘ಬುಲ್ ಬುಲ್’ ಚಿತ್ರದ ಮೂಲಕ. ಅಂಬರೀಶ, ಜಗ್ಗುದಾದಾ, ಕ್ರಾಂತಿ ಚಿತ್ರಗಳಲ್ಲಿ ಇವರಿಬ್ಬರು ಜೊತೆಯಾಗಿ ನಟಿಸಿದ್ದರು.

    Continue Reading

    FILM

    ನಟ ದರ್ಶನ್ ಮತ್ತೊಬ್ಬ ಮ್ಯಾನೇಜರ್ ಆತ್ಮಹ*ತ್ಯೆ!? ಡೆ*ತ್ ನೋಟ್ ನಲ್ಲಿ ಏನಿದೆ!?

    Published

    on

    ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿರುವ ಆನೇಕಲ್ ತಾಲ್ಲೂಕಿನ ಬಗ್ಗನದೊಡ್ಡಿಯಲ್ಲಿ ನಟ ದರ್ಶನ್ ಅವರಿಗೆ ಸೇರಿದ್ದೆನ್ನಲಾದ ಫಾರ್ಮ್ ಹೌಸ್ ನಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಮ್ಯಾನೇಜರ್ ಮಾನಸಿಕ ಖಿನ್ನತೆಗೆ ಒಳಗಾಗಿ ಡೆ*ತ್ ನೋಟ್ ಬರೆದಿಟ್ಟು ಆತ್ಮಹ*ತ್ಯೆಗೆ ಶರಣಾಗಿದ್ದಾರೆ ಎಂಬುದು ತಿಳಿದುಬಂದಿದೆ.


    ಶ್ರೀಧರ್ ಮೃತ ಮ್ಯಾನೇಜರ್. ಕಳೆದ ಏಪ್ರಿಲ್ ತಿಂಗಳಿನಲ್ಲಿ ಮ್ಯಾನೇಜರ್ ಶ್ರೀಧರ್ ಆತ್ಮಹತ್ಯೆಗೆ ಶರಣಾಗಿದ್ದರು. ಬಗ್ಗನದೊಡ್ಡಿಯಲ್ಲಿನ ದುರ್ಗ ಫಾರ್ಮ್ ಹೌಸ್‌ನಲ್ಲಿ ಶ್ರೀಧರ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದರು. ಆತ, ಡೆತ್ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನು ಶ್ರೀಧರ್ ಮೃ*ತದೇಹವನ್ನು ನೋಡಿದ್ದ ಆತನ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದ.

    ಪೊಲೀಸರು ಸ್ಥಳ ಭೇಟಿ ಮಾಡಿ ಪರಿಶೀಲನೆ ಮಾಡಿದಾಗ ಮ್ಯಾನೇಜರ್ ಶ್ರೀಧರ್ ಫಾರ್ಮ್ ಹೌಸ್ ಪಕ್ಕದಲ್ಲಿ ರಕ್ತಕಾರಿ ಮೃ*ತಪಟ್ಟಿರುವುದು ಕಂಡು ಬಂದಿದೆ. ಒಂದು ವರ್ಷಗಳ ಕಾಲ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದರು, ಸುಮಾರು 2 ಎಕರೆ 36 ಗುಂಟೆ ಪ್ರದೇಶದಲ್ಲಿರುವ ಫಾರ್ಮ್ ಹೌಸ್ ನಿರ್ಮಾಣವಾಗುತ್ತಿದೆ. ಫಾರ್ಮ್‌ಹೌಸ್ ಪಕ್ಕದ ಕಲ್ಲು ಬಂಡೆ ಮೇಲೆ ಶ*ವವಾಗಿ ಪತ್ತೆಯಾಗಿದ್ದಾರೆ.
    ಡೆತ್ ನೋಟ್ ಪತ್ತೆಯಾಗಿದ್ದು, ಈ ಘಟನೆಯ ಬೆನ್ನಲ್ಲೇ ಆನೇಕಲ್ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲು ಮಾಡಿಕೊಂಡಿದ್ದಾರೆ.

    ಇದನ್ನೂ ಓದಿ : WATCH : ಕಾರು ಚಲಾಯಿಸುವಾಗ ರೀಲ್ಸ್ ಮಾಡಲು ಹೋಗಿ ಪ್ರಾ*ಣ ಕಳೆದುಕೊಂಡ ಯುವತಿ

    ಡೆತ್ ನೋಟ್ ನಲ್ಲಿ ಏನಿದೆ?

    ದರ್ಶನ್ ಫಾರ್ಮ್‌ಹೌಸ್ ಮ್ಯಾನೇಜರ್ ಸಾವಿಗೂ ಮುನ್ನ ಬರೆದಿಟ್ಟಿರುವ ಡೆ*ತ್‌ನೋಟ್ ಪತ್ತೆಯಾಗಿದೆ. ಡೆತ್ ನೋಟ್ ಅನ್ನು ಸ್ವತಃ ತಾನೇ ಬರೆದಿಟ್ಟಿರುವ ಮ್ಯಾನೇಜರ್ ಶ್ರೀಧರ್ ಡೆ*ತ್ ನೋಟ್ ನಲ್ಲಿ ಹೆಬ್ಬೆಟ್ಟು ಕೂಡಾ ಒತ್ತಿದ್ದಾರೆ.

    ಅದರಲ್ಲಿ ಯಾವುದೋ ಕಾರಣದಿಂದ ನನ್ನ ಪರ್ಸನಲ್ ಒಂಟಿತನ ಕಾಡುತ್ತಿದೆ. ಬದುಕುವ ಆಸೆಯಿಲ್ಲ, ನನ್ನ ಸಾವಿಗೆ ನಾನೇ ಕಾರಣ. ನನ್ನ ಸಾ*ವಿನ ಕಾರಣ ಹಾಗೂ ಹಿನ್ನೆಲೆಯನ್ನು ಇಟ್ಟುಕೊಂಡು ಸ್ನೇಹಿತರು, ಕುಟುಂಬ ಸದಸ್ಯರು ಸೇರಿದಂತೆ ಯಾರೊಬ್ಬರಿಗೂ ತೊಂದರೆ ಕೊಡಬೇಡಿ. ನಾನು ಯಾರಿಗೆ ಫೋನ್ ಮಾಡಿದ್ದೆ, ಅದು ಇದು ಎಂದು ಯಾರಿಗೂ ಪೊಲೀಸರು ತೊಂದರೆ ಕೊಡಬೇಡಿ. ನಮ್ಮ ಮನೆಯಲ್ಲಿ ಅಪ್ಪ, ಅಮ್ಮ, ಸಹೋದರಿಯರು ಸೇರಿ ಎಲ್ಲರಿಗೂ ಹೇಳುತ್ತಿದ್ದೇನೆ, ನನ್ನ ಸಾವಿಗೆ ನಾನೇ ಕಾರಣ ಎಂದು ಹೇಳಿದ್ದಾರೆ.

    Continue Reading

    FILM

    ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ ‘ದಿ ಪುಷ್ಪ-2’..!

    Published

    on

    ಅಂಧ್ರಪ್ರದೇಶ/ಮಂಗಳೂರು: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಬಹು ನಿರೀಕ್ಷಿತ ಸಿನೆಮಾ ಪುಷ್ಪ–2 ಸಿನೆಮಾದಲ್ಲಿ ಸಿನಿ ಪ್ರೇಕ್ಷಕರು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಭಾರೀ ದೊಡ್ಡ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಸಿನೆಮಾ ಆ.15ಕ್ಕೆ ರಿಲೀಸ್ ಆಗಲಿದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ ಆಗಸ್ಟ್‌ 15 ಸ್ವಾತಂತ್ರ್ಯ ದಿನಾಚರಣೆಯಂದು ಸಿನೆಮಾ ರಿಲೀಸ್ ಆಗುವುದಿಲ್ಲ ಎಂಬ ಊಹಾಪೋಹಗಳು ಹರಿದಾಡುತ್ತಿತ್ತು. ಇದೀಗ ಚಿತ್ರ ತಂಡ ಈ ಎಲ್ಲಾ ಊಹಾಪೋಹಗಳಿಗೆ ತೆರೆ ನೀಡಿದೆ. ಇದರಿಂದ ಪುಷ್ಪ-2 ಸಿನೆಮಾಕ್ಕಾಗಿ ಕಾತುರದಿಂದ ಕಾಯುತ್ತಿದ್ದ ಅಲ್ಲು ಫ್ಯಾನ್ಸ್‌ಗೆ ನಿರಾಸೆಯಾಗಿದೆ.

    Read More..; ಪುಷ್ಪ 2 ರಿಲೀಸ್ ಡೇಟ್ ಬದಲು…? ಸ್ಪಷ್ಟನೆ ನೀಡಿದ ಚಿತ್ರ ತಂಡ

    ವರ್ಷದ ಕೊನೆಯಲ್ಲಿ ‘ದಿ ಪುಷ್ಪ-2’

    ಚಿತ್ರ ತಂಡ ಪುಷ್ಪ-2 ಸಿನೆಮಾ ರಿಲೀಸ್ ಡೇಟ್‌ಅನ್ನು ಖಚಿತಪಡಿಸಿದೆ. ಈ ಹಿಂದೆ ಆಗಸ್ಟ್‌ ನಲ್ಲಿ ಚಿತ್ರ ರಿಲೀಸ್ ಆಗಲಿದೆ ಎಂದು ಹೇಳಲಾಗಿತ್ತು. ಆದರೆ ಡಿಸೆಂಬರ್ 6 ರಂದು ಸಿನೆಮಾವನ್ನು ರಿಲೀಸ್ ಮಾಡಲು ಚಿತ್ರ ತಂಡ ಸಿದ್ಧತೆ ನಡೆಸಿದೆ. ಈ ಸಿನೆಮಾ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವ ಪ್ಯಾನ್ ಇಂಡಿಯಾ ಸಿನೆಮಾ. ದೊಡ್ಡ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ಸಿನೆಮಾ ಇದಾಗಿದ್ದು, ಸಣ್ಣ ಬ್ಯಾನರ್‌ನಲ್ಲಿ ನಿರ್ಮಾಣಗೊಂಡಿರುವ ಸಿನೆಮಾಗಳು ಈ ಸಿನೆಮಾ ರಿಲೀಸ್‌ ಡೇಟ್‌ಗಾಗಿ ಕಾಯುತ್ತಿದ್ದರು. ತೆಲುಗಿನ ಸಣ್ಣ ಬಜೆಟ್‌ ಸಿನೆಮಾಗಳು ಈ ಸಿನೆಮಾ ಯಾವ ಡೇಟ್‌ ಅಲ್ಲಿ ರಿಲೀಸ್ ಆಗುತ್ತೆ ಎಂಬುದನ್ನು ನೋಡಿಕೊಂಡು ತಮ್ಮ ಸಿನೆಮಾಗಳ ರಿಲೀಸ್ ಡೇಟ್ ಪ್ಲ್ಯಾನ್‌ ಮಾಡಬೇಕಿತ್ತು.

     

    Continue Reading

    LATEST NEWS

    Trending