DAKSHINA KANNADA
ಸ್ಲಮ್ ಹುಡುಗರನ್ನು ತೊಡೆಯ ಮೇಲೆ ಕೂರಿಸಿ ಆರ್ಕೆಸ್ಟ್ರಾ ವೀಕ್ಷಿಸಿದ ಸಂದೇಶ್ ನೀರುಮಾರ್ಗ..!
ಮಂಗಳೂರು: ಸಂದೇಶ್ ನೀರುಮಾರ್ಗ ಇವರು ಹಳ್ಳಿಯಿಂದ ರಾಜ್ಯ ಅಂತರಾಜ್ಯಗಳಲ್ಲೂ ಪ್ರತಿಭೆ ಪಸರಿಸಿದ ಯುವ ಗಾಯಕ. ಹೆಸರು, ಕೀರ್ತಿ ಎಷ್ಟೇ ಎತ್ತರಕ್ಕೂ ಬೆಳೆದರೂ ಇವರ ವಿನಯತೆ, ಮಾನವೀಯತೆಯಲ್ಲಿ ಒಂದು ಚೂರು ಕಡಿಮೆ ಆಗಿಲ್ಲ. ತಾನು ಬೆಳೆದು ಬಂದ ಕಷ್ಟಗಳನ್ನು ಸಂಪೂರ್ಣವಾಗಿ ಅರಿತಿರುವ ಸಂದೇಶ್, ಇತರರ ಕಷ್ಟಗಳನ್ನು ಕೂಡ ಅಷ್ಟೇ ಹತ್ತಿರದಿಂದ ಬಲ್ಲವರಾಗಿದ್ದಾರೆ. ಇದಕ್ಕೊಂದು ತಾಜಾ ಉದಾಹರಣೆ ಮಂಗಳೂರಿನಲ್ಲಿ ನಡೆದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಅವರು ನಡೆದುಕೊಂಡ ರೀತಿ ನೋಡಬಹುದು.
ಮಂಗಳೂರಿನ ಒಸಿ ಫ್ರೆಂಡ್ಸ್ ಬೋಳಾರದ ಆಶ್ರಯದಲ್ಲಿ ನಡೆದ ಮಂಗಳಾದೇವಿ ನವರಾತ್ರಿಯ ಜಳಕದ ಅಂಗವಾಗಿ ಭಾವೈಕ್ಯತಾ ಸಂಗಮ 2023 ಎನ್ನುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾನೂ ಒಬ್ಬ ಪ್ರೇಕ್ಷಕಕನಂತೆ ತೆರಳಿದ್ರು. ಈ ಸಂದರ್ಭ ಅಲ್ಲಿಯೇ ಕೆಲವು ಪುಟ್ಟಪುಟ್ಟ ಸ್ಲಮ್ ಮಕ್ಕಳು ಬಲೂನ್ ಮಾರಿಕೊಂಡು ಅವರ ಹತ್ತಿರ ಬಂದಿದ್ದಾರೆ. ಮಕ್ಕಳ ಮುಗ್ದತೆಯನ್ನು ಕಂಡು ಭಾವಪರವಶರಾಗಿದ್ದು, ಜೊತೆಗೆ ಮಕ್ಕಳನ್ನು ತೊಡೆಯ ಮೇಲೆ ಕೂರಿಸಿ ಆರ್ಕೆಸ್ಟ್ರಾವನ್ನು ಜೊತೆಯಾಗಿ ಸವಿದರು.
ಈಗಿನ ಕಾಲದಲ್ಲಿ ಅಲ್ಪಸ್ವಲ್ಪ ಫೇಮ್, ಹೆಸರು ಬಂದರೆ ಸಾಕು, ಯಾರು ಕಣ್ಣಿಗೆ ಕಾಣಿಸುವುದಿಲ್ಲ ಅನ್ನುವ ಮಟ್ಟಿಗೆ ಇರುವ ಕಲಾವಿದರ ಮಧ್ಯೆ ಸಂದೇಶ್ ನೀರುಮಾರ್ಗ ಮಾತ್ರ ಒಂದೂಚೂರು ಬದಲಾಗದೆ ಇರುವುದು ಅವರ ಘನತೆ ಗೌರವವನ್ನು ಇನ್ನಷ್ಟು ಹೆಚ್ಚಿಸಿದೆ. ಮಂಗಳೂರಿನ ನೀರ್ಮಾರ್ಗ ಎನ್ನುವಲ್ಲಿ ಆರ್ಕೆಸ್ಟ್ರಾ ಗಾಯಕರಾಗಿದ್ದವರು ಸಂದೇಶ್. ಆದರೆ ಅವರನ್ನು ಗಾಯಕರನ್ನಾಗಿ ಗುರುತಿಸಿದ್ದಕ್ಕಿಂತ ಜನ ರಿಕ್ಷಾ ಚಾಲಕರಾಗಿ ಗುರುತಿಸಿದ್ದೇ ಹೆಚ್ಚು. ಯಾಕೆಂದರೆ ಬಿಎ ಕಲಿತು ಕೊರಿಯರ್ ಸಂಸ್ಥೆಯಲ್ಲಿ ವೃತ್ತಿ ಸಿಕ್ಕಿದ್ದರೂ, ಆ ಸಂಬಳದಿಂದ ಜೀವನ ಸಾಗಿಸುವುದು ಕಷ್ಟವಾಗಿತ್ತು.
ಮಾತ್ರವಲ್ಲ, ಉಪವೃತ್ತಿಯಾಗಿ ಬೆಳೆದಿದ್ದ ಆರ್ಕೆಸ್ಟ್ರಾ ಹಾಡುಗಾರಿಕೆಗೆ ಸಮಯ ನೀಡುವುದೂ ಸಾಧ್ಯವಾಗಿರಲಿಲ್ಲ. ಆಗ ಕೊರಿಯರ್ ವೃತ್ತಿಗೆ ರಾಜೀನಾಮೆ ನೀಡಿ ರಿಕ್ಷಾ ಚಾಲಕರಾಗಿ, ಮೀನು ಮಾರಾಟಗಾರರಾಗಿ, ಫುಡ್ ಡೆಲಿವರಿ ಬಾಯ್ ಆಗಿ ಬದುಕು ಕಟ್ಟಿಕೊಳ್ಳಲು ಹೆಣಗಾಡಿದ್ದ ವ್ಯಕ್ತಿ ಈ ಸಂದೇಶ್.
ಆದರೆ ಈಗ ಕಲೆಯ ಮೇಲೆ ಶ್ರದ್ಧೆ ಇಟ್ಟರೆ, ಇನ್ನಷ್ಟು ಮಂದಿಗೆ ಬದುಕು ಕಟ್ಟಿಕೊಡಬಹುದೆನ್ನುವ ಸಂದೇಶ ನೀಡುವಂತೆ ಬೆಳೆದಿದ್ದಾರೆ.
BELTHANGADY
ಪಂಚಭೂತಗಳಲ್ಲಿ ಲೀನವಾದ ಜನ ಮೆಚ್ಚಿದ ನಾಯಕ…!
ಮಂಗಳೂರು : ಮೇಲ್ನೋಟಕ್ಕೆ ಕೋಪಿಷ್ಟನಂತೆ ಕಂಡರೂ ಒಳಗಡೆ ಮಗುವಿನಂತಹ ಮನಸ್ಸು…ಅಧಿಕಾರಿಗಳ ಪಾಲಿಗೆ ಸಿಂಹಸ್ವಪ್ನವಾದ್ರೆ ಬಡವರ ಪಾಲಿಗೆ ಇವರು ಬಂಗಾರದ ವ್ಯಕ್ತಿ. ಇದ್ದಿದ್ದು ಇದ್ದ ಹಾಗೆ ಖಡಕ್ ಆಗಿ ಮಾತನಾಡೋ ಕಾರಣ ಸಾಕಷ್ಟು ಜನರ ವಿರೋಧಿಯಾದ್ರೂ, ಒಳಗೊಳಗೆ ಅವರಿಂದಲೇ ಪ್ರೀತಿಯನ್ನು ಕೂಡಾ ಪಡಿತಾ ಇದ್ದ ಜನಪ್ರೀಯ ಜನನಾಯಕ. ಜನರನ್ನು ತನ್ನವರೆಂದೇ ಒಬ್ಬ ಜನಪ್ರತಿನಿಧಿಯಾಗಿ ಜನರ ಸಂಕಷ್ಟಕ್ಕೆ ಸ್ಪಂದಿಸ್ತಾ ಇದ್ದ ವಸಂತ ಬಂಗೇರ ಇನ್ನು ನೆನಪು ಮಾತ್ರ…
ಸದಾ ತನ್ನ ಮಾತಿನ ಮೂಲಕವೇ ಸುದ್ದಿಯಾಗುತ್ತಿದ್ದ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಶಾಶ್ವತವಾಗಿ ಮಾತು ಮುಗಿಸಿ ಇಹಲೋಕದ ಯಾತ್ರೆ ಮುಗಿಸಿದ್ದಾರೆ. ತನ್ನ ಕ್ಷೇತ್ರದ ಜನರ ಸೇವೆಗಾಗಿ ತನ್ನ ಜೀವನ ಮುಡಿಪಾಗಿಟ್ಟ ವಸಂತ ಬಂಗೇರ ನಿಜವಾಗಿಯೂ ಒಬ್ಬ ಜನನಾಯಕರಾಗಿದ್ದರು. ತನ್ನ ಬಳಿ ಕಷ್ಟ ಹೇಳಿಕೊಂಡು ಯಾರೇ ಬಂದ್ರೂ ಹಿಂದೂ ಮುಂದು ನೋಡದೆ ಸಹಾಯ ಮಾಡ್ತಾ ಇದ್ರು. ತನ್ನ ಕೈ ಖಾಲಿ ಮಾಡಿ ಮತ್ತೊಬ್ಬರಿಗೆ ಕೈ ಎತ್ತಿ ದಾನ ಮಾಡ್ತಾ ಇದ್ದ ವಸಂತ ಬಂಗೇರ ಇದೇ ಕಾರಣಕ್ಕೆ ಜನಾನುರಾಗಿಯಾಗಿದ್ದರು.
ಇದೀಗ ಅವರಿಲ್ಲಾ ಅನ್ನೋ ಸುದ್ದಿ ಅವರ ಅಭಿಮಾನಿಗಳನ್ನ ಕಣ್ಣೀರಿನ ಕಡಲಿನಲ್ಲಿ ಮುಳುಗಿಸಿದೆ. ಅವರ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುತ್ತಿದ್ದಂತೆ ಅವರ ಮನೆಗೆ ಅಭಿಮಾನಿಗಳ ದಂಡೇ ಹರಿದು ಬಂದಿದೆ. ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದ ತಾಲೂಕು ಕ್ರೀಡಾಂಗಣಕ್ಕೂ ಸಾವಿರಾರು ಅಭಿಮಾನಿಗಳು ಆಗಮಿಸಿ ಅವರಿಗೆ ಅಂತಿನ ನಮನ ಸಲ್ಲಿಸಿದ್ದಾರೆ. ನೇರವಾಗಿ ನಿಷ್ಠೂರವಾಗಿ ತಪ್ಪುಗಳನ್ನು ಖಂಡಿಸುತ್ತಿದ್ದ ತಮ್ಮ ಪರ ಧ್ವನಿಯಾಗಿದ್ದ ನಾಯಕ ಇನ್ನಿಲ್ಲ ಅನ್ನೋದನ್ನು ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾದ್ಯವಾಗಿಲ್ಲ. ಬಡವರಿಗೆ ಅನ್ಯಾಯ ಆಗ್ತಾ ಇದೆ ಅಂತ ಗೊತ್ತಾದ್ರೆ ಮುಲಾಜಿಲ್ಲದೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ತಾ ಇದ್ದ ವಸಂತ ಬಂಗೇರ ಅವರ ಆ ಸ್ಟೈಲ್ ಯಾವತ್ತೂ ಮರೆಯಲು ಸಾದ್ಯವಿಲ್ಲ.
ರಾಜ್ಯ ರಾಜಕಾರಣದಲ್ಲಿ ಸರಿಸುಮಾರು 40 ವರ್ಷಗಳ ಕಾಲ ಚಾಲ್ತಿಯಲ್ಲಿದ್ದ ಹೆಸರು ವಸಂತ ಬಂಗೇರ. ಬೆಳ್ತಂಗಡಿ ಕ್ಷೇತ್ರದಲ್ಲಿ ಮೂರು ಪಕ್ಷಗಳಿಂದ ಶಾಸಕರಾಗಿದ್ದ ವಸಂತ ಬಂಗೇರ ಕೊನೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಭದ್ರವಾಗಿ ನೆಲೆಯೂರಿದ್ದರು. ಬಿಜೆಪಿಯಿಂದ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದ ವಸಂತ ಬಂಗೇರ ಬಳಿಕ ನಡೆದ ರಾಜಕೀಯ ದ್ರುವೀಕರಣದಲ್ಲಿ ಜೆಡಿಎಸ್ ಮತ್ತು ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಜಾತ್ಯಾತೀತ ನಾಯಕನಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಒಡನಾಡಿಯಾಗಿ ರಾಜ್ಯದ ಅಪಾರ ರಾಜಕೀಯ ನಾಯಕರು ಮೆಚ್ಚಿಕೊಂಡಿದ್ದ ವ್ಯಕ್ತಿ ಇವರು. ವಿಪರ್ಯಾಸ ಅಂದ್ರೆ ರಾಜಕೀಯದ ಉತ್ತುಂಗಕ್ಕೆ ಏರಿದ್ರೂ ಸಚಿವರಾಗುವ ಅವಕಾಶ ವಸಂತ ಬಂಗೇರ ಅವರಿಗೆ ಸಿಗಲೇ ಇಲ್ಲ ಅನ್ನೋದು. 2013 ರಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತದಲ್ಲಿ ಅಧಿಕಾರಕ್ಕೆ ಬಂದಿದ್ರೂ ವಸಂತ ಬಂಗೇರ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಆದ್ರೆ ಯಾವೊಬ್ಬ ಸಚಿವನಿಗೂ ಸಾದ್ಯವಾಗದ ಕೆಲಸವನ್ನು ಸಿಎಂ ಆಗಿದ್ದ ಸಿದ್ಧರಾಮಯ್ಯ ಮೂಲಕ ಮಾಡಿಸೋ ತಾಕತ್ತು ಇದ್ದಿದ್ದು ವಸಂತ ಬಂಗೇರ ಅವರಿಗೆ ಮಾತ್ರ ಅನ್ನೋದನ್ನ ಮರೆಯುವ ಹಾಗಿಲ್ಲ.
ಮನಸ್ಸಿನಲ್ಲಿ ಏನನ್ನೂ ಇಟ್ಟುಕೊಳ್ಳದೆ ಇದ್ದಿದ್ದು ಇದ್ದಹಾಗೇ ಹೇಳೋ … ಬಡವರು ಅಂದ್ರೆ ನನ್ನವರು ಎಂದು ಪ್ರೀತಿ ಮಾಡೋ ಜನ ನಾಯಕ ಇಂದು ಎಲ್ಲರ ಪ್ರೀತಿಗೆ ವಿದಾಯ ಹೇಳಿ ಮೌನವಾಗಿದ್ದಾರೆ. ” ನನ್ನನ್ನು ಆರಿಸಿದವರು ನೀವು .. ನೀವು ನನ್ನನ್ನು ಆಯ್ಕೆ ಮಾಡಿದ್ದಕ್ಕೆ ನಾನು ಮೋಸ ಮಾಡಿಲ್ಲ. ಹಣ ಮಾಡದೆ ಸ್ವಚ್ಚವಾಗಿ ಜನ ಸೇವೆ ಮಾಡಿದ ತೃಪ್ತಿ ಇದೆ” ಅಂತಲೇ ರಾಜಕೀಯಕ್ಕೆ ವಿದಾಯ ಹೇಳಿದ್ದ ವಸಂತ ಬಂಗೇರ ಇಂದು ಎಲ್ಲವನ್ನೂ ಬಿಟ್ಟು ತಮ್ಮ ಅಂತಿಮಯಾತ್ರೆ ಮುಗಿಸಿದ್ದಾರೆ.
ವಸಂತ ಬಂಗೇರ ಅವರ ಅಂತ್ಯಕ್ರೀಯೆ ಅವರ ಕುವೆಟ್ಟು ಕೇದೆ ಮನೆಯಲ್ಲಿ ನಡೆಸಲಾಗಿದೆ. ತಂದೆಯ ಚಿತೆಗೆ ಮಗಳು ಅಗ್ನಿ ಸ್ಪರ್ಷ ಮಾಡುವ ಮೂಲಕ ಅಂತಿಮ ವಿಧಿಯನ್ನು ಪೂರೈಸಿದ್ದಾರೆ. ಪಂಚಭೂತಗಳಲ್ಲಿ ಲೀನವಾಗಿರುವ ಮಾಜಿ ಶಾಸಕ ವಸಂತ ಬಂಗೇರ ಇನ್ನು ನೆನಪು ಮಾತ್ರ. ಆದ್ರೆ ವಸಂತ ಬಂಗೇರ ಅವರು ಅವರ ಅಭಿಮಾನಿಗಳ ಹೃದಯದಲ್ಲಿ ಎಂದಿಗೂ ಜನನಾಯಕರಾಗಿರುತ್ತಾರೆ.
ವಿಡಿಯೋ ನೋಡಿ : ವಸಂತ ಬಂಗೇರ ಅವರ ರಾಜಕೀಯ ಜೀವನ ಕುರಿತಾದ ಸ್ಟೋರಿ
DAKSHINA KANNADA
ನಿವೃತ್ತ ಶಿಕ್ಷಕ ರಸ್ತೆ ದುರಂತದಲ್ಲಿ ಸಾ*ವು
ಪುತ್ತೂರು : ನಿವೃತ್ತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80) ಅವರು ರಸ್ತೆ ಅಪಘಾತಕ್ಕೆ ಬ*ಲಿಯಾಗಿದ್ದಾರೆ. ಪುತ್ತೂರಿನ ಸಂಪ್ಯ ಎಂಬಲ್ಲಿ ಗುರುವಾರ ರಸ್ತೆ ದಾಟುತ್ತಿದ್ದ ವೇಳೆ ಸೂರ್ಯನಾರಾಯಣ ಕಾರಂತ ಅವರಿಗೆ ಆಟೋ ರಿಕ್ಷಾವೊಂದು ಢಿಕ್ಕಿ ಹೊಡೆದಿತ್ತು.
ಡಿಕ್ಕಿಯ ರಭಸಕ್ಕೆ ಅವರು ರಸ್ತೆಗೆ ಬಿದ್ದು ತಲೆಗೆ ತೀವ್ರ ಗಾಯವಾಗಿತ್ತು. ಕೂಡಲೇ ಮತ್ತೊಂದು ರಿಕ್ಷಾದಲ್ಲಿ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ. ಸೂರ್ಯನಾರಾಯಣ ಕಾರಂತ ಅವರು ಗಣಿತ ಶಿಕ್ಷಕರಾಗಿ ಪ್ರಸಿದ್ಧರಾಗಿದ್ದರು.
ಇದನ್ನೂ ಓದಿ : ಕಣಗಿಲೆ ಹೂ ತಿಂದು ಇಹಲೋಕ ತ್ಯಜಿಸಿದ ಯುವತಿ!
DAKSHINA KANNADA
ಅಯ್ಯೋ… ಟೀ ಕುಡಿದರೆ ಕಪ್ಪಗಾಗ್ತಾರಾ?
ಮಂಗಳೂರು: ಸಾಮಾನ್ಯವಾಗಿ ಭಾರತ ದೇಶದಲ್ಲಿ ಜಾಸ್ತಿಯಾಗಿ ಟೀ ಕುಡಿಯುತ್ತಾರೆ. ಅದರಲ್ಲೂ ಕೆಲವರಿಗೆ ಬೆಳಿಗ್ಗೆ ಎದ್ದ ತಕ್ಷಣ ಟೀ ಕುಡಿದರೆ ಇನ್ನು ಕೆಲವರು ತಿಂಡಿ ತಿನ್ನುವಾಗ ಟೀ ಕುಡಿಯುತ್ತಾರೆ. ಕೆಲವರಿಗೆ ಟೀ ಕುಡಿಯದೇ ಇದ್ದರೆ ತಲೆನೋವು ಶುರುವಾಗಿ ಬಿಡುತ್ತದೆ. ಆದರೆ ಈಗ ಟೀ ಅಲ್ಲೂ ಗ್ರೀನ್ ಟೀ, ಬ್ಲೂ ಟೀ, ಲೆಮನ್ ಟೀ ಹೀಗೆ ವೆರೈಟಿ ವೆರೈಟಿ ಟೀಗಳಿದೆ.
ಆದರೆ ಅನೇಕ ಕಡೆ ವಿಚಿತ್ರ ನಂಬಿಕೆ ಇದೆ. ಟೀ ಕುಡಿದ್ರೆ ಕಪ್ಪಾಗುತ್ತಾರೆ ಎನ್ನುವ ಒಂದು ಸಂಗತಿ. ಹೌದು, ಟೀ ಕುಡಿದರೆ ಕಪ್ಪಾಗುತ್ತೇವೆ ಎಂದು ಅನೇಕರು ಹೇಳುವುದನ್ನು ಕೇಳಿರುತ್ತೇವೆ. ಅಲ್ಲದೇ ಇದೇ ಕಾರಣಕ್ಕೆ ಅದೆಷ್ಟೋ ಜನರು ಟೀ ಅನ್ನು ಕುಡಿಯುವುದಿಲ್ಲ ಎಂದು ಹೇಳಬಹುದು. ಆದರೆ ನಿಜವಾಗಿಯೂ ಟೀ ಕುಡಿದರೆ ಕಪ್ಪಾಗುತ್ತಾರಾ? ಇದು ಸತ್ಯವೇ? ಇದೇ ಪ್ರಶ್ನೆಗೆ ಇಲ್ಲಿದೆ ನೋಡಿ ಸರಿಯಾದ ಉತ್ತರ.
ಕೆಲ ಆಹಾರ ಚರ್ಮದ ಮೇಲೆ ಪರಿಣಾಮ ಬೀರುತ್ತದೆ:
ಆನುವಂಶಿಕ ಅಂಶಗಳ ಹೊರತಾಗಿ, ಚರ್ಮದ ಬಣ್ಣವು ನೀವು ಸೂರ್ಯನಲ್ಲಿ ಎಷ್ಟು ಹೊತ್ತು ಇರುತ್ತೀರಿ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ನಾವು ತಿನ್ನುವುದು ನಮ್ಮ ದೇಹದ ಮೇಲೆ ಪರಿಣಾಮ ಬೀರುತ್ತದೆ. ಕೆಲ ಆಹಾರವು ಚರ್ಮದ ಮೇಲೆಯೂ ಸಹ ಪರಿಣಾಮ ಬೀರುತ್ತದೆ. ಆದರೆ ನ್ಯಾಯೋಚಿತ ಬಣ್ಣವು ಅಂದರೆ ದೇಹದ ಹುಟ್ಟಿನ ಬಣ್ಣವು ಆಹಾರ ಸೇವನೆಯಿಂದ ಕಪ್ಪು ಬಣ್ಣಕ್ಕೆ ತಿರುಗುವುದಿಲ್ಲ ಎನ್ನಲಾಗುತ್ತದೆ. ಹಾಲಿನ ಟೀ ಕುಡಿಯುವುದರಿಂದ ಹೃದಯದ ಮೇಲೆ ಪರಿಣಾಮ ಬೀರುತ್ತದೆ.
ಕಡಿಮೆ ಸಕ್ಕರೆಯೊಂದಿಗೆ ಕಪ್ಪು ಚಹಾವನ್ನು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಟೀ ಕುಡಿಯುವುದರಿಂದ ಚರ್ಮ ಕಪ್ಪಾಗುತ್ತದೆ ಎಂದು ಹೇಳಲಾಗುತ್ತದೆ. ಆದರೆ ಇದಕ್ಕೆ ಯಾವುದೇ ಪುರಾವೆಗಳಿಲ್ಲ. ಇದಕ್ಕೆ ವಿರುದ್ಧವಾಗಿ, ಚಹಾವು ಚರ್ಮಕ್ಕೆ ಪ್ರಯೋಜನಕಾರಿ ಎಂದು ಸಂಶೋಧನೆ ತೋರಿಸಿದೆ.
ಅತಿಯಾದರೆ ಅಮೃತವೂ ವಿಷ :
ಅತಿಯಾದರೆ ಅಮೃತವೂ ವಿಷ ಎಂಬ ಮಾತಿದೆ. ಅದರಂತೆ ಟೀ ಅಥವಾ ಚಹಾ ಸೇವನೆ ಸಹ ಅತಿಯಾದರೆ ಅದೂ ದೇಹದ ಆರೋಗ್ಯದ ಮೇಲೆ ನೇರ ಪರಿಣಾಮಬೀರುತ್ತದೆ. ಬಿಸಿ ಮಾಡಿದ್ದ ಟೀ ತಣ್ಣಗಾದ ಬಳಿಕ ಅದನ್ನು ಕುಡಿಯುವುದರಿಂದ ದೇಹಕ್ಕೆ ಹಾನಿಯುಂಟಾಗುತ್ತದೆ. ಮೂರ್ನಾಲ್ಕು ಗಂಟೆಗಳಿಗೂ ಮುನ್ನ ಬಿಸಿ ಮಾಡಿದ ಚಹಾವನ್ನು ಕುಡಿದರೆ, ನಿಮಗೆ ಗೊತ್ತಿಲ್ಲದ ರೀತಿ ಇದು ನಿಮ್ಮ ದೇಹದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.
ಚಹಾವನ್ನು ಪದೇ ಪದೇ ಬಿಸಿ ಮಾಡಬಾರದು:
ಚಹಾವನ್ನು ಪದೇ-ಪದೇ ಬಿಸಿ ಮಾಡುವುದರಿಂದ ಅದರಲ್ಲಿರುವ ಎಲ್ಲಾ ಪೋಷಕಾಂಶಗಳು ಹೋಗುತ್ತವೆ. ಕೋಲ್ಡ್ ಟೀ ಬ್ಯಾಕ್ಟೀರಿಯಾವನ್ನು ಸೃಷ್ಟಿಸುತ್ತದೆ. ನೀವು ಚಹಾವನ್ನು ಎಷ್ಟು ಸಮಯ ಬೆಚ್ಚಗಾಗಿಸುತ್ತೀರೋ ಅಷ್ಟು ಹೆಚ್ಚು ಬ್ಯಾಕ್ಟೀರಿಯಾಗಳು ಬೆಳೆಯುತ್ತವೆ. ಇದು ದೇಹಕ್ಕೆ ತುಂಬಾ ಹಾನಿಕಾರಕವಾಗಿದೆ.
- DAKSHINA KANNADA7 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- LATEST NEWS7 days ago
ಎರಡು ಬಾರಿ ಅಕ್ರಮವಾಗಿ ಗರ್ಭಿಣಿಯಾದ ಅಪ್ರಾಪ್ತೆ..! ಪೋಷಕರ ವಿರುದ್ಧ ದೂರು.!!ಮುಂದೇನಾಯ್ತು?
- LATEST NEWS7 days ago
ಅಜೆಕಾರು : ಮನೆ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾ*ವು
- DAKSHINA KANNADA6 days ago
ಮನೆಯಲ್ಲಿ ಒಂದಕ್ಕಿಂತ ಹೆಚ್ಚು ತುಳಸಿ ಗಿಡ ನೆಟ್ಟರೆ ಏನಾಗುತ್ತದೆ ನೋಡಿ..!