Connect with us

DAKSHINA KANNADA

ಸ್ಲಮ್ ಹುಡುಗರನ್ನು ತೊಡೆಯ ಮೇಲೆ ಕೂರಿಸಿ ಆರ್ಕೆಸ್ಟ್ರಾ ವೀಕ್ಷಿಸಿದ ಸಂದೇಶ್ ನೀರುಮಾರ್ಗ..!

Published

on

ಮಂಗಳೂರು: ಸಂದೇಶ್ ನೀರುಮಾರ್ಗ ಇವರು  ಹಳ್ಳಿಯಿಂದ ರಾಜ್ಯ ಅಂತರಾಜ್ಯಗಳಲ್ಲೂ ಪ್ರತಿಭೆ ಪಸರಿಸಿದ ಯುವ ಗಾಯಕ. ಹೆಸರು, ಕೀರ್ತಿ ಎಷ್ಟೇ ಎತ್ತರಕ್ಕೂ ಬೆಳೆದರೂ ಇವರ ವಿನಯತೆ, ಮಾನವೀಯತೆಯಲ್ಲಿ ಒಂದು ಚೂರು ಕಡಿಮೆ ಆಗಿಲ್ಲ. ತಾನು ಬೆಳೆದು ಬಂದ ಕಷ್ಟಗಳನ್ನು ಸಂಪೂರ್ಣವಾಗಿ ಅರಿತಿರುವ ಸಂದೇಶ್, ಇತರರ ಕಷ್ಟಗಳನ್ನು ಕೂಡ ಅಷ್ಟೇ ಹತ್ತಿರದಿಂದ ಬಲ್ಲವರಾಗಿದ್ದಾರೆ. ಇದಕ್ಕೊಂದು ತಾಜಾ ಉದಾಹರಣೆ ಮಂಗಳೂರಿನಲ್ಲಿ ನಡೆದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಅವರು ನಡೆದುಕೊಂಡ ರೀತಿ ನೋಡಬಹುದು.

ಮಂಗಳೂರಿನ ಒಸಿ ಫ್ರೆಂಡ್ಸ್ ಬೋಳಾರದ ಆಶ್ರಯದಲ್ಲಿ ನಡೆದ ಮಂಗಳಾದೇವಿ ನವರಾತ್ರಿಯ ಜಳಕದ ಅಂಗವಾಗಿ ಭಾವೈಕ್ಯತಾ ಸಂಗಮ 2023 ಎನ್ನುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾನೂ ಒಬ್ಬ ಪ್ರೇಕ್ಷಕಕನಂತೆ ತೆರಳಿದ್ರು. ಈ ಸಂದರ್ಭ ಅಲ್ಲಿಯೇ ಕೆಲವು ಪುಟ್ಟಪುಟ್ಟ ಸ್ಲಮ್ ಮಕ್ಕಳು ಬಲೂನ್ ಮಾರಿಕೊಂಡು ಅವರ ಹತ್ತಿರ ಬಂದಿದ್ದಾರೆ. ಮಕ್ಕಳ ಮುಗ್ದತೆಯನ್ನು ಕಂಡು ಭಾವಪರವಶರಾಗಿದ್ದು, ಜೊತೆಗೆ ಮಕ್ಕಳನ್ನು ತೊಡೆಯ ಮೇಲೆ ಕೂರಿಸಿ ಆರ್ಕೆಸ್ಟ್ರಾವನ್ನು ಜೊತೆಯಾಗಿ ಸವಿದರು.

ಈಗಿನ ಕಾಲದಲ್ಲಿ ಅಲ್ಪಸ್ವಲ್ಪ ಫೇಮ್, ಹೆಸರು ಬಂದರೆ ಸಾಕು, ಯಾರು ಕಣ್ಣಿಗೆ ಕಾಣಿಸುವುದಿಲ್ಲ ಅನ್ನುವ ಮಟ್ಟಿಗೆ ಇರುವ ಕಲಾವಿದರ ಮಧ್ಯೆ ಸಂದೇಶ್ ನೀರುಮಾರ್ಗ ಮಾತ್ರ ಒಂದೂಚೂರು ಬದಲಾಗದೆ ಇರುವುದು ಅವರ ಘನತೆ ಗೌರವವನ್ನು ಇನ್ನಷ್ಟು ಹೆಚ್ಚಿಸಿದೆ. ಮಂಗಳೂರಿನ ನೀರ್‌ಮಾರ್ಗ ಎನ್ನುವಲ್ಲಿ ಆರ್ಕೆಸ್ಟ್ರಾ ಗಾಯಕರಾಗಿದ್ದವರು ಸಂದೇಶ್. ಆದರೆ ಅವರನ್ನು ಗಾಯಕರನ್ನಾಗಿ ಗುರುತಿಸಿದ್ದಕ್ಕಿಂತ ಜನ ರಿಕ್ಷಾ ಚಾಲಕರಾಗಿ ಗುರುತಿಸಿದ್ದೇ ಹೆಚ್ಚು. ಯಾಕೆಂದರೆ ಬಿಎ ಕಲಿತು ಕೊರಿಯರ್ ಸಂಸ್ಥೆಯಲ್ಲಿ ವೃತ್ತಿ ಸಿಕ್ಕಿದ್ದರೂ, ಆ ಸಂಬಳದಿಂದ ಜೀವನ ಸಾಗಿಸುವುದು ಕಷ್ಟವಾಗಿತ್ತು.

ಮಾತ್ರವಲ್ಲ, ಉಪವೃತ್ತಿಯಾಗಿ ಬೆಳೆದಿದ್ದ ಆರ್ಕೆಸ್ಟ್ರಾ ಹಾಡುಗಾರಿಕೆಗೆ ಸಮಯ ನೀಡುವುದೂ ಸಾಧ್ಯವಾಗಿರಲಿಲ್ಲ. ಆಗ ಕೊರಿಯರ್ ವೃತ್ತಿಗೆ ರಾಜೀನಾಮೆ ನೀಡಿ ರಿಕ್ಷಾ ಚಾಲಕರಾಗಿ, ಮೀನು ಮಾರಾಟಗಾರರಾಗಿ, ಫುಡ್ ಡೆಲಿವರಿ ಬಾಯ್‌ ಆಗಿ ಬದುಕು ಕಟ್ಟಿಕೊಳ್ಳಲು ಹೆಣಗಾಡಿದ್ದ ವ್ಯಕ್ತಿ ಈ ಸಂದೇಶ್.

ಆದರೆ ಈಗ ಕಲೆಯ ಮೇಲೆ ಶ್ರದ್ಧೆ ಇಟ್ಟರೆ, ಇನ್ನಷ್ಟು ಮಂದಿಗೆ ಬದುಕು ಕಟ್ಟಿಕೊಡಬಹುದೆನ್ನುವ ಸಂದೇಶ ನೀಡುವಂತೆ ಬೆಳೆದಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!

Published

on

ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.

ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ

Continue Reading

DAKSHINA KANNADA

Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು

Published

on

ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್‌ ಕುಮಾರ್‌ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.

ನವೀನ್‌ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫ‌ಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.

 

Continue Reading

DAKSHINA KANNADA

ಕಟೀಲು ಕ್ಷೇತ್ರಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ

Published

on

ಕಿನ್ನಿಗೋಳಿ: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ ನೀಡಿದರು.

ದೇವಳದ ವತಿಯಿಂದ ಶ್ರೀ ರಾಮುಲು ಅವರನ್ನು ಗೌರವಿಸಲಾಯಿತು.

ಈ ಸಂದರ್ಭ ವೆಂಕಟರಮಣ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಉಪಸ್ಥಿತರಿದ್ದರು.

ಕ್ಷೇತ್ರದಲ್ಲಿ ಅವರು ಅನ್ನಪ್ರಸಾದವನ್ನು ಸ್ವೀಕರಿಸಿ ಸರಳತೆ ಮೆರೆದರು. ಬಳಿಕ ಕ್ಷೇತ್ರದ ಕುರಿತಂತೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.

Continue Reading

LATEST NEWS

Trending