Connect with us

DAKSHINA KANNADA

ಸಂಕ್ರಾಂತಿ ಸಂಭ್ರಮ- ಸೋಶಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡಿಂಗ್ ಈ ‘ಅಯ್ಯಪ್ಪ’ನ ಚಿತ್ರ !

Published

on

ಸಂಕ್ರಾಂತಿ ಸಂಭ್ರಮ- ಸೋಶಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡಿಂಗ್ ಈ ‘ಅಯ್ಯಪ್ಪ’ನ ಚಿತ್ರ!

ಮಂಗಳೂರು:ಇಂದು ನಾಡಿನೆಲ್ಲೆಡೆ ಸಂಭ್ರಮ ಸಡಗರದಿಂದ ಮಕರ ಸಂಕ್ರಾತಿ ಹಬ್ಬವನ್ನು ಆಚರಿಸಲಾಗುತ್ತದೆ. ಮಕರ ಸಂಕ್ರಾತಿಯ ಪವಿತ್ರ ದಿನವಾದ ಇಂದು ಶಬರಿಮಲೆ ಅಯ್ಯಪ್ಪ ಸನ್ನಿಧಿಯಲ್ಲಿ ಮಕರ ಜ್ಯೋತಿ ದರ್ಶನ ನೆರವೇರಲಿದೆ.ಅಯ್ಯಪ್ಪಸ್ವಾಮಿಗೆ ವಿಶೇಷ ಪೂಜಾ, ಸಂಪ್ರದಾಯಗಳು ನಡೆಯಲಿವೆ. ಇದರ ಜೊತೆಗೆ ವಿಶೇಷವೆಂಬಂತೆ ಸೋಶಿಯಲ್ ಮೀಡಿಯಾದಲ್ಲಿ ಅಯ್ಯಪ್ಪ ಸ್ವಾಮಿಯ ಚಿತ್ರವೊಂದು ಸಖತ್ ವೈರಲ್ ಆಗುತ್ತಿದೆ.

48 ದಿನಗಳ ವೃತವನ್ನಾಚರಿಸಿ ಪವಿತ್ರ 18 ಮೆಟ್ಟಿಲ ಏರುವ ಭಕ್ತರಿಗೆ, ಮಕರ ಸಂಕ್ರಮಣದಂದು ಜ್ಯೋತಿಯಾಗಿ ದರುಶನ ನೀಡಿ ಸಮತೆ ಸಾರಿದ ಮಮತೆ ತೋರಿದ, ಸರ್ವ ಜನ ಮೈತ್ರಿಯ ಸಂದೇಶ ಸಾರಿದ ಶಬರಿಮಲೆ ಅಯ್ಯಪ್ಪನ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.ಈ ಚಿತ್ರವನ್ನು ರಚಿಸಿದ ಕಲಾವಿದ ಶಶಾಂಕ್ ಆಚಾರ್ಯ. ಈ ಕಲಾವಿದ ಬೇರೆ ಯಾರೂ ಅಲ್ಲ ಈ ಹಿಂದೆಯೂ ತುಳುನಾಡಿನ ಕಾರಣಿಕ ದೈವ ಸ್ವಾಮಿ ಕೊರಗಜ್ಜ, ಮಂತ್ರದೇವತೆ, ಪ್ರಧಾನಿ ಮೋದಿ, ಸೇರಿದಂತೆ ಬ್ರಹ್ಮಶ್ರೀ ನಾರಾಯಣಗುರುಗಳ ಚಿತ್ರವನ್ನು ವೆಕ್ಟರ್ ಆರ್ಟ್ ಮಾಧ್ಯಮದಲ್ಲಿ ರಚಿಸಿ ತುಳುನಾಡಿನ ಜನರ ಪ್ರಶಂಸೆಗೆ ಪಾತ್ರರಾಗಿದ್ದರು.ಇದೀಗ ಮಕರ ಸಂಕ್ರಾತಿಯಂದು ರಚಿಸಿದ ಹರಿಹರ ವರ ಸುತನಾಗಿ ಆವಿರ್ಭವಿಸಿ ಪಂದಳಂ ರಾಜ್ಯದಲ್ಲಿ ಮಣಿಕಂಠನಾಗಿ ಮೆರೆದು ಮಹಿಷಿ ಮರ್ದನಗೈದು  ಶಬರಿ ಮಲೆಯಲ್ಲಿ ನೆಲೆನಿಂತ ಸ್ವಾಮಿ ಅಯ್ಯಪ್ಪನ ಶಶಾಂಕ್ ಆಚಾರ್ಯ ಬಿಡಿಸಿದ ವೆಕ್ಟರ್ ಆರ್ಟ್ ಚಿತ್ರ ಭಕ್ತರ, ಚಿತ್ರ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

DAKSHINA KANNADA

Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!

Published

on

ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.

ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ

Continue Reading

DAKSHINA KANNADA

Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು

Published

on

ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್‌ ಕುಮಾರ್‌ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.

ನವೀನ್‌ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫ‌ಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.

 

Continue Reading

DAKSHINA KANNADA

ಕಟೀಲು ಕ್ಷೇತ್ರಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ

Published

on

ಕಿನ್ನಿಗೋಳಿ: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ ನೀಡಿದರು.

ದೇವಳದ ವತಿಯಿಂದ ಶ್ರೀ ರಾಮುಲು ಅವರನ್ನು ಗೌರವಿಸಲಾಯಿತು.

ಈ ಸಂದರ್ಭ ವೆಂಕಟರಮಣ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಉಪಸ್ಥಿತರಿದ್ದರು.

ಕ್ಷೇತ್ರದಲ್ಲಿ ಅವರು ಅನ್ನಪ್ರಸಾದವನ್ನು ಸ್ವೀಕರಿಸಿ ಸರಳತೆ ಮೆರೆದರು. ಬಳಿಕ ಕ್ಷೇತ್ರದ ಕುರಿತಂತೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.

Continue Reading

LATEST NEWS

Trending