FILM
ಮಾಧ್ಯಮಗಳ ಮೇಲೆ ಗರಂ ಆದ ಸಾನ್ವಿ ಸುದೀಪ್ – ಮನುಷ್ಯತ್ವ ಇಲ್ಲದೆ ವಿಡಿಯೋ ಮಾಡುತ್ತಾ ಇದ್ದರು…!!
ಬೆಂಗಳೂರು: ಕನ್ನಡದ ನಟ ಸುದೀಪ್ ಅವರ ತಾಯಿ ಅಸೌಖ್ಯದಿಂದ ನಿಧನರಾಗಿದ್ದಾರೆ. ನಿನ್ನೆ ಸುದೀಪ್ ಅವರ ಮನೆಯ ಸುತ್ತಮುತ್ತ ಸೇರಿದ ಜನ ಸಾಗರ ಹಾಗೂ ಮಾಧ್ಯಮಗಳ ಕ್ಯಾಮರಾ ಕಿರಿಕಿರಿ ಕುರಿತಂತೆ ಸುದೀಪ್ ಮಗಳು ಸಾನ್ವಿ ಗರಂ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.
ಸುದೀಪ್ ತಾಯಿ ನಿಧನದ ಸುದ್ದಿ ಕೇಳಿ ಸಾವಿರಾರು ಜನರು ಸುದೀಪ್ ಮನೆ ಮುಂದೆ ಜಮಾಯಿಸಿದ್ರು. ಕೆಲ ಜನರು ಫೋಟೋ, ವಿಡಿಯೋಗಳಿಗಾಗಿ ಮಾಡಿದ ಹುಚ್ಚಾಟಕ್ಕೆ ಸ್ವಾನಿ ಸಿಟ್ಟಾಗಿದ್ದಾರೆ. ಸಾವಿನ ಮನೆಯಲ್ಲೂ ಕೂಗಾಟ, ಚೀರಾಟ ಸರಿನಾ ಎಂದು ಪ್ರಶ್ನೆ ಮಾಡಿ ಪೋಸ್ಟ್ ಶೇರ್ ಮಾಡಿದ್ದಾರೆ.
ಇಂದು ನಮ್ಮ ಕುಟುಂಬಕ್ಕೆ ತುಂಬಾ ಕಷ್ಟದ ದಿನವಾಗಿತ್ತು. ನಮ್ಮ ಮನೆ ಮುಂದೆ ಸೇರಿದ್ದ ಜನರು ಜೋರಾಗಿ ಕಿರುಚುತ್ತಿದ್ರು. ನಮ್ಮ ಮುಖಕ್ಕೆ ಕ್ಯಾಮೆರಾ ಇಡಲು ಕಷ್ಟಪಡ್ತಿದ್ರು. ಕೆಲವರು ಮನುಷ್ಯತ್ವ ಇಲ್ಲದವರಂತೆ ನಡೆದುಕೊಂಡಿದ್ದಾರೆ. ನನ್ನ ತಂದೆ ಅವರ ತಾಯಿಗಾಗಿ ಕಣ್ಣೀರು ಹಾಕ್ತಿದ್ರು. ಆದ್ರೆ ಜನರು ನಮ್ಮನ್ನು ತಳ್ಳಿ-ನೂಕ್ಕಿದ್ದಾರೆ ಎಂದು ಸಾನ್ವಿ ಬರೆದಿದ್ದಾರೆ. ಅವರನ್ನು ಗೌರವದಿಂದ ಕಳುಹಿಸಲು ನಾವು ತುಂಬಾ ತೊಂದರೆಗೆ ಒಳಗಾಗುವಂತೆ ಆಯ್ತು. ನಾವು ನಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ಅಳುತ್ತಿದ್ದೇನೆ. ಆದ್ರೆ ಕೆಲ ಜನರು ಅವರು ಪೋಸ್ಟ್ ಮಾಡಬಹುದಾದ ರೀಲ್ಸ್ಗಳ ಬಗ್ಗೆ ಯೋಚಿಸಿ ತೊಂದರೆ ಕೊಟ್ಟಿದ್ದು ಎಷ್ಟು ಸರಿ ಎಂದು ಸಾನ್ವಿ ಇನ್ಸ್ಟಾ ಸ್ಟೋರಿಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸುದೀಪ್ ಅವರ ಜೆಪಿ ನಗರ ನಿವಾಸದಲ್ಲಿ ಸರೋಜ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅನೇಕ ಗಣ್ಯರು ಅಂತಿಮ ದರ್ಶನ ಪಡೆದ್ರು. ಅಂತಿಮಯಾತ್ರೆ ಬಳಿಕ ವಿಲ್ಸನ್ ಗಾರ್ಡನ್ ಚಿತಾಗಾರದ ಹೊರಗೆ ಸರೋಜ ಅವರ ಪಾರ್ಥಿವ ಶರೀರಕ್ಕೆ ಕುಟುಂಬಸ್ಥರು ಪೂಜೆ ಸಲ್ಲಿದ್ರು. ಮಗ ಸುದೀಪ್ ಅವರು ಅಂತ್ಯಕ್ರಿಯೆಯ ವಿಧಿವಿಧಾನ ನೆರವೇರಿಸಿದ್ರು.
ಅಮ್ಮನಿಗೆ ವಿದಾಯ ಹೇಳಿ ಬಾರದ ಮನಸ್ಸಿನಿಂದಲೇ ಚಿತಾಗಾರದಿಂದ ಹೊರಗೆ ಬಂದ ಸುದೀಪ್ ಅವರು ಅಳುತ್ತಲೇ ಅಭಿಮಾನಿಗಳಿಗೆ ಕೈ ಮುಗಿದ್ರು. ಸುದೀಪ್ ನೋಡಲು ಚಿತಾಗಾರದ ಬಳಿ ಅಭಿಮಾನಿಗಳು ಹರಿದು ಬಂದಿದ್ರು. ನೋವಿನಲ್ಲೂ ಸುದೀಪ್ ಅಭಿಮಾನಿಗಳತ್ತ ನೋಡಿ ಕೈ ಮುಗಿದಿದ್ದಾರೆ. ಅಳುತ್ತಾ ಕಾರು ಹತ್ತಿ ಮನೆ ಕಡೆ ತೆರಳಿದ್ದರು. ಖ್ಯಾತ ನಟನ ತಾಯಿ ಸಾವಿನಲ್ಲೂ ವೀವ್ಸ್ ಗಾಗಿ ಜನರು ಕೆಮರಾ ಗಳನ್ನ ಝೂಮ್ ಮಾಡಿ ತೋರಿಸಿದ್ದು, ಸರಿನಾ ಎಂದು ಸಾನ್ವಿ ಸುದೀಪ್ ಪ್ರಶ್ನೆ ಮಾಡಿದ್ದಾರೆ.
BIG BOSS
‘ಮೆಟ್ಟು ತಗೊಂಡು ಹೊಡಿತೀನಿ’: ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ಕುಂದಾಪುರ
ಜಾಸ್ತಿ ಮಾತನಾಡುತ್ತಾರೆ ಎಂಬ ಕಾರಣದಿಂದಲೇ ಚೈತ್ರಾ ಕುಂದಾಪುರ ಅವರು ಹೈಲೈಟ್ ಆಗುತ್ತಾರೆ. ಆದರೆ ಆ ಮಾತೇ ಅವರಿಗೆ ಮುಳುವಾಗುತ್ತಿದೆ. ಕಳೆದ ವಾರ ಅವರು ‘ಒಬ್ಬ ಅಪ್ಪನಿಗೆ ಹುಟ್ಟಿದ್ದರೆ..’ ಎಂದು ಜಗದೀಶ್ಗೆ ಹೇಳಿದ್ದರು. ಆ ಮಾತನ್ನು ಕಿಚ್ಚ ಸುದೀಪ್ ಅವರು ಕಟುವಾಗಿ ಖಂಡಿಸಿದ್ದರು. ಹಾಗಂತ ಚೈತ್ರಾ ಅವರು ತಮ್ಮ ಮಾತಿನ ವರಸೆಯನ್ನು ಬದಲಿಸಿಕೊಂಡಿದ್ದಾರಾ? ಖಂಡಿತಾ ಇಲ್ಲ. ಸೋಮವಾರದ (ಅಕ್ಟೋಬರ್ 21) ಸಂಚಿಕೆಯಲ್ಲಿ ಅವರು ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಚಪ್ಪಲಿಯಲ್ಲಿ ಹೊಡೆಯುವ ಬಗ್ಗೆ ಅವರು ಮಾತನಾಡಿದ್ದಾರೆ.
ಕಳೆದ ವಾರ ಜಗದೀಶ್ ಅವರಿಗೆ ಉಗ್ರಂ ಮಂಜು ಅವರು ಚಪ್ಪಲಿ ತೋರಿಸಿದ್ದರು. ಅದು ಸರಿಯಲ್ಲ ಎಂದು ಸುದೀಪ್ ಅವರು ಹೇಳಿದ್ದರು. ಇಂಥ ಹಲವು ಕಾರಣಗಳಿಂದಾಗಿ ಮನೆಯ ಸದಸ್ಯರಿಗೆ ಕಿಚ್ಚ ಕ್ಲಾಸ್ ತೆಗೆದುಕೊಂಡಿದ್ದರು. ಅಷ್ಟಾದರೂ ಕೂಡ ಚೈತ್ರಾ ಅವರು ಮಾತಿನ ವರಸೆ ಬದಲಾಯಿಸಿಕೊಂಡಿಲ್ಲ. ಸಂದರ್ಭ ಬಂದರೆ ತಾವು ಮೆಟ್ಟಿನಲ್ಲಿ ಹೊಡೆಯುವುದಾಗಿ ಚೈತ್ರಾ ಹೇಳಿದ್ದಾರೆ.
ಈ ಮೊದಲು ಹಂಸಾ ಅವರ ಬಗ್ಗೆ ಗೋಲ್ಡ್ ಸುರೇಶ್ ಏನೇನೋ ಕಮೆಂಟ್ ಮಾಡಿದ್ದರು. ಹಂಸಾ ಅವರದ್ದು ಲವ್ ಸ್ಟೋರಿ ನಡೆಯುತ್ತಿತ್ತು ಎಂದು ಅವರು ಹೇಳಿದ್ದರು. ಅದರಿಂದ ಹಂಸಾಗೆ ಬೇಸರ ಆಯಿತು. ಹಾಗಾಗಿ ಅವರು ಈ ವಿಚಾರವನ್ನು ಚೈತ್ರಾ ಕುಂದಾಪುರ ಜೊತೆ ಚರ್ಚೆ ಮಾಡುತ್ತಿದ್ದರು. ಆಗ ಚೈತ್ರಾ ಅವರ ಮಾತುಗಳು ಮೆಟ್ಟಿನ ತನಕ ಹೋಯಿತು.
‘ನನ್ನ ಕ್ಯಾರೆಕ್ಟರ್ ಬಗ್ಗೆ ಯಾರಾದರೂ ಮಾತಾಡಿದರೆ ಮೆಟ್ಟು ತಗೊಂಡು ಹೊಡಿತೀನಿ. ಅದರಿಂದ ನಾನು ಹೊರಗೆ ಹೋದ್ರೂ ಚಿಂತೆ ಇಲ್ಲ. ನಾನು ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೇನೆ. ನನಗೆ ಯಾರ ಹತ್ತಿರವೂ ಸಂಬಂಧ ಕಟ್ಟಬೇಡಿ’ ಎಂದು ಚೈತ್ರಾ ಕುಂದಾಪುರ ಅವರ ಹೇಳಿದ್ದಾರೆ. ಇಂಥ ಮಾತುಗಳನ್ನು ಆಡಿದ್ದಕ್ಕೆ ಸುದೀಪ್ ಅವರು ವೀಕೆಂಡ್ ಸಂಚಿಕೆಯಲ್ಲಿ ಯಾವ ರೀತಿ ಪಂಚಾಯ್ತಿ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು.
FILM
‘ಮನಸಾರೆ ನಿನ್ನ’ ಎನ್ನುತ್ತಾ ರೊಮ್ಯಾಂಟಿಕ್ ಮೂಡ್ಗೆ ಜಾರಿದ ನಿವೇದಿತಾ ಗೌಡ
‘ಬಿಗ್ ಬಾಸ್’ ಖ್ಯಾತಿಯ ನಿವೇದಿತಾ ಗೌಡ ಅವರು ಚಂದನ್ ಶೆಟ್ಟಿ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ ಮೇಲೆ ಸಿನಿಮಾ ರಂಗದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ತೆಲುಗಿನತ್ತ ಮುಖ ಮಾಡಿರುವ ನಿವೇದಿತಾ ಸಿನಿಮಾ ಬದಲು ಆಲ್ಬಂ ಸಾಂಗ್ ಮೂಲಕ ಸದ್ದು ಮಾಡುತ್ತಿದ್ದಾರೆ.
ತೆಲುಗಿನ ‘ವಾಲು ಕಳ್ಳತಾ’ ಎಂಬ ಆಲ್ಬಂ ಸಾಂಗ್ನಲ್ಲಿ ಗೌರಿ ನಾಯ್ಡು ಜೊತೆ ನಿವೇದಿತಾ ನಟಿಸಿದ್ದು, ಇದು ಕನ್ನಡದಲ್ಲೂ ರಿಲೀಸ್ ಆಗುತ್ತಿದೆ. ‘ಮನಸಾರೆ ನಿನ್ನ’ ಎಂದು ಕನ್ನಡದಲ್ಲೂ ಸಾಂಗ್ ಮಾಡಲಾಗಿದೆ. ಆದರೆ ಸಾಂಗ್ ರಿಲೀಸ್ ಆಗೋದು ಯಾವಾಗ? ಎಂದು ಕಾದುನೋಡಬೇಕಿದೆ.
ತೆಲುಗಿನಲ್ಲಿ ನಟ, ಬರಹಗಾರ, ಸಂಕಲನಕಾರ, ಛಾಯಾಗ್ರಾಹಕನಾಗಿ ಗುರುತಿಸಿಕೊಂಡಿರುವ ಗೌರಿ ನಾಯ್ಡು ಜೊತೆ ಹಾಡಿನಲ್ಲಿ ನಿವೇದಿತಾ ರೊಮ್ಯಾನ್ಸ್ ಮಾಡಿದ್ದಾರೆ. ಸದ್ಯ ರಿಲೀಸ್ ಮಾಡಿರುವ ಪೋಸ್ಟರ್ಗೆ ಬಗೆ ಬಗೆಯ ಕಾಮೆಂಟ್ಗಳು ಬರುತ್ತಿವೆ.
ಇನ್ನೂ ಮಾಜಿ ಪತಿ ಚಂದನ್ ಶೆಟ್ಟಿ ಜೊತೆ ‘ಮುದ್ದು ರಾಕ್ಷಸಿ’ (Muddu Rakshasi) ಸಿನಿಮಾದಲ್ಲಿ ನಿವೇದಿತಾ ನಾಯಕಿಯಾಗಿ ನಟಿಸಿದ್ದಾರೆ. ಸೃಜನ್ ಲೋಕೇಶ್ ನಟನೆಯ ‘ಜಿಎಸ್ಟಿ’ ಸಿನಿಮಾದಲ್ಲಿ ನಿವೇದಿತಾ ನಟಿಸಿದ್ದಾರೆ.
FILM
‘ಪುಷ್ಪ-2’ ಐಟಂ ಸಾಂಗ್ನಲ್ಲಿ ಸೊಂಟ ಬಳುಕಿಸಲಿದ್ದಾರೆ ಬಾಲಿವುಡ್ ನಟಿ !! ಯಾರು ಗೊತ್ತಾ ?
ಮಂಗಳೂರು/ಹೈದರಾಬಾದ್: ‘ಅನಿಮಲ್’ ನಟಿ ತೃಪ್ತಿ ದಿಮ್ರಿ ‘ಪುಷ್ಪ-2’ ನಲ್ಲಿ ಸ್ಪೆಷೆಲ್ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ಎಂಬ ಮಾತು ಕೇಳಿ ಬರುತಿದ್ದು. ಇದೀಗ ಬಾಲಿವುಡ್ನ ಖ್ಯಾತ ನಟಿ ಶ್ರದ್ಧಾ ಕಪೂರ್ ‘ಪುಷ್ಪ-2’ ನಲ್ಲಿ ಸೊಂಟ ಬಳುಕಿಸಲಿದ್ದಾರೆ ಎಂದು ವರದಿಯಾಗಿದೆ.
ಖ್ಯಾತ ನಟ ಅಲ್ಲು ಅರ್ಜುನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ʼಪುಷ್ಪ-2ʼರಿಲೀಸ್ಗೆ ದಿನಗಣನೆ ಪ್ರಾರಂಭವಾಗಿದೆ. ವರ್ಷದ ಕೊನೆಯಲ್ಲಿ ಸಿನಿಮಂದಿಗೆ ಭರ್ಜರಿ ಮನರಂಜನೆ ನೀಡುವ ನಿಟ್ಟಿನಲ್ಲಿ ‘ಪುಷ್ಪ-2’ ತೆರೆಕಾಣಲಿದೆ.
2022ರಲ್ಲಿ ತೆರೆಕಂಡ ‘ಪುಷ್ಪ’ ಮೊದಲ ಭಾಗ ಪ್ಯಾನ್ ಇಂಡಿಯಾದಲ್ಲಿ ಮೋಡಿ ಮಾಡಿತ್ತು. ನಟನೆ, ಹಾಡು, ಡ್ಯಾನ್ಸ್, ಮಾಸ್ ಹೀಗೆ ಎಲ್ಲ ವಿಭಾಗದಲ್ಲೂ ಸಿನಿಮಾ ಸಖತ್ ಸದ್ದು ಮಾಡಿ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು.
‘ಸ್ತ್ರೀ-2’ ಮೂಲಕ ತೆಲುಗು ಭಾಷಾ ವಲಯದಲ್ಲಿ ಮಿಂಚಿರುವ ಶ್ರದ್ಧಾ ಕಪೂರ್ ‘ಪುಷ್ಪ-2’ ಸಿಮಾದಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ನೀಡಬೇಕಿದೆ. ಸುಕುಮಾರ್ ನಿರ್ದೇಶನದ ಈ ಸಿನಿಮಾದಲ್ಲಿ ಅಲ್ಲು ಅರ್ಜುನ್ ಜತೆ ರಶ್ಮಿಕಾ ಮಂದಣ್ಣ, ಫಾಹದ್ ಫಾಸಿಲ್, ಡಾಲಿ ಧನಂಜಯ್, ಜಗದೀಶ್ ಪ್ರತಾಪ್ ಭಂಡಾರಿ, ಸುನಿಲ್ ಮುಂತಾದವರು ನಟಿಸಿದ್ದಾರೆ. ಬರುವ ಡಿಸೆಂಬರ್ 6 ರಂದು ಸಿನಿಮಾ ಅದ್ಧೂರಿಯಾಗಿ ತೆರೆಗೆ ಬರಲಿದೆ.
- BIG BOSS6 days ago
ಲಾಯರ್ ಜಗದೀಶ್ ಹೊರಗೆ, ಪತ್ನಿ ಒಳಗೆ: ಕಲರ್ಸ್ ಶೋನಲ್ಲಿ ಜಗದೀಶ್ ಪತ್ನಿ
- BIG BOSS4 days ago
ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ: ಬಿಗ್ ಬಾಸ್ ನಿಂದ ಹೊರಬಂದ ಜಗದೀಶ್ ಫಸ್ಟ್ ರಿಯಾಕ್ಷನ್!
- BIG BOSS5 days ago
ಕೊನೆಗೂ ಸುದೀಪ್ ಹೇಳಿದ ಬದಲಾವಣೆಯನ್ನು ಜಾರಿಗೆ ತಂದ ಬಿಗ್ ಬಾಸ್; ಏನದು ?
- LATEST NEWS5 days ago
ಕೀಬೋರ್ಡ್ನಲ್ಲಿ ಎಫ್ ಮತ್ತು ಜೆ ಅಕ್ಷರಗಳ ಕೆಳಗೆ ಗೆರೆ ಏಕೆ ಇರುತ್ತದೆ ಗೊತ್ತಾ?