Connect with us

    DAKSHINA KANNADA

    ಮಂಗಳೂರು: ಪಂಚಭಾಷಾ ಭಾಗವತ ಸತೀಶ್ ಶೆಟ್ಟಿ ಬೋಂದೆಲ್ ಅವರಿಗೆ ಸಂಮಾನ

    Published

    on

    ಮಂಗಳೂರು: ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 18 ನೆಯ ಸರಣಿ ಕಾರ್ಯಕ್ರಮ ಶ್ರೀ ಮಹಾಮಾಯಿ ದೇವಸ್ಥಾನದಲ್ಲಿ ನಡೆಯಿತು.

    ಪಂಚ ಭಾಷಾ ಭಾಗವತ ಬಿರುದಾಂಕಿತ ಸತೀಶ್ ಶೆಟ್ಟಿ ಬೋಂದೆಲ್ ಇವರಿಗೆ ಸನ್ಮಾನ ಮಾಡುತ್ತ ಶ್ರೀಮತಿ ಭಾರತಿ ಕಾಮತ್, ಇವರು ಸತೀಶ್ ಶೆಟ್ಟಿಯವರಿಗೆ ಶುಭವನ್ನು ಕೋರಿದರು.ಯಕ್ಷಗಾನ ಕಲೆ ಇನ್ನಷ್ಟು ಬೆಳೆಯಲಿ. ಕಲಾವಿದರಿಗೂ, ಕಲಾ ಪ್ರೋತ್ಸಾಹಕರಿಗೂ ಮಹಾಮಾಯೆಯ ಅನುಗ್ರಹ ದೊರೆಯಲಿ ಎಂದು ಹಾರೈಸಿದರು.


    ಅತಿಥಿಯಾಗಿ ಕ್ರೀಡಾಭಾರತಿಯ ಎ . ಕೃಷ್ಣ ಶೆಟ್ಟಿ ತಾರೇಮಾರ್ ಮಾತನಾಡಿ” ಒಂದು ದಿನದ ಕಾರ್ಯಕ್ರಮ ಮಾಡುವುದೇ ಬಹಳ ಕಷ್ಟ, ಒಂದು ವರ್ಷ ನಿರಂತರ ಕಾರ್ಯಕ್ರಮ ಮಾಡುವ ವಿಚಾರ ಬಹಳ ಸಂತೋಷದಾಯಕ ಎಂದರು.ಈ ಸಂಘ ನೂರು ವರ್ಷಗಳನ್ನು ಪೂರೈಸಿದೆ ಎನ್ನುವುದೂ ಆನಂದದಾಯಕ.

    100 ವರುಷ ತುಂಬಿದ ಸಂದರ್ಭ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತದ್ದು ನನ್ನ ಭಾಗ್ಯ , ಯಕ್ಷಗಾನ ಕಲೆ ನಮ್ಮ ಸಂಸ್ಕ್ರತಿಯನ್ನು ಬಿಂಬಿಸುವಂತಹದು.ಈ ಕಲೆ ಇನ್ನಷ್ಟು ಬೆಳಗಲಿ” ಎಂದು ಹಾರೈಸಿದರು.


    ಚೆಂಡೆಮದ್ದಳೆ ವಾದಕರಾಗಿ ಮಂಗಳೂರಿನ ಹವ್ಯಾಸಿ ಬಳಗದ ಬಹುಬೇಡಿಲೆಯ ಕಲಾವಿದರಾಗಿದ್ದ ಕೀರ್ತಿಶೇಷ ಜಯಂತ್ ಕುಮಾರ್ ಕುಡುಪಾಡಿ ಇವರ ಸಂಸ್ಮರಣೆಯನ್ನು ರವಿ ಅಲೆವೂರಾಯರು ನಿರ್ವಹಿಸಿದರು.

    ಕಾರ್ಯಕ್ರಮ ನಿರೂಪಕ , ಸಂಘದ ಪ್ರಧಾನ ಕಾರ್ಯದರ್ಶಿ, ಸಂಜಯ ಕುಮಾರ ರಾವ್, ಬೋಂದೆಲ್ ಸತೀಶ ಶೆಟ್ಟರ ಅಭಿನಂದನೆಯನ್ನುಗೈದರು. ಶ್ರೀಮತಿ ಸುಮಂಗಲ ರತ್ನಾಕರ್, ಪೂರ್ಣಿಮಾ ಯತೀಶ್ ರೈ, ಸಂಘದ ಅಧ್ಯಕ್ಷ ಶ್ರೀನಾಥ್ ಪ್ರಭು, ಉಪಾಧ್ಯಕ್ಷೆ ಶ್ರೀಮತಿ ಪ್ರಫುಲ್ಲ ನಾಯಕ್, ಕೋಶಾಧಿಕಾರಿ ಶ್ರೀ ಶಿವಪ್ರಸಾದ್ ಪ್ರಭು ಉಪಸ್ಥಿತರಿದ್ದರು.

    ಶ್ರೀಮತಿ ಶೋಭಾ ಐತಾಳ್ ಸಂಮಾನ ಪತ್ರವನ್ನು ವಾಚಿಸಿದರು. ಬಳಿಕ ಸಂಘದ ಕಲಾವಿದರು ಹಾಗೂ ಅತಿಥಿ ಕಲಾವಿದರಿಂದ “ಸೇತು ಬಂಧನ” ಎಂಬ ತಾಳಮದ್ದಳೆ ಜರಗಿತು.

    ಅತಿಥಿಗಳಾಗಿ ಬೋಂದೆಲ್ ಸತೀಶ್ ಶೆಟ್ಟಿ, ಮದ್ದಳೆ ವಾದನದಲ್ಲಿ ಜಯರಾಮ್, ಹರೀಶ್ ಆಚಾರ್ಯ,ಚೆಂಡೆ ಮದ್ದಳೆ ವಾದನದಲ್ಲಿ ಬಾಲ ಕಲಾವಿದ ಸಮರ್ಥ್ ಉಡುಪ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಬಂಟ್ವಾಳ :ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾ*ತ; ಪತ್ನಿ ಸಾ*ವು; ಪತಿ ಗಂಭೀ*ರ

    Published

    on

    ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾ*ವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಅನಿಶ್ ಕೃಷ್ಣ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ.

    ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿದೆ. ಬಳಿಕ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿ*ಕ್ಕಿ ಹೊಡೆದಿದೆ.

    ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

    ಎರಡು ದಿನದ ಹಿಂದಷ್ಟೇ ಮದುವೆ : 

    ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ  ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ‌ಘ‌ಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ

    Continue Reading

    DAKSHINA KANNADA

    ಯಕ್ಷಗಾನ ಕಲಾವಿದ ಕುಪ್ಪೆಪದವು ಉಮೇಶ್ ಸಾಲ್ಯಾನ್ ರಿಗೆ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ

    Published

    on

    ಮಂಗಳೂರು : ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಹಿರಿಯ ಅರ್ಚಕ ದಿ.ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಪ್ರಯುಕ್ತ ಕಟೀಲು ಮೇಳದ ಹಿರಿಯ ಯಕ್ಷಗಾನ ವೇಷಧಾರಿ ಕುಪ್ಪೆಪದವು ಉಮೇಶ್ ಸಾಲ್ಯಾನ್ ಅವರಿಗೆ ಈ ವರ್ಷದ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ ನೀಡಲಾಗುವುದು.

    ಆಸ್ರಣ್ಣ ಅಭಿಮಾನಿ ಬಳಗ ಕದ್ರಿ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಚಿನ್ನದ ಪದಕದೊಂದಿಗೆ ಕುಪ್ಪೆಪದವು ಉಮೇಶ್ ಸಾಲ್ಯಾನ್ ರವರನ್ನು ಗೌರವಿಸಲಾಗುವುದು.

    ಇದನ್ನೂ ಓದಿ : ಮಂಗಳೂರು: ‘ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಹಿಂಪಡೆಯುವುದಿಲ್ಲ’ – ಡಿಸಿ ಮುಗಿಲನ್

    ಕಟೀಲು ಲಕ್ಷ್ಮಿ ನಾರಾಯಣ ಆಸ್ರಣ್ಣ ಮತ್ತು ಬಂಧುಗಳು ಸೆಪ್ಟೆಂಬರ್ 14 ರ ಶನಿವಾರ ಸಂಜೆ ಶ್ರೀ ಗೋಪಾಲಕೃಷ್ಣ ಆಸ್ರ ಣ್ಣ ಸಭಾಭವನದಲ್ಲಿ ಹಮ್ಮಿಕೊಡಿರುವ ಸಂಸ್ಮರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಆಸ್ರಣ್ಣ ಅಭಿಮಾನಿ ಬಳಗದ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ನವನೀತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Continue Reading

    DAKSHINA KANNADA

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಸೆ. 12 ರವರೆಗೆ ಕರಾವಳಿಯಲ್ಲಿ ಭಾರೀ ಮಳೆ

    Published

    on

    ಮಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಸೆಪ್ಟೆಂಬರ್ 12 ರವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಇಂದು ಮೋಡಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    Continue Reading

    LATEST NEWS

    Trending